ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕ್ ಮಾಡಿದ ಹಿನ್ನಲೆಯಲ್ಲಿ ತುರ್ತಾಗಿ ಹೋಗುವ ಆಂಬ್ಯುಲೆನ್ಸ್ಗೆ ಅಡ್ಡಿಯಾದ ಘಟನೆ ನಡೆದಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿ ಒಂದು ಕಡೆ ಕೋವಿಡ್ ಲಸಿಕೆ ನೀಡಿಕೆ ಮತ್ತೊಂದು ಕಡೆ ಉತ್ತಮ ಸೇವೆ ಸಿಗುವ ಹಿನ್ನಲೆಯಲ್ಲಿ ಸರಕಾರಿ ಆಸ್ಪತ್ರೆಗೆ ದಿನದಿಂದ ದಿನಕ್ಕೆ ಸಾರ್ವಜನಿಕರ
ಪುತ್ತೂರು: ಸಂಗೀತ, ನೃತ್ಯ, ಬರೆಹ, ಹಾಡುಗಾರಿಕೆ, ಕಥೆ, ಕವನ, ಯಕ್ಷಗಾನ ಹೀಗೆ ಬಹುಮುಖ ಪ್ರತಿಭೆಯಾಗಿರುವ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರ ಪ್ರತಿಭೆಯನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ದಾಖಲಿಸಿಕೊಂಡಿದೆ. ಭರತನಾಟ್ಯದಲ್ಲಿ ವಿಶಿಷ್ಟ ಆಸಕ್ತಿಯನ್ನು ಹೊಂದಿರುವ ಅವರು 23 ನಿಮಿಷದಲ್ಲಿ 20 ವಿಭಿನ್ನ ತಾಳ ಭರತನಾಟ್ಯದಲ್ಲಿ ಹಲವು ಪರಿಕಲ್ಪನೆಗಳನ್ನು ಇಟ್ಟುಕೊಂಡು ಮುನ್ನಡೆಯುತ್ತಿರುವ ಮಂಜುನಾಥ ಅವರು ಎರಡು ಕೈಗಳಿಂದ
ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ
ಉಪ್ಪಿನಂಗಡಿ: ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದ ಗದಗ ಮೂಲದ ಕಾರ್ಮಿಕ ಕುಟುಂಬದ ಬಾಲಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ, ಮೀನಾಕ್ಷಿ ದಂಪತಿ ಮಕ್ಕಳಾದ ನಿಂಗರಾಜು (16), ಸತೀಶ್ (14) ಮೃತಪಟ್ಟವರು. ನಿಂಗರಾಜು ಗದಗ ಮುರಾರ್ಜಿ ದೇಸಾಯಿ ವಸತಿ ಶಾಲೆ ಹತ್ತನೇ ತರಗತಿ ವಿದ್ಯಾರ್ಥಿ. ಸತೀಶ 8 ನೇ ತರಗತಿಯಲ್ಲಿ ಕಲಿಯುತ್ತಿದ್ದ. ವಿದ್ಯಾರ್ಥಿಗಳು
ಪುತ್ತೂರು: ಇಂಧನ ಬೆಲೆ ಏರಿಕೆಯ ಪ್ರಸ್ತುತ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತೈಲ ಬಾಂಡ್ ಬಗ್ಗೆ ಸುಳ್ಳು ಹೇಳಿಕೆಯನ್ನು ಪ್ರಚಾರ ಪಡಿಸಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾ ಜನರಿಗೆ ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಸಂಯೋಜಕರಾದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಅವರು ಪುತ್ತೂರಿನ ರೋಟರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ನಡೆದ `ಪೆಟ್ರೋಲ್ ಬೆಲೆ ಏರಿಕೆ-ಆಯಿಲ್
