Home ಕರಾವಳಿ Archive by category ಕಾಸರಗೋಡು (Page 13)

ಕುಂಜತ್ತೂರಿನಲ್ಲಿ ನಿರ್ಮಾಣಗೊಂಡ ಅಂಡರ್‍ ಪಾಸ್ ನಿಂದ ಸಂಚರಿಸಲು ತೊಂದರೆ

ಮಂಜೇಶ್ವರ: ಕುಂಜತ್ತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಡರ್ ಪಾಸ್ ನಿಂದ ಬುಧವಾರ ಬೆಳಗ್ಗಿನಿಂದ ವಾಹನ ಸಂಚಾರ ಆರಂಭಗೊಂಡಿತು.ಅಂಡರ್ ಪಾಸ್ ನೀಡುವುದಾಗಿ ಅಧಿಕಾರಿಗಳ ಭಾಗದಿಂದ ಹಸಿರು ನಿಶಾನೆ ಲಭಿಸಿದಾಗ ಸ್ಥಳೀಯರು ಅತೀವ ಸಂತೋಷಪಟ್ಟಿದ್ದರೂ ಈ ರೀತಿಯ ಅಂಡರ್ ಪಾಸ್ ಸಿಗಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲವೆಂಬುದಾಗಿ ಜನರು ಆಡಿಕೊಳ್ಳುತಿದ್ದಾರೆ. ಅಂಡರ್ ಪಾಸ್

ಮಂಜೇಶ್ವರ : ಕಸದ ತೊಟ್ಟಿಯಾಗಿ ದುರ್ನಾತ ಬೀರುತ್ತಿರುವ ಪುರಾತನ ಬಾವಿ

ಮಂಜೇಶ್ವರ : ಮಂಜೇಶ್ವರ ಗ್ರಾ.ಪಂ. ನ 17ನೇ ವಾರ್ಡು ವ್ಯಾಪ್ತಿಯಲ್ಲಿರುವ ಪುರಾತನ ಬಾವಿಯೊಂದು ಈಗ ಕಸದ ತೊಟ್ಟಿಯಾಗಿ ದುರ್ನಾತ ಬೀರುತ್ತಿದ್ದು ಅವಸಾನದ ಅಂಚಿಗೆ ತಲುಪಿದ್ದರೂ ಈ ಬಾವಿಯ ನೀರನ್ನು ಸಮೀಪದ ಹೋಟೆಲ್, ಬೇಕರಿ, ಜ್ಯೂಸ್ ಅಂಗಡಿ, ಪಾನಿಪುರಿ ಸ್ಟಾಲ್ ಗಳಿಗೆ ವರ್ಷಗಳಿಂದ ಉಪಯೋಗಿಸುತ್ತಿರುವ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ವರ್ಷಗಳ ಹಿಂದೆ ಪರಿಸರದ ನಾಗರಿಕರ ನೀರಿನ ದಾಹ ತೀರಿಸುತ್ತಿದ್ದ ಬಾವಿಯನ್ನು ಈಗ ಕಸ ಎಸೆಯಲು ಬಳಸುತ್ತಿರುವುದರಿಂದ ಬಾವಿಯ ನೀರು

ಲಾರಿಗಳ ಕಳವು ಪ್ರಕರಣ : ಆರೋಪಿಗಳ ಸಹಿತ ವಾಹನ ಪತ್ತೆ

ಮಂಜೇಶ್ವರ: ಮಿಯಾಪದವು ಪರಿಸರದಲ್ಲಿ ಎರಡು ಲಾರಿಗಳನ್ನು ಬಂದೂಕು ತೋರಿಸಿ ಅಪಹರಿಸಿದ ಅರೋಪಿಗಳನ್ನು ಹಾಗೂಕಳವು ವಾಹನಗಳನ್ನು ಮಂಜೇಶ್ವರ ಪೊಲೀಸ್ರು ವಶಕ್ಕೆ ತೆಗೆದಿದ್ದಾರೆ. ಒಂದು ಆಲ್ಟೋ ಕಾರು ಹಾಗೂ ಬೈಕಿನಲ್ಲಿ ಆಗಮಿಸಿದ ತಂಡ ಈ ಕೃತ್ಯಗೈದಿದೆ. ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಮಂಜೇಶ್ವರ ಪೊಲೀಸ್ರು ಸ್ಥಳೀಯರ ಮಾಹಿತಿ ಆಧಾರದಲ್ಲಿ ಕುರುಡಪದವು ಕೊಮ್ಮಂಗಳ ತನಕ ಅಪರಾಧಿಗಳನ್ನು ಹಿಂಬಾಲಿಸಿದ್ದಾರೆ. ಕುರುಡ ಪದವು ಕೊಮ್ಮಂಗಳಕ್ಕೆ ಪೊಲೀಸ್ರು ತಲುಪುತಿದ್ದಂತೆಯೇ

ತುಳು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ

ಕಾಸರಗೋಡು ಜಿಲ್ಲೆಯ ಶ್ರೀ ಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠದಲ್ಲಿ ತುಲು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಶ್ರೀ ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠ ಕಾಸರಗೋಡು. ಇಲ್ಲಿನ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವದ ಸಂಧರ್ಭದಲ್ಲಿ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಹಾಗೂ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕೇರಳದ ಮಾಜಿ ಕಂದಾಯ ಸಚಿವರಾದ ಶ್ರೀ ಇ ಚಂದ್ರಶೇಖರನ್ ಅವರು ಶ್ರೀ ಮಠದ

ಕೇಂದ್ರ ಬಜೆಟ್‍ನ ಜನವಿರೋಧಿ ನಿರ್ದೇಶನ ಕೂಡಲೇ ಹಿಂಪಡೆಯಬೇಕು : ಮಂಜೇಶ್ವರ ವಲಯ ಸಿಪಿಐ ಸಮಿತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನೆ

ಮಂಜೇಶ್ವರ: ಅದಾನಿ ಗ್ರೂಪಿನ ಕಾನೂನು ಬಾಹಿರವಾದ ಚಟುವಟಿಕೆಗಳನ್ನು ಸಂಯುಕ್ತ ಪಾರ್ಲಿಮೆಂಟರಿ ಸಮಿತಿ ತನಿಖೆ ನಡೆಸಬೇಕು, ಕೇಂದ್ರ ಸರ್ಕಾರದ ಬಜೆಟಿನ ಜನ ವಿರೋಧಿ ನಿರ್ದೇಶನಗಳನ್ನು ಕೂಡಲೇ ಹಿಂಪಡೆಯಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐ ಮಂಜೇಶ್ವರ ವಲಯ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಸಿಪಿಐ ಜಿಲ್ಲಾ ಸಮಿತಿ ಸದಸ್ಯ ಅಜಿತ್ ಎಂಸಿ ಲಾಲ್ ಬಾಗ್ ರವರ ಅಧ್ಯಕ್ಷತೆಯಲ್ಲಿ ನಡೆದ ಧರಣಿಯನ್ನು ಸಿಪಿಐ ಜಿಲ್ಲಾ ಕಾರ್ಯಕಾರಿ ಸದಸ್ಯ

ಕ್ರೀಡಾರಂಗದ ಸಾಧಕ ವಿದ್ಯಾರ್ಥಿ ಆಕಾಶ್ ಗೆ ಶಾಲಾವತಿಯಿಂದ ಸನ್ಮಾನ

ಮಂಜೇಶ್ವರ: ಸರಕಾರಿ ವೃತ್ತಿಪರ ಉನ್ನತ ಪ್ರೌಢಶಾಲೆ ಕುಂಜತ್ತೂರು ಇಲ್ಲಿನ ವಿದ್ಯಾರ್ಥಿ ಆಕಾಶ್ ಕ್ರೀಡಾರಂಗದಲ್ಲಿ ಮಾಡಿದ ಸಾಧನೆಗೆ ಶಾಲಾವತಿಯಿಂದ ಸನ್ಮಾನ ಸಮಾರಂಭವನ್ನು ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. 2022 -23ನೇ ಸಾಲಿನ ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡೋತ್ಸವದಲ್ಲಿ ನಡೆದ ಕಬಡ್ಡಿಯಲ್ಲಿ ಕಾಸರಗೋಡು ಜಿಲ್ಲೆಯ ತಂಡದ ನಾಯಕನಾಗಿ ಆಡಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ, ಹಾಗೂ ಇವರ ಸಾಧನೆಯನ್ನು ಪರಿಗಣಿಸಿ

ಗ್ರೈಂಡರ್‍ ಗೆ ಶಾಲು ಸಿಲುಕಿ ಯುವತಿ ದಾರುಣ ಸಾವು

ಮಂಜೇಶ್ವರ: ಹುಟ್ಟು ಹಬ್ಬದಂದೇ ಗ್ರೈಂಡರ್ ಗೆ ಶಾಲು ಸಿಲುಕಿ ಯುವತಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ್ದಾಳೆ. ತೂಮಿನಾಡು ಲಕ್ಷಂ ವೀಡು ಕಾಲನಿ ನಿವಾಸಿ ರಂಜನ್ ಕುಟ್ಟ ಎಂಬವರ ಪತ್ನಿ ಜಯಶೀಲ ಚುಮ್ಮಿ (20) ಸಾವನ್ನಪ್ಪಿದ ದುರ್ದೈವಿ. ಈಕೆ ತೂಮಿನಾಡಿನಲ್ಲಿರುವ ಬೇಕರಿಯೊಂದರ ನೌಕರಿಯಾಗಿದ್ದು ಎಂದಿನಂತೆ ಬೇಕರಿಗೆ ತೆರಳಿ ಗ್ರೈಂಡರ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಮಧ್ಯೆ ಶಾಲು ಗ್ರೈಂಡರ್ ಗೆ ಸಿಲುಕಿ ದುರಂತ ಸಂಭವಿಸಿದೆ. ಹುಟ್ಟು ಹಬ್ಬದ ದಿನವಾದ ಹಿನ್ನೆಲೆಯಲ್ಲಿ

ಮಂಜೇಶ್ವರ : ವಿವಿಧ ಬೇಡಿಕೆ ಮುಂದಿಟ್ಟು ಪಡಿತರ ವರ್ತಕರಿಂದ ಧರಣಿ

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪಡಿತರ ವರ್ತಕರು ಮಂಜೇಶ್ವರಂ ತಾಲೂಕು ಕಚೇರಿಯಲ್ಲಿ ಧರಣಿ ನಡೆಸಿದರು.ಇ-ಪೆÇೀಸ್ ಮಿಷನ್ ಸರಿಯಾಗಿ ಕೆಲಸ ಮಾಡಲು ವ್ಯವಸ್ಥೆ ಕಲ್ಪಿಸಬೇಕು, ಪಡಿತರ ವರ್ತಕರು ಇ- ಪೋಸ್ ಮಿಷನ್ ಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಕೇರಳ ವಿಧಾನಸಭೆಯಲ್ಲಿ ಸಚಿವರ ದಿಕ್ಕು ತಪ್ಪಿಸುವ ಹೇಳಿಕೆ ಹಿಂಪಡೆಯಬೇಕು, ಪಡಿತರ ವರ್ತಕರ ವೇತನ ಪರಿಷ್ಕರಣೆ ಮಾಡಬೇಕು, ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಕಮಿಷನ್ ನೀಡದೆ ಕಿಟ್ ಕಮಿಷನ್ ವಿಳಂಬ ಮಾಡುವುದನ್ನು

ಕೇರಳಕ್ಕಿಂತ ಕಡಿಮೆ ದರದಲ್ಲಿ ಇಂಧನ ಸಿಗುತ್ತಿದೆ ಎಂಬ ಪ್ಲೆಕ್ಸ್ : ಕೇರಳದಲ್ಲಿ ಭಾರೀ ಪ್ರತಿಭಟನೆ

ಮಂಜೇಶ್ವರ: ಗಡಿಪ್ರದೇಶವಾದ ಕರ್ನಾಟಕ ಪೆಟ್ರೋಲ್ ಪಂಪ್ ಎದುರು ಹಾಕಿರುವ ಪ್ಲೆಕ್ಸ್ ಬೋರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೇರಳಕ್ಕಿಂತ 8 ರೂಪಾಯಿ ಕಡಿಮೆ ದರದಲ್ಲಿ ಇಂಧನ ಸಿಗುತ್ತದೆ ಎಂಬುದಾಗಿ ಫಲಕ ಹಾಕಿರುವುದು ಇದೀಗ ವೈರಲಾಗುತ್ತಿದೆ. ಕೇರಳಕ್ಕೆ ಹೋಲಿಸಿದರೆ ಕರ್ನಾಟಕದ ಡೀಸೆಲ್ ದರ 8 ರೂ. ಹಾಗೂ ಪೆಟ್ರೋಲ್ 5 ರೂಪಾಯಿ ಕಡಿಮೆಯಾಗಿದೆ. ಕೇರಳ ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಎರಡು ರೂಪಾಯಿ ಸೆಸ್ ಹೇರಲಾಗಿದೆ. ಇದು ಏಪ್ರಿಲ್ ನಿಂದ

ಮಂಜೇಶ್ವರ: ಸಾರ್ವಜನಿಕ ಸ್ಥಳಗಳಲ್ಲಿ ತಂದು ತ್ಯಾಜ್ಯ ಸುರಿಯುತ್ತಿರುವ ವಿಚಾರ, ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತು ವ್ಯಾಪ್ತಿಯ 5 ಹಾಗೂ 7ನೇ ವಾರ್ಡ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಯತೀಂ ಖಾನ-ಗೇರುಕಟ್ಟೆ ರಸ್ತೆಯ ಅಂಬಿತ್ತಡಿ, ಹಾರ್ವಾರ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳು ತುಂಬಿ ದುರ್ವಾಸನೆ ಬೀರುತ್ತಿದೆ. ಜನಸಂಚಾರವಿಲ್ಲದ ರಾತ್ರಿ ಸಮಯಗಳಲ್ಲಿ ಇಲ್ಲಿ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಸಾರ್ವಜನಿಕ ಸ್ಥಳ ಹಾಗೂ ರಸ್ತೆ ಬದಿಗಳಲ್ಲಿ ವ್ಯಾಪಕವಾಗಿ ತ್ಯಾಜ್ಯಗಳು