ಬೆಳ್ತಂಗಡಿ : ಜ.21ರಿಂದ 29 ವರೆಗೆ ಬಿಜೆಪಿಯಿಂದ ವಿಜಯ ಸಂಕಲ್ಪ ಅಭಿಯಾನ

ಭಾರತೀಯ ಜನತಾ ಪಾರ್ಟಿ ಇದೇ ಬರುವ 21ರಿಂದ 29ರವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಹೇಳಿದರು. ಅವರು ಮಾಧ್ಯಮದ ಜೊತೆ ಮಾತನಾಡಿ ಸರಣಿ ಕಾರ್ಯಕ್ರಮಗಳ ಮೂಲಕ ಜನ ಸಾಮಾನ್ಯರನ್ನು ತಳುಪಲಿದ್ದೇವೆ ಈ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ದರವರು ವಿಜಯಪುರದ ಸಿಂದಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಬೆಳ್ತಂಗಡಿ ಮಂಡಲದಲ್ಲಿ 8 ಮಹಾಶಕ್ತಿ ಕೇಂದ್ರ ಮಟ್ಟದಲ್ಲಿ 8 ಬೂತ್ ಗಳಲ್ಲಿ 21ರಂದು ಶಾಸಕರು ವಿಧಾನ ಪರಿಷತ್ ಸದಸ್ಯರು ಸೇರಿ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪುಟಾಣಿ,ಗಣೇಶ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.