ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕನ ಶಿರಚ್ಛೇದ ಘಟನೆ ಮಾನವೀಯತೆಗೆ ಸವಾಲಾದ ಪ್ರಕರಣ. ಕೃತ್ಯದ ಹಿಂದೆ ವ್ಯವಸ್ಥಿತ ಸಂಚಿದೆ, ಭಯೋತ್ಪಾದಕ ಕೃತ್ಯ. ದೇಶದಲ್ಲಿ ಐಸಿಸ್, ತಾಲಿಬಾನ್ ಮಾನಸಿಕತೆ ತಲೆ ಎತ್ತುತ್ತಿರುವುದಕ್ಕೆ ಇದು ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ. ಇದೇ ಮಾದರಿಯ ಹತ್ಯೆ ಶಿವಮೊಗ್ಗದಲ್ಲೂ ನಡೆದಿತ್ತು.
ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಲಿಮ್ಕೊ ಸಂಸ್ತೆ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳ್ತಂಗಡಿ ವತಿಯಿಂದ ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ವಿಕಲ ಚೇತನರ ಶ್ರೆಯಾಭಿವೃದ್ದಿ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಮ್ಮ
ನಗರದ ಪಂಪ್ವೆಲ್ ಬಸ್ಸು ನಿಲುಗಡೆಯಾಗುವ ಸಮೀಪದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಒಳಗಡೆಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಚಿಮ್ಮುತ್ತಿದೆ.ಬಿರುಕು ಬಿಟ್ಟಿರುವ ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲೆಲ್ಲಾ ಹರಿದಾಡುತ್ತಿದೆ. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ರಸ್ತೆಯ ಕೆಳಭಾಗದಲ್ಲಿರುವ ನೀರು ಸರಬರಾಜಿನ ಪೈಪ್ ಒಡೆದಿದ್ದರಿಂದ ರಸ್ತೆ ಮಧ್ಯೆ ಬಿರುಕು ಮೂಡಿದೆ ಎನ್ನಲಾಗುತ್ತಿದೆ.ಪಂಪ್ವೆಲ್ ಮೇಲ್ಸೇತುವೆಯ


















