Home ಕರಾವಳಿ Archive by category ಉಳ್ಳಾಳ (Page 7)

ಉಳ್ಳಾಲ ; ಅಕ್ರಮ ಎಂಡಿಎಂಎ ಮಾರಾಟ: ಇಬ್ಬರು ಸಿಸಿಬಿ ವಶಕ್ಕೆ

ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಉಳ್ಳಾಲ ತಾಲೂಕಿನ ಮುಡಿಪು ಮೂಳೂರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕೊಲ್ನಾಡು ನಿವಾಸಿಯಾಗಿರುವ ಅಬ್ದುಲ್ ರಹಿಮಾನ್(42) ಮತ್ತು ಬೆಳ್ತಂಗಡಿ ತಾಲೂಕಿನ ಇಳಂತಿಲಾ ಗ್ರಾಮದ ಮೊಹಮ್ಮದ್

ಮುಡಿಪು: ನೇಣುಬಿಗಿದು ಯುವಕ ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ.ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆ ಕಬ್ಬಿಣದ ರಾಡಿಗೆ ನೇಣು ಹಾಕಿಕೊಂಡು ಕೃತ್ಯವೆಸಗಿದ್ದಾರೆ. ನ.20 ರಂದು ಕೆಲಸಕ್ಕೆ ಹೋದವರು ತಡರಾತ್ರಿಯಾದರೂ ಮನೆಗೆ ವಾಪಸ್ಸಾಗದೇ

ಉಳ್ಳಾಲ: ಇರಾ ಯುವಕ ಮಂಡಲ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸುವರ್ಣ ಮಹೋತ್ಸವ ಸಮಿತಿಯ ಯುವಕ ಮಂಡಲ ಇರಾ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಅಂಧರ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇರಾದ ಬಾವಬೀಡು ಗೋಪಿ ಎಸ್. ಭಂಡಾರಿ ಗ್ರಾಮೀಣ ಆರೋಗ್ಯ ಮತ್ತು ತರಬೇತಿ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ನಿಟ್ಟೆ ಯುನಿವರ್ಸಿಟಿಯ ಡೀನ್ ಡಾ. ಸತೀಶ್ ಕುಮಾರ್

ಬೈಕ್ ಧಾವಂತಕ್ಕೆ ಮಹಿಳೆ ಬಲಿ

ಉಳ್ಳಾಲ: ಮಂಗಳೂರು ದಸರಾ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ ಎಲ್ಲವ್ವ ಶಿವಪ್ಪ ದೊಡ್ಡಮನಿ (50) ಮೃತ ಮಹಿಳೆ. ಶಿವಪ್ಪ ಅವರು ಕೂಲಿಕಾರ್ಮಿಕರಾಗಿದ್ದು, ಸಂಜೆ ನಂತರ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ವಾಚ್ ಮೆನ್ ವೃತ್ತಿ

ಉಳ್ಳಾಲದ ಒಳರಸ್ತೆಗಳ ಗುಂಡಿಗಳಲ್ಲಿ ಶಾಸಕರ ನಗುಮುಖ ಎದ್ದು ಕಾಣುತ್ತಿದೆ – ಸುನಿಲ್ ಕುಮಾರ್ ಬಜಾಲ್

ಉಳ್ಳಾಲ ಕ್ಷೇತ್ರದಲ್ಲಿ ಭಾರೀ ಅಭಿವೃದ್ಧಿಯಾಗಿದೆ ಎಂದು ಒಂದು ಕಡೆ ಡಂಗುರ ಸಾರುತ್ತಿದ್ದರೆ,ಮತ್ತೊಂದು ಕಡೆ ಒಳರಸ್ತೆಗಳ ಅವ್ಯವಸ್ಥೆ, ಚರಂಡಿಗಳ ದುರಾವಸ್ಥೆ, ಆರೋಗ್ಯ ಕ್ಷೇತ್ರಗಳ ಸಮಸ್ಯೆಗಳು, ಆಡಳಿತಾತ್ಮಕ ಸಂಕಷ್ಟಗಳು,ಸಾಮಾಜಿಕ ಅನಾಚಾರಗಳನ್ನು ಕ್ಷೇತ್ರದ ಜನತೆ ನಿರಂತರವಾಗಿ ಅನುಭವಿಸುತ್ತಿದ್ದಾರೆ. ಒಳರಸ್ತೆಗಳಲ್ಲಿ ಚೆಂಬುಗುಡ್ಡ ದಾರಂದಬಾಗಿಲು ಪಂಡಿತ್ ಹೌಸ್ ಸಂಪರ್ಕ ರಸ್ತೆಯಂತೂ ಕಳೆದ 25 ವರ್ಷಗಳಿಂದ ತೇಪೆ ಕಾರ್ಯಕ್ಕೆ ಒಗ್ಗಿ ಹೋಗಿದೆಯೇ ಹೊರತು ಸಂಪೂರ್ಣ

