Home Archive by category ಕರಾವಳಿ

ಮೂಡುಬಿದಿರೆ : ಕಡಂದಲೆಯಲ್ಲಿ ಮನೆಯ ಮೇಲೆ ಬಿದ್ದ ಮರ

ಪಾಲಡ್ಕ ಗ್ರಾ. ಪಂ. ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಭಾರೀ ಮಳೆ, ಬೀಸಿದ ಗಾಳಿಗೆ ಕಡಂದಲೆ ಬಿಟಿ ರೋಡ್ ನಲ್ಲಿ ಯಶೋದಾ ಪಾಂಡು ಗೌಡ ಅವರ ಮನೆ ಮೇಲೆ ಸಂಜೆ 6 ಗಂಟೆ ಸುಮಾರಿಗೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ.ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು.

ಉಡುಪಿ :918 ಕನ್ನಡ ಕಿರುಚಿತ್ರದ ಪೋಸ್ಟರ್ ಬಿಡುಗಡೆ

ಉಡುಪಿ ಮಣಿಪಾಲದ ಪ್ರತಿಭಾವಂತ ಯುವ ಕಲಾವಿದರು ಅಭಿನಯಿಸಿರುವ ಶ್ರೀ ತುಕಾರಾಮ ಬಾಯಾರು ನಿರ್ದೇಶನದ ವಿಭಿನ್ನ ಶೈಲಿಯ ಪ್ರೇಮಕಥೆಯುಳ್ಳ 918 ಎಂಬ ಕನ್ನಡ ಕಿರುಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಉದಯಕುಮಾರ್ ಆಚಾರ್ಯ ಬಾಯಾರು ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ನಾಯಕ ನಟರಾಗಿ ಸಂದೇಶ್ ಆಚಾರ್ಯ, ನಾಯಕಿ ಕವಿತಾ, ಗಿರೀಶ್ ಆಚಾರ್ಯ ಉಡುಪಿ, ಸೂರಜ್ ಆಚಾರ್ಯ ಉಡುಪಿ, ಗುರುಪ್ರಸಾದ್ ಆಚಾರ್ಯ ಹೊಸನಗರ, ವರ್ಷಿಣಿ ವೈ ಅಮೀನ್ ಮಣಿಪಾಲ, ವೈಷ್ಣವಿ ಖಾರ್ವಿ ಮುಂತಾದವರು

ಮೇ.24ರಂದು ರೋಹನ್ ಕಾರ್ಪೊರೇಷನ್ ಅರ್ಪಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮ

ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕ ರೋಹನ್ ಮೊಂತೇರೋ, ಪಾಲೇಮಾರ್

ಪುತ್ತೂರು ತಾಲ್ಲೂಕು ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರು ತಾಲ್ಲೂಕು ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಬೂತ್ ಅಧ್ಯಕ್ಷರಾಗಿ ಪ್ರಸ್ತುತ ಒಳಮೊಗ್ರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷರಾಗಿ, ಪುತ್ತೂರು ಶ್ರೀ

ಮಂಗಳೂರು: ಬ್ಯಾಷ್ಠಿಸ್ಟ್ ಡಿ’ಕುನ್ಹಾ ನಿಧನ

ಮಂಗಳೂರು: ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ,ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ

ಸುಳ್ಯ :ಮಾಜಿ ಸೈನಿಕರ ಸಂಘದಿಂದ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ ಯಂತ್ರ ಹಸ್ತಾಂತರ

ಸುಳ್ಯ ತಾಲೂಕಿನ ಮಾಜಿ ಸೈನಿಕರ ಸಂಘ(Ex Servicemen Association Sullia) ದ ವತಿಯಿಂದ ಪಶು ಸಂಗೋಪನ ಇಲಾಖೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ (Electric Autoclave) ಯಂತ್ರವನ್ನು 2024 25 ನೇ ಸಾಲಿನ ಕೊಡುಗೆಯಾಗಿ ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ನಿತಿನ್ ಪ್ರಭು ಕೆ ಇವರಿಗೆ ಹಸ್ತಾಂತರಿಸಿದರು. ಈ ಉಪಕರಣವನ್ನು ದಿನನಿತ್ಯ ನಡೆಯುವ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಶುದ್ಧೀಕರಣ ಮತ್ತು ನಂಜು ಮುಕ್ತಗೊಳಿಸುವುದಕ್ಕಾಗಿ

