ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10ರಿಂದ 24ರ ವರೆಗೆ ಚಂಪಾಷಷ್ಠಿ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಶ್ರೀ ದೇವಳದಲ್ಲಿ ಮೂಲಮೃತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮೋಹನ್ ರಾಮ್ ಎಸ್ ಸುಳ್ಳಿ, ವ್ಯವಸ್ಥಾಪನ ಸಮಿತಿಯ ಸದಸ್ಯರು ಸೀತಾರಾಮ ಎಡಪಡಿತಾಯ, ಲೋಕೇಶ್, ಶ್ರೀಮತಿ ವನಜ ವಿ. ಭಟ್ , ಶೋಭಾ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನ ಕಡಬ ವಲಯದಲ್ಲಿ ಶಾರೀರಿಕ ಅಸಕ್ತರಿಗೆ ಸಲಕರಣೆ ವಿತರಣೆ ಹಾಗೂ ಮಾರಣಾಂತಿಕ ಕಾಯಿಲೆಯಿಂದ ಬಲಳುತ್ತಿರುವ ಕುಟುಂಬಕ್ಕೆ ಸಹಾಯಧನ ವಿತರಣೆ ಮಾಡಲಾಯಿತು. ಕಡಬ ವಲಯದ ಕಡಬ ಜನನಿ ಪ್ರಗತಿಬಂಧು ಸಂಘದ ಪ್ರಭಾಕರ ಶೆಟ್ಟಿಯವರು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ರೂ 25000 ಸಹಾಯಧನ ವನ್ನು ವಿತರಿಸಲಾಯಿತು. ಕಡಬ ವಲಯದ ಪಿಜಕ್ಕಳ ತೇಜಸ್ ರವರು ಶಾರೀರಿಕ ಸಮಸ್ಶೆಯಿಂದ ನಡೆಯಲು ಸಾಧ್ಶವಾಗದಿದ್ದು
ನವಮಂಗಳೂರು ಬಂದರಿಗೆ ಐಷಾರಾಮಿ ಸೆವೆನ್ ಸೀಸ್ ನ್ಯಾವಿಗೇಟರ್ ಪ್ರವಾಸಿ ಹಡಗು ಆಗಮಿಸುವುದರೊಂದಿಗೆ ಈ ಬಾರಿಯ ಕ್ರೋಸ್ ಸೀಸನ್ ಅರಂಭಗೊಂಡಿತು. ನಾರ್ವೆಯ ಒಡೆತನದ, ಬಹಾಮಾಸ್ ಧ್ವಜ ಹೊಂದಿದ್ದು 500 ಪ್ರಯಾಣಿಕರು ಮತ್ತು 350 ಸಿಬಂದಿಯನ್ನು ಹೊಂದಿದೆ. 173 ಮೀಟರ್ ಉದ್ದವಿರುವ ಈ ಹಡಗು ಆಗಿದ್ದು, 28,803 ಟನ್ ಭಾರ, ಮತ್ತು 7.5 ಮೀಟರ್ ಆಳವಿದೆ. ಹಡಗಿನಿಂದ ಇಳಿದ ಕ್ರೂಸ್ ಪ್ರಯಾಣಿಕರಿಗೆ ಚೆಂಡೆ ಮತ್ತು ಯಕ್ಷಗಾನ, ಭರತನಾಟ್ಯ ಪ್ರದರ್ಶನದೊಂದಿಗೆ ಸಾಂಪ್ರದಾಯಿಕ ಸ್ವಾಗತ
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯ ವಿಶ್ವನಾಥ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಅಶೋಕ್ರನ್ನು ಬಕೆಟ್ ಹಿಡಿದುಕೊಂಡೇ ರಾಜಕೀಯ ಮಾಡುವವರು ಎಂದು ಟೀಕಿಸಿರುವುದು ಬಿಜೆಪಿಯ ಬಕೆಟ್ ರಾಜಕೀಯವನ್ನು ಬಹಿರಂಗಗೊಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷ ಗೇಲಿ ಮಾಡಿದೆ. ಬಿಜೆಪಿಯ ಎಸ್. ಆರ್. ವಿಶ್ವನಾಥ್ ಹೇಳಿಕೆಯನ್ನು ಪ್ರಸ್ತಾಪಿಸಿ, ಅಶೋಕ್ ಅವರೆ ಪ್ರತಿಪಕ್ಷದ ನಾಯಕ ಸ್ಥಾನ ಹಿಡಿಯಲು ಯಾರಿಗೆ ಬಕೆಟ್ ಹಿಡಿದಿರಿ
