Home ಕರಾವಳಿ Archive by category ಪುತ್ತೂರು (Page 16)

ಪುತ್ತೂರು : ನಕಲಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲ ಪತ್ತೆ

ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ. ಕೊಡಿಪ್ಪಾಡಿ ನಿವಾಸಿ ವಿಶ್ವನಾಥ ದಂಧೆ ನಡೆಸುತ್ತಿದ್ದ ವ್ಯಕ್ತಿ. ನಗರ ಸಭೆ ನಿರಾಕ್ಷೇಪಣಾ ಪತ್ರ, ತೆರಿಗೆ ರಶೀದಿ, ಪುತ್ತೂರು ಎಲ್ಲಾ ಪಂಚಾಯಿತಿ ಕಡಬ,

ಕಡಬ: ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಯುವ ಬ್ರಿಗೇಡ್‌ನಿಂದ ಸರಕಾರಕ್ಕೆ ಮನವಿ

ಕಡಬ: ಟಿ.ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ಯುವ ಬ್ರಿಗೇಡ್‌ನ ವೇಣುಗೋಪಾಲ್ ಹಾಗೂ ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅವರ ಬರ್ಭರ ಹತ್ಯೆಯನ್ನು ಖಂಡಿಸಿ ಮತ್ತು ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಕಡಬ ಯುವಬ್ರಿಗೇಡ್ ವತಿಯಿಂದ ಮನವಿ ಸಲ್ಲಿಸಲಾಯಿತು. ಕಡಬ ಉಪತಹಸೀಲ್ದಾರ್ ಮನೋಹರ ಕೆ.ಟಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಎರಡು ಹತ್ಯೆಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವಂತೆ ಮಾಡಿದ್ದು ಭಯದ ವಾತಾವರಣ

ಉಚಿತ ಯೋಜನೆಗಳಿಂದ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ : ಪುತ್ತೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಪುತ್ತೂರು: ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದಿಂದ ಖಾಸಗಿ ವಾಹನ ಚಾಲಕ-ಮಾಲಕರಿಗೆ, ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ಕಷ್ಟ-ನಷ್ಟ ಹಾಗೂ ಉಚಿತ ಯೋಜನೆಗಳಿಂದ ಆಹಾರ ವಸ್ತುಗಳಿಗೆ ಮತ್ತು ಇತರ ವಸ್ತುಗಳಿಗೆ ಬೆಲೆ ಏರಿಕೆಯಿಂದ ಜನ ಸಮಾನ್ಯರಿಗೆ ಉಂಟಾಗುವ ತೊಂದರೆಯನ್ನು ವಿರೋಧಿಸಿ ಕರ್ನಾಟಕ ಕಾರ್ಮಿಕ ಸಂಘಗಳ ಒಕ್ಕೂಟ ಅನುರಾಗ ವಠಾರ ಇದರ ಆಶ್ರಯದಲ್ಲಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಕಾರ್ಮಿಕ ಸಂಘಗಳ

ಚಿಕ್ಕೋಡಿ ಜೈನ ಮುನಿಯ ಹತ್ಯೆ ಪ್ರಕರಣ : ಕಡಬದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಕಡಬ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಕ್ಷೇತ್ರದಲ್ಲಿ ವಾಸ್ತವ್ಯವಿದ್ದ ಆಚಾರ್ಯ ಮುನಿಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಿರುವುದು ಖಂಡನೀಯ. ಈ ಹೇಯ ಕೃತ್ಯ ಮಾಡಿದ ಹಂತಕರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿ.ಹಿಂ.ಪ. ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಆಗ್ರಹಿಸಿದರು. ಅವರು ಕಡಬದ ಮುಖ್ಯ ರಸ್ತೆಯಲ್ಲಿ ಕಡಬ ಪ್ರಖಂಡ ವಿ.ಹಿಂ.ಪ, ಬಜರಂಗದಳ, ಮಾತೃಶಕ್ತಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ

ಯುವ ವಾಹಿನಿ ಪುತ್ತೂರು ಘಟಕದಿಂದ ಬಿಲ್ಲವ ವಧು-ವರಾನ್ವೇಷಣೆ-2023

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ (ರಿ) ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬಿಲ್ಲವ ವಧು ವರಾನ್ವೇಷಣೆ-೨೦೨೩  ಪುತ್ತೂರಿನ ಬಪ್ಪಳಿಗೆಯ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ಉದ್ಘಾಟಿಸಿದರು. ಮದುವೆಯಾಗುವ ಯುವಕ ಯುವತಿಯರಿಗೆ ವೇದಿಕೆಯನ್ನು ಕಲ್ಪಿಸುವ ಕೆಲಸವನ್ನು ಯುವವಾಹಿನಿ ಘಟಕ ಮಾಡುತ್ತಿದೆ. ಈ

ವಿನಯ್ ಕುಮಾರ್ ಸೊರಕೆ ರವರ ತಾಯಿ ಅಸೌಖ್ಯದಿಂದ ನಿಧನ || VINAY KUMAR SORAKE’S MOTHER PASSESD AWAY

ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆದಂತಹ ವಿನಯ್ ಕುಮಾರ್ ಸೊರಕೆ ರವರ ತಾಯಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ. ಇವರು ಮೂರು ಜನ ಪುತ್ರರು,ಎರಡು ಜನ ಪುತ್ರಿಯರು, ಎಂಟು ಮೊಮ್ಮಕ್ಕಳು,ಹಾಗೂ ಮೂರು ಮರಿ ಮಕ್ಕಳನ್ನು ಅಗಲಿದ್ದಾರೆ.ಇವರ ಅಂತ್ಯ ಸಂಸ್ಕಾರವನ್ನು ಇಂದು ಮದ್ಯಾಹ್ನ 1.30 ರ ನಂತರ ತಮ್ಮ ಸ್ವಗೃಹವಾದ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆ ಯಲ್ಲಿ ನಡೆಯುವುದು ಎಂದು ತಿಳಿಸಲಾಗಿದೆ.

Subramanya : ಭಾರೀ ಮಳೆಗೆ ಮುಳುಗಡೆಯಾದ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಇರುವ ಕುಮಾರ ಧಾರ ನದಿ ಉಕ್ಕಿ ಹರಿಯುತ್ತಿದೆ. ನದಿಯಲ್ಲಿ ರಭಸದಿಂದ ನೀರು ಹರಿಯುತ್ತಿರುವುರಿಂದ ಪವಿತ್ರ ಸ್ನಾನ ಘಟ್ಟ ಮುಳುಗಡೆಯಾಗಿದೆ.ಹೀಗಾಗಿ ಭಕ್ತಾದಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ದ.ಕ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಹಾನಿಯಾಗಿರುವ ಬಗ್ಗೆಯೂ ವರದಿಯಾಗಿದೆ.ಈಗಾಗ್ಲೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ನೈಸರ್ಗಿಕ ವಿಕೋಪ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್

ಪುತ್ತೂರು : ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿದ ಬಾವಿ

ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪುತ್ತೂರಿನಲ್ಲಿ ಭಾರೀ ಭೂಕುಸಿತ ಉಂಟಾದ ಘಟನೆ ನಡೆದಿದೆ. ಮನೆ ಮಂದಿ ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಬಾವಿ ಕುಸಿದಿದ್ದು, ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ಘಟನೆ ನಡೆದಿದೆ. ಬಾವಿ ಕುಸಿದ ಹಿನ್ನಲೆಯಲ್ಲಿ ಹೊಸ ಮನೆಯೂ ಕುಸಿಯುವ ಅಪಾಯದಲ್ಲಿದೆ. ಬಪ್ಪಳಿಕೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯಾಗಿದ್ದು, ಭೂ ಕುಸಿತದಿಂದಾಗಿ ಪರಿಸರದ ಜನ ಆತಂಕದಲ್ಲಿದ್ದಾರೆ. ಅಗ್ನಿಶಾಮಕ ದಳ ದವರು ಮನೆ ಮಂದಿಯನ್ನು

ಮಣಿಪುರ ಗಲಭೆ ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲ : ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿಕೆ

ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಗಲಭೆ ನಡೆಯುತ್ತಿದ್ದು, 100 ಕ್ಕೂ ಮಿಕ್ಕಿದ ಜನ ಸಾವನ್ನಪ್ಪಿದ್ದು, ಗಲಭೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿದರು. ಪುತ್ತೂರು ಪ್ರೆಸ್‍ಕ್ಲಬ್ ನಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ ಮಿಥೈ ಮತ್ತು ಕುಕ್ಕೀ ಜನಾಂಗಗಳ ಮಧ್ಯೆ ನಿರಂತರ ಗಲಭೆ

ಪುತ್ತೂರಿನ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆ : ಸಂಚಾರ ನಿಷೇಧ

ಪುತ್ತೂರು: ಕರಾವಳಿಯಾದ್ಯಂತ ಭಾರೀ ಮಳೆಯಾಗಿದ್ದು, ಪುತ್ತೂರಿನಲ್ಲಿ ಸುರಿದ ಮಳೆಗೆ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಪುತ್ತೂರು- ಪಾಣಾಜೆ- ಪೆರ್ಲ ಸಂಪರ್ಕಿಸುವ ರಸ್ತೆ ಚೆಳ್ಯಡ್ಕ ಎಂಬಲ್ಲಿ ಈ ಸೇತುವೆಯಿದ್ದು, ಮಳೆಗಾಲ ಸಂದರ್ಭದಲ್ಲಿ ಹೆಚ್ಚಿನ ಸಮಯ ಈ ಸೇತುವೆ ಮುಳುಗಡೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಮೊದಲ ಬಾರಿಗೆ ಈ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾದ ಹಿನ್ನಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಶೇಧಿಸಲಾಗಿದ್ದು, ಆ ಭಾಗದ