ಮಂಗಳೂರು : ಅವಿಭಜಿತ ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ( ಕೆಂಗಣ್ಣು) ಸಮಸ್ಯೆ ಹೆಚ್ಚಾಗಿದ್ದು, ಕಣ್ಣು ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಇಂತಹ ಸಮಸ್ಯೆಗಳ ಸರತಿ ಸಾಲು ಉದ್ದವಾಗುತ್ತಿದೆ. ಮಕ್ಕಳಾದರೆ ಶಾಲೆಗೆ ಬರಬೇಡಿ ದೊಡ್ಡವರಾದರೆ ಕಚೇರಿಗೆ ಬರಬೇಡಿ ಎಂದು ಬೇಡುವ ಸ್ಥಿತಿ ಉದ್ಭವಾಗಿದೆ. ಎಲ್ಲಕ್ಕೂ ಹವಾಮಾನ ವೈಪರೀತ್ಯವೇ ಕಾರಣ ಎನ್ನುವುದು ಆರೋಗ್ಯ ತಜ್ಞರ
ಮಂಗಳೂರು, : ಸುರತ್ಕಲ್ ಟೋಲ್ ಗೇಟ್ ರದ್ದಾಗಬೇಕು ಎಂದು ಹೋರಾಟ ನಡೆಸಿದ್ದ ಜನಸಾಮಾನ್ಯರಿಗೆ ಮತ್ತೆ ಕುತ್ತಿಗೆ ಹಿಡಿಯುವ ರೀತಿಯ ಆದೇಶವನ್ನು ಹೆದ್ದಾರಿ ಪ್ರಾಧಿಕಾರ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನ.11ರಂದು ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು ನಂತೂರಿನಿಂದ ಸುರತ್ಕಲ್ ವರೆಗಿನ ರಸ್ತೆಯ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚುವರಿಯಾಗಿ ಸಂಗ್ರಹಿಸಲು ಆದೇಶ ನೀಡಿದೆ. ತಲಪಾಡಿಯಿಂದ ಕುಂದಾಪುರದ ವರೆಗಿನ ರಸ್ತೆಯನ್ನು ನವಯುಗ
ಹೋರಾಟಗಾರರ ನಿರಂತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರವು, ಕೊನೆಗೂ ಮಂಗಳೂರಿನ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಿದೆ. ಈ ಸಂಬಂಧ ಟ್ವಿಟರ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದು, “ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ
ವಯೋವೃದ್ಧರೋರ್ವರು ಚಲಾಯಿಸುತ್ತಿದ್ದ ಸ್ಕೂಟರ್ ಗೆ ಕಾರೊಂದು ಡಿಕ್ಕಿಯಾದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸ್ಕೂಟರ್ ಸವಾರಗೆ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಸುಮಾರು 74 ವಯಸ್ಸಿನ ಮುಸ್ಲಿಂ ಸಮೂದಯದ ವಯೋವೃದ್ದರು ಇವರಾಗಿದ್ದು ಸ್ಥಳೀಯ ಆಸುಪಾಸಿನವರಾಗಿದ್ದಾರೆ ಎನ್ನಲಾಗಿದೆ . ರಸ್ತೆಗೆ ಎಸೆಯಲ್ಪಟ್ಟ ಇವರಿಗೆ ತಲೆಗೆ ಗಂಭೀರ ಹೊಡೆತ ಬಿದ್ದಿದೆ, ಹೊಡೆತದ ತೀವೃತೆಗೆ ಪ್ರಜ್ಞೆ ಕಳೆದುಕೊಂಡಿದ್ದ ಇವರನ್ನು ಆಂಬುಲೆನ್ಸ್ ಮೂಲಕ ಉಡುಪಿ ನಗರದ
ಪಚ್ಚನಾಡಿ ಆಶ್ರಯ ಕಾಲೋನಿಯ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ ಕಾರ್ಯದ ಪ್ರಯುಕ್ತ ಶ್ರಮದಾನ ನಡೆಯಿತು. ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಊರ ಪರವೂರ ದಾನಿಗಳ ಕೊಡುಗೆಯಿಂದ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ ಕಾರ್ಯದ ಪ್ರಯುಕ್ತ ಎಲೆಕ್ಟ್ರಿಷನ್ ಹಾಗೂ ಪ್ಲಮ್ಬಿಂಗ್ ಕೆಲಸವು ಶ್ರಮದಾನದ ಮೂಲಕ ನಡೆಯಿತು. ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲಾ ಎಲೆಕ್ಟ್ರಿಷನ್ ಹಾಗೂ ಪ್ಲಂಬರ್ ಗಳಿಗೆ ಸೋಮವ್ವ ಕುಟುಂಬ ಹಾಗೂ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ)
ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ವತಿಯಿಂದ ಯಶಸ್ವಿಯಾದ ಅಬಾ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಗ್ರಾಮದ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವೇದಿಕೆಯಲ್ಲಿ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದೊಂದಿಗೆ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ(ರಿ) ವತಿಯಿಂದ ನಡೆದ ಉಚಿತ ಇ-ಶ್ರಮ್ ಕಾರ್ಡ್ ಹಾಗೂ
ಮೂಡುಬಿದಿರೆಯ ಒಂಟಿಕಟ್ಟೆಯ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಕಡಲಕೆರೆ ಬಳಿ ಇರುವ ಕೋಟಿ-ಚೆನ್ನಯ ಕಂಬಳ ಕರೆಯಲ್ಲಿ ಭಾನುವಾರ ನಡೆದ ಕುದಿ ಕಂಬಳವನ್ನು ಶಾಸಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಲಿಂಬಾವಳಿ ಅವರು ಒಂಟಿಕಟ್ಟೆಯ ಸಭಾಭವನದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಯೇ ಪಕ್ಕದಲ್ಲಿ ನಡೆಯುತ್ತಿದ್ದ ಕುದಿ ಕಂಬಳದ ಕಡೆಗೆ ಕಣ್ಣು ಹಾಯಿಸಿ ಸ್ವಲ್ಪ ಹೊತ್ತು ಅಲ್ಲಿಯೇ ಕಾಲ ಕಳೆದು ಕಂಬಳದ ಬಗ್ಗೆ ಕೇಳಿ
ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಮಂಗಳೂರಿನ ಕೆಎಂಸಿ ಆಸ್ಪತ್ರೆ ವತಿಯಿಂದ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವು ನಡೆಯಿತು. ನಗರದ ಟಾಗೋರ್ ಪಾರ್ಕ್ನಲ್ಲಿರುವ ಲೇಡಿಸ್ ಕ್ಲಬ್ನಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ನಡೆಯಿತು. ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಹಿರಿಯ ವೈದ್ಯ ತಜ್ಷರ ತಂಡದೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪರಿಣತರ ವೈದ್ಯರ ಸಮಿತಿಯಲ್ಲಿ ನಿರ್ನಾಳಗ್ರಂಥಿ ಶಾಸ್ತ್ರದ ಸಲಹಾ ತಜ್ಞರಾದ ಡಾ. ಶ್ರೀನಾಥ್ ಪ್ರತಾಪ್ ಶೆಟ್ಟಿ ಅವರು
ಉಳ್ಳಾಲ: ಮಾನವೀಕರಣದ ಸಂಕೇತದಲ್ಲಿ ಎಲ್ಲರೂ ಬದುಕಬೇಕಿದೆ. ಸಹಿಷ್ಣುತೆ, ಗೌರವ ಮತ್ತು ವಿನಾಯಿತಿ ನಾಗರೀಕತೆಯ ಲಕ್ಷಣಗಳಾಗಿರಬೇಕು. ವಿಶ್ವ ನೀತಿಶಾಸ್ತ್ರ, ನೈತಿಕತೆ ಹಾಗೂ ಮೌಲ್ಯಗಳನ್ನು ಒಳಗೊಂಡಿರುವುದರಿಂದ ಮನುಷ್ಯ ಎಲ್ಲಿಯೂ ಬದುಕಲು ಸಾಧ್ಯವುಳ್ಳ ವಾತಾವರಣವಿದೆ. ಇಲ್ಲವಾದಲ್ಲಿ ವಿಶ್ವವೇ ಭಯಾನಕವಾಗುತಿತ್ತು ಎಂದು ಡಾ.ಬಿ.ಸಿ.ರಾಯ್ ರಾಷ್ಟ್ರಪ್ರಶಸ್ತಿ ಪುರಸ್ಕೃತ ಡಾ.ವೇದಪ್ರಕಾಶ್ ಮಿಷ್ರಾ ಅಭಿಪ್ರಾಯಪಟ್ಟರು. ಅವರು ನಿಟ್ಟೆ
ಕಿಟ್ಟೆಲ್ ಅವರ ಕನ್ನಡ ಸಾಹಿತ್ಯದ ಸಮಗ್ರ ಗ್ರಂಥ ಪ್ರಕಟಿಸಲು ಒತ್ತಾಯಕನ್ನಡದ ಪ್ರಥಮ ಶಬ್ದಕೋಶವನ್ನು ರೂಪಿಸಿದ ರೆವರೆಂಡ್ ಫರ್ಡಿನೆಂಡ್ ಕಿಟೆಲ್ ಅವರ ಪ್ರತಿಮೆಯನ್ನು ಮಂಗಳೂರಿನ ಕರ್ನಾಟಕ ಥಿಯೋಲಾಜಿಕಲ್ ಕಾಲೇಜು ಆವರಣದಲ್ಲಿ ಶನಿವಾರದಂದು ಕಿಟೆಲ್ ಅವರ ಮರಿಮಗಳು ಜರ್ಮನಿಯ ಅಲ್ಮುಥ್ ಬಾರ್ಬರಾ ಮೈಯರ್ ಹಾಗೂ ಕಿಟ್ಟೆಲ್ ಅವರ ಮರಿ ಮರಿ ಮಗ ಈವ್ ಪ್ಯಾಟ್ರಿಕ್ ಮೈಯರ್ ಅವರು ಅವರು ಅನಾವರಣಗೊಳಿಸಿದರು. ನೂರ ಐವತ್ತು ವರ್ಷಗಳ ಹಿಂದೆ ಅನೇಕ ಕನ್ನಡ ಕೃತಿಗಳ ರಚನೆ , ಗ್ರಂಥ