ಸವಣೂರು: ಕೋವಿಡ್ ಪಾಸಿಟಿವ್ ಬಂದವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ಸೇರಿಸಬೇಕು.ಹೋಂ ಐಸೋಲೇಶನ್ ನಿಂದ ಇತರರಿಗೆ ಹರಡುವ ಸಾಧ್ಯತೆ ಜಾಸ್ತಿ.ಆದ್ದರಿಂದ ಕಡ್ಡಾಯವಾಗಿ ಪಾಸಿಟಿವ್ ಬಂದವರನ್ನೂ ಕೇರ್ ಸೆಂಟರ್ ಗೆ ಸೇರಿಸಬೇಕು. ಕುರಿತು ಎಲ್ಲರೂ ಗಮನಹರಿಸಬೇಕೆಂದು ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಸವಣೂರು ಗ್ರಾ.ಪಂ.ನಲ್ಲಿ ಕೋವಿಡ್ ಕಾರ್ಯಪಡೆಯ ವರದಿ
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ವಿನೂತನ ಯೋಜನೆಯ ಅಂಗವಾಗಿ ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ – ಕುರಿಯ ನೇತೃತ್ವದಲ್ಲಿ ಹಡಿಲು ಗದ್ದೆಯನ್ನು ಬೇಸಾಯ ಮಾಡಬೇಕು ಎನ್ನುವ ಕೋರಿಕೆಯ ಮೇರೆಗೆ ಕುರಿಯ ಗ್ರಾಮದ ಮುಳಿಯ ಶ್ಯಾಮ ಭಟ್ ಅವರ ಕುಟುಂಬದ ಗದ್ದೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಕೃಷಿ ಆಂದೋಲನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ
ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ದಂದೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಜನರಿಗೆ ಹೇಳಿ ಹೊಡೆಸುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಈ ಮುನ್ನ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ
ವಿಟ್ಲ: ವಿಟ್ಲದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ನಿರ್ಣಯದಂತೆ ಶನಿವಾರ ಮತ್ತು ಭಾನುವಾರ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿದ್ದು, ಶನಿವಾರ ವಿಟ್ಲ ಪೇಟೆ ಸಂಪೂರ್ಣವಾಗಿ ಸ್ತಬ್ಧ ಗೊಂಡಿದೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳು ಬಂದ್ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಯಾವುದೇ ಅಂಗಡಿಗಳು ಬಾಗಿಲು ತೆರೆದಿಲ್ಲ. ಜನರು ಪೇಟೆಗೆ ಕಾಲಿಟ್ಟಿಲ್ಲ. ತುರ್ತು ಅವಶ್ಯಕತೆ ತೆರಳುವರಿಗೆ ವಿನಾಯಿತಿ
ಪುತ್ತೂರು: ಮೂರು ತಿಂಗಳ ಹಿಂದೆ ಪುತ್ತೂರಿನ ಚಿನ್ನಾಭರಣ ಮಳಿಗೆಯಿಂದ ಕಳವಾದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಂದ ಕಳವು ಸೊತ್ತುಗಳನ್ನು ವಶ ಪಡಿಸುವ ಕಾರ್ಯಾಚರಣೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಸ್ಕರಿಯ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ. ಪ್ರಶಂಸನಾ ಪತ್ರದೊಂದಿಗೆ ರೂ. 1ಸಾವಿರ ನಗದು ನೀಡಲಾಗಿದ್ದು, ಪುತ್ತೂರ ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ಅವರು ಪ್ರಶಾಂಸನಾ ಪತ್ರವನ್ನು ಸ್ಕರಿಯ ಅವರಿಗೆ
ಕಡಬ: ಕೊಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ಕಾಡಂಚಿನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಕೃಷಿ ತೋಟಗಳಿಗೆ ದಾಳಿಮಾಡಿ ಹಾನಿಯುಂಟು ಮಾಡುತ್ತಿವೆ. ಕೃಷಿ ತೋಟಗಳಲ್ಲಿ ಕಾಡಾನೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಪಿಲಿಕಜೆ ಎಂಬಲ್ಲಿ ಪಿ.ಸಿ.ಸುಂದರ ಗೌಡ ಎಂಬುವರ ತೋಟಕ್ಕೆ ಲಗ್ಗೆಯಿಟ್ಟ ಆನೆ ಅಡಕೆ, ತೆಂಗು, ಕೊಕ್ಕೋ, ಬಾಳೆ ಮೊದಲಾದ ಕೃಷಿಯನ್ನು ನಾಶಪಡಿಸಿದೆ. ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಈ ಭಾಗದ ರೈತರು
ಪುತ್ತೂರು: ಕೋವಿಡ್ ಸೋಂಕಿನ ನಿಯಂತ್ರಣದಲ್ಲಿ ಪುತ್ತೂರು ಶಾಸಕರ ವಾರ್ರೂಮ್ ಮೂಲಕ ನಡೆಯುವ ಉತ್ತಮ ಕಾರ್ಯವೈಖರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ರವರು ಪುತ್ತೂರು ಶಾಸಕರ ವಾರ್ರೂಮ್ಗೆ ಕೋವಿಡ್ ಸೋಂಕಿತ ರೋಗಿಗಳ ಆರೈಕೆಗಾಗಿ 5 ಕೃತಕ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರವನ್ನು ಹಸ್ತಾಂತರಿಸಿದರು. ಶಾಸಕ ಸಂಜೀವ ಮಠಂದೂರುರವರು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಮಾತುಕತೆ
ಬೈಕ್ ಮತ್ತು ಒಮ್ನಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಹೊರವಲಯ ಬನ್ನೂರಿನಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿ ಮೋನಪ್ಪ ಗೌಡ ಎಂಬವರ ಪುತ್ರ ಧನಂಜಯ ಗೌಡ ಗಾಯಗೊಂಡ ಬೈಕ್ ಸವಾರ. ಅಪಘಾತವೂ ಬನ್ನೂರಿನ ಆಯೋಧ್ಯಾನಗರದ ಶಿವಪಾರ್ವತಿ ಮಂದಿರ ಬಳಿ ಸಂಭವಿಸಿದೆ.ಗಾಯಾಳುವನ್ನು ಸ್ಥಳೀಯರಾದ ಹಂಝ ಮತ್ತು ರಫೀಕ್ ಬಾಂಬೆ ಎಂಬವರು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಕರಿಸಿದ್ದಾರೆ. ವಿವೇಕಾನಂದ ಕಾಲೇಜು – ಪಡೀಲ್ ರಸ್ತೆಯಲ್ಲಿ
ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಲು ಪುತ್ತೂರು ನಗರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರಸಭಾ ವಿಶೇಷ ಸಾಮಾನ್ಯ ಸಭೆಯು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷರು ಹೊರಗುತ್ತಿಗೆ ಕಾರ್ಮಿಕರು ತಮ್ಮನ್ನು ನೇರ ನೇಮಕಾತಿ ಗೊಳಿಸುವಂತೆ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ
ಪರಿಶಿಷ್ಟ ಜಾತಿ ಘಟಕ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಬ್ಲಾಕ್ ಕಾಂಗ್ರೆಸ್ ಸಮಿತಿ ಪುತ್ತೂರು ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷರು, ಯುವ ದಲಿತ ನಾಯಕರಾದ ಅಭಿಷೇಕ್ ಬೆಳ್ಳಿಪ್ಪಾಡಿ ಭಾರತದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪೆಟ್ರೋಲ್ ಬೆಲೆ 100ರ ಗಡಿ ದಾಟಿ