HomeFresh Newsಬೆಳ್ತಂಗಡಿ: ನಿರ್ಮಾಣ ಹಂತದ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ: ಜಿಲ್ಲೆಯ ಶಾಸಕರ ನೇತೃತ್ವದಲ್ಲಿ ತಡೆ

ಬೆಳ್ತಂಗಡಿ: ನಿರ್ಮಾಣ ಹಂತದ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ: ಜಿಲ್ಲೆಯ ಶಾಸಕರ ನೇತೃತ್ವದಲ್ಲಿ ತಡೆ

ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವುಗೊಳಿಸದಂತೆ ಸಚಿವರು ಸೂಚಿಸಿದ್ದರೂ ಅರಣ್ಯಾಧಿಕರಿಗಳು ಬೆಳ್ಳಂಬೆಳಗ್ಗೆ ತೆರವಿಗೆ ಮುಂದಾದ ಘಟನೆ ನಡೆದಿದೆ.

ಬೆಳ್ಳಂಬೆಳಗ್ಗೆ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ದೌಡಾಯಿಸಿದ್ದು, ಅವರೊಂದಿಗೆ ಜಿಲ್ಲೆಯ ಶಾಸಕರಾದ ರಾಜೇಶ್ ನಾಯಕ್, ಭರತ್ ಶೆಟ್ಟಿ, ಭಾಗೀರಥಿ ಮುಳ್ಯ, ಉಮಾನಾಥ್ ಕೋಟ್ಯಾನ್, ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಸಾತ್ ನೀಡಿದರು. ಸ್ಥಳದಲ್ಲಿ ನೂರಾರು ಪೊಲೀಸರು, ಸ್ಥಳೀಯರು, ಅರಣ್ಯ ಇಲಾಖೆ ಸಿಬಂದಿ ಜಮಾಯಿಸಿ ತಾತ್ಕಾಲಿಕವಾಗಿ ನಿರ್ಮಿಸಿದ ಮನೆ ತೆರವಿಗೆ ಅರಣ್ಯ ಇಲಾಖೆ ಮುಂದಾಗಿದ್ದಾರೆ. ಇದನ್ನು ತಡೆದ ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಅವರನ್ನು ಲೆಕ್ಕಿಸದೆ ಎಸಿಎಫ್ ಸುಬ್ಬಯ್ಯ ನಾಯ್ಕ್ ಹಾಗೂ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಮುಂದಾದ ಘಟನೆ ನಡೆಯಿತು.

ಕಳೆದ ಅ.6 ರಂದು ಅರಣ್ಯ ಇಲಾಖೆ ನೂತನ ಮನೆ ನಿರ್ಮಾಣಕ್ಕೆ ಮುಂದಾದ ಕುಟುಂಬದ ಫೌಂಡೇಶನ್ ಕಿತ್ತೆಸೆದು ಅರಣ್ಯ ಇಲಾಖೆ ದರ್ಪ ತೋರಿತ್ತು. ಇದನ್ನು ಪ್ರಶ್ನಿಸಿದ ಶಾಸಕರ ವಿರುದ್ಧವೇ ಹಗೆ ಸಾಧನೆ ಮಾಡುತ್ತಿರುವ ಅರಣ್ಯ ಇಲಾಖೆ ಸಚಿವರ ಆದೇಶ ಇದೆ ಎಂದು ಸುಳ್ಳು ಹೇಳಿ ಇಂದು ತೆರವಿಗೆ ಮುಂದಾಗಿತ್ತು. ಇದಕ್ಕೂ ಮುನ್ನ ಮನೆ ಮಂದಿ ಹಾಗೂ ಸ್ಥಳೀಯರು ಸೇರಿ 10 ಮಂದಿ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

ಪ್ರಕರಣವು ರಾಜಕೀಯ ಬಣ್ಣ ಪಡೆಯುತ್ತಿದ್ದು, ಅರಣ್ಯಧಿಕಾರಿಗಳಿಗೆ ಮನೆ ತೆರವುಗೊಳಿಸುವಂತೆ ಒತ್ತಡವೂ ಹೇರುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಅರಣ್ಯಧಿಕಾರಿಗಳು ಬಡವರ ಮನೆ ತೆರವುಗೊಳಿಸಿಯೇ ಸಿದ್ಧ ಎಂದು ಹಟಕ್ಕೆ ಬಿದ್ದಿದೆ. ತೆರವುಗೊಳಿಸುವುದಾದರೆ ಅರಣ್ಯ ಮತ್ತು ಕಂದಾಯ ಜಂಟಿ ಸರ್ವೇ ನಡೆಸಿ ತೆರವುಗೊಳಿಸಿ ಎಂದು ಶಾಸಕರು ಆಗ್ರಹಿಸಿದ್ದಾರೆ.

ಕಳೆಂಜ ಗ್ರಾದಮದ ಅಮ್ಮಿಡ್ಕ ಕುದ್ದಮನೆ ಸೇಸ ಗೌಡ ಎಂಬವರ ಕುಟುಂಬ ಸುಮಾರು 150 ವರ್ಷದ ಹಿಂದೆ ತಮ್ಮ ಸ್ವಾಧೀನದ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿತ್ತು.

ಆದರೆ ಅ.6 ರಂದು ಅರಣ್ಯ ಇಲಾಖೆ ಕಿತ್ತೆದು ಬಡ ಕುಟುಂಬದ ಮುಂದೆ ದರ್ಪ ತೋರಿರುವ ಬಗ್ಗೆ ಮನೆ ಮಗ ನೊಂದು ಆತ್ಮಹತ್ಯೆಗೆ ಮುಂದಾಗಿದ್ದ. ಶಾಸಕರ ಮದ್ಯಸ್ಥಿಕೆಯಲ್ಲಿ ಸಚಿವ ಈಶ್ವರ ಖಂಡ್ರೆ ಯಥಾಸ್ಥಿತಿ ಕಾಯ್ದಿಕೊಳ್ಳುವಂತೆ ಸೂಚಿಸಲಾಗಿತ್ತು. ಆದರೂ ಅರಣ್ಯ ಇಲಾಖೆ ಹಟಕ್ಕೆ ಬಿದ್ದಿದೆ.

ಪುತ್ತೂರು ಎಸಿಎಫ್ ಸುಬ್ಬಯ್ಯ ನಾಯ್ಕ್, ಉಪ್ಪಿನಂಗಡಿ ಅರಣ್ಯಧಿಕಾರಿ ಜಯಪ್ರಕಾಶ್, ಕಳೆಂಜ ಉಪ ವಲಯರಣ್ಯಾಧಿಕಾರಿ ಪ್ರಶಾಂತ್, ಎಸ್‍ಐ ಧರ್ಮಸ್ಥಳ ಸಮರ್ಥ್ ಸ್ಥಳದಲ್ಲಿದ್ದರು. ಕೆ.ಎಸ್.ಆರ್.ಪಿ. ಮೂರು ತುಕುಡಿ ವಿಶೇಷ ಪಡೆಯನ್ನು ನಿಯೋಜಿಸಲಾಗಿದೆ. ಬೆಳ್ತಂಗಡಿ ವೃತ್ತನಿರೀಕ್ಷಕ ನಾಗೇಶ್ ಕದ್ರಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments