ಮಂಗಳೂರು: ಸೌಜನ್ಯ, ಭಾರತಿ, ಶಿವಪ್ಪ ಬಂಗೇರಾ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ

ಮಂಗಳೂರು: ಧರ್ಮಸ್ಥಳದ ಸೌಜನ್ಯ, ಬಂಟ್ವಾಳದ ಸಿದ್ಧಕಟ್ಟೆಯ ಭಾರತಿ ಮತ್ತು ದಲಿತ ಮುಖಂಡ ಬಾಂಬಿಲ ಶಿವಪ್ಪ ಬಂಗೇರ ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಜಿ.ಪಂ. ಮಾಜಿ ಉಪಾಧ್ಯಕ್ಷರಾದ ಎಂ. ತುಂಗಪ್ಪ ಬಂಗೇರ ನೇತೃತ್ವದಲ್ಲಿ ಬಂಟ್ವಾಳ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪಿಲಾತಬೆಟ್ಟು ಗ್ರಾ. ಪಂ. ಅಧ್ಯಕ್ಷರಾದ ಶಾರದ, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷರಾದ ವಿಜಯ ಕುಮಾರ್, ಪ್ರಮುಖರಾದ ಸುರೇಶ್ ಕುಲಾಲ್, ಲಕ್ಷ್ಮೀನಾರಾಯಣ ಹೆಗ್ಡೆ, ಗಂಗಾಧರ ಪೂಜಾರಿ ಕಜೆಕಾರು, ತಾರಾನಾಥ್ ಕಜೆಕಾರು, ಮಧು ನಾಡೇಲು, ಪ್ರಭಾಕರ ಪಿ.ಯಂ., ಪ್ರಮೋದ್ ಕುಮಾರ್ ಮೂರ್ಜೆ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.