Home ಕರಾವಳಿ Archive by category ಉಡುಪಿ (Page 20)

ಕಾರ್ಕಳ: ಗಾಂಧಿ ಸ್ಮೃತಿ ಮತ್ತು ನವ ಜೀವನ ಸಮಿತಿ ಸದಸ್ಯರ ಸಮಾವೇಶ

ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿ ಸ್ಮೃತಿ ಮತ್ತು ನವ ಜೀವನ ಸಮಿತಿ ಸದಸ್ಯರ ಸಮಾವೇಶವು ಕಾರ್ಕಳದ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಅಭಯ ಚಂದ್ರ ಜೈನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅಭಯಚಂದ್ರ ಜೈನ್ ಅವರು, ನಾವಿಂದು ಗಾಂಧಿ

ಬ್ರಹ್ಮಾವರ : 7ನೇ ದಿನಕ್ಕೆ ಕಾಲಿಟ್ಟ ಕಟ್ಟಡ ಸಾಮಾಗ್ರಿಗಳ ಸಾಗಾಟ ವಾಹನದ ಮಾಲಕರ ಮುಷ್ಕರ

ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿಗಳ ಸಾಗಾಟ ವಾಹನಗಳ ಮಾಲಕರು ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿದ್ದು, 7ನೇ ದಿನವೂ ಮುಷ್ಕರವನ್ನು ಮುಂದುವರಿಸಿದ್ದಾರೆ. ಮುಷ್ಕರ ನಿರತರು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹುದ್ದೂರು ಶಾಸ್ತ್ರಿ ಅವರ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಕೋಟದಲ್ಲಿ ಜಿಲ್ಲಾ ಮಟ್ಟದ ಸಭೆ ನಡೆಸಿ ಮುಂದಿನ ಹೋರಾಟದ ಮಾತುಕತೆ ನಡೆಸಿದರು. ಟಿಪ್ಪರ್ ಮಾಲಕರ ಸಂಘದ ವಿಜಯ ಕುಮಾರ್,

ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

ಕುಂದಾಪುರದಲ್ಲಿ ರವಿವಾರ ಸಂಜೆ ವೇಳೆ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರದ ರಾಘವೇಂದ್ರ (42) ರಾಘು ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕುಂದಾಪುರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ ರವಿವಾರ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್ ಆಫೀಸ್ ಬಳಿ ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಕಾರಿಗೆ ಸೈಡ್ ಕೊಡುವ ವಿಚಾರದಲ್ಲಿ ಗಲಾಟೆಯಾಗಿತ್ತು. ಗಲಾಟೆ

ಪಡುಬಿದ್ರಿ: ಬೀಚ್‌ನಲ್ಲಿ ಸ್ವಚ್ಚತಾ ಪಕ್ವಾಡ ಅಭಿಯಾನ ಕಾರ್ಯಕ್ರಮ

ಪಡುಬಿದ್ರಿಯ ಮುಖ್ಯ ಬೀಚ್‌ನಲ್ಲಿ ವಿಶ್ರುದ್ ಕೋಸ್ಟಲ್ ಡೆವಲಪರ್ಸ್ ವತಿಯಿಂದ  ಸ್ವಚ್ಚತಾ ಪಕ್ವಾಡ್ ಅಭಿಯಾನ ಕಾರ್ಯಕ್ರಮ ನಡೆಯಿತು. ಪಡುಬಿದ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಸಿ.ಎಸ್.ಬಿ ಸಿಬ್ಬಂದಿಗಳು ಸಹಿತ ಸಾರ್ವಜನಿಕರ ಸಹಕಾರದಿಂದ ಕಾರ್ಯಕ್ರಮ ಉತ್ತಮವಾಗಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಪ್ರವಾಸೋದ್ಯಮ ಇಲಾಖಾ ಸಹಾಯಕ ನಿರ್ದೇಶಕ ಕುಮಾರ ಪಿ.ಯು., ಸ್ವಚ್ಚತೆ ಎಂಬುದು ನಮ್ಮೆಲ್ಲಾರ ಜವಾಬ್ದಾರಿ,

ಬೈಂದೂರು : ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಲಾರಿ, ಟೆಂಪೋ ಚಾಲಕರ ಮುಷ್ಕರ

ಬೈಂದೂರು ವಲಯ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ವತಿಯಿಂದ 3ಎ ಲೈಸೆನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬೈಂದೂರು ಯಡ್ತರೆ ಸರ್ಕಲ್‍ನಲ್ಲಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಯುತ್ತಿದೆ. ಬೈಂದೂರು ವಲಯ ಲಾರಿ ಮಾಲಿಕರ ಹಾಗೂ ಚಾಲಕರ ಸಂಘದ ಜಂಟಿ ಅಧ್ಯಕ್ಷ ನೆಲ್ಯಾಡಿ ದಿವಾಕರ ಶೆಟ್ಟಿ ಮಾತನಾಡಿ, ಈ ವರೆಗೆ ಇಲ್ಲದ

