Home ಕರಾವಳಿ Archive by category ಮಂಗಳೂರು (Page 124)

ಡಿ.16ರಂದು ವಿಐಪಿಸ್ ಲಾಸ್ಟ್ ಬೆಂಚ್ ಸಿನಿಮಾ ರಿಲೀಸ್ : ಡಿ.10 ಪಣಂಬೂರು ಕಡಲ ಕಿನಾರೆಯಲ್ಲಿ ಪ್ರಮೋಷನ್

ಎ.ಎಸ್. ಪ್ರೋಡಕ್ಷನ್ ಅಡಿಯಲ್ಲಿ ತಯಾರಾದ ಅದ್ಧೂರಿ ತುಳು ಚಲನಚಿತ್ರ ವಿಐಪಿಸ್ ಲಾಸ್ಟ್ ಬೆಂಚ್ ಇದರ ಪ್ರೊಮೋಷನ್ ಕಾರ್ಯಕ್ರಮ ನಡೆಯಲಿದ್ದು, ಇದರ ಜೊತೆಗೆ ಡಾ. ಶಿವರಾಜ್‍ಕುಮಾರ್ ನಟನೆಯ ವೇದ ಸಿನಿಮಾದ ಪ್ರೀ ರಿಲೀಸ್ ಈವೆಂಟ್‍ನ ಅದ್ಧೂರಿ ಮನೋರಂಜನಾ ಕಾರ್ಯಕ್ರಮ ಡಿಸೆಂಬರ್ 10ರಂದು ಮಂಗಳೂರಿನ ಕಡಲ ಕಿನಾರೆಯಲ್ಲಿ ನಡೆಯಲಿದೆ ಎಂದು ಎ. ಎಸ್

ಆಶ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮಾತ್ ರ ಹುಟ್ಟುಹಬ್ಬ ದ ಸಂಭ್ರಮಾಚರಣೆ

ಬಿಜೆಪಿಯ ರಾಜ್ಯಧ್ಯಕ್ಷರು ಹಾಗೂ ಸಂಸದರಾದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಹಾಗೂ ಜನಪ್ರಿಯ ಶಾಸಕರು, ಬಡವರ ಬಂಧು, ಜನ ನಾಯಕ ಮಾನ್ಯ ಶ್ರೀ ಡಿ ವೇದವ್ಯಾಸ್ ಕಾಮತ್ ರವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಶ್ರದ್ದಾನಂದ ಆಶ್ರಮ ಆರ್ಯ ಸಮಾಜ ಹಾಗೂ ಭಗಿನಿ ಸಮಾಜ ಅನಾಥಾಶ್ರಮದ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಿ ಮಕ್ಕಳ ಸಮ್ಮುಖದಲ್ಲಿ ಶಾಸಕರ ಹುಟ್ಟುಹಬ್ಬವನ್ನು ದೀಪ ಬೆಳಗಿಸಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ

ಮೂಡುಬಿದಿರೆ ಪುರಸಭೆಯ ಅಧಿವೇಶನ : ಹಸಿಕಸ ವಿಲೇವಾರಿಯಲ್ಲಿ ಅಡಚಣೆ

ಮೂಡುಬಿದರೆ : ವಸತಿ ಸಮುಚ್ಛಯಗಳಲ್ಲಿನ ಹಸಿಕಸವನ್ನು ಹಂದಿ ಸಾಕಾಣಿಕೆಗಾರರಿಗೆ ರವಾನಿಸಿ ವಿಲೇವಾರಿ ಮಾಡುವ ಪ್ರಕ್ರಿಯೆಯಲ್ಲಿ ಎರಡು ಮೂರು ಬಾರಿ ಅಡಚಣೆಯಾಗಿದ್ದು ಇದರಿಂದಾಗಿ ತ್ಯಾಜ್ಯ ದಲ್ಲಿ ಹುಳುಗಳಾಗಿರುವದರಿಂದ ತ್ಯಾಜ್ಯ ಸಂಗ್ರಹವಾಗಿಲ್ಲ, ವಿಲೇವಾರಿ ಮಾಡುವವರಿಗೆ ತಿಳಿಸಿದರೆ ಅವರು ಪುರಸಭೆಯ ಅಧಿಕಾರಿಗಳಿಗೆ ತಿಳಿಸಿ ಎಂದು ಹೇಳುತ್ತಾರೆ. ಹಾಗಾದರೆ ಪುರಸಭೆಯ ಸದಸ್ಯರಾಗಿರುವ ನಮಗೆ ಗೌರವವಿಲ್ಲವೇ. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೆ 23ಕೋಟಿಯಷ್ಟು ಹಣವನ್ನು

ಕಾರು ಢಿಕ್ಕಿ ಅಡ್ಯಾರ್ ಸೆಲೂನ್ ಮಾಲೀಕ ಮೃತ್ಯು

ಮಂಗಳೂರು : ಕಾರು ಅಪಘಾತಕ್ಕೀಡಾಗಿ ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಎಂಬವರು ಮೃತಪಟ್ಟಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗ ಸಂಭವಿಸಿದೆ. ಅಡ್ಯಾರ್ ಗಾರ್ಡನ್ ಎದುರುಗಡೆಯ ಸಂತೋಷ್ ಹೇರ್ ಡ್ರೆಸ್ಸಸ್೯ ಎಂಬ ಸೆಲೂನಿನ ಮಾಲಕರಾಗಿದ್ದ ಇವರು ಸೈಕಲ್ ಮೂಲಕ ರಸ್ತೆ ದಾಟುವಾಗ ಬಿ.ಸಿ.ರೋಡ್ ಕಡೆಯಿಂದ ಅಮಿತ ವೇಗದಲ್ಲಿ ಬಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದೂರಕ್ಕೆ ಎಸೆಯಲ್ಪಟ್ಟು, ತಲೆಗೆ ಗಂಭೀರ ರೀತಿಯಲ್ಲಿ

ಪಂಪ್‌ವೆಲ್ ಹಣದ ಬಂಡಲ್‌ ಪ್ರಕರಣ :  ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗೋಷ್ಠಿ

ಪಂಪ್‌ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್  ಶಿವರಾಜ್ ಎಂಬವರಿಗೆ ಬಿದ್ದು ಸಿಕ್ಕಿದ್ದ ಹಣದ ಬಂಡಲ್‌ಗೆ ಸಂಬಂಧಿಸಿ ಮತ್ತೆ 2,99,500 ರೂ.ಗಳು ಪೊಲೀಸರ ವಶವಾಗಿದೆ. ಹಣದ ಬಂಡಲ್‌ಗಳ ಪ್ರಕರಣದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಈ ಅನಾಮಧೇಯ ಹಣದ ಕಟ್ಟುಗಳ ವಾರಿಸುದಾರರು ಇದ್ದಲ್ಲಿ, ಸಂಬಂಧಪಟ್ಟ ಠಾಣೆಗೆ ಸೂಕ್ತ ಮಾಹಿತಿಯೊಂದಿಗೆ ಭೇಟಿ ನೀಡಿದರೆ ವಾಪಾಸು ನೀಡುವ ಪ್ರಕ್ರಿಯೆ ನಡೆಯಲಿದೆ ಎಂದರು. ನ.

ಆಸ್ಪತ್ರೆಯಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ : ನರ್ಸಿಂಗ್‌ ವಿದ್ಯಾರ್ಥಿ ಬಂಧನ

ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್‌ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್‌ವಿದ್ಯಾರ್ಥಿ ಪವನ್‌ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್‌ ಬಜಪೆಯಲ್ಲಿ ವಾಸವಿದ್ದ.ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಕ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ

ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ : ದ.ಕ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ

ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ವನ್ನು ಖಂಡಿಸಿ ದ.ಕ ಜಿಲ್ಲಾ ವಕೀಲರ ಸಂಘದಿಂದ ಮಂಗಳೂರು ಕೋರ್ಟ್ ಎದುರು ನೂರಾರು ವಕೀಲರಿಂದ ಪ್ರತಿಭಟನೆ ನಡೆಯಿತು. ಬಂಟ್ವಾಳದ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪುಂಜಾಲಕಟ್ಟೆ ಪೊಲೀಸರ ದೌರ್ಜನ್ಯ ಆರೋಪದಲ್ಲಿ ಸಿವಿಲ್ ಕೇಸ್ ನಲ್ಲಿ ಎಫ್.ಐ.ಆರ್ ದಾಖಲಿಸಿ ರಾತ್ರೋರಾತ್ರಿ ಮನೆಗೆ ನುಗ್ಗಿ ಬಂಧನಗೊಳಿಸಿ, ಅರೆಬೆತ್ತಲಾಗಿ ನ್ಯಾಯವಾದಿಯನ್ನ ಜೀಪಿನಲ್ಲಿ ಎಳೆದುಕೊಂಡು ಹೋಗಿ ದೌರ್ಜನ್ಯ ಆರೋಪವೆಸಗಿ, ನ್ಯಾಯಾವಾದಿ

