Home ಕರಾವಳಿ Archive by category ಪುತ್ತೂರು (Page 20)

kadaba : ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿ

ಕಡಬ : ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯದ ಮೂಲಕ ಬೆಂಗಳೂರಿಗೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ಅನಿಲ ಎಂಬಲ್ಲಿ ರಸ್ತೆ

ಕಡಬ : ವಿದ್ಯುತ್ ಲೈನ್‍ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್‍ಮ್ಯಾನ್ ಸಾವು

ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಮೆಸ್ಕಾಂ ಲೈನ್‍ಮ್ಯಾನ್ ಬಾಗಲಕೋಟೆ ಮೂಲದ ದ್ಯಾಮಣ್ಣ ದೊಡ್ಮನಿ ಮೃತಪಟ್ಟವರು. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ

ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಸ್ಕೂಲ್ – ವೆಲ್ಕಂ ಡೇ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಸ್ಕೂಲ್, ಮಾಣಿಯ ವಿದ್ಯಾನಗರದಲ್ಲಿರುವ ಈ ಶಾಲೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಹೆಸರುವಾಸಿಯಾದ ಸಂಸ್ಥೆ. ಇದೀಗ ಈ ಶಾಲೆಯಲ್ಲಿ ನಾಳೆ ವೆಲ್ಕಂ ಡೇ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಟ್ರಸ್ಟ್ನ ಅಧ್ಯಕ್ಷ ಪ್ರಹಲ್ಲಾದ್ ಶೆಟ್ಟಿ ಜೆ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಕ್ತಿ ಎಜುಕೇಶನಲ್ ಟ್ರಸ್ಟ್ನ ಸ್ಥಾಪಕ ಡಾ ಕೆಸಿ ನಾಯ್ಕ್,

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ “ಯಕ್ಷಸಿಂಚನ”- ಯಕ್ಷಗಾನ ಕಲಾ ಸಂಘ ಉದ್ಘಾಟನೆ

ಪುತ್ತೂರು : ಅಕ್ಷಯ ಕಾಲೇಜಿನ ಯಕ್ಷಗಾನ ಕಲಾ ಸಂಘ ಯಕ್ಷಸಿಂಚನ ಉದ್ಘಾಟನೆಗೊಂಡಿತು, ಉದ್ಘಾಟಕರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ ಖ್ಯಾತ ಭಾಗವತರು ಹನುಮಗಿರಿ ಯಕ್ಷಗಾನ ಮೇಳ, ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದರು. ಗೆಜ್ಜೆಗಿರಿ ಮೇಳದ ಪ್ರಧಾನ ಭಾಗವತರಾದ ಗಿರೀಶ್ ರೈ ಕಕ್ಕೆಪದವು ಅವರು ಮುಖ್ಯ ಅಥಿತಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಖ್ಯಾತ ಭಾಗವತರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ

ಪುತ್ತೂರು : ಹಾಡಹಗಲೇ ಮನೆಯೊಂದರಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು

ಪುತ್ತೂರು : ಹಾಡು ಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಗ್ರಾಮದ ಕುಂಟ್ಯಾನ ಸದಾಶಿವ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮೌನೀಶ್ ಅವರ ಮನೆಯಿಂದ ಕಳ್ಳತನ ನಡೆದಿದೆ. ಸೋಮವಾರ ಬೆಳಿಗ್ಗೆ ಮನೆಮಂದಿ ಮನೆಗೆ ಬೀಗ ಹಾಕಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು.ಮಧ್ಯಾಹ್ನ 12 ಗಂಟೆಯ ವೇಳೆಗೆ ಹಿಂತಿರುಗಿ ಬಂದಾಗ ಮನೆಯ

ಪೊಲೀಸ್ ದೌರ್ಜನ್ಯ ಮಾಡಿಸಿದ್ದು ಯಾರೆಂದು ರಾಜ್ಯಕ್ಕೆ ಗೊತ್ತಿದೆ : ಶಾಸಕ ಅಶೋಕ್ ಕುಮಾರ್ ರೈ

ಪತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ. ಮಾಹಿತಿ ಬಂದ ಕೂಡಲೇ ಕೊಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಇನ್ನು ಮಳೆಗಾಲ ಎದುರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಂತ ಹಂತವಾಗಿ

ದಾಖಲೆಗಾಗಿ ಅಲೆದಾಡಿಸುತ್ತಿದ್ದ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು : ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಅಲೆಡಾಡಿಸುತ್ತಿದ್ದ ವಿಚಾರ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ತೆರಳಿದ್ದರು. ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ತಾಕೀತು ಮಾಡಿದ್ದಾರೆ. ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು, ಬಡವರಿಗೆ

ಕಡಬ – ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಕಡಬದ ಆಲಂಕಾರು ಶ್ರೀ ದುರ್ಗಾಂಬಾ ಜನರಲ್ ಸ್ಟೋರ್‍ನ ಮಾಲಕ, ಆಲಂಕಾರು ನಿವಾಸಿ ಚಂದ್ರಶೇಖರ ಪೂಜಾರಿ ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯಲ್ಲಿ ಚೀಟಿ ಬರೆದು ತನ್ನ ಕಾರಿನಲ್ಲಿ ಶಾಂತಿಮೊಗರುಗೆ ಹೋದವರು ಅಲ್ಲಿ ಸೇತುವೆ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ

ಫೇಸ್ಬುಕ್‍ನಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರ ನಿಂದನೆ -ಪರಸ್ಪರ ವಾಗ್ವಾದ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಪೇಸ್ಬುಕ್‍ನಲ್ಲಿ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿ ರೈ ಅಭಿಮಾನಿಗಳು ಹಾಗೂ ಯುವಕನ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಸುಳ್ಯ ತಾಲೂಕಿನ ಜಯನಗರ ನಿವಾಸಿ ಪ್ರಮೀತ್ ಎಂಬಾತ ಶಾಸಕರನ್ನು ಫೇಸ್ಬುಕ್‍ನಲ್ಲಿ ನಿಂದಿಸಿರುವ ಹಿನ್ನೆಲೆಯಲ್ಲಿ ರಾತ್ರಿ ಅವರ ಮನೆಗೆ ರೈ ಅಭಿಮಾನಿಗಳ ತಂಡ ಭೇಟಿ ನೀಡಿ ಮಾತುಕತೆ ನಡೆಸುವ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ವಾಗ್ವಾದ ನಡೆದಿದೆ. ಪುತ್ತೂರು ಪೋಲಿಸ್ ದೌರ್ಜನ್ಯ

ರಸ್ತೆ ಕಾಮಗಾರಿ ಅವ್ಯವಸ್ಥೆ – ಪುತ್ತೂರು ಶಾಸಕರಿಂದ ಅಧಿಕಾರಿಗಳಿಗೆ ತರಾಟೆ

ಪುತ್ತೂರು: ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬವಾದ ಕಾರಣಕ್ಕೆ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅಧಿಕಾರಿ ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದ ಶಾಸಕ ಅಶೋಕ್ ಕುಮಾರ್ ರೈ, ಡ್ರೈನೇಜ್ ಮತ್ತು ಡಿವೈಡರ್ ಕಾಮಗಾರಿ ಅವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲ ಆರಂಭವಾದರೂ ಡ್ರೈನೇಜ್ ಸಮಸ್ಯೆ ಪರಿಹಾರ ಆಗದಿರುವುದು ಮತ್ತು ಮೂರು ವರ್ಷದಿಂದ ಕಾಮಗಾರಿ