ಶನಿವಾರ dec 9 ;- ಇಡಿ- ಜಾರಿ ನಿರ್ದೇಶನಾಲಯದವರು ಒಡಿಶಾ ಮೂಲದ ಡಿಸ್ಟಿಲರಿ ಅವ್ಯವಹಾರಕ್ಕೆ ಸಂಬಂಧಿಸಿದ ಒಡಿಶಾ, ಜಾರ್ಖಂಡ್ ಪಶ್ಚಿಮ ಬಂಗಾಳದ ಮೂರು ಡಿಸ್ಟಿಲರಿಗೆ ದಾಳಿ ಮಾಡಿ 290 ಕೋಟಿ ರೂಪಾಯಿ ಲೆಕ್ಕ ಇಲ್ಲದ ಹಣ ವಶಪಡಿಸಿಕೊಂಡರು.ಈ ದಾಳಿ ವೇಳೆ ಒಂಬತ್ತು ಲಾಕರ್ ಮತ್ತು ಏಳು ಮುಚ್ಚಿದ ಕೋಣೆಗಳನ್ನು ತಪಾಸಣೆ ಮಾಡಲಾಯಿತು. ಕಪಾಟುಗಳಲ್ಲದೆ ಪೀಠೋಪಕರಣಗಳಲ್ಲೂ ಹಣ ಅಡಗಿಸಿಡಲಾಗಿತ್ತು. ಇದೇ ವೇಳೆ ಒಡಿಶಾದ ಮಹಿಳಾ ಮಂತ್ರಿ ಒಬ್ಬರು ಈ ಡಿಸ್ಟಿಲರಿಯ ಜೊತೆ ವೇದಿಕೆ
ವಾರದ ಹಿಂದೆ ಓಡಿ ಹೋಗಿದ್ದ, ಆಮೇಲೆ ಮದುವೆಯ ಸುದ್ದಿಯನ್ನು ಹಂಚಿಕೊಂಡ ಆಯಿಷಾ ಮತ್ತು ಅಕ್ಷತಾ ದಂಪತಿ ಇಂದು ಸುರತ್ಕಲ್ ಪೋಲೀಸು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದರು. ಆಯಿಷಾಳ ಹೆತ್ತವರು ಆಕೆ ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದುದರ ಬಗೆಗೆ ಸುರತ್ಕಲ್ ಪೋಲೀಸು ಠಾಣೆಯಲ್ಲಿ ದೂರು ನೀಡಿದ್ದರು. ಆದ್ದರಿಂದ ಅವರು ಸದರಿ ಠಾಣೆಗೆ ಭೇಟಿ ನೀಡುವುದು ಅನಿವಾರ್ಯವಾಗಿತ್ತು. ಮೂರು ವರುಷದಿಂದ ಪ್ರೀತಿಸುತ್ತಿದ್ದೆವು. ಅನ್ಯ ಧರ್ಮೀಯರಾದ್ದರಿಂದ ಮದುವೆಗೆ ಒಪ್ಪಿಗೆ ಸಿಗುವ ಸಂಭವ
ತೆಲಂಗಾಣ ರಾಜ್ಯ ವಿಧಾನ ಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರ ಪ್ರಮಾಣವಚನ ಸ್ವೀಕಾರವನ್ನು ಡಿಸೆಂಬರ್ 9ರ ಶನಿವಾರ ಇಟ್ಟುಕೊಳ್ಳಲಾಗಿದ್ದು, ಅಕ್ಬರುದ್ದಿನ್ ಒವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ. ಇದನ್ನು ವಿರೋಧಿಸಿ ಬಿಜೆಪಿಯ ಶಾಸಕರು ಪ್ರಮಾಣವಚನ ಸಮಾವೇಶವನ್ನೇ ಬಹಿಷ್ಕರಿಸಿದರು. ಘೋಷಾಮಹಲಿನಿಂದ ಆಯ್ಕೆಯಾಗಿರುವ ಬಿಜೆಪಿ ಶಾಸಕ ಟಿ. ರಾಜಾಸಿಂಗ್ ಅವರು ನಾನು ಬದುಕಿರುವವರೆಗೆ ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂದು ಆವೇಶದಿಂದ ಘೋಷಣೆ ಮಾಡಿದರು.