ಕುಡುಕನೊಬ್ಬನ ಹತ್ತು ಲಕ್ಷದ ಕಥೆ

ನ.27ರಂದು ನಗರದ ಪಂಪ್ವೆಲ್ ಬಳಿ ಕನ್ಯಾಕುಮಾರಿ ಮೂಲದ ಪಿ. ಶಿವರಾಜ್ (49) ಎಂಬುವವರಿಗೆ ಬಿದ್ದುಕೊಂಡಿದ್ದ ಹತ್ತು ಲಕ್ಷ ರೂಪಾಯಿಯ ನೋಟಿನ ಕಟ್ಟು ಸಿಕ್ಕಿದೆ. ಇವರು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು ಬೋಂದೇಲ್‌ನ ಕೃಷ್ಣನಗರದಲ್ಲಿ ವಾಸವಾಗಿದ್ದಾರೆ.ಇವರು ನ.27ರಂದು ಎಂದಿನಂತೆ ಕುಡಿಯುತ್ತಾ ಪಂಪ್‌ವೆಲ್ ಮೇಲ್ಸೇತುವೆ ಬಳಿ ಬೀಡಿ ಸೇದುತ್ತಾ ನಿಂತಿದ್ದರು. ಅಲ್ಲಿನ  ಪಾರ್ಕಿಂಗ್ ಸ್ಥಳದಲ್ಲಿ ಇಂದು ಚೀಲ ಬಿದ್ದಿತ್ತು. ಅಲ್ಲೇ ಇದ್ದ ಕೂಲಿ ಕಾರ್ಮಿಕ ಚೀಲ ಹಾಗೂ

“ಹರೇಕಳ ಗ್ರಾಮ ಸೌಧ” ಉದ್ಘಾಟನೆ

ಉಳ್ಳಾಲದ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟನೆ ನಡೆಯಿತು. ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ, ಶಾಸಕ ಯು.ಟಿ. ಖಾದರ್ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟಿಸಿದರು. ನಂತರ ಮಾತನಡಿದ ಅವರು ಗ್ರಾಮ ಪಂಚಾಯಿತಿ ಕಚೇರಿ ಎಂಬುವುದು ಗ್ರಾಮದ ಆತ್ಮ.ಹರೇಕಳ ಗ್ರಾಮ ವಿವಿಧ ಅಭಿವೃದ್ಧಿ ಕಾಮಗಾರಿ ಮೂಲಕ ಮಾದರಿಯಾಗಿ ರೂಪುಗೊಳ್ಳುತ್ತಿದ್ದು ಇನ್ನೂ ಅಭಿವೃದ್ಧಿ ಆಗಬೇಕೆನ್ನುವ

10 ದಿನದೊಳಗೆ ಸೀಮೆಎಣ್ಣೆ ಬಿಡುಗಡೆ ಮಾಡದಿದ್ದರೆ ಮೀನುಗಾರರ ಪರವಾಗಿ ಬೃಹತ್ ಹೋರಾಟ : ಯು.ಟಿ. ಖಾದರ್

ಮೀನುಗಾರ ಮುಖಂಡರ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ತಿಂಗಳಿಗೆ 300 ಲೀಟರ್ ಸೀಮೆಎಣ್ಣೆಯನ್ನು ಉಚಿತವಾಗಿ ವಿತರಿಸಲು ಆರಂಭಿಸಲಾಗಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಸೀಮೆಎಣ್ಣೆ ಸರಿಯಾಗಿ ವಿತರಣೆ ಆಗುತ್ತಿಲ್ಲ. ಕಳೆದ 10 ತಿಂಗಳಿನಿಂದ ಒಂದೇ ಒಂದು ಲೀಟರ್ ಸೀಮೆಎಣ್ಣೆ ಸಿಕ್ಕಿಲ್ಲ ಎಂದವರು ಹೇಳಿದರು. ಇತ್ತೀಚೆಗೆ ಸೀಮೆಎಣ್ಣೆ ಬಿಡುಗಡೆಗಾಗಿ ಮೀನುಗಾರರು