Home ಕರಾವಳಿ Archive by category ಮಂಗಳೂರು (Page 101)

ಮಂಗಳೂರು- ರಾಷ್ಟ್ರೀಯ ಶಿಕ್ಷಣ ನೀತಿ : ವಿಚಾರ ಸಂಕಿರಣ

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಒಳಿತಾಗುವುದೇ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ಭಾನುವಾರ ನಡೆಯಿತು.ಅಖಿಲ ಭಾರತ ಯುಜನ ಒಕ್ಕೂಟ , ಸಮದರ್ಶಿ ವೇದಿಕೆ , ಕರ್ನಾಟಕ ಥಿಯೋಲಾಜಿಕಲ್ ರಿಸರ್ಜ್ ಇನ್ಸಿಟ್ಯೂಟ್ ಸಹಯೋUದÀಲ್ಲಿ ವಿಚಾರಗೋಷ್ಠಿಯನ್ನು ನಡೆಯಿತು. ಹೊಸತು ಪತ್ರಿಕೆಯ ಸಂಪಾದಕ ಡಾ.ಸಿದ್ಧನಗೌಡ ಪಾಟೀಲ ಅವರ ಅಧ್ಯಕ್ಷತೆಯಲ್ಲಿ

ಶೂದ್ರ ಶಿವ ನಾಟಕಕ್ಕೆ ಚಾಲನೆ, ರುದ್ರ ಥೇಟರ್ ಪ್ರಸ್ತುತ ಪಡಿಸಿದ ನಾರಾಯಣ ಗುರುಗಳ ಇತಿಹಾಸ ಬಿಂಬಿಸುವ ನಾಟಕ

ಮಂಗಳೂರಿನ ರುದ್ರ ಥೇಟರ್ ಪ್ರಸ್ತುತ ಪಡಿಸಿದ ಶೂದ್ರ ಶಿವ ನಾಟಕದ ಪಥಮ ಪ್ರದರ್ಶನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ರವಿವಾರ ನಡೆಯಿತು. ಶೂದ್ರ ಶಿವ ನಾಟಕದ ಪ್ರಥಮ ಪ್ರದರ್ಶನವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅವರು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಪರಿಚಯಿಸುವ ಈ ನಾಟಕವನ್ನು ಖ್ಯಾತ ಯುವ ನಿರ್ದೇಶಕ ವಿದ್ದು ಉಚ್ಚಿಲ್ ಅವರು ನಿದೇರ್ಶನ ಮಾಡಿದ್ದಾರೆ. ಬಾಬು ಶಿವ

ಕಾಲಭೈರವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

ಸಂ. ಕ. ಸಮಾಚಾರ, ಮಂಗಳೂರು: ಧರ್ಮ, ಸಂಸ್ಕøತಿಯೊಂದಿಗೆ ಪರಿಸರವನ್ನು ರಕ್ಷಿಸಿ ಉಳಿಸುವ ಮೂಲಕ ಜಗತ್ತನ್ನು ಉಳಿಸುವ ಕೆಲಸವಾಗಬೇಕಿದೆ ಎಂದು ಜಿ. ಆರ್. ಮೆಡಿಕಲ್ ಕಾಲೇಜು ಹಾಗೂ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ಹೇಳಿದರು.ನಗರದ ಕದ್ರಿಯಲ್ಲಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಅಂಗವಾಗಿ ಶನಿವಾರ ಸಂಜೆ ಗೋರಕ್ಷನಾಥ ವೇದಿಕೆಯಲ್ಲಿ ನಡೆದ ಧಾರ್ಮಿಕ

ಮಂಗಳೂರು -ಜುವೆಲ್ಯರಿಶಾಪ್ ಕೊಲೆ ಪ್ರಕರಣ, ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರ ಬಹಿರಂಗ

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್

ಕಂಬಳ ಕ್ರೀಡೆಯನ್ನು ರಾಜ್ಯದ ಪ್ರಮುಖ ಕ್ರೀಡೆಯಾನ್ನಾಗಿಸಲು ಜಿಲ್ಲಾಡಳಿತ ಸಿದ್ಧ : ಜಿಲ್ಲಾಧಿಕಾರಿ ರವಿಕುಮಾರ್ ಎಂ