ಕುಂದಾಪುರ: ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು

ಸುಳ್ಸೆ ಯಕ್ಷಿಬ್ರಹ್ಮ ನಂದಿಕೇಶ್ವರ ದೈವಸ್ಥಾನ ಸಮೀಪದ ಸುಳ್ಸೆಯರ ಮನೆ ನಿವಾಸಿ ಮಹಾಬಲ ದೇವಾಡಿಗ (55) ಪತ್ನಿ ಲಕ್ಷ್ಮೀ ದೇವಾಡಿಗ (49) ಮೃತಪಟ್ಟ ದಂಪತಿಗಳು. ಮಹಾಬಲ ದೇವಾಡಿಗ ಸುಳ್ಸೆ ಕರಣಿಕರ ಮನೆಯಲ್ಲಿ ದಿನಗೂಲಿ ಕೆಲಸ ನಿರ್ವಹಿಸುತ್ತಿದ್ದು, ಶುಕ್ರವಾರ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಕಳೆದರೂ ಪತಿ ಮನೆಗೆ ಬಾರದಿರುವುದನ್ನು ಗಮನಿಸಿದ ಪತ್ನಿ ಲಕ್ಷ್ಮೀ ಅನುಮಾನಗೊಂಡು ಕರಣಿಕರ ಮನೆಗೆ ತೆರಳಿದ್ದರು. ಈ ವೇಳೆ ಕರಣಿಕರ ಮನೆಗೆ ಹೋಗುವ ಕಾಲುದಾರಿಯಲ್ಲಿ ಮುರಿದು

ಪಡುಬಿದ್ರಿ: ಅ.1ರಂದು ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ ಸಿರಿಮುಡಿ ದತ್ತಿ ನಿಧಿ ಕಾರ್ಯಕ್ರಮ

ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ಸಮಾಜದ ಆರ್ಥಿಕ ದುರ್ಬಲರಿಗೆ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪಡುಬಿದ್ರಿ ಬಂಟರ ಸಂಘ ಸಹಭಾಗಿತ್ವದ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸಹಾಯಧನವನ್ನು ಅಕ್ಟೋಬರ್ 1ರಂದು ವಿತರಿಸಲಾಗುವುದು ಎಂದು ಬಂಟರ ಸಂಘದ ಅಧ್ಯಕ್ಷರಾದ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಅವರು ಪಡುಬಿದ್ರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ರೂ. 20 ಲಕ್ಷ

ಬ್ರಹ್ಮಾವರ: 3ನೇ ದಿನವೂ ಕಟ್ಟಡ ಸಾಮಾಗ್ರಿ ಸಾಗಾಟ ವಾಹನ ಮಾಲಕರ ಮುಷ್ಕರ, ಮಾತುಕತೆ, ವಿಫಲ

ಬ್ರಹ್ಮಾವರ : ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿಗಳ ಸಾಗಾಟ ಸಾಮಗ್ರಿಗಳ ವಾಹನಗಳ ಮಾಲಕರು ಕಾರ್ಮಿಕರು 3ನೇ ದಿನವೂ ಮುಷ್ಕರವನ್ನು ಮುಂದುವರಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರು ಗಣಿ ಇಲಾಖೆ ಮತ್ತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಮೂಲಕ ಮುಷ್ಕರ ನಿರತರೊಂದಿಗೆ ನಡೆದ ಮಾತುಕತೆ ವಿಫಲತೆ ಕಂಡುಬಂದ ಹಿನ್ನೆಲೆಯಲ್ಲಿ ಅರ್ನಿಷ್ಟಾವಧಿ ಮುಷ್ಕರ ಮುಂದುವರಿಯುವ ಸೂಚನೆ ಕಂಡು ಬಂದಿದೆ. ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರ ಬಸ್

ಉಡುಪಿ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರಿಂದ ತರಾಟೆ

ಸದ್ಯ ಉಡುಪಿ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಸಂಪೂರ್ಣ ಬಂದ್ ಆಗಿದ್ದು, ಅಧಿಕೃತ ಮರಳು ಗಣಿಗಳು ಮಾತ್ರ ಕಾರ್ಯಚರಣೆ ಮಾಡುತ್ತಿವೆ. ಇಂತಹ ಸಂದರ್ಭದಲ್ಲೂ ಕೂಡ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ. ಕುಂದಾಪುರ ತಾಲೂಕು ಬೇಳೂರು ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ಸಕ್ರಮ ಮರುಳುಗಾರಿಕೆಯನ್ನ ದುರುಪಯೋಗ ಪಡಿಸಿಕೊಂಡ ಕೆಲ ಪಂಚಾಯತ್ ಸದಸ್ಯರು ತಮ್ಮ ರಾಜಕೀಯ ಪ್ರಭಾವ ಬಳಸಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವ ವಿವರ ವಿಡಿಯೋ

ಬ್ರಹ್ಮಾವರ : ರಾಜ್ಯ ಸರ್ಕಾರದ ವಿರುದ್ಧ ಧೋರಣೆ ಖಂಡಿಸಿ, ಲಾರಿ ಮತ್ತು ಟೆಂಪೋ ಚಾಲಕರಿಂದ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯ ಸರ್ಕಾರದ ವಿರುದ್ಧ ಧೋರಣೆಗಳನ್ನು ಖಂಡಿಸಿ ಲಾರಿ ಮತ್ತು ಟೆಂಪೋ ಚಾಲಕರು ಮುಷ್ಕರ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ನೂರಾರು ಲಾರಿ ಹಾಗೂ ಟೆಂಪೊಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅನಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಬ್ರಹ್ಮಾವರ ಭಾಗದಲ್ಲಿ ಐನೂರಕ್ಕೂ ಹೆಚ್ಚು ಲಾರಿ, ಟೆಂಪೋಗಳನ್ನು ರಸ್ತೆ ಬದಿ ಸಾಲಾಗಿ ನಿಲ್ಲಿಸಿ ಮುಷ್ಕರ ನಡೆಸುತ್ತಿದ್ದಾರೆ.