ಎನ್ಐಎ- ರಾಷ್ಟ್ರೀಯ ತನಿಖಾ ಏಜೆನ್ಸಿಯವರು ಐಎಸ್ಐಎಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಕಡೆ ದಾಳಿ ನಡೆಸಿ, ಹಲವರನ್ನು ಪ್ರಶ್ನಿಸಿ, 13 ಜನರನ್ನು ಡಿಸೆಂಬರ್ 9ರ ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ.ಪೂನಾದ ಎರಡು ಕಡೆ, ಮುಂಬಯಿ ಹೊರ ವಲಯದ ಥಾಣೆಯ 9 ಕಡೆ, ಥಾಣೆ ಹೊರ ವಲಯದ 31 ಕಡೆ, ಬಾಯಂದರ್ನ ಒಂದು ಕಡೆ ಮತ್ತು ಕರ್ನಾಟಕದ ಬಡಗಣ ಭಾಗದ ಕೆಲವೆಡೆ ಶನಿವಾರ ಏಕ ಕಾಲಕ್ಕೆ ದಾಳಿ ಮಾಡಿದರು. ಅಲ್ ಕೈದಾ
ಮಾಜೀ ಬಿಜಾಪುರ ಬದಲಾದ ವಿಜಯಪುರದ ಮೌಲ್ವಿ ಹಾಶ್ಮಿ ಅವರು ಪ್ರಧಾನಿ ಮೋದಿಯವರ ಜೊತೆಗೆ ಇರುವ ಫೆÇೀಟೋ ಹೊರ ಬೀಳುವುದರೊಂದಿಗೆ ಶಾಸಕ ಯತ್ನಾಳರ ಐಸಿಸ್ ಆರೋಪ ನೆಲನಡುಕ ತರುತ್ತಿದೆ. ಕೆಲವರ ಪ್ರಕಾರ ಬಿಜೆಪಿ ಶಾಸಕ ಯತ್ನಾಳರ ಮೂಲಕವೇ ಹಾಶ್ಮಿಯವರು ಪ್ರಧಾನಿ ಮೋದಿಯವರನ್ನು ಭೇಟಿ ಆಗಿದ್ದಾರೆ. ಹಾಶ್ಮಿಯವರ ಕುಟುಂಬ ಮತ್ತು ಯತ್ನಾಳರ ಕುಟುಂಬಗಳು ವಿಜಯಪುರದಲ್ಲಿ ಬಿಡದಿ ಹೋಟೆಲಿನಿಂದ ಹಿಡಿದು ನಾನಾ ಉದ್ಯಮ ಪಾಲುದಾರಿಕೆ ಹೊಂದಿವೆ. ಅಧಿಕಾರದಲ್ಲಿ ಯಾರು ಇದ್ದರೂ ಹೋಗುವ
ಕಳೆದೊಂದು ದಶಕದಲ್ಲಿ ದಲಿತರ ಮೇಲಿನ ಅಪರಾಧಗಳು ಭಾರತದಲ್ಲಿ 48 ಶೇಕಡಾದಷ್ಟು ಹೆಚ್ಚಾಗಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗ್ರಾಫ್ ಪೋಸ್ಟ್ ಮಾಡುವ ಮೂಲಕ ಬಿಜೆಪಿಯ ಸಬ್ ಕ ಸಾಥ್ ಹೇಳಿಕೆಯನ್ನು ಲೇವಡಿ ಮಾಡಿದ್ದಾರೆ.ಎನ್ಸಿಆರ್ಬಿ- ರಾಷ್ಟ್ರೀಯ ಅಪರಾಧ ವರದಿಯ ಆಧಾರದ ಮೇಲೆ ಈ ಗ್ರಾಫ್ ತಯಾರಾಗಿದೆ. ದಲಿತರ ಮೇಲೆ 46.12% ಮತ್ತು ಬುಡಕಟ್ಟು ಜನರ ಮೇಲೆ 48.15% ದೌರ್ಜನ್ಯ ಅಧಿಕವಾಗಿರುವುದು ಅಂಕಿಅಂಶದಲ್ಲಿದೆ.ಚುನಾವಣೆ ಮುಗಿದ