Home Articles posted by v4team (Page 584)

ಬಂಟ್ವಾಳದ ಪಂಜಿಕಲ್ಲು ಮುಕ್ಕುಡಲ್ಲಿ ಗುಡ್ಡ ಕುಸಿತ ಪ್ರಕರಣ : ಪರಿಹಾರದ ಚೆಕ್ ವಿತರಣೆ

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಇತ್ತೀಚೆಗೆ ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟ ಕೇರಳದ ಮೂವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷದಂತೆ ಪರಿಹಾರದ ಚೆಕ್‍ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಂಟ್ವಾಳದ ನಿರೀಕ್ಷಣಾ ಮಂದಿರದಲ್ಲಿ ವಿತರಿಸಿದರು. ಭೂ ಕುಸಿತದಲ್ಲಿ ಮೃತಪಟ್ಟ ಬಿಜು

ಕಡಲ್ಕೊರೆತ ಶಾಶ್ವತ ತಡೆಗೆ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಕೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಉಳ್ಳಾಲ: ಕಡಲ್ಕೊರೆತ ಶಾಶ್ವತ ತಡೆಗಾಗಿ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಸುವ ಯೋಜನೆ ರೂಪಿಸಲಾಗಿದೆ. ಉಳ್ಳಾಲದ ಬಟ್ಟಪ್ಪಾಡಿಯಲ್ಲಿ ಹೊಸ ವಿಧಾನದ ಶಾಶ್ವತ ತಡೆಯನ್ನು ನಿರ್ಮಿಸಲು ಅನುಮತಿಯನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಅವರು ಕಡಲ್ಕೊರೆತಕ್ಕೀಡಾದ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಉಚ್ಚಿಲ ಬಟ್ಟಪ್ಪಾಡಿ ಪ್ರದೇಶಕ್ಕೆ ಭೇಟಿ ನೀಡಿ ಮಾಧ್ಯಮದ ಜತೆಗೆ ಮಾತನಾಡಿದರು.ಕಳೆದ ಬಾರಿ 800 ಮೀ ದೂರ ಕಡಲ್ಕೊರೆತ ಸಂಭವಿಸಿದ್ದರೆ ಈ

ಜಿಲ್ಲಾ ಕಂಬಳ ಸಮಿತಿಯನ್ನು ಹೈಜಾಕ್ ಆರೋಪ : ಕಂಬಳ ಸಮಿತಿಯ ಅಧ್ಯಕ್ಷ ರೋಹಿತ್ ಹೆಗ್ಡೆ ರಾಜೀನಾಮೆಗೆ ಪಟ್ಟು

ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯನ್ನು ಹೈಜಾಕ್ ಮಾಡಿ ಗುಣಪಾಲ ಕಡಂಬರ ಕಂಬಳ ಅಕಾಡೆಮಿಯನ್ನು ಫೋಕಸ್ ಮಾಡಲಾಗುತ್ತಿದೆ. ಸುಕುಮಾರ್ ಶೆಟ್ಟಿ, ಚಂದ್ರ ಆಳ್ವ, ಪಾಟಿಲ ಭಾಸ್ಕರ್ ಕೋಟ್ಯಾನ್, ಶಾಂತರಾಮ ಶೆಟ್ಟಿ, ನವೀನ್, ಸತೀಶ್ಚಂದ್ರ ಸಾಲ್ಯಾನ್ ಅವರಂತಹ ಹಿರಿಯ ಯಜಮಾನರು ಅಕಾಡೆಮಿ ಅಧ್ಯಕ್ಷರ ಏಕಪಕ್ಷೀಯ ನಿರ್ಧಾರಗಳನ್ನು ಸಹಿಸಿಕೊಂಡಿರುವುದು ಅಚ್ಚರಿ ಮೂಡಿಸುತ್ತಿದೆ. ಜಿಲ್ಲಾ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ

ಪ. ಜಾತಿ ಮತ್ತು ಪ.ಪಂಗಡದವರ 2011ರ ಜನಗಣತಿ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಮನವಿ

ಪ. ಜಾತಿ ಮತ್ತು ಪ.ಪಂಗಡದವರ 2011ರ ಜನಗಣತಿ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿವೃತ್ತಿ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಮುಖ್ಯಮಂತ್ರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವರ ಮುಖಾಂತರ ಬಿಎಸ್ಪಿ ದ.ಕ ಜಿಲ್ಲಾ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಜಿಲ್ಲಾದ್ಯಕ್ಷರು ದಾಸಪ್ಪ ಎಡಪದವು, ಜಿಲ್ಲಾ ಸಂಯೋಜಕ ರು ಗೋಪಾಲ್ ಮುತ್ತೂರು , ವಿಮಲ.ಕೆ

