Home Archive by category ಕರಾವಳಿ

ಮೂಡುಬಿದಿರೆ: ಬೃಹತ್ ಕಾಲ್ನಡಿಗೆ ಜಾಥಾಕ್ಕೆ ಚಾಲನೆ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಮೂಡುಬಿದಿರೆ ತಾಲೂಕು ಪಂಚಾಯತ್, ತಾಲೂಕು ಕಚೇರಿ, ಮೂಡುಬಿದಿರೆ ಹಾಗೂ ಮೈಟ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ ಇದರ ಸಹಯೋಗದಲ್ಲಿ ಕಾಲ್ನಡಿಗೆ ಜಾಥಾವನ್ನು ದಿನಾಂಕ 18/04/2024 ರಂದು ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್‌ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್‌ ಸದಸ್ಯ ಎಸ್.ರುದ್ರೇಗೌಡ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.

ಎ.21ರಂದು ನರಿಕೊಂಬು ನವಜೀವನ ವ್ಯಾಯಾಮ ಶಾಲೆಯ ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ ಕಾರ್ಯಕ್ರಮ ಎ. 21ರಂದು ಬೆಳಿಗ್ಗೆ ಗಂಟೆ 10.14ರ ಶುಭ ಮುಹೂರ್ತದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ ಹೇಳಿದರು.ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ಬಳಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 108

ಹಿಮೋಫಿಲಿಯಾ ಎಂಬ ಪ್ರೀತಿಯ ನೆತ್ತರು

ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಈಗ ರಕ್ತ ಪ್ರೀತಿಯ ಹಿಮೋಫಿಲಿಯಾ ಸಮಗ್ರ ಕಾಳಜಿ ಕೇಂದ್ರ ಆರಂಭವಾಗಿದೆ. ಈಗ ಚುನಾವಣಾ ಕಾಲವಾದುದರಿಂದ ಈಗ ರಕ್ತ ಸಂಬಂಧ ಕಾಣಿಸದ ಜಿದ್ದಾಜಿದ್ದಿನ ಹೋರಾಟವೇ ಎಲ್ಲೆಡೆ ಕಾಣಿಸುತ್ತಿದೆ. ಮಿಶನರಿಗಳು, ಕ್ರಿಶ್ಚಿಯನರುಗಳು ಇಲ್ಲೆಲ್ಲ ಆಸ್ಪತ್ರೆಗಳನ್ನು ಆರಂಭಿಸಿದಾಗ ಇದ್ದ ಬರೇ ಸೇವೆ ಎಂಬುದು ಈ ಕಾಲಕ್ಕೆ ನಡೆಯದ ನಾಣ್ಯವೇ ಸರಿ. ಹಿಮೋಫಿಲಿಯಾ ಎನ್ನುವುದನ್ನು ನೆತ್ತರೊಸರು ಸಮಸ್ಯೆ ಎನ್ನಬಹುದು; ರಕ್ತಸ್ರಾವ ಎಂದೂ ಹೇಳುತ್ತಾರೆ.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಫಾದರ್ ಮುಲ್ಲರ್ ಸಂಸ್ಥೆಯ ಇಮ್ಯುನೊ-ಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಮುಲ್ಲರ್ ಮಿನಿ ಹಾಲ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಫಾದರ್ ಮುಲ್ಲರ್

ವಿದೇಶದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ಯಕ್ಷಗಾನ ಪ್ರದರ್ಶನ

ಯಕ್ಷಗಾನ ಇತಿಹಾಸದಲ್ಲೇ ಪರಿಪೂರ್ಣ ಮೇಳವೊಂದು ಪ್ರಪ್ರಥಮ ಬಾರಿಗೆ ವಿದೇಶಕ್ಕೆ ತೆರಳಿ ಯಕ್ಷಗಾನ ಪ್ರದರ್ಶನ ನೀಡಲು ಸಿದ್ಧವಾಗಿದೆ.ತೆಂಕುತಿಟ್ಟಿನ ಪ್ರಸಿದ್ಧ ಶ್ರೀ ಗೆಜ್ಜೆಗಿರಿ ಮೇಳವು ಮಸ್ಕತ್ ಮತ್ತು ದುಬೈ ಯಲ್ಲಿ ಆದಿ ಮಾಯೆ ಪರಾಶಕ್ತಿ ಧೂಮಾವತಿ ಮತ್ತು ಮಾತೆ ದೇಯಿ ಬೈದೆತಿ ಅಮ್ಮನವರ ಬೆಳಕಿನ ಯಕ್ಷಗಾನ ಗೆಜ್ಜೆಸೇವೆ ನೀಡಲಿದ್ದು ಪೂರ್ಣ ಪ್ರಮಾಣದ ಮೇಳವೊಂದು ವಿದೇಶಿ ನೆಲದಲ್ಲಿ ಪ್ರದರ್ಶನ ನೀಡುತ್ತಿರುವುದು ಯಕ್ಷರಂಗದ ಇತಿಹಾಸದಲ್ಲಿ ಪ್ರಥಮವೆನಿಸಿದೆ. ವಿದೇಶದ

