ಉಡುಪಿಯಲ್ಲಿ ಶೌಚಾಲಯ ವಿಡಿಯೋ ನಡೆದಿದೆ ಎಂಬ ಪ್ರಕರಣಕ್ಕೆ ಉತ್ತರ ನೀಡ ಬೇಕಾದವರು ಕಾಲೇಜು ಆಡಳಿತ. ಆದರೆ ಆ ಘಟನೆಯನ್ನು ಹಿಜಾಬಿಗೆ ಹೋಲಿಕೆ ಮಾಡಿಕೊಂಡು ಉಡುಪಿ ಶಾಸಕರೇ ಸೇರಿ ಡೊಂಬರಾಟ ನಡೆಸುತ್ತಿದ್ದಾರೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವ್ಯಂಗವಾಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಆಡಳಿತದಲ್ಲಿರುವ ಸಂದರ್ಭದಲ್ಲೇ
ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಧೀರ್ ಕುಮಾರ್ ಅವರು, ಮೈಥೇಯಿ-ಕುಕಿ-ನಾಗಾ ಸಮುದಾಯದಲ್ಲಿ ಎಷ್ಟು ಸಂಖ್ಯೆ ಇದೆ ಗೊತ್ತಿಲ್ಲ. ಚುನಾವಣೆ ಉದ್ದೇಶದಿಂದ ಬಿಜೆಪಿ ಸರ್ಕಾರ ಮೈಥೇಯಿ ಪರವಾಗಿ ನಿಂತಿದೆ. ಬಿಜೆಪಿ ಮನುಷ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ದೇಶದಲ್ಲಿ ದೌರ್ಜನ್ಯ ನಡೆಯುತ್ತಿರುವಾಗ ಮೋದಿ ವಿಶ್ವನಾಯಕನಾಗಲು ಸಾಧ್ಯವಿಲ್ಲ ಎಂದರು. ಇನ್ನು
ಮಹಿಳೆಯರನ್ನು ಮಾತೆಯರೆನ್ನುವ ಬಿಜೆಪಿ ಸರ್ಕಾರದ ಇನ್ನೊಂದು ಮುಖ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡುವುದರ ಮೂಲಕ ಮಣಿಪುರದಲ್ಲಿ ಬಹಿರಂಗಗೊಂಡಿದೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಬಿಜೆಪಿ ಆಡಳಿತ ನಡೆಸುತ್ತಿರುವ ಮಣಿಪುರ ರಾಜ್ಯದಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ವಿರೋಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಕಾಪು ಪೇಟೆಯಲ್ಲಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್
ಉಡುಪಿಯ ಕಾಲೇಜೊಂದರ ಶೌಚಾಲಯಲ್ಲಿ ನಡೆದ ಶೂಟಿಂಗ್ ಘಟನೆ ದೇಶದ ಗಮನ ಸೆಳೆದಿದೆ. ನಮಗೆ ನಮ್ಮ ವಿದ್ಯಾರ್ಥಿನಿಯರ ರಕ್ಷಣೆ ಮುಖ್ಯವಾಗಿದೆ. ಖಾಸಗಿ ವಿಚಾರ ಹೊರಗಡೆ ಹರಿದಾಡಿ ದುರ್ಬಳಕೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನಪ್ರತಿನಿಧಿಗಳು ,ಡಿಸಿ, ಎಸ್ಪಿಗೆ ವಿದ್ಯಾರ್ಥಿನಿಯರು ಮಾಹಿತಿ ನೀಡಿದ್ದಾರೆ. ಲಂಚ್ ಬ್ರೇಕ್
ರಾತ್ರಿ ಬೀಸಿದ ಬಾರೀ ಮಳೆಗಾಳಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಧರೆಗುರುಳಿ ಮೆಸ್ಕಾಂಗೆ ಸುಮಾರು ಐದು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ.ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯ ಎರ್ಮಾಳು ಪೊಂದಾಡು ಆಲಡೆ ಬೆಟ್ಟು ಎಂಬಲ್ಲಿ ರಾತ್ರಿ ಹೊತ್ತು ಈ ಘಟನೆ ನಡೆದಿದ್ದು, ಹಗಲು ಹೊತ್ತು ನಡೆದಿದ್ದರೆ ಬಾರೀ ಅನಾಹುತ ನಡೆಯುವ ಸಾಧ್ಯತೆ ಇತ್ತು ಎನ್ನುತ್ತಾರೆ ಸ್ಥಳೀಯರು, ವಿದ್ಯುತ್ ಇಲ್ಲದೆ ಗ್ರಾಮದ ಜನರು ಭಾರೀ ಸಮಸ್ಯೆ ಅನುಭವಿಸಿದ್ದು, ತುರ್ತಾಗಿ ಪಡುಬಿದ್ರಿ ಮೆಸ್ಕಾಂ
ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದ ವಿರುದ್ಧ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ “ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ” ಸಭೆ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿಯಿಂದ ಹೊರಟ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಛೇರಿಯ ಬಳಿ ಸಮಾಗಮಗೊಂಡಿತು. ನಂತರ ಪ್ರತಿಭಟನಾ ಸಭೆ
ಬೈಂದೂರು ಸಮೀಪದ ಕೊಲ್ಲೂರಿನ ಅರಶಿನಗುಂಡಿ ಎಂಬಲ್ಲಿ ಜಲಪಾತದ ಹರಿಯುವ ನೀರಿನಲ್ಲಿ ನಾಪತ್ತೆಯಾದ ಭದ್ರಾವತಿಯ ಯುವಕನ ಪತ್ತೆಗಾಗಿ ಡ್ರೋನ್ ಕ್ಯಾಮೆರಾ ಮೂಲಕ ಶೋಧ ಕಾರ್ಯ ನಡೆಯುತ್ತಿದೆ. ಭಾನುವಾರ ಮಧ್ಯಾಹ್ನ ಕೊಲ್ಲೂರು ಸಮೀಪದ ಅರಸಿನಗುಂಡಿ ಜಲಪಾತದಲ್ಲಿ ಕಾಲುಜಾರಿ ಬಿದ್ದು ನಾಪತ್ತೆಯಾಗಿರುವ ಭದ್ರಾವತಿ ತಾಲ್ಲೂಕಿನ ಸುಣ್ಣದ ಹಳ್ಳಿಯ ಕೆ.ಎಚ್.ನಗರದ ಯುವ ಉದ್ಯಮಿ ಶರತ್ ಕುಮಾರ್ ಅವರ ಪತ್ತೆ ಕಾರ್ಯ ನಿನ್ನ ಮತ್ತು ಇವತ್ತು ಡ್ರೋನ್ ಕ್ಯಾಮೆರಾದ ಮೂಲಕ ಹುಡುಕಾಟ ಬರದಿಂದ
ಎರ್ಮಾಳು ಬಡಾ ದೇವಸ್ಥಾನ ಬಳಿಯ ನಿವಾಸಿ ಅದಮಾರು ವಿದ್ಯಾಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಾಹಿಸುತ್ತಿದ್ದ ವ್ಯಕ್ತಿ ಇಂದು ಮುಂಜಾನೆ ಕುಂಜೂರಿನ ಮನೆಯೊಂದರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ನವೀನ್ ಬಂಗೇರ (53), ಅವಿವಾಹಿತರಾಗಿದ್ದ ಇವರು ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದು ಕಳೆದ ಸುಮಾರು ಮೂರು ವರ್ಷಗಳಿಂದ ಅದಮಾರು ವಿದ್ಯಾಸಂಸ್ಥೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಾಹಿಸುತ್ತಿದ್ದು,
ಐದರ ಹರೆಯದ ಬಾಲೆಯನ್ನು ಬಿಸ್ಕೆಟ್ ಆಸೆ ತೋರಿಸಿ ತನ್ನ ಕೋಣೆಗೆ ಕರೆದು ಲೈಂಗಿಕ ದೌರ್ಜನ್ಯ ನಡೆಸಿದ ಕೃತ್ಯ ಪಡುಬಿದ್ರಿ ಕಾಮಗಾರಿ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವಿಕೃತ ಮನಸ್ಸಿನ ಕಾಮುಖ ಆರೋಪಿ ಕಲ್ಕತ್ತ ವೆಸ್ಟ್ ಬೆಂಗಾಲ್ ಮುರ್ಶಿದಾಬಾದ್ ನಿವಾಸಿ ಮಾಫಿಜುಲ್ ಶೇಖ್ಈತ ಪಡುಬಿದ್ರಿ ಅಂಚೆ ಕಛೇರಿ ಪಕ್ಕದ ನಿರ್ಮಾಣ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕಾರ್ಮಿಕನಾಗಿ
ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ಕೋಮು ಪ್ರಭಾವವಿಲ್ಲದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಒಂದುವರೆ ಗಂಟೆಗಳ ಕಾಲ ಎಸ್ ಪಿ ಹಾಗೂ ಡಿಸಿ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ಇಂದು ರಾತ್ರಿ ವೇಳೆ ಮಾಧ್ಯಮದವರಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಮಹಿಳಾ ಆಯೋಗ ಪ್ರತಿಭಟನೆ ಮಾಡಲು ಇರುವ ಸಂಸ್ಥೆ ಅಲ್ಲ.