Home ಕರಾವಳಿ Archive by category ಉಳ್ಳಾಳ (Page 3)

ಉಳ್ಳಾಲ: ಯುವಕನ ಕೊಲೆಯತ್ನ : ಆರೋಪಿ ಬಂಧನ

ಉಳ್ಳಾಲ: ಬೈಕಲ್ಲಿ ಚಲಿಸುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಕುಂಪಲ ನಿವಾಸಿ ಮಹಮ್ಮದ್ ಆರೀಫ್(29)ಇರಿತಕ್ಕೊಳಗಾದ ಯುವಕ.ಆರೀಫ್ ಶುಕ್ರವಾರ ಬೆಳಿಗ್ಗೆ ಕೊಲ್ಯದಿಂದ-ಕುಂಪಲದ ಕಡೆಗೆ

ತೊಕ್ಕೊಟ್ಟು: ಐಸ್ ಕ್ರೀಮ್ ಪಾರ್ಲರ್ ವೈಟರ್ ಆತ್ಮಹತ್ಯೆ

ಉಳ್ಳಾಲ: ಐಸ್ ಕ್ರೀಮ್ ಪಾರ್ಲರ್ ಒಂದರ ವೈಟರ್ ಆಗಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂಬಾತ ಪಿಲಾರ್ ನ ಗೋಡೌನ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಡೌನ್ ನ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಿಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾರೆ. ಕಳೆದ ಏಳು ವರುಷದಿಂದ ತೊಕ್ಕೊಟ್ಟುವಿನ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ

ಉಳ್ಳಾಲ: ಸಿಪಿಐಎಂ ಹಿರಿಯ ಮುಖಂಡ ನಾರಾಯಣ ತಲಪಾಡಿ ನಿಧನ

ಉಳ್ಳಾಲ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ( 68) ಹೃದಯಾಘಾತದಿಂದ ಇಂದು ನಿಧನ ಹೊಂದಿದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿ ವಾಪಸ್ಸಾಗುವಾಗ ಹೃದಯಾಘಾತ ಉಂಟಾಗಿದೆ.ಇವರು ಸಿಪಿಐಎಂ ಉಳ್ಳಾಲ ವಲಯ ಸಮಿತಿ ಸದಸ್ಯರು, ದಲಿತ ಹಕ್ಕುಗಳ ಹೋರಾಟ ಸಮಿತಿ ಜಿಲ್ಲಾ ಸದಸ್ಯರು, ಕೋಟೆಕಾರು ಸರ್ಕಲ್ ಬೀಡಿ ಲೇಬರ್ ಯೂನಿಯನ್ ವಲಯ ಸಮಿತಿ ಸದಸ್ಯ, ಕೆಪಿಆರ್ ಎಸ್ ರೈತ ಸಂಘದ ಜಿಲ್ಲಾ ಸಮಿತಿ ಸದಸ್ಯರು, ಕೋಟೆಕಾರು

ಉಳ್ಳಾಲ:ರೈಲು ಢಿಕ್ಕಿ ಹೊಡೆದು ಯುವಕ ಸಾವು

ಉಳ್ಳಾಲ: ಫೆ.14 ರಂದು ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (23) ಮೃತರು. ನಿನ್ನೆ ಸಂಜೆ ವೇಳೆ ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುವ ಸಂದರ್ಭ ರೈಲು ಢಿಕ್ಕಿ ಹೊಡೆದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಮುಂಬೈನಿಂದ ಊರಿಗೆ

ಮಂಗಳೂರಿನಲ್ಲಿ ಪೈಪ್ ಹಾನಿ, ಒಂದು ವಾರ ಉಳ್ಳಾಲಕ್ಕೆ ನೀರಿಲ್ಲ

ಉಳ್ಳಾಲ: ಮಂಗಳೂರಿ‌ನ ಪಡೀಲ್ ಸಮೀಪ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಒಡೆದ ಪರಿಣಾಮ ದುರಸ್ತಿ ಕಾರ್ಯಕ್ಕಾಗಿ ಉಳ್ಳಾಲ ನಗರಕ್ಕೆ ಒಂದು ವಾರದ ಕಾಲ ನೀರು ಸರಬರಾಜು ಇರುವುದಿಲ್ಲ ಎಂದು ಉಳ್ಳಾಲ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.ಫೆ. 6 ರಂದು ಪಂಪ್ವೆಲ್ ಮಹಾವೀರ ವೃತ್ತ ಸಮೀಪದ ಪಡೀಲ್ ರೋಹನ್ ಸ್ಕ್ವೇರ್‌ ಕಟ್ಟಡದ ಮುಂಭಾಗದಲ್ಲಿ ತುಂಬೆ ಅಣೆಕಟ್ಟಿನಿಂದ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಹಾನಿಯಾಗಿದೆ. ಈ ನಿಟ್ಟಿನಲ್ಲಿ

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ

ಉಳ್ಳಾಲ: ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನ ಬಿಡುಗಡೆ

ಉಳ್ಳಾಲ: ಮೇಲ್ತೆನೆ’ ಸಂಘಟನೆ ಪ್ರಕಟಿಸಿದ ಕವಿ ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು. ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸ್ಥಾಪಕಾಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನ ಬಿಡುಗಡೆಗೊಸಿದರು. ಬಳಿಕ ಮಾತನಾಡಿದ ಅವರು, ಪ್ರಸಕ್ತ ದಿನಗಳಲ್ಲಿ ಅಧಿಕ

ಕೊಣಾಜೆ : ಯುವತಿ ನಾಪತ್ತೆ

ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ನಾಪತ್ತೆಯಾದವರು. ಕೊಣಾಜೆ ಕಕ್ಕೆಮಜಲು ನಿವಾಸಿ ಕುಟುಂಬವೊಂದು ಅನಾರೋಗ್ಯದಲ್ಲಿರುವ ಪ್ರಾಯಸ್ತರನ್ನು ನೋಡಿಕೊಳ್ಳಲು ಖಾಸಗಿ ಏಜೆನ್ಸಿ ಮೂಲಕ ಕೆಲಸಕ್ಕೆ ಇಟ್ಟುಕೊಂಡಿದ್ದು, ತಿಂಗಳಿಗೆ 20,000 ರೂ ಏಜೆನ್ಸಿಗೆ ಪಾವತಿಸುತ್ತಿದ್ದರು. ಫೆ.1 ರಂದು ಸಂಜೆ 3 ಕ್ಕೆ ಮನೆಯಿಂದ ಹೊರಹೋದಾಕೆ ನಂತರ

ಉಳ್ಳಾಲ: ಸಮುದ್ರದಲ್ಲಿ ಕಲ್ಲುಬಂಡೆಗೆ ಬಡಿದು ಮುಳುಗಿದ ಮೀನುಗಾರಿಕಾ ದೋಣಿ, ಐವರು ಮೀನುಗಾರರ ರಕ್ಷಣೆ

ಉಳ್ಳಾಲ: ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್‍ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್‍ಗೆ ಹಾನಿಯಾಗಿದೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರಿಗೆ ಸೇರಿದ`ನವಾಮಿ –

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್‌ನಲ್ಲಿ 17.68 ಕೋಟಿ ರೂ. ನಗದು ಜಮಾ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