ಮಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ನಡೆಸಲಾದ ಕಾರ್ಯಾಚರಣೆ ವೇಳೆ ಸೂಕ್ತ ದಾಖಲೆಗಳನ್ನು ಹೊಂದಿರದ ಸುಮಾರು ೩೦೦ ಮಂದಿ ವಲಸಿಗರನ್ನು ಪತ್ತೆ ಹಚ್ಚಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಅವರೆಲ್ಲರೂ ನಿಖರವಾಗಿ ಅಕ್ರಮ ವಲಸಿಗರು ಎಂದು ಹೇಳಲಾಗದಿದ್ದರೂ ಈವರೆಗಿನ ಪರಿಶೀಲನೆ ಸಂದರ್ಭದಲ್ಲಿ ಸೂಕ್ತ ದಾಖಲೆ ನೀಡುವಲ್ಲಿ
ಪರ್ಕಳ: ಇಲ್ಲಿನ ಕೆಳಪರ್ಕಳದ ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ತಿರುಗುವಾಗ ಕೆಳಪರ್ಕಳದ ತಿರುವಿನಲ್ಲಿ ಭಾರಿ ಗಾತ್ರದ ಕ್ಯಾಂಟನೇರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿರುವ ಶೆಣೈ ಕಂಪೌಂಡ್ ನಾ ಮನೆಯ ಮೇಲೆ ಎರಗಿ ಮಗುಚಿ ಬಿದ್ದೀದೆ. ಪರ್ಕಳ ದಿಂದ .ಗೋವಾ ಕಡೆಗೆ ರದ್ದೀ ಪೇಪರ್ ತೆಗೆದು ಕೊಂಡು ಹೋಗುತ್ತಿತ್ತು.ಇಲ್ಲಿರುವ ಬಾಡಿಗೆ ಮನೆಯಲ್ಲಿ ಈಗ ಯಾರು ವಾಸಮಾಡುತ್ತಿಲ್ಲ, ಸದ್ಯದದ ಪರಿಸ್ಥಿತಿಯಲ್ಲಿ ಈ ಬಾಗದಲ್ಲಿ ಸೂಕ್ತ ದಾರಿದೀಪದ ವ್ಯವಸ್ಥೆ,,ಆಗಬೇಕು
ಉಡುಪಿ: ಉಡುಪಿ ಮೂಲದ ಸಿನಿ ಶೆಟ್ಟಿ 2022ರ ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 21ರ ಹರೆಯದ ಸಿನಿ ಶೆಟ್ಟಿ ಉಡುಪಿ ಜಿಲ್ಲೆಯ ಇನ್ನಂಜೆಯವರು. ಸ್ಪರ್ಧೆಯಲ್ಲಿ ಸಿನಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಭಾನುವಾರ ಜುಲೈ 04 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಫಿನಾಲೆಯಲ್ಲಿ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಕೊಂಡರು. ಸಿನಿ ಮುಂಬೈನಲ್ಲಿ ಹುಟ್ಟಿ ಬೆಳೆದರೂ ಕೂಡಾ ಮಿಸ್ ಇಂಡಿಯಾ
ಮಠಾಧೀಶರೇ ಆಗಲೀ..ಮಂತ್ರಿ ಮಾಗದರೇ ಆಗಲೀ ಅಧಿಕಾರದ ಪಿತ್ತ ನೆತ್ತಿಗೇರಿ ಎಲ್ಲವೂ ನಾನೇ, ಎಲ್ಲವೂ ನಾನು ನನ್ನಿಂದಲೇ ನಡೆಯಬೇಕು ಎಂಬ ಸರ್ವಾಧಿಕಾರ ಧೋರಣೆ ತಾಳಿದರೆ ಅವರ ಅವನತಿ ಆರಂಭವಾದಂತೆ ಎಂಬುದಾಗಿ ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಅಧೀನದಲ್ಲಿ ನೂತನವಾಗಿ ನಿರ್ಮಿಣಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದ ಶಿಲಾನ್ಯಾಸ ಕಾರ್ಯದಲ್ಲಿ ಭಾಗವಹಿಸಿ,
ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಸಿಂಹಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ, ಕಾರ್ಯದರ್ಶಿ ಜಲಜಾಕ್ಷಿ ಬಾಲಕೃಷ್ಣ, ಕೋಶಾಧಿಕಾರಿ ರವಿಶಂಕರ್ ಅವರಿಗೆ ಲಯನ್ಸ್ ಕ್ಲಬ್ ಪ್ರಥಮ ಉಪರಾಜ್ಯಪಾಲ ಮೆಲ್ವಿನ್ ಡಿ ಸೋಜ ಪದಗ್ರಹಣಆ ನಡೆಸಿಕೊಟ್ಟರು. ಬಳಿಕ ಮಾತನಾಡಿದ ಅವರು ವಿಟ್ಲ ಲಯನ್ಸ್ ಕ್ಲಬ್ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇಡೀ ಜಿಲ್ಲೆಗೆ ವಿಟ್ಲ ಲಯನ್ಸ್ ಕ್ಲಬ್
“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, , “2500 ಕೋಟಿ ರೂ. ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ಬಂದಿದೆ. ಆದರೆ ಆ ಹಣ ಎಲ್ಲಿ ಹೋಯಿತು
ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ವೈದ್ಯರ ದಿನಾಚರಣೆ ಅಚ ವೈದ್ಯರ ದಿನಾಚರಣೆ ಪ್ರಯುಕ್ತ ನಿಸ್ವಾರ್ಥ ಸಾಧಕ ವೈದ್ಯ ಡಾ. ಗೋಪಾಲ್ ಅವರಿಗೆ ಸನ್ಮಾನಿಸಲಾಯಿತು. ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಚೇರ್ ಮೆನ್ ಯು.ಕೆ. ಮೋನು ಸನ್ಮಾನಿಸಿ ಮಾತನಾಡಿ, ಸನಾತನ ಧರ್ಮದಲ್ಲಿ ಅನೇಕ ಮಹಾತ್ಮರನ್ನು ಇನ್ನಿತರ ಧರ್ಮದಲ್ಲೂ ಅವರ ಜನ್ಮ ದಿನದ ಮೂಲಕ ಭಾರತೀಯರಾದ ನಾವು ಕೊಂಡಾಡುತ್ತಿದ್ದು ಸೇವಾ ವೃತ್ತಿ
ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಸಂಭವಿಸಿದೆ.ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾವುದೇ ಸಾವು ನೋವು ಸಂಭವಿಸಿಲ್ಲ.ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಗರದ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆಯಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜನರಿಗೆ ಮೋಸ ಮಾಡುತ್ತಿದೆ. ಜನರಿಗೆ ಅಲ್ಪ ಅವಧಿಯ ಸೇವೆಯನ್ನ ನೀಡುವ ಉದ್ದೇಶ ಏನೂ ಎಂದು ಪ್ರಶ್ನೆ ಮಾಡಿದರು. ದೇಶದಲ್ಲಿ ಅಗ್ನಿಪಥ್ ಯೋಜನೆಯನ್ನು
ಶಿಕ್ಷಣ ಎಂಬುದು ಬದುಕಿಗೆ ಬೆಳಕು ನೀಡುವ ಕ್ಷೇತ್ರವಾಗಿದೆ. ಅಲ್ಪ ಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಮೌಲಾನಾ ಅಝಾದ್ನಂತಹ ಮಾದರಿ ಶಾಲೆಗಳನ್ನು ಸ್ಥಾಪಿಸಿ ಮುನ್ನಡೆಸುತ್ತಿದೆ ಎಂದು ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು , ಪುತ್ತೂರು ನಗರದ ಪಡೀಲ್ನಲ್ಲಿ ರೂ. 2.35 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಮೌಲಾನಾ ಆಝಾದ್ ಮಾದರಿ