HomeFresh Newsಹೃದಯಸ್ಪರ್ಶಿ ಸನ್ನಿವೇಶಕ್ಕೆ ಸಾಕ್ಷಿಯಾದ ನಳೀಲು ಬ್ರಹ್ಮಕಲಶೋತ್ಸವದ ವೇದಿಕೆ

ಹೃದಯಸ್ಪರ್ಶಿ ಸನ್ನಿವೇಶಕ್ಕೆ ಸಾಕ್ಷಿಯಾದ ನಳೀಲು ಬ್ರಹ್ಮಕಲಶೋತ್ಸವದ ವೇದಿಕೆ

ಪುತ್ತೂರು : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆ ಹೃದಯಸ್ಪರ್ಶಿ ಸನ್ನವೇಶಕ್ಕೆ ಸಾಕ್ಷಿಯಾಯಿತು.

ಫೆ.19ರಂದು ಮಧ್ಯಾಹ್ನ ಮಣಿಕ್ಕರ ಸ.ಹಿ.ಪ್ರಾ.ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದವರನ್ನು ನೆನಪಿಸುವ ಕಿರು ನಾಟಕ ನಡೆಯಿತು.

ಈ ಸಂಧರ್ಭದಲ್ಲಿ ಮಣಿಕ್ಕರ ಶಾಲೆಗೆ 2 ಕೊಠಡಿಗಳನ್ನು ನಿರ್ಮಿಸಿಕೊಟ್ಟ ಹಾಗೂ ವಿವಿಧ ಯೋಜನೆಗಳಿಗೆ ಕೈ ಜೋಡಿಸಿರುವ ಶಾಲಾ ಹಿರಿಯ ವಿದ್ಯಾರ್ಥಿ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ಅವರಿಗೆ ಕೃತಜ್ಞತೆ ಸಲ್ಲಿಸುವ ಸನ್ನಿವೇಶ ಹೃದಯಸ್ಪರ್ಶಿಯಾಗಿತ್ತು.

ಶಾಲಾ ಮಕ್ಕಳಿಂದ ಹಿಡಿದು ಶಿಕ್ಷಕರು ,ಪೋಷಕರು ಸಂತೋಷ್ ಕುಮಾರ್ ರೈ ಅವರನ್ನು ಗುಲಾಬಿ ಹೂವುಗಳನ್ನು ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ರೈ ಅವರ ಅಕ್ಕ ಮಣಿಕ್ಕರ ಶಾಲಾ ಹಿರಿಯ ವಿದ್ಯಾರ್ಥಿನಿ ಡಾ‌.ಸುಚೇತಾ ಜೆ.ಶೆಟ್ಟಿ ,ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ.ವೀಣಾ ಸಂತೋಷ್ ರೈ ,ಪುತ್ರಿ ಪ್ರಿಶಾ ರೈ ಮೊದಲಾದವರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments