Home ಕರಾವಳಿ Archive by category ಉಳ್ಳಾಳ (Page 9)

ಉಳ್ಳಾಲ: ಬೆಳ್ಮ ಗ್ರಾಮಕ್ಕೆ ಗಾಂಧಿ ಗ್ರಾಮ ಪುರಸ್ಕಾರ

ಉಳ್ಳಾಲ: ಬೆಳ್ಮ ಗ್ರಾಮ ಪಂಚಾಯಿತಿ ವರ್ಷದಲ್ಲಿ ಸಾಧಿಸಿದ ಜೀವನ ಗುಣಮಟ್ಟ, ಸ್ವಂತ ಸಂಪನ್ಮೂಲ ಕ್ರೋಢೀಕರಣ, ಮೂಲ ಸೌಕರ್ಯಗಳ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಉತ್ತಮ ಆಡಳಿತ, ಸೇವಾ ಪೂರೈಕೆ ಮತ್ತು ನಾವೀನ್ಯತೆ ಯೋಜನೆಗಳ ಸಹಿತ ಸರಕಾರದ 138 ಪ್ರಶ್ನೆಗಳಿಗೆ ಯಶಸ್ವಿಯಾಗಿ ಪ್ರತಿಕ್ರಿಯಿಸಿದ ಫಲವಾಗಿ 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಉಳ್ಳಾಲ

ಇರಾ ಯುವಕ ಮಂಡಲ : ಸೌಹಾರ್ದತೆಗೆ ಸಾಕ್ಷಿಯಾದ ಈದ್‍ಮಿಲಾದ್ ಆಚರಣೆ

ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನವಾದ ಇಂದು ಈದ್ ಮಿಲಾದ್ ಹಬ್ಬವಾಗಿ ಆಚರಿಸುತ್ತಿದ್ದು, ಇರಾದಲ್ಲಿಯೂ ಮುಸ್ಲಿಂ ಬಾಂಧವರು ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು. ಸೌಹಾರ್ದತೆಗೆ ಸಾಕ್ಷಿಯಾದ ಇರಾದ ಯುವಕ ಮಂಡಲ ಮತ್ತು ಸುವರ್ಣ ಮಹೋತ್ಸವ ಸಮಿತಿಯ ಸದಸ್ಯರು ಮಿಲಾದ್ ರ್ಯಾಲಿಯಲ್ಲಿ ಪಾಲ್ಗೊಂಡ ಮುಸ್ಲಿಂ ಬಾಂಧವರಿಗೆ ಶುಭಾಶಯಕೋರಿದ್ದು, ಎಲ್ಲರಿಗೂ ಸಿಹಿ ತಿಂಡಿಯನ್ನು ಹಂಚಿ ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ಇರಾ ಯುವಕ ಮಂಡಲದ ಕಾರ್ಯದರ್ಶಿ ಜಯರಾಜ್ ಶೆಟ್ಟಿ

ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಬಲೆಗೆ

ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಸುಮಾರು 75 ಕೆಜಿ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ ಈ ಮೀನು ಬಿದ್ದಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಮೀನು ಬಿದ್ದಿದೆ. ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು

ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಉಳ್ಳಾಲ:ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚಚ್೯ ಬಳಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತೊಕ್ಕೊಟ್ಟು, ಕೃಷ್ಣ ನಗರ,ಲಚ್ಚಿಲ್ ನಿವಾಸಿ ನಾಗೇಶ್ (62)ಆತ್ಮ ಹತ್ಯೆಗೈದ ದುರ್ದೈವಿ.ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.ಇಂದು ಬೆಳಿಗ್ಗೆ

ಉಳ್ಳಾಲ: ರೋಹಿಣಿ ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನ ಬಿಡುಗಡೆ

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸಲಹಾ ಸಮಿತಿಯ ಹಿರಿಯ ಸದಸ್ಯೆ, ಮುಂಬಯಿಯ ಹೈಕೋರ್ಟ್ ನ್ಯಾಯವಾದಿ ರೋಹಿಣಿ ಜೆ.ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನವನ್ನು ಬಿಡುಗಡೆ ಹಾಗೂ ಕೃತಿಯ ಅರ್ಪಣೆ ಕಾರ್ಯಕ್ರಮ ಮಂಗಳೂರಿನ ಹೊಯಿಗೆಬೈಲ್ ರತ್ನಾ ನಿವಾಸದಲ್ಲಿ ನಡೆಯಿತು. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ಸಲಹಾ ಸಮಿತಿ ಸದಸ್ಯ ನ್ಯಾಯವಾದಿ ಬಿ.ಮೋಹಿದ್ಧೀನ್ ಮುಂಡ್ಕೂರು ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿ, ಧ್ಯೇಯೋದ್ದೇಶಗಳು ಚೆನ್ನಾಗಿದ್ದರೆ

ಉಳ್ಳಾಲ: ಡ್ರೈನೇಜ್ ನೀರಿನಲ್ಲಿ ತೊಕ್ಕೊಟ್ಟು ರಿಕ್ಷಾ ಚಾಲಕರ ಬದುಕು- ಪ್ರತಿಭಟನೆಗೆ ನಿರ್ಧಾರ

ಉಳ್ಳಾಲ: ಉಳ್ಳಾಲ ತಾಲೂಕಿನಲ್ಲೇ ಅತಿ ಹೆಚ್ಚು ರಿಕ್ಷಾ ಚಾಲಕರಿರುವ ತೊಕ್ಕೊಟ್ಟು ರಿಕ್ಷಾ ಚಾಲಕರು ಕಳೆದ ಎರಡೂವರೆ ತಿಂಗಳಿನಿಂದ ಸಂಡಾಸು ನೀರಿನ ಮೇಲೆಯೇ ನಿಂತು ದುಡಿಯುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಕಟ್ಟಡದ ಮಾಲೀಕರು ತ್ಯಾಜ್ಯ ನೀರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೆ ಸಮಸ್ಯೆ ನಿರ್ಮಾಣವಾಗಿದೆ. ದಿನದಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು, ವೃದ್ಧರು ಸೇರಿದಂತೆ ಲಕ್ಷದಷ್ಟು ಮಂದಿ ನಡೆದುಕೊಂಡು ಹೋಗುವ ರಸ್ತೆಯಲ್ಲೇ ತ್ಯಾಜ್ಯ ನೀರು ಹರಿದಾಡಿದರೂ

ಉಳ್ಳಾಲ: ಸೆ.29ಕ್ಕೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ-2023

ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.29ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿ ವೈ ನಾಯಕ್ ಅವರು ಹೇಳಿದರು. ಉಳ್ಳಾಲ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲ್ಲೂಕು ಪಂಚಾಯತ್ ಉಳ್ಳಾಲ , ಉಳ್ಳಾಲ

ಇರಾದಲ್ಲಿ ವಿ4 ನ್ಯೂಸ್ ಕಾಮಿಡಿ ಪ್ರೀಮಿಯರ್ ಲೀಗ್‍ಗೆ ಅದ್ಧೂರಿ ಚಾಲನೆ-ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಭಾಗಿತ್ವದೊಂದಿಗೆ ಅರ್ಥಪೂರ್ಣ ಸಮಾರಂಭ

ಕರಾವಳಿಯ ಪ್ರತಿಷ್ಠಿತ ಸುದ್ದಿ ವಾಹಿನಿ ವಿ4 ನ್ಯೂಸ್ ಮತ್ತು ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ವಿ4 ನ್ಯೂಸ್‍ನ ಕಾಮಿಡಿ ಪ್ರೀಮಿಯರ್ ಲೀಗ್‍ಗೆ ಅದ್ಧೂರಿ ಚಾಲನೆ ದೊರೆಯಿತು. ಸಭಾ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್‍ನ ಪ್ರಬಂಧಕರಾದ ಶಿವಪ್ರಸಾದ್ ರೈ ಶಿಬರೂರು

ತೊಕ್ಕೊಟ್ಟು : ಸ್ಕೂಟರ್ ನಿಂದ ಬಿದ್ದು ಮಹಿಳೆ ಸಾವು

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು‌ ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ‌ ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ‌ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ

ಸೆ.24ರಂದು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್-4

ಉಳ್ಳಾಲ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಪ್ರದರ್ಶನವು ಸೆ.24ರಂದು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಒಟ್ಟು 12 ತಂಡಗಳು ಕಾಮಿಡಿ ಪ್ರದರ್ಶನ ನೀಡಲಿದೆ. ಎಸ್ಸೆನ್ ಕುಡ್ಲ ಕುಸಾಲ್, ಕ್ಲಿಂಗ್ ಕೃಷ್ಣ ಕೆಪೆ ಜೈಮಾತಾ,