Home Articles posted by Laxman Suvarna (Page 9)

ಉಡುಪಿ : ರಾಷ್ಟ್ರೀಯ ಪೈಲೆಟ್ ದಿನ ಆಚರಣೆ

ರಾಷ್ಟ್ರೀಯ ಪೈಲೆಟ್ ದಿನವನ್ನು ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ನೇತೃತ್ವದಲ್ಲಿ ಉಡುಪಿ ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಮೇ 26 ರಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಇ.ಎಮ್.ಆರ್.ಐ ಗ್ರೀನ್ ಹೆಲ್ತ್ ಸರ್ವೀಸ್‌ನ ಅಧಿಕಾರಿಗಳಾದ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಅಧಿಕಾರಿಗಳು, ವಾಹನ ಉಸ್ತುವಾರಿ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ : ಹಿರಿಯರೆಡೆಗೆ ಸಾಹಿತ್ಯದ ನಡಿಗೆ

ಉಡುಪಿ ಜಿಲ್ಲೆ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದಿಂದ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ ಮಣಿಪಾಲದಲ್ಲಿ ಮೇ 26 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸರ್ಕಾರಿ ಕೆಲಸದಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತ, ಕನ್ನಡ ನಾಡು ನುಡಿ ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿದ 91 ವರ್ಷದ ಹಿರಿಯರಾದ ವಿಠಲ ರಾವ್ ಗಂಭೀರ್ ಅವರನ್ನು ಅವರ ಸ್ವಗೃಹ ಮಣಿಪಾಲದಲ್ಲಿ ಗೌರವಿಸಲಾಯಿತು. ಎಂಟು ವಿವಿಧ ವಾದ್ಯಗಳನ್ನು ನುಡಿಸಬಲ್ಲ

ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : ಮಣಿಪಾಲ ಕೆ.ಎಂ.ಸಿ ಯಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ

ಉಡುಪಿ : ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ನೇತ್ರವಿಜ್ಞಾನ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯಗಳಿಗೆ ಉಪಕೇಂದ್ರ ಮಟ್ಟದಲ್ಲಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರವು ಮೇ 26 ರಂದು ಮಣಿಪಾಲ ಕೆ.ಎಂ.ಸಿ. ಯ ಇಂಟರಾಕ್ಟ್ ಕೆ.ಎಮ್.ಸಿ

ಉಡುಪಿ ಕೊಡವೂರು ವಾರ್ಡ್ : ಉಚಿತ ನೇತ್ರ ತಪಾಸಣೆ

ಉಡುಪಿ ಜಿಲ್ಲೆಯ ಕೊಡವೂರು ವಾರ್ಡಿನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಮೇ 26, 2023 ರಂದು ನಡೆಯಿತು. ಶಿಬಿರದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 26 ಜನರು ಕಣ್ಣಿನ ಪರೀಕ್ಷೆಯನ್ನು ನಡೆಸಿ, 13 ಜನರಿಗೆ ಶಸ್ತ್ರ ಚಿಕಿತ್ಸೆ ಹಾಗೂ 7 ಜನರಿಗೆ ಕನ್ನಡಕ ವಿತರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು

ಮಲ್ಪೆಯಲ್ಲಿ ಯಕ್ಷಗಾನ ಕಲಾರಂಗದವರಿಂದ ತಾಳಮದ್ದಲೆ ಸಪ್ತಾಹ

ಇಂದು ಉಡುಪಿ ಜಿಲ್ಲೆಯ ಮಲ್ಪೆಯ ಬಾಲಕರ ಶ್ರೀ ರಾಮ ಭಜನಾ ಮಂದಿರದಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿದ ತಾಳಮದ್ದಲೆ ಸಪ್ತಾಹದ ಆರನೇ ದಿನದ ತಾಳಮದ್ದಲೆ ಕಚದೇವಯಾನಿ ಸುಂದರವಾಗಿ ಪ್ರಸ್ತುತಗೊಂಡಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ವತಿಯಿಂದ ಸಂಸ್ಥೆಯ ಅಧ್ಯಕ್ಷರನ್ನು ಗೌರವಿಸಲಾಯಿತು.

