Home ಕರಾವಳಿ Archive by category ಬಂಟ್ವಾಳ (Page 19)

ಬಂಟ್ವಾಳ : ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ: ವಿಶ್ರಾಂತ ಸರಕಾರಿ ನೌಕರರಿಗೆ, ಸಾಧಕರಿಗೆ ಅಭಿನಂದನೆ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ ಮತ್ತು ವಿಶ್ರಾಂತ ಸರಕಾರಿ ನೌಕರರಿಗೆ  ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು 2021-22 ನೇ ಸಾಲಿನ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ.

ಸರಪಾಡಿ ರಥಬೀದಿ ಬಳಿ ಧರೆಗುರುಳಿದ ಅಶ್ವತ್ಥ ಮರ : ಪಾವಡದ ರೀತಿ ತಪ್ಪಿದ ಅನಾಹುತ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿದ್ದ ಬೃಹತ್ ಗಾತ್ರದ ಅರಳಿ ಮರ(ಅಶ್ವತ್ಥ)ವೊಂದು ಗುರುವಾರ ಬೆಳೆಗ್ಗೆ ಧರೆಗುರುಳಿದ್ದು, ಮರ ವಿದ್ಯುತ್ ತಂತಿಯ ಮೇಲೆ ಬಿದ್ದು 5-6 ವಿದ್ಯುತ್ ಕಂಬಗಳು ಧರೆಗುರುಳಿರುವ ಜತೆಗೆ ರಸ್ತೆಗೆ ಬಿದ್ದ ಪರಿಣಾಮ ಕೆಲವೊತ್ತು ಸಂಚಾರ ವ್ಯತ್ಯಯ ಉಂಟಾಯಿತು. ಬೆಳ್ಳಗ್ಗಿನ ಹೊತ್ತು ಜನಸಂಚಾರ ಹಾಗೂ ವಾಹನ ಸಂಚಾರ ಹೆಚ್ಚಿರುವ ಸಮಯವಾದರೂ, ದೇವರ ಪವಾಡದ ರೀತಿಯಲ್ಲಿ ಯಾವುದೇ ಜೀವಹಾನಿ ಉಂಟಾಗಿಲ್ಲ. ಕಳೆದೆರಡು ದಿನಗಳಲ್ಲಿ

ಕನ್ನಡ ಸಾಹಿತ್ಯ ಸಮ್ಮೇಳನ : ಬಹಿರಂಗ ಅಧಿವೇಶನ; ನಿರ್ಣಯ (ಠರಾವು) ಮಂಡನೆ

ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಬಹಿರಂಗ ಅಧಿವೇಶನ ನಡೆಯಿತು.  ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಹಾಗೂ ಗೌರವ ಕೋಶಾಧ್ಯಕ್ಷ ಬಿ. ಐತಪ್ಪನಾಯ್ಕ ಹತ್ತು ನಿರ್ಣಯಗಳನ್ನು ಮಂಡಿಸಿದರು: ಜಿಲ್ಲೆಯಲ್ಲಿ ಮಂಜೂರಾದ ಕನ್ನಡ ಭವನಗಳ

ಬಿ.ಸಿ.ರೋಡಿನ ಪ್ರಿಯಾ ಎಲೆಕ್ಟ್ರಾನಿಕ್ಸ್‍ನಲ್ಲಿ ಅಗ್ನಿ ಅವಘಡ

ಬಂಟ್ವಾಳ: ಬಿ.ಸಿ.ರೋಡ್ ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಫರ್ನಿಚರ್ಸ್ ಮತ್ತು ಕೊಮಾಕಿ ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಾಳಿಗೆಯಲ್ಲಿ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ದಟ್ಟವಾಗಿದ್ದು, ವ್ಯಾಪಕವಾಗಿ ಹರಡುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಹಲವಾರು ಜನ ಜಮಾವಣೆಗೊಂಡಿದ್ದು, ನಂದಿಸುವ

ನಂದಾವರ ಅಷ್ಟಬಂಧ ಬ್ರಹ್ಮಕಲಶೋತ್ಸವ :ಅದ್ಧೂರಿಯಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಡಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿ ಹೊರೆಕಾಣಿಕೆ ಮೆರವಣಿಗೆಗೆ ಮಾರ್ನಬೈಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಚಾಲನೆ ನೀಡಿದರು. ಮಾರ್ನಬೈಲು ಮುಖ್ಯ ರಸ್ತೆಯ ಮೂಲಕ ದೇವಸ್ಥಾನಕ್ಕೆ ಸಾಗಿ ಬಂದ ಮೆರವಣಿಗೆಗೆ ಗೊಂಬೆ ಕುಣಿತ,