ಹೊಳೆಗೆ ಹಾರಿದ್ದ ಯುವಕನ ಪತ್ತೆಗೆ ಶೋಧ

ಕಳೆದ ಜು.6 ರಂದು ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುರುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಹೊಳೆಗೆ ಹಾರಿರುವ ಶಂಕೆಯಿರುವ ಯುವಕ 28 ವರ್ಷದ ಪುನಿತ್ ಈವರೆಗೂ ಪತ್ತೆಯಾಗಿಲ್ಲ. ಮಂಗಳವಾರ ಬೆಳಿಗ್ಗಿನಿಂದಲೇ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ, ಪ್ರವೀಣ್ ಕುರ್ಕಾಲು, ಅಶೋಕ್ ದೆಂದೂರು ಕಟ್ಟೆ ಮತ್ತು ಉಡುಪಿ ಜಿಲ್ಲಾ ಅಗ್ನಿ ಶಾಮಕ ದಳದ ಸಿಬ್ಬಂದಿ ಸೇತುವೆಯಿಂದ ಸುಮಾರು 8 ಕಿಲೋ ಮೀಟರ್ ದೂರದ ವರಗೆ ಹುಡುಕಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ.

ಸರ್ಕಾರದಿಂದ ಅಧಿಕೃತ ಆದೇಶ ಬರುವ ತನಕ ಹೋರಾಟ ಕೈಬಿಡಲ್ಲ : ಪದ್ಮರಾಜ್ ಆರ್

ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಹೇಳಿದ್ದಾರೆ. ಆದಷ್ಟು ಶೀಘ್ರದಲ್ಲೇ ರಾಜ್ಯ

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ರಮಾನಾಥ ರೈ ಭೇಟಿ

ಬಂಟ್ವಾಳ: ಬಾರಿ ಮಳೆಯಿಂದ ತಾಲೂಕಿನ ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಕಾವಳಮೂಡೂರು, ಪಂಜಿಕಲ್ಲು, ಗೂಡಿನ ಬಳಿಯಲ್ಲಿ ಭೂ ಕುಸಿತ ಉಂಟಾಗಿ ಮನೆ, ರಸ್ತೆಗಳಿಗೆ ವ್ಯಾಪಕ ಹಾನಿ ಉಂಟಾಗಿರುವ ಹಿನ್ನಲೆಯಲ್ಲಿ ಮಾಜಿ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ಪರಿಶೀಲಿಸಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವ ನೀಡಿದರು. ಈ ಸಂದರ್ಭ ಹಾನೀಗೀಡಾದ ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮನವಿ ಮಾಡಿಕೊಂಡರು. ಈ ಸಂದರ್ಭ

ಮಳೆಗೆ ಬಂಟ್ವಾಳದ ಗೂಡಿನ ಬಳಿ ಗುಡ್ಡ ಕುಸಿತ : ಅಪಾಯ ಎದುರಿಸುತ್ತಿರುವ ಮನೆ ಮಂದಿ

ಬಂಟ್ವಾಳ: ನಿರಂತರವಾಗಿ ಸುರಿಯುತ್ತಿರುವ ವ್ಯಾಪಕ ಮಳೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಯ ಟಿಪ್ಪು ರಸ್ತೆ ಎಂಬಲ್ಲಿ ಗುಡ್ಡ ಕುಸಿದು ಇಲ್ಲಿನ ಮನೆಗಳ ಜನರು ತೀವ್ರ ಅಪಾಯವನ್ನು ಎದುರಿಸುತ್ತಿದ್ದಾರೆ. ವರ್ಷದ ಹಿಂದೆಯೇ ಗುಡ್ಡ ಸ್ವಲ್ಪ ಮಟ್ಟಿಗೆ ಕುಸಿದಿತ್ತು. ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಗುಡ್ಡ ಮತ್ತಷ್ಟು ಕುಸಿದಿದೆ. ಇದರಿಂದ ಟಿಪ್ಪು ರಸ್ತೆ ಸಂಪೂರ್ಣ ಹಾನಿಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ.ಗುಡ್ಡ ಕುಸಿದ ಭಾಗ ಮಳೆಯಿಂದ

ಕಡಲು ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿದ್ದು ಎಲ್ಲೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ರೂಪಿಸಲಿದೆ. ಸಾರ್ವಜನಿಕ ಆಸ್ತಿ ರಕ್ಷಣೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