ಬಸ್ಸೇರಿದ ಶ್ವಾನ : ಶ್ವಾನದ ನಿಷ್ಠೆಗೆ ಜನರ ಮೆಚ್ಚುಗೆ!

ಉಡುಪಿ : ಶ್ವಾನ ಅಂದ್ರೆ ಎಲ್ರಿಗೂ ಇಷ್ಟ. ಅದರ ನಿಷ್ಠೆ ಮತ್ತು ಪ್ರೀತಿಯೂ ಪ್ರಶ್ನಾತೀತ. ಉಡುಪಿ ನಗರದ ಆಸುಪಾಸಿನಲ್ಲಿ ನಡೆದ ಶ್ವಾನನಿಷ್ಠೆಯ ಪ್ರಸಂಗವೊಂದು, ಶ್ವಾನ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ತನ್ನನ್ನು ಆರೈಕೆ ಮಾಡುವ ಮನೆ ಕೆಲಸದಾಕೆಯ ಜೊತೆಯಲ್ಲಿ ಈ ಶ್ವಾನ ಕೂಡ ಬಸ್ಸನ್ನೇರಿದೆ. ಈ ಮಹಿಳೆ ಮನೆಯೊಂದರಲ್ಲಿ ಮನೆ ಕೆಲಸ ಮಾಡುತ್ತಾರೆ. ಮನೆ ಕೆಲಸದ ಮಹಿಳೆಯ ಜೊತೆಯಲ್ಲಿ ಮಾಲೀಕರ ಮನೆಯ ಶ್ವಾನವೂ ಬಂದಿದೆ.ಆಕೆ ಬಸ್ ಹತ್ತುವಾಗ ಶ್ವಾನವೂ ಹತ್ತಿದೆ. ಬಸ್

ಆತಂಕ ಬೇಡ ಟ್ಯಾಂಕರ್ ಮೂಲಕ ನೀರು ಪೂರೈಸುವ ಭರವಸೆ : ಉಡುಪಿ ನಗರಸಭೆ

ಉಡುಪಿ ಜಿಲ್ಲೆಯ ನಗರ, ಗ್ರಾಮೀಣ, ಪ್ರದೇಶ ಸೇರಿದಂತೆ ಹಲವಾರು ಕಡೆಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು, ಎಲ್ಲರೂ ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ. ಆದರೆ ಕೆಲವೆಡೆ ಟ್ಯಾಂಕರ್ ನೀರಿನ ಸಮರ್ಪಕ ಪೂರೈಕೆ ಇಲ್ಲದೆ, ನೀರಿಗಾಗಿ ಜನರ ಪರದಾಟ ಹೆಚ್ಚಿದೆ. ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಉಡುಪಿ ನಗರಸಭೆ ಪೌರಾಯುಕ್ತ ಆರ್ ಪಿ ನಾಯಕ್, ಮಣಿಪಾಲ, ಉಡುಪಿ ನಗರ ಪ್ರದೇಶ, ಅಂಬಲಪಾಡಿ ಗ್ರಾಮಾಂತರ, ಸಂತೆಕಟ್ಟೆ ಕೆಲವು ಕಡೆಗಳಲ್ಲಿ ನಾಲ್ಕೈದು ದಿನಗಳಿಂದ ನೀರಿಲ್ಲ.