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯಕ್ ಅವರ ನೇತೃತ್ವ ದಲ್ಲಿ ನಡೆಯಲಿರುವ ಗ್ರಾಮ ವಿಕಾಸಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಿಮಿಸಿರುವ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದರು. ದೇವಳದ ಆಡಳಿತಮಂಡಳಿ

ಬಂಟ್ವಾಳಕ್ಕೆ ಭೇಟಿ ನೀಡಿದ 13 ದೇಶಗಳ ರೋಟರಿ ಸದಸ್ಯರು

ಬಂಟ್ವಾಳ: ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ 13 ದೇಶಗಳ 41 ಮಂದಿ ರೋಟರಿ ಸದಸ್ಯರು ಬಂಟ್ವಾಳ ರೋಟರಿ ಕ್ಲಬ್‍ಗೆ ಭೇಟಿ ನೀಡಿದರು.ಬೈಕ್ ನಲ್ಲಿ ಆಗಮಿಸಿದ ರೋಟರಿ ಸದಸ್ಯರನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮತ್ತವರ ತಂಡ ಬಿ.ಸಿ.ರೋಡಿನ ರೋಟರಿ ಸಭಾಂಗಣದ ಬಳಿ ಬರಮಾಡಿಕೊಂಡರು. ಬಳಿಕ ನಡೆದ ಜಂಟಿ ಸಭೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರು ರೋಟರಿ ಕ್ಲಬ್ ಬಂಟ್ವಾಳದ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು.ಈ

ಬಂಟ್ವಾಳ: ಧಾರ್ಮಿಕ, ಸಾಮಾಜಿಕ, ಧುರೀಣ ಕೊಡುಗೈದಾನಿ ಕೆ.ಸೇಸಪ್ಪ ಕೋಟ್ಯಾನ್ ನಿಧನ

ಬಂಟ್ವಾಳ: ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿಯಾಗಿರುವ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್(75)ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದು, ಇವರ ಮೃತದೇಹವನ್ನು ಇಂದು (ಜ. 27) ಬೆಳಗ್ಗೆ 9ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೃತರ ಸ್ವಗೃಹ ಪಚ್ಚಿನಡ್ಕದ ಶುಭ ನಿಲಯದಲ್ಲಿ ಇಡಲಾಗುತ್ತಿದ್ದು, ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.

ಎಸ್.ಡಿ.ಎಂ ಅಂಗಳದಲ್ಲಿ ಧ್ವಜಾರೋಹಣ: ಸಂಸ್ಕøತಿ ವೈವಿಧ್ಯತೆಯ ಅನಾವರಣ

ಉಜಿರೆ, ಜ 26: ಉಜಿರೆಯ ಎಸ್.ಡಿ.ಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣವು ದೇಶದ ವೈವಿಧ್ಯತೆ, ಶಿಸ್ತುಬದ್ಧತೆ ಮತ್ತು ಸಾಂಸ್ಕøತಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸಿತು. ಗಣರಾಜ್ಯೋತ್ಸವ ದಿನದ ಅಂಗವಾಗಿ ಕಾಲೇಜಿನ ಎನ್.ಸಿ.ಸಿ ವಿಭಾಗದ ಎಲ್ಲಾ ಕೆಡೆಟ್‍ಗಳ ಶಿಸ್ತುಬದ್ಧ ಪಾಲ್ಗೊಳ್ಳುವಿಕೆ ಮುಖ್ಯ ಆಕರ್ಷಣೆಯಾಗಿತ್ತು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಧ್ವಜಾರೋಹಣವನ್ನು ನೆರವೇರಿಸಿದರು.

ಮಾಣಿಯ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆರಾಧ್ಯ ದೈವ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮಂಗಳೂರು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮೀಜಿಯವರಿಂದ ಪ್ರತಿಷ್ಠಾಪಿಸಲ್ಪಟ್ಟು, ಮಂಗಳೂರು ಪ್ರಾಂತ್ಯದ ಹವ್ಯಕ ಸಮುದಾಯ ಮತ್ತು ಸಮಸ್ತ ಸಮಾಜದ ಶ್ರದ್ಧಾಕೇಂದ್ರವಾಗಿ ಐದು ದಶಕಗಳಿಂದ ಮನೆ ಮಾತಾಗಿರುವ ಮಾಣಿಯ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆರಾಧ್ಯ ದೈವ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