ಕನ್ನಡದ ಲೇಖಕಿ ಬಾನು ಮುಷ್ತಾಕ್- ಪ್ರತಿಷ್ಟಿತ ಬೂಕರ್ ಪ್ರಶಸ್ತಿಗೆ ಭಾಜನ

ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರು ಬರೆದಿರುವ ಹಸೀನಾ ಮತ್ತು ಇತರ ಕತೆಗಳು ಕೃತಿಯ ಇಂಗ್ಲಿಷ್ ಅನುವಾದ ಹಾರ್ಟ್ ಲ್ಯಾಂಪ್ ಕೃತಿಯು ಪ್ರತಿಷ್ಟಿತ ಬೂಕರ್ ಪ್ರಶಸ್ತಿಗೆ ಭಾಜನವಾಗಿದೆ. ದೀಪಾ ಭಸ್ತಿ ಅವರು ಬಾನು ಅವರ ಕೃತಿಯನ್ನು ಇಂಗ್ಲಿಷಿಗೆ ಅನುವಾದಿಸಿದ್ದರು. ಮೇ 20ರಂದು ತೀರ್ಪು ಆಗಿದ್ದು, ಈ ಬಗೆಗೆ ಬುಧವಾರ ಅಧಿಕೃತ ಘೋಷಣೆಯಾಗಿದೆ. ಬೂಕರ್ ವಿಜೇತ ಕೃತಿಗೆ 50,000 ಪೌಂಡ್ ರೊಕ್ಕ ಬಹುಮಾನವಿದ್ದು, ಅದು ಲೇಖಕಿ ಮತ್ತು ಅನುವಾದಕಿಯ ನಡುವೆ ಸಮಾನ

ಸುಹಾಸ್ ಹತ್ಯೆ: ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್!

ಮಂಗಳೂರು: ಇತ್ತೀಚಿಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಹಿಂದೂ ನಾಯಕಿ, ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದು

ದೇರಳಕಟ್ಟೆ: ಯೆನೆಪೋಯ ವಿವಿ ವತಿಯಿಂದ ಐಕಾನ್ ಯೂತ್-2025:ಸಮಾರೋಪ

ಅಂತಾರಾಷ್ಟ್ರೀಯ ಸಮ್ಮೇಳನದ ಪ್ರಯೋಜನ ಯುವಜನತೆಗೆ ಆಗಲಿ. ಜಾಗತಿಕ ಮಟ್ಟದಲ್ಲಿ ವ್ಯಕ್ತಿತ್ವ ವಿಕಾಸವಾಗಲಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಣದೀಪ್ ಐಎಎಸ್ ಹೇಳಿದರು. ಅವರು ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಯಿಂಡ್ಯೂರನ್ಸ್ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾದ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ಐಕಾನ್ ಯೂತ್-೨೦೨೫ರ ಸಮಾರೋಪದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ

ಮಂಗಳೂರು: ಕುಂಟಿಕಾನದಲ್ಲಿ ‘ಕಲರವ’ ಮಕ್ಕಳ ಅಭಿವೃದ್ಧಿ ಕೇಂದ್ರದ ಉದ್ಘಾಟನೆ

ಮಂಗಳೂರಿನ ಕುಂಟಿಕಾನದ ಎಜೆ ಅಸ್ಪತ್ರೆಯ ಸಮೀಪದಲ್ಲಿ ಕದ್ರಿಯ ಫೈರ್ ಸ್ಟೇಷನ್ ಹಿಂಭಾಗದಲ್ಲಿ ’ಕಲರವ’ ಮಕ್ಕಳ ಅಭಿವೃದ್ಧಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಡಾ. ಶಿಲ್ಪ ಹೆಗ್ಡೆ ಮಾಲಕತ್ವದಲ್ಲಿ ಕಲರವ ಸೆಂಟರ್ ಫಾರ್ ಚೈಲ್ಡ್ ಡೆವಲಪ್‌ಮೆಂಟ್ ನಗರದ ಕುಂಟಿಕಾನ ಸಮೀಪದಲ್ಲಿ ಕಾರ್ಯಾರಂಭಗೊಂಡಿದೆ. ಕಲರವ ನೂತನ ಕೇಂದ್ರವನ್ನು ಜಯಶ್ರೀ ಹೆಗ್ಡೆ ಮತ್ತು ಗಜಾನನ ಹೆಗ್ಡೆ ಅವರು ರಿಬ್ಬನ್ ಕತ್ತರಿಸಿ ಉದ್ಘಟಿಸಿದರು. ನಂತರ ತರಗತಿ ಕೊಠಡಿಗಳನ್ನು ಸಂಸದ ಬ್ರಿಜೇಶ್ ಚೌಟ