ಜಿಲ್ಲೆಯ ರೈತಾಪಿ ಜನರ ಜನಪದ ಕಂಬಳ ಕ್ರೀಡೆಗೆ ಸರಕಾರದ ಸಂಪೂರ್ಣ ಸಹಕಾರವಿದ್ದು, ಕ್ರೀಡೆಯನ್ನು ಸರಕಾರದ ವತಿಯಿಂದ ನಡೆಸಲಾಗುತ್ತಿದ್ದು, ಕಂಬಳ ಕ್ರೀಡೆಯನ್ನು ರಾಜ್ಯದ ಪ್ರಮುಖ ಕ್ರೀಡೆಯನ್ನಾಗಿಸಲು ಜಿಲ್ಲಾಡಳಿತ ಸದಾ ಸಿದ್ಧ. ಶ್ರೀಘದಲ್ಲಿಯೇ ಕಂಬಳೋತ್ಸವಕ್ಕೆ ಸರಕಾರದಿಂದ 2ಕೋಟಿ ಅನುದಾನ ನಿಗಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದರು. ಅವರು ಇತಿಹಾಸ ಪ್ರಸಿದ್ದ ಐಕಳಬಾವ ಕಾಂತಾಬಾರೆ ಬೂದಬಾರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ

ಆದ್ಯಪಾಡಿ: ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ
ಮಹಾ ಚಂಡಿಕಾಯಾಗ, ಧಾರ್ಮಿಕ ಸಭೆ

ದೇವರು ನಮಗೆ ನೀಡಿರುವ ಮನುಷ್ಯ ಜೀವನ ಪಾವನಗೊಳಿಸಲು ದೇವರ ಆರಾಧನೆ ಜೊತೆಗೆ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಮತ್ತಿತರ ಉತ್ಸವಗಳಲ್ಲಿ ಕಾಯಾ ವಾಚಾ ಮನಸಾ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಉಳ್ಳಾಲ ಉಳಿಯ ಧರ್ಮರಸು ಉಳ್ಳಾಲ್ತಿ ಕ್ಷೇತ್ರ ಧರ್ಮದರ್ಶಿ ದೇವು ಮೂಲ್ಯಣ್ಣ ಹೇಳಿದ್ದಾರೆ.ಇಲ್ಲಿನ ಪ್ರಸಿದ್ದ ಆದ್ಯಪಾಡಿ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ

ಫೈವ್ ಸ್ಟಾರ್ಸ್ ಯಂಗ್ ಬಾಯ್ಸ್ (ರಿ )ಅಡ್ಡೂರು ಮತ್ತು ಎಂ. ಜಿ. ಎಂ. ತಾಲೀಮ್ ಸ್ಪೋರ್ಟ್ಸ್ (ರಿ )ಗುರುಪುರ : ತಾಲಿಮ್ ಪ್ರದರ್ಶನ ಸಭೆ ಉದ್ಘಾಟನೆ

ಫೈವ್ ಸ್ಟಾರ್ಸ್ ಯಂಗ್ ಬಾಯ್ಸ್ (ರಿ )ಅಡ್ಡೂರು ಮತ್ತು ಎಂ. ಜಿ. ಎಂ. ತಾಲೀಮ್ ಸ್ಪೋರ್ಟ್ಸ್ (ರಿ )ಗುರುಪುರ ಇವರುಗಳ ಜಂಟಿ ಆಶ್ರಯದಲ್ಲಿ ನಡೆದ ಸಭೆ ಮತ್ತು ತಾಳಿಮು ಪ್ರದರ್ಶನ ಸಭೆಯನ್ನು ಉದ್ಘಾಟಿಸಿದ ಮುಹಮ್ಮದ್ ಬಡೂರ್ ರವರನ್ನು ಎರಡೂ ಸಂಘಟನೆಗಳು ಸನ್ಮಾನಿದ ಸಂದರ್ಭದಲ್ಲಿ. ಕೆ ಪಿ ಸಿ ಸಿ ಜನರಲ್ ಸೆಕ್ರೆಟರಿ ಇನಾಯತ್ ಅಲಿ, ಎಸ್ ಡಿ ಪಿ ಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ, ದ ಕ ಜಿಲ್ಲಾ ಮದ್ರಸ ಮೆನೇಜ್ಮೆಂಟ್ ಕಮಿಟಿ ಅಧ್ಯಕ್ಷರು ಎಂ […]

ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವರ್ಣ ಬಿಂದು ಪ್ರಶಾನ

ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ ವತಿಯಿಂದ ಫೆ.5ರಂದು ಬೆಳಿಗ್ಗೆ 7 ಗಂಟೆಯಿAದ ಸಂಜೆ 6 ಗಂಟೆಯವರೆಗೆ ಸ್ವರ್ಣ ಬಿಂದು ಪ್ರಾಶನವನ್ನು ನೀಡಲಾಗುತ್ತಿದೆ. ನಗರದ ವೆಲೇನ್ಸಿಯಾ ಮತ್ತು ಕದ್ರಿ ಶಾಖೆಯಲ್ಲಿ ಸ್ವರ್ಣ ಬಿಂದು ಪ್ರಾಶನ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಕ್ಕಳಿಗಾಗಿ ಈ ಲಸಿಕೆಯನ್ನು ನೀಡಲಾಗುತ್ತಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 0824 2434 666, 9632008444, 9632007444 ಗೆ ಸಂಪರ್ಕಿಸಬಹುದು.

ರಾಷ್ಟ್ರೀಯ ಶಿಕ್ಷಣ ನೀತಿ – 2020 : ವಿಚಾರ ಸಂಕಿರಣ ಉಪನ್ಯಾಸ ಮತ್ತು ಮುಕ್ತ ಸಂವಾದ

ಶಿಕ್ಷಣದ ಸುಧಾರಣೆಗಾಗಿ ಭಾರತ ಸರಕಾರವು 2020ರಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಒಳಿತನ್ನುಂಟು ಮಾಡಿದೆಯೇ? ಇದುವರೆಗಿನ ಸಾಧನೆಗಳೇನು? ಬಾಧಕಗಳೇನು? – ಇತ್ಯಾದಿ ಜಿಜ್ಞಾಸೆಗಳು ಶೈಕ್ಷಣಿ ವಲಯದಲ್ಲಿ ಮೂಡಿದ್ದು, ಇದರ ಸಲುವಾಗಿ ಚರ್ಚಿಸಲು ಉಪನ್ಯಾಸ ಮತ್ತು ಮುಕ್ತ ಸಂವಾದವನ್ನು ಮೇಲಿನ ಮೂರು ಸಂಘಟನೆಗಳ ಆಶಯದಲ್ಲಿ ಹಮ್ಮಿಕೊಳ್ಳಲಾಗಿದೆ. 5-2-2023 ಬೆಳಿಗ್ಗೆ 9-30ರಿಂದ ದಿನಪೂರ್ತಿ ಜರಗುವ ಈ ಕಾರ್ಯಕ್ರಮದಲ್ಲಿ ಶಿಕ್ಷಕರು, ಶಿಕ್ಷಣ

ಇಂದು ಕಾಂತಾಬಾರೆ ಬೂದಾಬಾರೆ ಜೋಡುಕರೆ ಕಂಬಳ

ಕಿನ್ನಿಗೋಳಿ: ಕಂಬಳವು ಕರಾವಳಿ ಭಾಗದ ಒಂದು ಅಚ್ಚುಮೆಚ್ಚಿನ ಜಾನಪದ ಕ್ರೀಡೆಯಾಗಿದ್ದು ಇದು ಜನರ ಜೀವನದ ಅಂಗವಾಗಿದೆ. ನಮ್ಮ ತುಳುನಾಡಿನ ಕೃಷಿ ಮತ್ತು ಸಾಂಸ್ಕೃತಿಕ ಬದುಕಿನ ಅವಿಭಾಜ್ಯ ಭಾಗವಾಗಿದ್ದು ಕಂಬಳದಿಂದ ನಮ್ಮ ಸಂಸ್ಕೃತಿ ಉಳಿಯುವುದರ ಜತೆಗೆ ಪ್ರಾಣಿ ಪ್ರೀತಿಯೂ ಹೆಚ್ಚಾಗುತ್ತದೆ. ಎಂದು ಆಧ್ಯಾತ್ಮ ಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಶ್ರೀಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಹೇಳಿದರು. ಅವರು ಕಿನ್ನಿಗೋಳಿ ಸಮೀಪದ ಐಕಳದಲ್ಲಿ ನಡೆಯುವ