Home ಕರಾವಳಿ Archive by category ಉಡುಪಿ (Page 5)

ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಬ್ರಹ್ಮಾವರದ ನದಿ ತೀರದ ಸರಕಾರಿ ಜಾಗದಲ್ಲಿ ನಡೆಯುತ್ತಿರುವ ಮರಳುಗಾರಿಕೆ ವಿರುದ್ಧ ಮೂಡುಹೋಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬ್ರಹ್ಮಾವರ ತಾಲೂಕು ಸೌಧದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅದೇ ಜಾಗದ ಬಳಿ ನೂರಾರು ಎಕ್ರೆ ಕೃಷಿ ಭೂಮಿ ಜಲಾವೃತವಾಗುವ ಭೀತಿ ಎದುರಾಗಿದ್ದು, ಮತ್ತು ಅಲ್ಲಿನ ಪರಿಸರದ ಜನರು ಗೋಮಾಳದಲ್ಲಿ ಹಸುಗಳನ್ನು ಮೇಯಲು

ಉಡುಪಿ: ಮಾ.5ಕ್ಕೆ ಪರಿಯಾಳ ಸಮಾಜ ಸಮುದಾಯ ಭವನ ಉದ್ಘಾಟನೆ

ಉಡುಪಿ: ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘದ ವತಿಯಿಂದ ಅಂದಾಜು 75 ಲಕ್ಷ ರೂ. ವೆಚ್ಚದಲ್ಲಿ ಉಚ್ಚಿಲದಲ್ಲಿ ನಿರ್ಮಿಸಲಾದ ಪರಿಯಾಳ ಸಮಾಜ ಸಮುದಾಯ ಭವನದ ಉದ್ಘಾಟನೆಯು ಮಾ.5ರಂದು ಉಚ್ಚಿಲದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಯು.ಶಂಕರ ಸಾಲ್ಯಾನ್ ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 15 ಲಕ್ಷರೂ. ನೆರವು ದೊರಕಿದ್ದು, ಉಳಿದಂತೆ ದಾನಿಗಳಿಂದ ಸಂಗ್ರಹಿಸಿ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡವನ್ನು

ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕ್‌ ನ 17ನೇ ಶಾಖೆ ಉದ್ಘಾಟನೆ

ರಾಜ್ಯದ ಅಗ್ರಗಣ್ಯ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯು ಬ್ರಹ್ಮಾವರದ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸ್‌ನ ನೆಲಮಹಡಿ, ಆಕಾಶವಾಣಿ ವೃತ್ತದ ಬಳಿ, ಉದ್ಘಾಟನೆಗೊಂಡಿತು. ಹೊಸ ಶಾಖೆಯ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣರವರು ನೆರವೇರಿಸಿದರು. ಹೋಲಿ ಫ್ಯಾಮಲಿ ಚರ್ಚ್, ಬ್ರಹ್ಮಾವರ ಇದರ ಧರ್ಮಗುರುಗಳಾದ ವಂದನೀಯ ಜಾನ್ ಫೆರ್ನಾಂಡಿಸ್‌ರವರು ಆಶೀರ್ವಚನವನ್ನು ನೆರವೇರಿಸಿದರು. ಹೊಸ ಶಾಖೆಯ ಭದ್ರತಾ ಕೊಠಡಿಯನ್ನು

ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಉಡುಪಿಯ ಅಭಿನ್ ಬಿ. ದೇವಾಡಿಗ

ಅಸ್ಸಾಮಿನ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಅಭಿನ್ ಬಿ. ದೇವಾಡಿಗ ಚಿನ್ನ ಗೆದ್ದಿದ್ದಾರೆ. 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಅಭಿನ್, 21 ಸೆಕೆಂಡ್ ನಲ್ಲಿ ಗುರಿ ಮುಟ್ಟಿದ್ದಾರೆ. ಜೈನ್ ಯುನಿವರ್ಸಿಟಿ ಬೆಂಗಳೂರಿನಲ್ಲಿ ಓದುತ್ತಿರುವ ಅವರು, ಉಡುಪಿ ಅಜ್ಜರಕಾರು ಕ್ರೀಡಾಂಗಣದ ಟ್ರ್ಯಾಕ್ ಆಂಡ್ ಫೀಲ್ಡ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಉಡುಪಿಯ ಜಹೀರ್ ಅಬ್ಬಾಸ್ ಗರಡಿಯಲ್ಲಿ 2017

ಮಲ್ಪೆಯ ಮೀನು ಬೋಟು ಭಟ್ಕಳ ಕಡಲಲ್ಲಿ ಲೂಟ : ಏಳು ಆರೋಪಿಗಳ ಬಂಧನ

ಮಲ್ಪೆ ಬಂದರಿನಿಂದ ಮೀನು ಹಿಡಿಯಲು ಹೋಗಿದ್ದ ಕೃಷ್ಣನಂದನ ಎಂಬ ಬೋಟಿನಿಂದ ಮೀನು ಮತ್ತು ಡೀಸೆಲ್ ಅಪಹರಿಸಿದ್ದಾರೆ ಎಂಬ ದೂರಿನ ಮೇಲೆ ಮಲ್ಪೆ ಪೋಲೀಸರು ಭಟ್ಕಳದಲ್ಲಿ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಭಟ್ಕಳದ ೩೪ರ ಸುಬ್ರಮಣ್ಯ ಖಾರ್ವಿ, 38ರ ರಾಘವೇಂದ್ರ ಖಾರ್ವಿ, 40ರ ಹರೀಶ್ ನಾರಾಯಣ ಖಾರ್ವಿ, 42ರ ನಾಗೇಶ್ ನಾರಾಯಣ ಖಾರ್ವಿ, 38ರ ಗೋಪಾಲ ಮಾಧವ, 43ರ ಸಂತೋಷ ದೇವಯ್ಯ, 50ರ ಲಕ್ಷ್ಮಣ್ ಬಂಧಿತ ಆರೋಪಿಗಳು. 8 ಲಕ್ಷ ಮೌಲ್ಯದ ಮೀನು ಮತ್ತು ಐದೂವರೆ ಲಕ್ಷ ಮೌಲ್ಯದ

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಸಾವು

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಕಾಪು ಪೊಲಿಪು‌ ನಿವಾಸಿ ಕಿಶೋರ್ (29) ಮೃತ ದುರ್ದೈವಿ. ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದ ಕಿಶೋರ್ ಶುಕ್ರವಾರ ಮುಂಜಾನೆ ಕೂಡಾ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳಿದ್ದು ಮೀನುಗಾರಿಕಾ ಬಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ

ದುಬೈ ರಸ್ತೆ ಅಪಘಾತಕ್ಕೆ ತಾ.ಪಂ ಮಾಜಿ ಉಪಾಧ್ಯಕ್ಷೆ ಏಕೈಕ ಪುತ್ರಿ ದಾರುಣ ಸಾವು

ಉಳ್ಳಾಲ : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ

ಉಡುಪಿ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024

ಉಡುಪಿ: ವಾಹನ ಚಾಲಕರು ಸಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿ ಕೊಂಡು ರಸ್ತೆ ಅಪಘಾತವನ್ನು ತಡೆಗಟ್ಟುವಲ್ಲಿ ಸಹ ಕರಿಸಬೇಕು ಎಂದು ನಗರದ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್ ಹೇಳಿದ್ದಾರೆ. ಮಣಿಪಾಲದ ಪ್ರಾದೇಶಿಕ ಸಾರಿಗೆ ಕಛೇaರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ ಉಡುಪಿ ವತಿ ಯಿಂದ ಸೋಮವಾರ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಸ್ತೆ

ನಂದಿಕೂರು ವ್ಯಕ್ತಿ ನೇಣಿಗೆ ಶರಣು

ಪಡುಬಿದ್ರಿ: ನಂದಿಕೂರಿನ ಮನೆಯೊಂದರಲ್ಲಿ ಏಕಾಂಗಿಯಾಗಿ ಜೀವಿಸುತ್ತಿದ್ದ ವ್ಯಕ್ತಿಯೋರ್ವರು ತಮ್ಮದೇ ಮನೆ ಜಗಲಿಯ ಮೇಲಿನ ಪಕ್ಕಾಸಿಗೆ ನೇಣು ಹಾಕಿಕೊಂಡು ಜೀವಾಂತ್ಯಗೊಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಂದಿಕೂರು ಶೆಟ್ಟಿ ಬೆಟ್ಟು ಸಾಲ್ಯಾನ್ ನಿವಾಸದ ವಾಸಿ ಶೇಖರ್ ಪೂಜಾರಿ(67), ಹೆಂಡತಿ ಅನಾರೋಗ್ಯದ ಸಮಸ್ಯೆಯಿಂದ ತನ್ನ ತಾಯಿ ಮನೆ ಕಾರ್ಕಳದ ಕಲ್ಯಾ ನೆಲ್ಲಿಗುಡ್ಡೆಯಲ್ಲಿ ವಾಸವಾಗಿದ್ದು, ಮಕ್ಕಳು ಕೂಡಾ ತಾಯಿಯೊಂದಿಗಿದ್ದರು, ನಂದಿಕೂರಿನ ಮನೆಯಲ್ಲಿ

ಪಡುಬಿದ್ರಿ : ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಈಚರ್ ಟಿಪ್ಪರೊಂದನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಮುಂಜಾನೆ ಹೆದ್ದಾರಿಯಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಪಡುಬಿದ್ರಿ ಪೊಲೀಸರು ಟಿಪ್ಪರ್ ವೊಂದನ್ನು ನಿಲ್ಲಿಸಲು ಸೂಚನೆ ನೀಡಿದರೂ ಉಡುಪಿ ಕಡೆಗೆ ವೇಗವಾಗಿ ಪರಾರಿಯಾಗಲು ಯತ್ನಿಸಿದ ಕೆ.ಎ.20-ಬಿ 1146 ನೋಂದಾಯಿತ ಸಂಖ್ಯೆಯ ಟಿಪ್ಪರನ್ನು ಬೆನ್ನಟ್ಟಿದಾಗ ಅದರ ಚಾಲಕ ಟಿಪ್ಪರನ್ನು ಎರ್ಮಾಳು ಸೇತುವೆ ಬಳಿ ನಿಲ್ಲಿಸಿ ಪರಾರಿಯಾಗಿದ್ದಾನೆ, ಟಿಪ್ಪರನ್ನು