ಪುತ್ತೂರು: ಮನೆಯ ಸಮೀಪದ ಗುಡ್ಡೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಕೆಮ್ಮಿಂಜೆಯ ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ರೂ. 26,118 ಮೌಲ್ಯದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಕೆಮ್ಮಿಂಜೆ ಗ್ರಾಮದ ನೈತಾಡಿ ದಿ.ಬಟ್ಯಪ್ಪ ಪೂಜಾರಿ ಅವರ ಪುತ್ರ ಬಾಬು ಪೂಜಾರಿ(48ವ) ಮತ್ತು ಕಲ್ಲಗುಡ್ಡೆ ನಿವಾಸಿ ಚಲ್ಲ ಎಂಬವರ ಪುತ್ರ
ಪುತ್ತೂರು: ಪೊರ್ತು ಕಂತ್ಂಡ್ ಓ ಎರು ಮಗನೇ…ಇದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದಲ್ಲೇ ಹಡೀಲು ಬಿದ್ದ ಗದ್ದೆಯಲ್ಲಿ ಭಾನುವಾರ ಕೇಳಿಬಂದ ಸಂಧಿಯ ಕೆಲವು ಸಾಲು.ಶಾಸಕ ಸಂಜೀವ ಮಠಂದೂರು ಅವರು ಉಟ್ಟಿದ್ದ ಪಂಚೆಯನ್ನು ಎತ್ತಿಕಟ್ಟಿ, ಗದ್ದೆಗೆ ಇಳಿದು, ಎತ್ತುಗಳನ್ನು ಕಟ್ಟಿದ್ದ ನೇಗಿಲನ್ನು ಕೈಗೆ ತೆಗೆದುಕೊಳ್ಳುತ್ತಿದ್ದಂತೆ, ಉಳುಮೆ ಮಾಡುತ್ತಿದ್ದ ಬೇಸಾಯಗಾರರ ಉತ್ಸಾಹ ನೂರ್ಮಡಿಗೊಂಡಿತು. ಸಂಧಿಯ ಸಾಲುಗಳು ಪುಂಖಾನು ಪುಂಖವಾಗಿ ಗದ್ದೆಯ ತುಂಬಾ
ಪುತ್ತೂರು: ಹನಿಟ್ರ್ಯಾಪ್ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲೂ ಬೆಳಕಿಗೆ ಬಂದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ವೃತ್ತಿಯಲ್ಲಿ ಸೇಲ್ಸ್ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ (25)ಎಂಬವರು ಹನಿಟ್ರ್ಯಾಪ್ಗೆ ಬಲಿಯಾಗಿ ರೂ.30 ಲಕ್ಷ
ಪುತ್ತೂರು: ಬೆಂಗಳೂರಿನ ಭಟ್ ಬಯೋಟೆಕ್ ಹಾಗೂ ತಾಲೂಕಿನ ಶಾಂತಿಗೋಡು ಗ್ರಾಮದ ನವಚೇತನ ರಿಟೈರ್ಮೆಂಟ್ ಟೌನ್ಶಿಪ್ ವತಿಯಿಂದ ಇಲ್ಲಿಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಐದು ಆಮ್ಲಜನಕ ಕಾನ್ಸಂಟ್ರೇಟರ್ ಹಾಗೂ ಎರಡು ಸಾವಿರ ವಿಟಿಎಂ ಕಿಟ್ಗಳನ್ನು ಕೊಡುಗೆಯಾಗಿ ನೀಡಲಾಯಿತು.ಸರಳ ಕಾರ್ಯಕ್ರಮದಲ್ಲಿ ಭಟ್ ಬಯೋಟೆಕ್ ಸಂಸ್ಥೆಯ ಡಾ.ಶ್ಯಾಮ್ ಭಟ್ ಶಾಸಕ ಸಂಜೀವ ಮಠಂದೂರು ಅವರಿಗೆ ಆಮ್ಲಜನಕ ಕಾನ್ಸಂಟ್ರೇಟರ್ನ್ನು ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು,
ಪುತ್ತೂರು: ಪುತ್ತೂರಿನ ಹೃದಯಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆ ಜು.೧ರಂದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಪ್ರತಿಮೆಯ ತಲೆಗೆ ಟೀ ಶರ್ಟ್ನ್ನು ಇಟ್ಟು ಗಾಂಧೀಜಿಯನ್ನು ಅವಮಾನಗೊಳಿಸಿದ್ದಾರೆ. ಪುತ್ತೂರಿನ ಗಾಂಧಿ ಕಟ್ಟೆ ಸಮಿತಿಯವರು ಪುತ್ತೂರು ನಗರ ಪೊಲೀಸ್ ಠಾಣೆಗೆ ಘಟನೆಯ ಬಗ್ಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ.