Home ಕರಾವಳಿ Archive by category ಮಂಗಳೂರು (Page 110)

ಕರಾವಳಿಯ ಸೌಹಾರ್ದತೆ ಸಾರುವ ಪವಿತ್ರ ಪುಣ್ಯ ಕ್ಷೇತ್ರ, ಬಿಕರ್ನಕಟ್ಟೆಯ ಬಾಲ ಯೇಸು ಮಂದಿರ

ಕರಾವಳಿಯಲ್ಲಿರುವ ಆ ಪವಿತ್ರ ಪುಣ್ಯ ಕ್ಷೇತ್ರ ಸೌಹಾರ್ದತೆಯ ಪಾಠ ಮಾಡ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಅಲ್ಲಿಗೆ ಸರ್ವಧರ್ಮದ ಭಕ್ತರ ದಂಡೇ ಹರಿದು ಬಂದಿದೆ. ಅಷ್ಟಕ್ಕೂ ಕರಾವಳಿಯಲ್ಲಿ ಸೌಹಾರ್ದತೆ ಸಾರ್ತಿರೋ ಆ ಪುಣ್ಯಕ್ಷೇತ್ರ ಯಾವುದು? ಅಲ್ಲಿನ ವಾರ್ಷಿಕ ಜಾತ್ರಾ ಸಂಭ್ರಮ ಹೇಗಿದೆ ಅಂತೀರಾ! ಮಂಗಳೂರಿನ ಬಿಕರ್ನಕಟ್ಟೆಯ ಆ ಬಾಲ ಯೇಸು ಮಂದಿರ ಸೌಹಾರ್ದತೆಯ ಪಾಠ

ಪಚ್ಚನಾಡಿ ಬೆಂಕಿ ಅವಘಡ : ಬಯೋ ಮೈನಿಂಗ್ ಕಾಮಗಾರಿ ಪೂರ್ಣಗೊಳಿಸಲು 4 ವರ್ಷ ಬೇಕು – ಮೇಯರ್ ಜಯಾನಂದ ಅಂಚನ್

ಪಚ್ಚನಾಡಿಯ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆರಂಭಿಸಿರುವ ತ್ಯಾಜ್ಯಗಳ ಬಯೋ ಮೈನಿಂಗ್ ಕಾಮಗಾರಿಯನ್ನು ಪೂರ್ಣಗೊಳಿಸಲು ನಾಲ್ಕು ವರ್ಷ ಅಗತ್ಯವಿದೆ. ಆದರೆ ಈ ಕಾಮಗಾರಿಯನ್ನು ತ್ವರಿತಗೊಳಿಸಿ ಮೂರು ವರ್ಷಗಳ ಅವಧಿಯೊಳಗೆ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ. ಮಂಗಳವಾರ ತನ್ನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ

ಪುರುಷೋತ್ತಮ ಪೂಜಾರಿ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ, 5 ಲಕ್ಷ ರೂ. ನೀಡುವ ಭರವಸೆ

ಮಂಗಳೂರಿನ ನಾಗರಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಕಳೆದ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದರು ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋರಿಕ್ಷಾ ನೀಡುವುದಾಗಿ ಶಾಸಕರು ಭರವಸೆ ನೀಡಿದರು ಎಆರ್‍ಟಿಓ ಸ್ಥಳಕ್ಕೆ ಕರೆಯಿಸಿ ಪರ್ಮಿಟ್ ವ್ಯವಸ್ಥೆ ಮಾಡುವಂತೆಯೂ ಸೂಚಿಸಿದರು ಒಂದು ವಾರದೊಳಗೆ ಹೊಸ ರಿಕ್ಷಾ ದಾಖಲೆ

ಪುತ್ತೂರು : ಯುವತಿಗೆ ಚೂರಿ ಇರಿದು ಕೊಲೆ ಪ್ರಕರಣ, ಆರೋಪಿ ಉಮೇಶ್ ಎಂಬಾತನ ಬಂಧನ

ಪುತ್ತೂರು: ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಎಂಬಲ್ಲಿ 23ರ ಹರೆಯದ ಯುವತಿಯನ್ನು ಮನೆಯ ಅಂಗಳದಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕನಕಮಜಲಿನ ಅಂಗಾರ ಎಂಬವರ ಪುತ್ರ ಉಮೇಶ್ ಎಂದು ಗುರುತಿಸಲಾಗಿದೆ. ಉಮೇಶ್ ಜಯಶ್ರೀಯನ್ನು ಪ್ರೀತಿಸುತ್ತಿದ್ದು, ಬಿ.ಎಸ್.ಸಿ ಪದವೀಧರೆಯಾದ ಜಯಶ್ರೀ ಇತ್ತೀಚೆಗೆ ಅವನ ಗುಣ ನಡತೆ ಇಷ್ಟವಾಗದ ಕಾರಣ 2022ರ ನವೆಂಬರ್ ವೇಳೆಗೆ ಉಮೇಶನನ್ನು ದೂರ

ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಬಿಡುಗಡೆ

ವಾದಿರಾಜ್ ಉಪ್ಪೂರ್ ನಿರ್ದೇಶನದ ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಕಳೆದ ಶುಕ್ರವಾರ ಬಿಡುಗಡೆ ಗೊಂಡಿತು. ಹಿರಿಯ ನಿರ್ದೇಶಕ ಕೃಷ್ಣಪ್ಪ ಉಪ್ಪೂರು , ಸಾಹಿತಿ ಯಶವಂತ್ ಬೋಳೂರು , ಯೋಗೀಶ್ ಕಾಂಚನ್ , ಚಿತ್ರದ ನಾಯಕ , ನಾಯಕಿ , ಮುಂತಾದವರು ಪಾಲ್ಗೊಂಡಿದ್ದರು.