ಉಡುಪಿ: ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್

ಉಡುಪಿಯಲ್ಲಿರುವ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್‌ನ್ನು ಆಯೋಜಿಸಿದ್ದಾರೆ. ಉಡುಪಿಯ ಪ್ರಸಿದ್ಧ ಹೋಟೆಲ್‌ಗಳಲ್ಲಿ ಒಂದಾದ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ವಿಶೇಷ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸ್ಪಷೆಲ್ ಡಿನ್ನರ್ ಬಫೆಟ್‌ನ್ನು ಖಾದ್ಯ ಪ್ರೀಯರಿಗಾಗಿ ಆಯೋಜಿಸುತ್ತಿದ್ದಾರೆ. ಶಮಿ ಟಿಕ್ಕಿ, ಕಾಬೂಲಿ ಚಾನಾ ಕಬಾಬ್, ಸೂಕಿ ಖಾಲ ಚಾನಾ, ಆಲೂ ತಮಾಟರಿ ಕರಿ, ಪನೀರ್ ಕೋಫ್ತಾ, ರಾಜ್ಮಾ ಕರಿ, ಸಿಂಗಾರ ಪುರಿ, ರೈಸ್ ಕೀರ್,

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ

ಮೂಡುಬಿದಿರೆ: ಪಂಜಿನ ಮೆರವಣಿಗೆಯೊಂದಿಗೆ ಮತದಾನದ ಜಾಗೃತಿ

ಮೂಡುಬಿದಿರೆ: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತ್ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ ಮೂಡುಬಿದಿರೆ ತಾಲೂಕು ಪಂಚಾಯತ್ ಹಾಗೂ ತಾಲೂಕು ಕಛೇರಿ ನೇತೃತ್ವದಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸಹಾಯಕ ಚುನಾವಣಾಧಿಕಾರಿ ರಾಜು ಕೆ., ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ, ಮೂಡುಬಿದಿರೆ ತಹಶೀಲ್ದಾರ್

ಕಿವಿಗುಗ್ಗೆ

ಪಂಚೇಂದ್ರಿಯಗಳಾದ ನಾಲಗೆಯಿಂದ ನಾವು ರುಚಿಯನ್ನು ಅಸ್ಪಾಧಿಸಿ, ಕಣ್ಣುಗಳಿಂದ ಬಾಹ್ಯ ಜಗತ್ತಿನ ಸೌಂದರ್ಯವನ್ನು ಸವಿಯುತ್ತಾ, ಚರ್ಮಗಳಿಂದ ಸ್ವರ್ಶ ಜ್ಞಾನವನ್ನು ಅನುಭವಿಸಿ, ಮೂಗುಗಳಿಂದ ವಾಸನೆಯನ್ನು ಗೃಹಿಸಿ, ಕಿವಿಗಳಿಂದ ಕೇಳಿ ಜೀವನದ ಪ್ರತಿ ಕ್ಷಣವನ್ನು ಅಸ್ಪಾಧಿಸುತ್ತೇವೆ ಮತ್ತು ಅನುಭವಿಸುತ್ತೇವೆ. ಈ ಎಲ್ಲಾ ಅಂಗಗಳಲ್ಲಿಯೂ ಕಿವಿ ಬಹಳ ಸಾಧುವಾದ ಅಂಗ. ಕಣ್ಣು ಮೂಗುಗಳಂತೆ ಕಿವಿಗಳಿಗೆ ರಾಜಾತಿಥ್ಯ ಬೇಡ. ಕಣ್ಣು ಬಹಳ ನಾಜೂಕಿನ ಅಂಗವಾಗಿದ್ದು ಎಷ್ಟು ಸೇವೆ ಮಾಡಿದರೂ