Home Articles posted by v4team (Page 2)

ಮೂಡುಬಿದಿರೆ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ

ಮೂಡುಬಿದಿರೆ : ನಮ್ಮ ಮಾತೃಭಾಷೆ ನಮ್ಮ ನಾಡುನುಡಿ ಸಂಸಕೃತಿಯನ್ನು ಕಲಿಸುತ್ತದೆ. ಹೀಗಾಗಿ ಯಾವುದೇ ಭಾಷೆಯನನು ಕಲಿಯಿರಿ. ಆದರೆ ಮಾತೃಭಾಷೆಯನ್ನು ಮರೆಯದಿರಿ ಎಂದು ಶಾಸಕ ಉಮಾನಾಥ ಹೇಳಿದರು.ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಮ್ಮ ಪಕ್ಕದಲ್ಲಿ ದೇಶವನ್ನು ಲೂಟಿ ಮಾಡಿದವರ ಪೃಯವನ್ನು

ನ್ಯಾಯಾಲಯದಲ್ಲಿ ಅರೆ ಕಾನೂನು ಸ್ವಯಂ ಸೇವಕರ (Para Legal Volunteers) ಆಯ್ಕೆಗೆ ಅರ್ಜಿಯ ಕೊನೆಯ ದಿನಾಂಕ ವಿಸ್ತರಣೆ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿ ಸುಳ್ಯ ಇವರ ಕಾರ್ಯವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಕರು / ನಿವೃತ್ತ ಶಿಕ್ಷಕರು, ವಿವಿಧ ಇಲಾಖೆಯ ನಿವೃತ್ತ ಸರ್ಕಾರಿ

ಡಾ.ಡಿ.ಎ.ಶಂಕರ್ ಮೈಸೂರು ಅವರಿಗೆ ೨೦೨೫ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ ೨೦೨೫ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ.ಡಿ.ಎ.ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆೆ ಎಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಒಟ್ಟು ೨೮ ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್) ಮತ್ತು ಹೊಸ

ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು

ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ.ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ.ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ‌ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ

ಚಿಕಿತ್ಸೆಗೆ ಮಾನವೀಯ ನೆರವು ನೀಡಲು ಮನವಿ

ಮೂಡುಬಿದಿರೆ: ಕಾರ್ಕಳದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಡುಮಾರ್ನಾಡು ಗ್ರಾಮದ ಅಚ್ಚರ ಕಟ್ಟೆ ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ಅವರ ಪುತ್ರ ಸಾತ್ವಿಕ್ ಕುಲಾಲ್ ಅವರ ಚಿಕಿತ್ಸೆಗೆ ದಾನಿಗಳು ಮತ್ತು ಸಾರ್ವಜನಿಕರು ಮಾನವೀಯ ನೆರವು ನೀಡಿ ಸಹಕರಿಸುವ ಅಗತ್ಯವಿದೆ. ಕುಟುಂಬವು ಆರ್ಥಿಕವಾಗಿ ಬಹಳ ದುರ್ಬಲವಾಗಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿಗಳ

ಲಯನ್ಸ್ ಜಿಲ್ಲಾ 317D ‘ಸನ್ಮಿತ್ರ’ ಡೈರೆಕ್ಟರಿ ಬಿಡುಗಡೆ

ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್‌ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ

ಅನಾರೋಗ್ಯ : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಮೂಡುಬಿದಿರೆ : ಶಿತಾ೯ಡಿ ಗ್ರಾ. ಪಂ. ವ್ಯಾಪ್ತಿಯ ದಡ್ಡಾಲಪಲ್ಕೆಯಲ್ಲಿ ಮಹಿಳೆಯೋವ೯ರು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರ್ತಾಡಿ ದಡ್ಡಾಲಪಲ್ಕೆಯ ನಿವಾಸಿ ಫ್ಲೋರಿನ್ ಡಿಸೋಜ ( 58) ಆತ್ಮಹತ್ಯೆ ಮಾಡಿಕೊಂಡವರು.ಫ್ಲೋರಿನ್ ಅವರ ಮೂವರು ಮಕ್ಕಳು ವಿದೇಶದಲ್ಲಿದ್ದು ಮನೆಯಲ್ಲಿ ತಂಗಿಯೊಂದಿಗೆ ವಾಸವಾಗಿದ್ದರು. ಕಳೆದ ಕೆಲ ಸಮಯಗಳಿಂದ ಇವರಿಗೆ ಖಾಯಿಲೆಯೊಂದು ಬಾಧಿಸಿದ್ದು ಇದರಿಂದಾಗಿ ಮಾನಸಿಕವಾಗಿ ಜಿಗುಪ್ಸೆಗೊಂಡಿದ್ದರು. ತಂಗಿ ಶಿರ್ತಾಡಿ ಪೇಟೆಗೆ

ಮೂಡುಬಿದಿರೆ ತಾಲೂಕು ಮಟ್ಟದ ಕ್ರೀಡಾಕೂಟ: ಆಳ್ವಾಸ್ ಚಾಂಪಿಯನ್- 139 ಪದಕಗಳ ಸಾಧನೆ

ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದ ಸಿಂಥೆಟಿಕ್ ಟ್ರ್ಯಾಕ್‌ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 2025-26ನೇ ಸಾಲಿನ ಕ್ರೀಡಾಕೂಟದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಗಳು ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ. ಆಳ್ವಾಸ್ ಶಾಲೆಗಳು 14 ವರ್ಷ ಮತ್ತು 17 ವರ್ಷ ವಯೋಮಿತಿಯ ಎರಡೂ ವಿಭಾಗಗಳಲ್ಲಿ

ಕೌಟುಂಬಿಕ ಸಮಸ್ಯೆ : ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಮೂಡುಬಿದಿರೆ: ಕೌಟುಂಬಿಕ ಸಮಸ್ಯೆಯಿಂದಾಗಿ ಆಟೋ ಚಾಲಕನೋವ೯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಒಂಟಿಕಟ್ಟೆಯಲ್ಲಿ ನಡೆದಿದೆ. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆ ನಿವಾಸಿ, ಆಟೋ ಚಾಲಕ ರಾಜೇಶ್ (42) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಅವರು ಮಹಾವೀರ ಕಾಲೇಜು ಬಳಿಯ ಆಟೋ ಪಾರ್ಕ್‌ನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ರಾಜೇಶ್ ಅವರು ತಮ್ಮ ಸ್ನೇಹಪರ ಸ್ವಭಾವವನ್ನು ಹೊಂದಿದ್ದರು. ಕೌಟುಂಬಿಕ

ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜನರಾದ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಸುಳ್ಯ ಸೂಡ ಅಧ್ಯಕ್ಷರಿಂದ ಅಭಿನಂದನೆ

ಸುಳ್ಯ. ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜಾನರಾದ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ಯು. ಟಿ ಖಾದರ್ ರವರು ಅಂತಾರಾಷ್ಟ್ರೀಯ ಸ್ಪೀಕರ್ ಸಮ್ಮೇಳನ ದಲ್ಲಿ ಭಾಗವಹಿಸಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷರಾದ ಕೆ. ಎಂ. ಮುಸ್ತಫ ಬೆಂಗಳೂರು ಸ್ಪೀಕರ್ ನಿವಾಸದಲ್ಲಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು