Home ಕರಾವಳಿ Archive by category ಉಳ್ಳಾಳ (Page 4)

ಉಳ್ಳಾಲ: ಸಮುದ್ರದಲ್ಲಿ ಕಲ್ಲುಬಂಡೆಗೆ ಬಡಿದು ಮುಳುಗಿದ ಮೀನುಗಾರಿಕಾ ದೋಣಿ, ಐವರು ಮೀನುಗಾರರ ರಕ್ಷಣೆ

ಉಳ್ಳಾಲ: ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್‍ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್‌ನಲ್ಲಿ 17.68 ಕೋಟಿ ರೂ. ನಗದು ಜಮಾ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ

ಉಳ್ಳಾಲ : ಪಿಕಪ್- ಗೂಡ್ಸ್ ಲಾರಿ ನಡುವೆ ಅಪ್ಪಚ್ಚಿಯಾದ ಕಾರು

ಉಳ್ಳಾಲ : ಪಿಕಪ್ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಅದರ ಹಿಂಬದಿಗೆ ಗುದ್ದಿದ ಸ್ಬಿಫ್ಟ್ ಕಾರಿಗೆ ಅದರ ಹಿಂದುಗಡೆಯಿದ್ದ ಗೂಡ್ಸ್ ಲಾರಿ ಢಿಕ್ಕಿ ಹೊಡೆದು ಎರಡು ವಾಹನಗಳ ನಡುವೆ ಸಿಲುಕಿದ ಕಾರು ಅಪ್ಪಚ್ಚಿಯಾದ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಕೆಲಸ ಮುಗಿಸಿ ಮಂಗಳೂರಿನತ್ತ ಮೂವರು ಯುವತಿಯರಿದ್ದ ಕಾರು ತೆರಳುವಾಗ , ಜನದಟ್ಟಣೆ ತೊಕ್ಕೊಟ್ಟು ರಿಕ್ಷಾ ಪಾಕ್೯ ಸಮೀಪದಲ್ಲೇ ಎದುರುಗಡೆಯಿದ್ದ ಪಿಕಪ್ ವಾಹನದ ಚಾಲಕ ಹಠಾತ್

ದೇರಳಕಟ್ಟೆ: “ಮೇಲೋಗರ” ಕೃತಿ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಳ್ಳಾಲ ತಾಲೂಕು ವತಿಯಿಂದ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಕೆ. ರವೀಂದ್ರ ರೈ ಕಲ್ಲಿಮಾರ್ ಅವರ ಚಿಂತನ ಶಾಲೆಯ ಸಂಚಿತ ಬರಹಗಳ ಸಂಕಲನ “ಮೇಲೋಗರ” ಕೃತಿ ಲೋಕಾರ್ಪಣೆ ಕಾರ್ಯಕ್ರಮ ದೇರಳಕಟ್ಟೆ ದಿ ಕಂಫರ್ಟ್ಸ್ ಇನ್ ಹೋಟೆಲ್ ನಲ್ಲಿ ನಡೆಯಿತು. ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ನಿವೃತ್ತ ಮುಖ್ಯಶಿಕ್ಷಕ ಕೆ. ರವೀಂದ್ರ ರೈ ಕಲ್ಲಿಮಾರ್ ಅವರ ಚಿಂತನ ಶಾಲೆಯ ಸಂಚಿತ

ದೇರಳಕಟ್ಟೆ: ಕಣಚೂರು ಸಮೂಹ ಸಂಸ್ಥೆ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಕಣಚೂರು ಸಮೂಹ ಸಂಸ್ಥೆಯ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕಣಚೂರು ಸಮೂಹ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ಹಾಜಿ ಯು.ಕೆ.ಮೋನುರವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಗಣರಾಜ್ಯೋತ್ಸವ ದಿನದ ಸಂದೇಶ ನೀಡಿದರು. ಕಣಚೂರು ಪಬ್ಲಿಕ್ ಸ್ಕೂಲ್‌ನ ೮ನೇ ತರಗತಿಯ ವಿದ್ಯಾರ್ಥಿನಿಯಾದ ಫಾತಿಮ ಶರ್ಮಿನ್ ಸಂವಿಧಾನದ ಕರಡು ಸಮಿತಿಯ ರಚನೆ ಮತ್ತು ಪ್ರಜಾಪ್ರಭುತ್ವದ ಅಸ್ಥಿತ್ವದ ಕುರಿತು ಮಾತನಾಡಿದರು. ಕಣಚೂರು ಇನ್ಸ್ಟಿಟ್ಯೂಟ್ ಆಫ್ ಅಲೈಯ್ಡ್

ಉಳ್ಳಾಲ: ನೇತ್ರಾವತಿ ಸೇತುವೆ ಡಿವೈಡರ್ ಗೆ ಗುದ್ದಿದ ಬೈಕ್, ಸವಾರ ಸ್ಥಳದಲ್ಲೇ ಸಾವು

ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು‌. ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ

ಉಳ್ಳಾಲ : ಶೇಂದಿ ತೆಗೆಯುವ ಸಂದರ್ಭ ತೆಂಗಿನಮರದಿಂದ ಬಿದ್ದು ಸಾವು

ಉಳ್ಳಾಲ : ಕೊಣಾಜೆ ಮುಯರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿನ ಮನೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿ ಸದ್ಯ ಸಂತೋಷ ನಗರ ಕುಟುಂಬ ಸಮೇತರಾಗಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು. ಎಂದಿನಂತೆ ಇಂದು ಬೆಳಿಗ್ಗೆ ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ

ಉಳ್ಳಾಲ: ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ- ಎಸಿಪಿ ಧನ್ಯ ನಾಯಕ್ ಟೀಮ್ ದಿಢೀರ್ ದಾಳಿ,ಆರೋಪಿ ಪೊಲೀಸರ ವಶಕ್ಕೆ

ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ,ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.ಉಳ್ಳಾಲ ಕೋಟೆಪುರದ ಬರಕ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲೇ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ

ಉಳ್ಳಾಲ: ಅವಿವಾಹಿತ ಆತ್ಮಹತ್ಯೆ

ಉಳ್ಳಾಲ: ಅವಿವಾಹಿತ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಬೆಳಕಿಗೆ ಬಂದಿದೆ.ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ ನಡೆಸಿಕೊಂಡವರು. ಕೋಟೆಕಾರು ಬೀರಿಯಲ್ಲಿರುವ ಈಕಾಟ್೯ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ನಾಗರಾಜ್ ನಿನ್ನೆ ಕೆಲಸಕ್ಕೆ ತೆರಳಿ ರಾತ್ರಿ ಕೋಣೆಯಲ್ಲಿ ಮಲಗಿದವರು ಕೃತ್ಯ ಎಸಗಿದ್ದಾರೆ. ಇವರ ಸಹೋದರಿಯ ಪ್ರಸವ ಹಿನ್ನೆಲೆಯಲ್ಲಿ ತಾಯಿ ಆಕೆಯ ಮಂಗಳೂರಿನ

ಉಳ್ಳಾಲ: ಕೇರಳಕ್ಕೆ ಗೋವಾ ಮದ್ಯ ಸಾಗಾಟ- ಆರೋಪಿ ಸೇರಿದಂತೆ ಮದ್ಯ, ವಾಹನ ವಶಕ್ಕೆ 

ಉಳ್ಳಾಲ : ಗೂಡ್ಸ್ ಟೆಂಪೋದಲ್ಲಿ ಗೋವಾ ಮದ್ಯದ ಪೆಟ್ಟಿಗೆಗಳನ್ನು  ಕೇರಳಕ್ಕೆ ಸಾಗಾಟ ನಡೆಸುತ್ತಿದ್ದ  ವ್ಯಕ್ತಿಯನ್ನು ಮುಡಿಪು- ನೆತ್ತಿಲಪದವು ಎಂಬಲ್ಲಿ ಅಬಕಾರಿ ಪೊಲೀಸರು  ಬಂಧಿಸಿ ಆತನಿಂದ ರೂ.6,87,720 ಮದ್ಯ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆಯೂ ತೆಂಗಿನ ಗೆರಟೆಗಳನ್ನು ಮೇಲಿಟ್ಟು ಸಾರಾಯಿ ಸಾಗಾಟ ನಡೆಸಿ ಬಂಧಿತನಾಗಿದ್ದ ಆರೋಪಿ ಇದೀಗ ಮತ್ತದೇ ಮಾದರಿಯಲ್ಲಿ ಅಕ್ರಮ ಸಾಗಾಟ ನಡೆಸುವ ಮೂಲಕ ಕರ್ನಾಟಕ ಅಬಕಾರಿ ಪೊಲೀಸರಿಂದ ಬಂಧಿತನಾಗಿದ್ದಾನೆ.