Home Blog Left Sidebar

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ವಿಭಾಗದಲ್ಲಿ 03 ರ್‍ಯಾಂಕ್

ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025 ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತರ ವಿಭಾಗದ ಮೂರು ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ರಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪುತ್ತೂರಿನ ಬೊಲ್ವಾರಿನಲ್ಲಿರುವ ತಮನ್ವಿ ಸಿಲ್ಕ್ಸ್ – ಗ್ರಾಹಕರ ಮನಕೊಪ್ಪುವ ವಿಶಿಷ್ಠ ಸಂಗ್ರಹಗಳ ಮಳಿಗೆ

ಪುತ್ತೂರಿನ ಬೊಲ್ವಾರಿನಲ್ಲಿರುವ ತಮನ್ವಿ ಸಿಲ್ಕ್ಸ್ ಗ್ರಾಹಕರ ಮನಕೊಪ್ಪುವ ವಿಶಿಷ್ಠ ಸಂಗ್ರಹಗಳ ಮಳಿಗೆಯಾಗಿದ್ದು, ಎಕ್ಸ್‌ಕ್ಲೂಸಿವ್ ವೆಡ್ಡಿಂಗ್ ಕಲೆಕ್ಷನ್ ಸೆಂಟರ್ ಅಗಿದೆ. ತಮನ್ವಿ ಸಿಲ್ಕ್ಸ್‌ನಲ್ಲಿ ಕಾಂಜೀವರಂ ಸಾರೀಸ್, ಕಾಟನ್, ಸಿಲ್ಕ್ಸ್ ಕಾಟನ್ ಸಾರೀಸ್, ಫ್ಯಾನ್ಸಿ ಸಾರೀಸ್ ಸೆಮಿ ಸಿಲ್ಕ್ಸ್ ಸಾರೀಸ್, ಏಂಕಲ್ ಲೆಗ್ಗಿನ್ಸ್, ಪ್ಲಾಜೋ, ಪ್ರಿಂಟೆಡ್ ಶಾರ್ಟ್ಸ್, ಮೆಟಲಿಕ್ ಪ್ಯಾಂಟ್, ಕಾಟನ್ ಟುವೆಲ್ಸ್, ಪ್ಲೈನ್ ಟಾಪ್, ಟಿ-ಶರ್ಟ್ಸ್, ಕುರ್ತಿ ಸೆಟ್ಸ್, ಸಲ್ವಾರ್

ತೊಕ್ಕೊಟ್ಟು : ಯಮಹಾ ಮೋಟೋ ವರ್ಲ್ಡ್‌ನಲ್ಲಿ ಮೆಘಾ ಎಕ್ಸ್‌ಚೇಂಜ್ ಮೇಳ

ನಗರದ ತೊಕ್ಕೊಟ್ಟುವಿನಲ್ಲಿರುವ ಯಮಹಾ ಮೋಟೋ ವರ್ಲ್ಡ್‌ನಲ್ಲಿ ಮೆಘಾ ಎಕ್ಸ್‌ಚೇಂಜ್ ಮೇಳವನ್ನು ಆಯೋಜಿಸಲಾಗಿದೆ. ಉತ್ತಮ ಪವರ್ ಹಾಗೂ ಅತ್ಯಧಿಕ ಮೈಲೇಜ್ ಹೊಂದಿರುವ 125ಸಿಸಿ ಸ್ಕೂಟರನ್ನು ಕೇವಲ 999 ರೂ. ಡೌನ್ ಪೇಮೆಂಟ್ ನೀಡಿ ಖರೀದಿಸಬಹುದು. ಮೋಟರ್ ಬೈಕ್ ಮೇಲೆ ರೂ.2000 ಎಕ್ಸ್‌ಚೇಂಜ್ ಬೋನಸ್ ಹಾಗೂ ರೂ.1000 ಕ್ಯಾಶ್‌ಬ್ಯಾಕ್, ಹಾಗೂ ಹೆಲ್ಮೆಟ್ ಹಾಗೂ ಟೀ-ಶರ್ಟ್ ಉಚಿತವಾಗಿ ನೀಡಲಾಗುತ್ತದೆ. ಮೋಟಾರ್ ಸ್ಕೂಟರ್ ಮೇಲೆ ರೂ.3000 ಎಕ್ಸ್‌ಚೇಂಜ್ ಬೋನಸ್ ಹಾಗೂ ರೂ.1000