ಬೈಕ್ ಸ್ಕಿಡ್ : ಪಣಂಬೂರು ಐಎಂಸಿ ಉದ್ಯೋಗಿ ಸಾವು

ಮಂಗಳೂರು: ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಪಣಂಬೂರಿನ ಐಎಂಸಿ( ಇಂಡಿಯನ್ ಮೊಲಾಸೆಸ್ ಕಂಪೆನಿ)ಯ ನಾಲ್ಕನೇ ಟರ್ಮಿನಲ್ ಉದ್ಯೋಗಿ ಇಂದು ಪಡೀಲ್ ನ ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಮಾರಿಪಳ್ಳ ನಿವಾಸಿ ಮಾಜಿ ಸೈನಿಕರ ಪುತ್ರ ಸುಜಿತ್ ರಾಜ್ (28) ಸಾವನ್ನಪ್ಪಿದವರು. ಜ.16 ರಂದು ರಾತ್ರಿ ಪಾಳಿ ಕರ್ತವ್ಯ ಮುಗಿಸಿ 9 ಕ್ಕೆ ಪಣಂಬೂರಿನಿಂದ ಮಾರಿಪಳ್ಳ ದ ಮನೆ ಕಡೆಗೆ ಹಿಂತಿರುಗುತ್ತಿದ್ದ ಸಂದರ್ಭ

2022 ನೇ ಸಾಲಿನ ವಿಮಲಾ ವಿ. ಪೈ ವಿಶ್ವ ಕೊಂಕಣಿ ಪುರಸ್ಕಾರ ಪ್ರಕಟ

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ಅಖಿಲ ಭಾರತ ಮಟ್ಟದ ಕೊಂಕಣಿ ಸಾಹಿತ್ಯ ಪ್ರಶಸ್ತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ 2021, ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರ 2021 ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಸಮ್ಮಾನ 2022 ಗಳ ಪ್ರಕಟಣೆಯಾಗಿದೆ. ವರ್ಷದ ಅತ್ಯುತ್ತಮ ಕೊಂಕಣಿ ಸಾಹಿತ್ಯ ಕೃತಿಗೆ ನೀಡಲಾಗುವ ಶ್ರೀಮತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ 2022 […]

ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು : ‘ಕೃಷ್ಣ ಗಾರುಡಿ’ ಮತ್ತು ‘ಜಾಂಬವತಿ’ ಎಂಬ ಕಥಾನಕ ಪ್ರದರ್ಶನ

ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಇವರ ಪ್ರೊತ್ಸಾಹದೊಂದಿಗೆ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಇದೇ ಬರುವ ಜನವರಿ 22 ರಂದು ಸಂಜೆ 4 ರಿಂದ ರಾತ್ರಿ 10 ರವರೆಗೆ ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳವಾಗಿರುವ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳ, ಇವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ‘ಕೃಷ್ಣ ಗಾರುಡಿ’ ಮತ್ತು

ಯೋಗೇಶ್ವರ ಮಠ ಕಾಲಭೈರವ ದೇವಸ್ಥಾನ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

ಮಂಗಳೂರು: ಫೆ.3 ರಿಂದ 6 ರವರೆಗೆ ನಡೆಯಲಿರುವ ನಗರದ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ ಇಂದು ನೆರವೇರಿತು.ಚಾಲನೆ ನೀಡಿ ಮಾತನಾಡಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಯೋಗೇಶ್ವರ ಮಠಾಧೀಶ ಶ್ರೀ ರಾಜಯೋಗಿ ನಿರ್ಮಲನಾಥಜೀ ಮಾರ್ಗದರ್ಶನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ನೆರವೇರಲಿದೆ. ಕದ್ರಿ ಜಾತ್ರೋತ್ಸವದ ಈ ಸುಸಂದರ್ಭದಲ್ಲಿ ಚಪ್ಪರ ಮುಹೂರ್ತ

ರೆನಾಲ್ಟ್ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ ; ಗ್ರಾಹಕರಿಗೆ ಆಫರ್ ಗಳ ಸುರಿಮಳೆ

ನೀವು ಏನಾದ್ರೂ ಕಾರು ಖರೀದಿ ಮಾಡುವ ಪ್ಲಾನ್‍ನಲ್ಲಿದ್ದೀರಾ…. ಹಾಗಾದ್ರೆ ನಿಮಗೆ ರೆನಾಲ್ಟ್ ಒಳ್ಳೆಯ ಆಫರ್ ಕೊಡ್ತಾ ಇದೆ. ಈಗಾಗಲೇ ಹಲವಾರು ಆಫರ್‍ಗಳನ್ನ ನೀಡುತ್ತಾ ಬಂದಿರುವ ರೆನೋ ಮಂಗಳೂರು , ಇದೀಗ ಮತ್ತೊಮ್ಮೆ ಗ್ರಾಹಕರಿಗೆ ಆಫರ್ ಸುರಿಮಳೆ ನೀಡ್ತಾ ಇದೆ.ರೆನ್ಟಾಲ್ ಗ್ರಾಹಕರ ಅಚ್ಚುಮೆಚ್ಚಿನ ಕಾರು.. ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ರೆನಾಲ್ಟ್ ಭರ್ಜರಿ ಆಫರ್‍ಗಳನ್ನು ನೀಡಲು ಸಜ್ಜಾಗಿದೆ. ರೆನಾಲ್ಟ್ ಕಾರಿನ ಮೇಲೆ ಡಿಸ್ಕೌಂಟ್