ಕಾರ್ಕಳ : ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಟ್ಲದಲ್ಲಿರುವ ಕೇಶವ ಕೃಪಾ ವಸತಿ ಗೃಹದಲ್ಲಿ ರೂರಲ್ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಮೇ 25, 2023 ರಂದು ಜರುಗಿತ್ತು. ಮಾರ್ಚ್ 28, 2023 ರಿಂದ ಏಪ್ರಿಲ್ 8, 2023 ರವರೆಗೆ ನಡೆದ ಈ ಶಿಬಿರದಲ್ಲಿ ವಿಷ್ಣು ಸಹಸ್ರನಾಮ, ಯೋಗ, ದೇಶಭಕ್ತಿ ಗೀತೆಗಳು, ಪೂರ್ವಭಾವಿ ಭಾಷಣ, ಚರ್ಚೆ, ರಸಪ್ರಶ್ನೆ, ಚಿತ್ರಕಲೆ ತರಗತಿಗಳು, ಕರಕುಶಲ ಮತ್ತು ಕ್ಲೇ ಮಾಡೆಲಿಂಗ್, ಮನರಂಜನಾ ನಾಟಕ, ಯುನಿಟಿ

“ದೇವತಾ” ಕಲಾ ಪ್ರದರ್ಶನ : ಡಾ. ಎಂ ಮೋಹನ್ ಆಳ್ವರಿಂದ ಉದ್ಘಾಟನೆ

“ದೇವತಾ” ವಿಭಿನ್ನ ಕಲಾ ಪ್ರದರ್ಶನ ಮೇ 26 ರಿಂದ 28 ರವರೆಗೆ ಅದಿತಿ ಗ್ಯಾಲರಿನಲ್ಲಿ ಪ್ರದರ್ಶನಗೊಳ್ಳಲಿದ್ದು, ಈ ಪ್ರಯುಕ್ತ ಮೇ 25, 2023 ರ ಗುರುವಾರದಂದು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಅದಿತಿ ಗ್ಯಾಲರಿನಲ್ಲಿ ಜರುಗಿತ್ತು. ಮೂಡುಬಿದರೆಯ ಆಳ್ವಾಸ್ ಫೌಂಡೇಶನ್ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವರವರು ಕಲಾವಿದೆ ಪ್ರವೀಣಾ ಮೋಹನ್ ಅವರ ಆಕ್ರಿಲಿಕ್ ಕಲಾಕೃತಿಗಳ ಪ್ರದರ್ಶನ “ದೇವತಾ” ವಿದ್ಯುಕ್ತವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅಕ್ಕಿ ಮುಹೂರ್ತ : 2024 ರ ಪರ್ಯಾಯಕ್ಕೆ ಸಜ್ಜು

ದಿನ ಕಳೆದಂತೆ ಹತ್ತಿರವಾಗುತ್ತಿದೆ ಉಡುಪಿಯ ಭವ್ಯ ಆಚರಣೆ. ಇಡೀ ಜಗತ್ತಿನಲ್ಲೇ ವಿಶಿಷ್ಟವಾದ ಸಂಪ್ರದಾಯಗಳಲ್ಲಿ ಒಂದು, ಶತಮಾನಗಳಿಂದ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಚಾಚೂ ತಪ್ಪದೇ ಆಚರಿಸಿಕೊಂಡು ಬರುತ್ತಿರುವ “ಪರ್ಯಾಯ”ಮಹೋತ್ಸವ. ಉಡುಪಿಯ 8 ಮಠಗಳ ನಡುವೆ ಶ್ರೀ ಕೃಷ್ಣ ದೇವಾಲಯದ ಜವಾಬ್ದಾರಿಗಳ ಹಸ್ತಾಂತರವನ್ನೇ ಪರ್ಯಾಯ ಮಹೋತ್ಸವ ಎನ್ನುತ್ತಾರೆ. ಪ್ರಸ್ತುತ ಕೃಷ್ಣಪುರ ಮಠದ ವಿದ್ಯಾಸಾಗರ ತೀರ್ಥರು ಶ್ರೀ ಕೃಷ್ಣನ ಆರಾಧನೆಯಲ್ಲಿ ತೊಡಗಿದ್ದರೆ, ಮುಂದಿನ ಸರದಿಯಲ್ಲಿ