ವಿ4 ನ್ಯೂಸ್‌ನ ಪತ್ರಕರ್ತ ಕೆ.ಎಂ.ಖಲೀಲ್ ಅವರಿಗೆ ಮಾಧ್ಯಮ ರತ್ನ ಪ್ರಶಸ್ತಿ ಪ್ರದಾನ

ಕೊಪ್ಪಳ: ನಗರದ ಜೆಕೆಎಸ್ ಹೊಟೆಲ್ ನಲ್ಲಿ ಕವಿತಾ ಮಿಡಿಯಾ ಸೋರ್ಸ್ ಪ್ರೈ.ಲಿ. ಹೈಬ್ರೀಡ್ ನ್ಯೂಸ್ ವತಿಯಿಂದ ಕರುನಾಡ ಸಂಭ್ರಮ ಕಿರುಚಿತ್ರೋತ್ಸವ ಸೀಜನ್-2 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪತ್ರಕರ್ತರಾದ ಶರಣಬಸವ ಹುಲಿಹೈದರ್ ,ಬಸವರಾಜ ಕೊಪ್ಪಳ ಆಯ್ದ ಕಿರುಚಿತ್ರಗಳಿಗೆ ಪ್ರತ್ಯೇಕ ವಿಭಾಗದಲ್ಲಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು.ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಡಾ.ಮಹಾಂತೇಶ

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಜೀವವಿಜ್ಞಾನ ಉತ್ಸವ – ಬಯೋಸಿನರ್ಜಿ 2025-ಎನ್.ಎಂ.ಸಿ ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಜೀವ ವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಏಪ್ರಿಲ್ 28 ಸೋಮವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಜೀವ ವಿಜ್ಞಾನ ಸ್ನಾತಕೋತ್ತರ ವಿಭಾಗಗಳು ಆಯೋಜಿಸಿದ “ಬಯೋಸಿನರ್ಜಿ 2025” ವಿ.ವಿ.ಮಟ್ಟದ ಅಂತರ ಕಾಲೇಜು ವಿಜ್ಞಾನ ಉತ್ಸವದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಯನ್ನು ಪಡೆದುಕೊಂಡರು. ಕಾಲೇಜಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಭಾಗಗಳನ್ನು ಒಳಗೊಂಡ 16 ವಿದ್ಯಾರ್ಥಿಗಳ ತಂಡ

ಕಾರ್ಕಳ: ಉದ್ಯಮಿ ಆತ್ಮಹತ್ಯೆ

ಕಾರ್ಕಳ: ಉದ್ಯಮಿಯೋರ್ವ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಉಡುಪಿ ಜಿಲ್ಲೆಯ ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಬೆಳಕಿಗೆ ಬಂದಿದೆ. ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ಉದ್ಯಮಿ ದಿಲೀಪ್ ಎನ್. ಆರ್. ಶೂಟ್ ಮಾಡಿಕೊಂಡವರು. ಮಂಗಳೂರಿನಲ್ಲಿ ವಾಸವಿದ್ದ ಅವರು ನಿನ್ನೆ ರಾತ್ರಿ ಅಲ್ಲಿಂದ ಕಾರಿನಲ್ಲಿ ಹೊರಟವರು ನಿಟ್ಟೆ ದೂಪಕಟ್ಟೆಯ ನವೋದಯ ಪ್ರಾಪರ್ಟಿಸ್ ಮುಂಭಾಗ ಕಾರಿನಲ್ಲೇ ವಿಷ ಸೇವಿಸಿ ತಮ್ಮಲ್ಲಿದ್ದ ಗನ್ ಮೂಲಕ ಶೂಟ್ ಮಾಡಿಕೊಂಡು

ಪುತ್ತೂರು: ಪೆರ್ಲಂಪಾಡಿಯಲ್ಲಿ ಆನೆ‌ ದಾಳಿಗೆ ಮಹಿಳೆ ಬಲಿ

ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ. ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಲ್ಕಿ: ಕಟ್ಪಾಡಿ ಮಹಾಮಾಯ ಸಿಲ್ಕ್ಸ್‌ನಲ್ಲಿ ಮೆಘಾ ಲಕ್ಕಿ ಡ್ರಾ