ಉಳ್ಳಾಲ: ನೇತ್ರಾವತಿ ಹೊಸಸೇತುವೆಯಲ್ಲಿ ಸರಣಿ ಅಪಘಾತ

ಉಳ್ಳಾಲ: ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಆರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ನೇತ್ರಾವತಿ ನದಿಯ ಹೊಸಸೇತುವೆಯಲ್ಲಿ ಸಂಭವಿಸಿದೆ. ಅಕಾಲಿಕವಾಗಿ ಸುರಿದ ಮಳೆಯಿಂದ ವಾಹನಗಳು ಒಂದರ ಹಿಂದೆಯಂತೆ ಅಪ್ಪಳಿಸಿರುವುದಾಗಿ ತಿಳಿದುಬಂದಿದೆ. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿ ಸೇತುವೆ ಮಧ್ಯಭಾಗದಲ್ಲಿ ಕೆಟ್ಟು ನಿಂತಿದೆ. ಇದೇ ವೇಳೆ ಭಾರೀ ಮಳೆ ಆರಂಭವಾಗಿತ್ತು. ನಿಯಂತ್ರಣ ಕಳೆದುಕೊಂಡ ಆಲ್ಟೋ ಕಾರು ಲಾರಿ ಹಿಂಬದಿಗೆ ಢಿಕ್ಕಿ ಹೊಡೆದಿದೆ.

ಉಳ್ಳಾಲ: ಬಸ್-ಸ್ಕೂಟರ್ ಗಳ ಸರಣಿ ಅಪಘಾತ, ಕೃಷ್ಣ ಶೆಟ್ಟಿ ತಾಮಾರ್ ಗೆ ಗಾಯ, ಆಸ್ಪತ್ರೆಗೆ ದಾಖಲು

ಉಳ್ಳಾಲ: ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ಕೂಟರ್‍ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್ ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಬೀರಿ ಜಂಕ್ಷನ್ ನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ

ಉಳ್ಳಾಲ: ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತ್ಯು

ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾ.ಹೆ.೬೬ರ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸಕ್ತ ಕೋಟೆಕಾರ್‌ನಲ್ಲಿ ನೆಲೆಸುತ್ತಿದ್ದ ಹನೀಫ್ ಎಂಬವರ ಪುತ್ರ ಅಝ್‌ವೀನ್ (21) ಎಂದು ಗುರುತಿಸಲಾಗಿದೆ. ದಕ್ಕೆಗೆ ಮೀನುಗಾರಿಕೆಯ ಕೆಲಸಕ್ಕೆಂದು ಅಝ್‌ವೀನ್ ೩:೩೦ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನೇತ್ರಾವತಿ ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡರು

ಉಳ್ಳಾಲ|| ಸಮುದಾಯ ಆಸ್ಪತ್ರೆಯಲ್ಲಿ ಮೂಲಸೌಕರ್ಯದ ಕೊರತೆ: ಡಿವೈಎಫ್‍ಐ ವತಿಯಿಂದ ಪ್ರತಿಭಟನೆ

ಉಳ್ಳಾಲ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರು ಸಹಿತ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಡಿವೈಎಫ್‍ಐ ಉಳ್ಳಾಲ ತಾಲೂಕು ಸಮಿತಿಯಿಂದ ಉಳ್ಳಾಲ ಸಮುದಾಯ ಆಸ್ಪತ್ರೆ ಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಡಿವೈಎಫ್‍ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಖಾಯಂ ವೈದ್ಯರನ್ನು ನಿಯುಕ್ತಿ ಮಾಡಲು ಆರೋಗ್ಯ ಇಲಾಖೆ ವಿಫಲವಾಗಿದೆ. ಬಾಣಂತಿಯರಿಗೆ ಬಿಸಿನೀರಿನ ವ್ಯವಸ್ಥೆಯಿಲ್ಲ, 108 ಆಂಬ್ಯುಲೆನ್ಸ್ ಸೇವೆ ಆರೋಗ್ಯ

ಉಳ್ಳಾಲ|| ಸಮುದಾಯ ಆರೋಗ್ಯ ಕೇಂದ್ರ ಸುಸ್ಥಿತಿಯಲ್ಲಿದೆ, ಸಣ್ಣಪುಟ್ಟ ಸಮಸ್ಯೆಯಿಟ್ಟು ಪ್ರತಿಭಟನೆ ನಡೆಸುವುದು ಸರಿಯಲ್ಲ: ಸದಾಶಿವ ಉಳ್ಳಾಲ್

ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೋಲಿಸಿದರೆ ಸುಸಜ್ಜಿತವಾದ ಎಲ್ಲಾ ವೈದ್ಯಕೀಯ ಪದ್ಧತಿಯ ಚಿಕಿತ್ಸೆ ಸಿಗುವ ಏಕೈಕ ಆರೋಗ್ಯ ಕೇಂದ್ರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರವಾಗಿದ್ದು, ಈ ಆರೋಗ್ಯ ಕೇಂದ್ರವನ್ನು ಸುಸಜ್ಜಿತವಾಗಿ ನಿರ್ಮಿಸುವಲ್ಲಿ ಕ್ಷೇತ್ರದ ಶಾಸಕರೂ ಮತ್ತು ಪ್ರಸ್ತುತ ಯು.ಟಿ.ಖಾದರ್ ಅವರು, ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಿದ್ದು, ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರುಗಳು ಮತ್ತು