Home Blog Left Sidebar

ಮೂಡುಬಿದಿರೆ: ಬೃಹತ್ ಕಾಲ್ನಡಿಗೆ ಜಾಥಾಕ್ಕೆ ಚಾಲನೆ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಮೂಡುಬಿದಿರೆ ತಾಲೂಕು ಪಂಚಾಯತ್, ತಾಲೂಕು ಕಚೇರಿ, ಮೂಡುಬಿದಿರೆ ಹಾಗೂ ಮೈಟ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ ಇದರ ಸಹಯೋಗದಲ್ಲಿ ಕಾಲ್ನಡಿಗೆ ಜಾಥಾವನ್ನು ದಿನಾಂಕ 18/04/2024 ರಂದು ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್‌ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್‌ ಸದಸ್ಯ ಎಸ್.ರುದ್ರೇಗೌಡ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.

ಎ.21ರಂದು ನರಿಕೊಂಬು ನವಜೀವನ ವ್ಯಾಯಾಮ ಶಾಲೆಯ ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ ಕಾರ್ಯಕ್ರಮ ಎ. 21ರಂದು ಬೆಳಿಗ್ಗೆ ಗಂಟೆ 10.14ರ ಶುಭ ಮುಹೂರ್ತದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ ಹೇಳಿದರು.ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ಬಳಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 108

ಹಿಮೋಫಿಲಿಯಾ ಎಂಬ ಪ್ರೀತಿಯ ನೆತ್ತರು

ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಈಗ ರಕ್ತ ಪ್ರೀತಿಯ ಹಿಮೋಫಿಲಿಯಾ ಸಮಗ್ರ ಕಾಳಜಿ ಕೇಂದ್ರ ಆರಂಭವಾಗಿದೆ. ಈಗ ಚುನಾವಣಾ ಕಾಲವಾದುದರಿಂದ ಈಗ ರಕ್ತ ಸಂಬಂಧ ಕಾಣಿಸದ ಜಿದ್ದಾಜಿದ್ದಿನ ಹೋರಾಟವೇ ಎಲ್ಲೆಡೆ ಕಾಣಿಸುತ್ತಿದೆ. ಮಿಶನರಿಗಳು, ಕ್ರಿಶ್ಚಿಯನರುಗಳು ಇಲ್ಲೆಲ್ಲ ಆಸ್ಪತ್ರೆಗಳನ್ನು ಆರಂಭಿಸಿದಾಗ ಇದ್ದ ಬರೇ ಸೇವೆ ಎಂಬುದು ಈ ಕಾಲಕ್ಕೆ ನಡೆಯದ ನಾಣ್ಯವೇ ಸರಿ. ಹಿಮೋಫಿಲಿಯಾ ಎನ್ನುವುದನ್ನು ನೆತ್ತರೊಸರು ಸಮಸ್ಯೆ ಎನ್ನಬಹುದು; ರಕ್ತಸ್ರಾವ ಎಂದೂ ಹೇಳುತ್ತಾರೆ.

ಬಾಯಿ ಅರ್ಬುದ ರೋಗ

ಬಾಯಿಯ ಒಳಗಿನ ಜೀವಕೋಶಗಳು ಅನಿಯಂತ್ರಿತವಾಗಿ ಬೆಳೆದು, ಗಡ್ಡೆಗಳ ರೂಪದಲ್ಲಿ ಬೆಳೆಯುವುದಕ್ಕೆ ಬಾಯಿಯ ಅರ್ಬುದ ರೋಗ ಅಥವಾ ಬಾಯಿಯ ಕ್ಯಾನ್ಸರ್ ಎಂದು ಹೇಳುತ್ತೇವೆ. ಅರ್ಬುದ ರೋಗ ಎನ್ನುವುದು ಒಂದು ವಿಶ್ವವ್ಯಾಪ್ತಿ ಹರಡಿರುವ ಒಂದು ಭೀಕರವಾದ ರೋಗ. ಗಂಡಸರಲ್ಲಿ ಶ್ವಾಸಕೋಶ, ಕರುಳು ಮತ್ತು ಬಾಯಿಯ ಕ್ಯಾನ್ಸರ್ ಹೆಚ್ಚು ಹೆಚ್ಚು ಕಾಣ ಸಿಗುತ್ತದೆ. ಹೆಂಗಸರಲ್ಲಿ ಜನನಾಂಗ, ಎದೆ ಮತ್ತು ಗರ್ಭಕೋಶದ ಕ್ಯಾನ್ಸರ್ ಹೆಚ್ಚು ಕಾಣಬರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ತಂಬಾಕು,

ವಿಶ್ವ ಹಿಮೋಫಿಲಿಯಾ ದಿನ-ಏಪ್ರಿಲ್ 17

ವಿಶ್ವ ಹಿಮೋಫಿಲಿಯಾ ಸೊಸೈಟಿ ಹಿಮೋಫಿಲಿಯಾ ರೋಗದಿಂದ ಬಳಲುತ್ತಿರುವ ರೋಗಿಗಳ ಜೀವನ ಮಟ್ಟದ ಸುಧಾರಣೆ ಮಾಡಲು ಮತ್ತು ರೋಗದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ, 1989ರಲ್ಲಿ ಎಪ್ರಿಲ್ 17ರಂದು ‘ವಿಶ್ವ ಹಿಮೋಫಿಲಿಯಾ ದಿನ” ಆಚರಣೆಯನ್ನು ಜಾರಿಗೆ ತಂದಿತು. 1963ರಲ್ಲಿ ಪ್ರಾಂಕ್ ಶ್ಯಾನ್‍ಬೆಲ್ ಎಂಬವರಿಂದ ಆರಂಭಗೊಂಡ ಈ ವಿಶ್ವ ಹಿಮೋಫಿಲಿಯಾ ಸೊಸೈಟಿ, ವಿಶ್ವದಾದ್ಯಂತ ಹಿಮೋಫಿಲಿಯಾ ರೋಗಿಗಳ ಶುಶ್ರೂಷೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು

ಏನೋ ಮಾಡಿ ಏನೋ ಆದ ಪ್ರಚಂಡ ಕುಳ್ಳ

ಕನ್ನಡ ಚಿತ್ರರಂಗದಲ್ಲಿ ಕಳ್ಳ ಕುಳ್ಳ ಎಂದು ಖ್ಯಾತರಾಗಿದ್ದ ಜೋಡಿಯಲ್ಲಿ ಕುಳ್ಳ ದ್ವಾರಕೀಶ್ 81ರ ಪ್ರಾಯದಲ್ಲಿ ಈಗ ನಿಧನರಾಗಿದ್ದಾರೆ. ಪ್ರಚಂಡ ಕುಳ್ಳ ಇತ್ಯಾದಿ ಬಿರುದಾಂಕಿತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಹಸ ಸಾಧಕರೂ ಹೌದು, ಗುಂಪುಗಾರಿಕೆಯನ್ನು ಸಾಧಿಸಿದವರೂ ಹೌದು. ಸಾಕಷ್ಟು ಯಶಸ್ಸು ಕಂಡರೂ ಕೊನೆಗೆ ಕಳೆದುಕೊಂಡುದೇ ಹಣೆಬರಹ. ಹಿಂದಿನ ಕಾಲದ 80 ಶೇಕಡಾಕ್ಕೂ ಹೆಚ್ಚು ನಟನಟಿಯರ ಪಾಡು ಇದೇ ಆಗಿತ್ತು. ಈಗಿನ ನಟ ನಟಿಯರು ಬಹುತೇಕ ಹುಶಾರು. ಅವರು

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಫಾದರ್ ಮುಲ್ಲರ್ ಸಂಸ್ಥೆಯ ಇಮ್ಯುನೊ-ಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಮುಲ್ಲರ್ ಮಿನಿ ಹಾಲ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಫಾದರ್ ಮುಲ್ಲರ್

ವಿದೇಶದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ಯಕ್ಷಗಾನ ಪ್ರದರ್ಶನ

ಯಕ್ಷಗಾನ ಇತಿಹಾಸದಲ್ಲೇ ಪರಿಪೂರ್ಣ ಮೇಳವೊಂದು ಪ್ರಪ್ರಥಮ ಬಾರಿಗೆ ವಿದೇಶಕ್ಕೆ ತೆರಳಿ ಯಕ್ಷಗಾನ ಪ್ರದರ್ಶನ ನೀಡಲು ಸಿದ್ಧವಾಗಿದೆ.ತೆಂಕುತಿಟ್ಟಿನ ಪ್ರಸಿದ್ಧ ಶ್ರೀ ಗೆಜ್ಜೆಗಿರಿ ಮೇಳವು ಮಸ್ಕತ್ ಮತ್ತು ದುಬೈ ಯಲ್ಲಿ ಆದಿ ಮಾಯೆ ಪರಾಶಕ್ತಿ ಧೂಮಾವತಿ ಮತ್ತು ಮಾತೆ ದೇಯಿ ಬೈದೆತಿ ಅಮ್ಮನವರ ಬೆಳಕಿನ ಯಕ್ಷಗಾನ ಗೆಜ್ಜೆಸೇವೆ ನೀಡಲಿದ್ದು ಪೂರ್ಣ ಪ್ರಮಾಣದ ಮೇಳವೊಂದು ವಿದೇಶಿ ನೆಲದಲ್ಲಿ ಪ್ರದರ್ಶನ ನೀಡುತ್ತಿರುವುದು ಯಕ್ಷರಂಗದ ಇತಿಹಾಸದಲ್ಲಿ ಪ್ರಥಮವೆನಿಸಿದೆ. ವಿದೇಶದ

ಉಡುಪಿ: ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್

ಉಡುಪಿಯಲ್ಲಿರುವ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್‌ನ್ನು ಆಯೋಜಿಸಿದ್ದಾರೆ. ಉಡುಪಿಯ ಪ್ರಸಿದ್ಧ ಹೋಟೆಲ್‌ಗಳಲ್ಲಿ ಒಂದಾದ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ವಿಶೇಷ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸ್ಪಷೆಲ್ ಡಿನ್ನರ್ ಬಫೆಟ್‌ನ್ನು ಖಾದ್ಯ ಪ್ರೀಯರಿಗಾಗಿ ಆಯೋಜಿಸುತ್ತಿದ್ದಾರೆ. ಶಮಿ ಟಿಕ್ಕಿ, ಕಾಬೂಲಿ ಚಾನಾ ಕಬಾಬ್, ಸೂಕಿ ಖಾಲ ಚಾನಾ, ಆಲೂ ತಮಾಟರಿ ಕರಿ, ಪನೀರ್ ಕೋಫ್ತಾ, ರಾಜ್ಮಾ ಕರಿ, ಸಿಂಗಾರ ಪುರಿ, ರೈಸ್ ಕೀರ್,