ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ, ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು
ಬಂಟ್ವಾಳದ ಅಮ್ಟೂರು ಗ್ರಾಮದ ಕರಿಂಗಾಣದಲ್ಲಿರುವ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಶ್ರೀ ಮಂತ್ರದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವವು ಫೆ.10 ಮತ್ತು 11 ರಂದು ನಡೆಯಲಿದೆ. ಕಟ್ಟೆಮಾರು ಶ್ರೀ ಮಂತ್ರದೇವತಾ ಸಾನಿಧ್ಯ.. ಬೇಡಿ ಬಂದ ಭಕ್ತರ ಇಷ್ಟರ್ಥಗಳನ್ನು ಈಡೇರಿಸೋ ಪುಣ್ಯ ಕ್ಷೇತ್ರ.. ಕ್ಷೇತ್ರದಲ್ಲಿ ಇದೇ ಬರುವ ಫೆ.೧೦ರಂದು ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರದೇವತೆ ದೈವದ ವೈಭವದ ವಾರ್ಷಿಕ ಕೋಲೋತ್ಸವಹಾಗೂ ೧೧ರಂದು
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ ಮಾಡಿಲ್ಲ. ಈ ಬಜೆಟ್ ಪ್ರಾದೇಶಿಕತೆಯನ್ನು ಮರೆತಿದೆ. ವಲಯಗಳನ್ನು ಕಡೆಗಣಿಸಿದೆ. ವರ್ಗಗಳನ್ನು ನಿರ್ಲಕ್ಷ್ಯ
ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ
ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಅವಧೂತ ವಿನಯ ಗುರೂಜಿ, ಕಲ್ಲಡ್ಕ ಪ್ರಭಾಕರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ: ಬೆಂಕಿ ಅವಘಡಕ್ಕೆ ಸಿಕ್ಕಿ ದಂಪತಿ ಸುಟ್ಟು ಮೃತಪಟ್ಟ ಘಟನೆ ಬಂಟ್ವಾಳದ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಗಿಲ್ಬರ್ಟ್ ಕಾರ್ಲೋ ( 78) ಹಾಗೂ ಕ್ರಿಸ್ಟಿನಾ ಕಾರ್ಲೋ ( 70) ಮೃತಪಟ್ಟ ದುರ್ದೈವಿಗಳು. ಮನೆಯ ಪಕ್ಕ ಕಸ ಕಡ್ಡಿಗೆ ಹಾಕಿದ ಬೆಂಕಿ ವ್ಯಾಪಿಸಿ ಮನೆಯ ಸಮೀಪದ ಕಾಡನ್ನು ಆವರಿಸಿದ ವೇಳೆ ಅದನ್ನು ನಂದಿಸಲು ತೆರಳಿದ ವೃದ್ದ ದಂಪತಿಗಳು ಬೆಂಕಿಗೆ ಸಿಕ್ಕಿ ಸುಟ್ಟು ಹೋಗಿದ್ದಾರೆ. ಮೃತರಿಗೆ 3
ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ದಿನಾಂಕ; 11-01-2024 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:03/2024 ಕಲಂ: 395, 397, 411 ಭಾ.ದಂ.ಸಂ. ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26),
ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ಕ್ಷೇತ್ರದಲ್ಲಿ ದರ್ಶನ ಬಲಿಸೇವೆಯು ನಡೆಯಿತು. ಜನವರಿ 14 ರಂದು ಧ್ವಜರೋಹಣ ಮೂಲಕ ವರ್ಷಾವಧಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅದೇ ದಿನ ರಾತ್ರಿ ಲಕ್ಷದೀಪೋತ್ಸವ, ಉತ್ಸವ ಬಲಿ, ಪ್ರತಿನಿತ್ಯ ರಾತ್ರಿ ನಿತ್ಯೋತ್ಸವ ನಡೆಯುತ್ತಿದೆ. 18ರಂದು ಕೇಪುನಿಂದ ಶ್ರೀ ಮಲರಾಯ ದೈವದ ಭಂಡಾರ ಆಗಮಿಸಿ, ರಾತ್ರಿ ಬಯ್ಯದ ಬಲಿ ನಡೆದಿದೆ. ಜ.20ರಂದು ಹೂತೇರು
ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆ ಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು
ಬಂಟ್ವಾಳ: ಕಳೆದ 3 ದಶಕಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿಗೆ ಅವರ ನಿವೃತ್ತಿ ವೇಳೆ ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಸುಮಾರು 2 ಲಕ್ಷ ಹತ್ತು ಸಾವಿರ ರೂ. ವೌಲ್ಯದ 33 ಗ್ರಾಂನ ಬಂಗಾರದ ಮಾಲೆ ಉಡುಗೊರೆಯಾಗಿ ನೀಡಿದ ಅಪರೂಪದ ಘಟನೆ ಪಾಣೆ ಮಂಗಳೂರಿನ ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜಯಲಕ್ಷ್ಮೀ ಆರ್. ಭಟ್ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