Home ಕರಾವಳಿ Archive by category ಪುತ್ತೂರು (Page 14)

ಅಡ್ಯನಡ್ಕ : ಪ್ರಿಂಟಿಂಗ್ ಪ್ರೆಸ್ ಮಾಲಕ ಬಾವಿಗೆ ಬಿದ್ದುಆತ್ಮಹತ್ಯೆ

ಪುತ್ತೂರು:ಅಡ್ಯನಡ್ಕದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿ ವ್ಯವಹಾರ ನಿರ್ವಹಿಸುತ್ತಿದ್ದ ಪುತ್ತೂರು ಪೋಳ್ಯ ನಿವಾಸಿಯೊಬ್ಬರು ಮನೆ ಸಮೀಪದ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.16ರಂದು ಬೆಳಕಿಗೆ ಬಂದಿದೆ. ಅಡ್ಯನಡ್ಕದಲ್ಲಿ ಅನುಗ್ರಹ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪೋಳ್ಯ ನಿವಾಸಿ ಪದ್ಮಯ್ಯ ಗೌಡ(50ವ)ರವರು ಮೃತಪಟ್ಟವರು.ಪೋಳ್ಯ ದಿ.ಲಿಂಗಪ್ಪ ಗೌಡ ಅವರ

ಶಿಥಿಲಾವಸ್ಥೆಯಲ್ಲಿ ಕರ್ನಾಟಕ-ಕೇರಳ ಸಂಪರ್ಕದ ಕೊಂಡಿ

ಪುತ್ತೂರು; ಎರಡು ಪ್ರಬಲ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವ ಕಿರುಸೇತುವೆಯೊಂದು ಯಾರೂ ಕೇಳುವವರಿಲ್ಲದೆ ಅನಾಥಪ್ರಜ್ಞೆಯಿಂದ ಶಿಥಿಲಗೊಂಡು ಬಳಲುತ್ತಿದೆ. ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬಲಾಡ್ಯವಾಗಿರುವ ಈ ರಾಜ್ಯಗಳ ನಡುವೆ ಈ ಕಿರುಸೇತುವೆಗೆ ಕಾಯಕಲ್ಪವಾಗದೆ ಇಲ್ಲಿ ಸಂಚರಿಸುವ ವಾಹನಗಳಿಗೆ ಮಾರಕ ಪ್ರದೇಶವಾಗಿ ಮಾರ್ಪಟ್ಟಿದೆ. ಸುಮಾರು 42 ವರ್ಷಗಳ ಹಿಂದೆ ನಿರ್ಮಿತವಾಗಿರುವ ಕಿರುಸೇತುವೆಯ ಅನಾಥ ಸ್ಥಿತಿ ಎರಡೂ ರಾಜ್ಯಗಳಿಗೆ ಅರ್ಥವಾಗಿಲ್ಲ. ಎರಡೂ ರಾಜ್ಯಗಳಿಗೆ ಆದಾಯ

ಪುತ್ತೂರು: ಗೃಹರಕ್ಷಕದಳ ಕಛೇರಿ ಕಟ್ಟಡಕ್ಕೆ ಸರಕಾರದಿಂದ ಜಾಗ ಮಂಜೂರು

  ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪುತ್ತೂರು ಘಟಕವು ಸುಮಾರು 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಹೊಸ ಕಛೇರಿ ನಿರ್ಮಿಸುವ ಸಲುವಾಗಿ ಸರಕಾರದಿಂದ 10 ಸೆಂಟ್ಸ್ ಖಾಲಿ ಜಾಗ ಕೊಟೆಚಾ ಸಭಾಂಗಣದ ಸಮೀಪದ ಶಿವನಗರದಲ್ಲಿ ಮಂಜೂರಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಪುತ್ತೂರು ಘಟಕಕ್ಕೆ ಭೇಟಿ ನೀಡಿ ಹೊಸತಾಗಿ ಮಂಜೂರಾದ ಜಾಗದ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತೂರು ಘಟಕದ ಘಟಕಾಧಿಕಾರಿ ಅಭಿಮನ್ಯು ರೈ,

ಕಡಬ : ತಹಸೀಲ್ದಾರ್ ರಮೇಶ್ ಬಾಬು ಅವರಿಗೆ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರು ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ ಹಸನ್ಮುಖಿ ಸೇವೆ ನೀಡಿದಾಗ ಮಾತ್ರ ನಾವು ಮಾಡುವ ಸೇವೆ ಸಾರ್ಥಕವಾಗುತ್ತದೆ ಎಂದು ಕಡಬದಿಂದ ಗುಂಡ್ಲುಪೇಟೆಗೆ ವರ್ಗಾವಣೆಗೊಂಡ ತಹಸೀಲ್ದಾರ್ ಟಿ.ರಮೇಶ್ ಬಾಬು ಹೇಳಿದರು. ಅವರು ಶನಿವಾರ ಕಡಬ ತಾಲೂಕು ಆಡಳಿತ ಸೌಧದಲ್ಲಿ ಇಲ್ಲಿ ಸಿಬ್ಬಂದಿಗಳು ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಂದಾಯ ಇಲಾಖೆಗೆ ಸಾರ್ವಜನಿಕರು ತಮ್ಮ

ಪುತ್ತೂರು : ತುಳು ಲಿಪಿಯಲ್ಲಿ ಭಗವದ್ಗೀತೆ ಬರೆದ ಪುತ್ತೂರಿನ ಮಹಿಳೆ

ಪುತ್ತೂರು : ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎನ್ನುವ ಒತ್ತಾಯಗಳು ಊರ್ಜಿತದಲ್ಲಿರುವ ಸಮಯದಲ್ಲಿ ತುಳು ಭಾಷೆ, ಲಿಪಿಯಲ್ಲಿ ಹಲವಾರು ಕೃತಿಗಳು ಬರಲಾರಂಭಿಸಿದೆ. ನೇಪತ್ಯಕ್ಕೆ ಸರಿದಿದ್ದ ತುಳು ಲಿಪಿಯನ್ನು ಮತ್ತೆ ಪರಿಚಯಿಸುವ ಕಾರ್ಯ ಈಗಾಗಲೇ ನಡೆದಿದ್ದು, ಈ ಸಾಲಿಗೆ ಇನ್ನೊಂದು ಹೊಸ ಪ್ರಯತ್ನ ಸೇರ್ಪಡೆಗೊಂಡಿದೆ. ಭಗವದ್ಧೀತೆಯ 18 ಶ್ಲೋಕ ಮತ್ತು ಸಾರವನ್ನು ತುಳು ಲಿಪಿಯಲ್ಲಿ ಮತ್ತು ಕನ್ನಡ ಲಿಪಿಯ ಮೂಲಕ ತುಳುವಿನಲ್ಲಿ ಬರೆಯಲಾಗಿದ್ದು,

ಮೋಹನ್ ಕೋಡಿಂಬಾಳ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ

ಕಡಬ : ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಕಡಬ ಕದಂಬದ ಮಾಜಿ ಅಧ್ಯಕ್ಷರಾದ ಮೋಹನ್ ಕೋಡಿಂಬಾಳ ರವರಿಗೆ ಜೇಸಿಐ ವಲಯ-15 ನೀಡುವ ಪ್ರತಿಷ್ಠಿತ ‘ಉದ್ಯೋಗ ರತ್ನ’ ಪ್ರಶಸ್ತಿ ಲಭಿಸಿದೆ. ಜೇಸಿಐ ಶಂಕರನಾರಾಯಣ ಘಟಕದ ಆಶ್ರಯದಲ್ಲಿ ಹಾಲಾಡಿಯ ಶಾಲಿನಿ ಜಿ.ಶಂಕರ ಕನ್ವೆನ್ಸನ್‌ ಸೆಂಟರ್‌ನಲ್ಲಿ ನಡೆದ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿಯವರು ಪ್ರಶಸ್ತಿ ವಿತರಿಸಿದರು.

ಮಣಿಪುರದ ಹಿಂಸಾಚಾರ ಖಂಡಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ

ಪುತ್ತೂರು: ಮಣಿಪುರ ರಾಜ್ಯದಲ್ಲಿ ಎರಡು ಜನಾಂಗಗಳ ಮಧ್ಯೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್‍ನಿಂದ ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯ ಬಳಿ ಮೊಂಬತ್ತಿ ಉರಿಸಿ, ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಮಣಿಪುರದ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಮೆರುಗಿಗೆ ಕುಂದುಂಟಾಗಿದೆ. ಹಿರಿಯರ ದೂರದರ್ಶಿತದ ಚಿಂತನೆಗಳ ಮಣ್ಣು

ಪುತ್ತೂರು ಗ್ರಾ.ಪಂ ಉಪ ಚುನಾವಣೆ ಫಲಿತಾಂಶ ಪ್ರಕಟ – ಪುತ್ತಿಲ ಪರಿವಾರ ಜಯಭೇರಿ

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಗ್ರಾ ಪಂ ವಾರ್ಡ್‍ಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಒಂದು ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಆರ್ಯಾಪು ಕ್ಷೇತ್ರದಲ್ಲಿ ಪುತ್ತಿಲ ಪರಿವಾರದಿಂದ ಕಣಕ್ಕಿಳಿದಿದ್ದ ಸುಬ್ರಹ್ಮಣ್ಯ ಬಲ್ಯಾಯ ಅವರು ವಿಜಯಿಯಾಗಿದ್ದಾರೆ. ಬಲ್ಯಾಯ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು ಅವರನ್ನು ಸೋಲಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ರುಕ್ಮಾ ನಾಯ್ಕ

ಜವಾಬ್ದಾರಿ ಮೆರೆದ ಪತ್ರಕರ್ತರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯಿಂದ ಯಾವುದೇ ವಾಹನಗಳು ಮುಂದಕ್ಕೆ ಸಾಗುವಂತಿಲ್ಲ. ಕಳೆದ ಎರಡು ದಿನಗಳಿಂದ ಇದೇ ಪರಿಸ್ಥಿತಿ ಇದ್ದು ಈ ರಸ್ತೆಯಲ್ಲಿ ಸಾಗುವವರು ಬಳ್ಪ ಗ್ರಾಮದಿಂದ ಗುತ್ತಿಗಾರು ಮಾರ್ಗವಾಗಿ

ಕರಾವಳಿಯಲ್ಲಿ ಭಾರೀ ಮಳೆ- ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ನೀರು ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ಅಡಚನೆ ಉಂಟಾಯಿತು.      ಕುಮಾರಧಾರ ನದಿಯಲ್ಲಿ ಭಾರೀ ನೀರು ಹೆಚ್ಚಳದಿಂದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಇಲ್ಲಿನ ಲಗೇಜ್ ಕೊಠಡಿ, ಶೌಚಾಲಯ ಎಲ್ಲವೂ ಮುಳುಗಡೆಯಾಗಿದೆ.  ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