ಮುಲ್ಕಿಯ ಬಪ್ಪನಾಡು ದೇವಳದ ಬಳಿಯಲ್ಲಿರುವ ಕಟ್ಪಾಡಿ ಮಹಾಮಾಯ ಸಿಲ್ಕ್ಸ್‌ನಲ್ಲಿ ಎ.18ರಿಂದ ಮೇ.17ರವರೆಗಿನ ಪ್ರತಿ 10,000 ಮೇಲ್ಪಟ್ಟ ಖರೀದಿಗೆ ಗ್ರಾಹಕರಿಗೆ ಒಂದು ಲಕ್ಕಿ ಕೂಪನ್ ನೀಡಲಾಗುತ್ತಿದೆ. ಇಲ್ಲಿ ಮದುವೆ ಸೀರೆಗಳು, ಸಿಲ್ಕ್ಸ್ ಮತ್ತು ಕಾಂಜೀವರಂ, ಕಾಟನ್ ಹೀಗೆ ವಿವಿಧ ಶೈಲಿಯ ಸಾರಿಗಳು,ಪುರುಷರ, ಮಹಿಳೆಯರ ಹಾಗೂ ಮಕ್ಕಳ ಸಾಂಪ್ರದಾಯಿಕ ಮತ್ತು ಆಧುನಿಕ ಶೈಲಿಯ ನವನವೀನ ರೀತಿಯ ಉಡುಪುಗಳು ಲಭ್ಯವಿದೆ.ಲಕ್ಕಿ ಕೂಪನ್ ವಿಜೇತರ ಹೆಸರನ್ನು ಮೇ.18ರಂದು ನಡೆಯುವ

ಸುಳ್ಯ: ಏ.27ರಂದು ಸುಳ್ಯದ ಗೌಡ ಸಮುದಾಯ ಭವನದಲ್ಲಿ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋ ದ ಎರಡನೇ ಸುತ್ತಿನ ಆಡಿಷನ್

ವಿ4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ.ಬಿ. ಫೌಂಡೇಶನ್‌ನ ಎಂ.ಬಿ. ಸದಾಶಿವ ಅವರ ಸಾರಥ್ಯದಲ್ಲಿ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಎರಡನೇ ಸುತ್ತಿನ ಆಡಿಷನ್ ಏಪ್ರಿಲ್ 27ರಂದು ನಡೆಯಲಿದೆ. ಈಗಾಗಲೇ ಮೊದಲ ಸುತ್ತಿನ ಆಡಿಷನ್ ಸುಳ್ಯದ ಲಯನ್ಸ್ ಕ್ಲಬ್‌ನಲ್ಲಿ ಯಶಸ್ವಿಯಾಗಿ ನೆರವೇರಿದ್ದು, 10ಕ್ಕೂ ಅಧಿಕ ತಂಡಗಳು ಸ್ಪರ್ಧಿಸಿದ್ದವು. ಇದೀಗ ಎರಡನೇ ಸುತ್ತಿನ ಆಡಿಷನ್ ಏಪ್ರಿಲ್ 27ರ ಭಾನುವಾರದಂದು ಸುಳ್ಯದ ಗೌಡ ಸಮುದಾಯ

ಪುತ್ತೂರು: ದ್ವಿತೀಯ ಪಿಯುಸಿ ಫಲಿತಾಂಶ: ಅಪರ್ಣಾ ಅಡಿಗ ರಾಜ್ಯಕ್ಕೆ 7ನೇ ಸ್ಥಾನ

ಪುತ್ತೂರಿನ ವಿವೇಕಾನಂದ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, ಅಪರ್ಣಾ ಅಡಿಗ ಅವರು ಕಾಲೇಜಿಗೆ ಮೂರನೇ ಸ್ಥಾನ ಪಡೆದು, ರಾಜ್ಯದಲ್ಲಿ 7ನೇ ಸ್ಥಾನವನ್ನು ಪಡೆದು ಹೆಮ್ಮೆ ತಂದಿದ್ದಾರೆ. ಅಪರ್ಣಾ ಅವರು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವ್ಯತ್ಯಾಸ ಆದ ಕಾರಣ ಮರು ಮೌಲ್ಯಮಾಪನಕ್ಕೆ ಹಾಕಿದ್ದರು. ಮರು ಮೌಲ್ಯಮಾಪನದ ನಂತರ ಬ್ಯುಸಿನೆಸ್‌ನಲ್ಲಿ 99 ಅಂಕಗಳನ್ನು ಪಡೆದುಕೊಂಡಿದ್ದರು. 593 ಅಂಕ ಪಡೆದು 98.83 ಶೇಕಡಾ ಫಲಿತಾಂಶವನ್ನು