ರಾಜ್ಯ ಸರಕಾರ ಮೀನುಗಾರರಿಗಾಗಿ ಬಜೆಟ್ನಲ್ಲಿ ಪ್ರಕಟಿಸಿದ ಒಂದು ಯೋಜನೆಯೂ ಜಾರಿಗೆ ತರದೆ ಮೀನುಗಾರ ಸಮುದಾಯವನ್ನು ಕಡೆಗಣಿಸಿದೆ. ಈಗಾಗಲೇ ಮೀನುಗಾರ ಮುಖಂಡರು ಬೆಂಗಳೂರಿಗೆ ತೆರಳಿ ತಮ್ಮ ಸಮಸ್ಯೆಯನ್ನು ಸರಕಾರ ಮುಂದೆ ಇಟ್ಟಿದ್ದಾರೆ. ಇದಕ್ಕೆ ಸ್ಪಂದಿಸದಿದ್ದರೆ ಮೀನುಗಾರರ ಜತೆ ಸೇರಿ ಕಾಂಗ್ರೆಸ್ ಪಕ್ಷವೂ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಉಪಾಕ್ಷ ಐವನ್ ಡಿಸೋಜಾ ಎಚ್ಚರಿಕೆ ನೀಡಿದ್ದಾರೆ.

