ಹೆತ್ತ ತಾಯಿ ಹಾಗೂ ಹೊತ್ತ ಭೂಮಿ ಸ್ವರ್ಗಕ್ಕಿಂತ ಮಿಗಿಲು. ನಮ್ಮ ನಾಡು ನುಡಿ ಸಂಸ್ಕöÈತಿಗಳ ಬಗ್ಗೆ ನಾವು ಎಲ್ಲೇ ಇದ್ದರೂ ಹೃದಯದೊಳಗೆ ಪ್ರೀತಿ ಇರಬೇಕು. ನಮ್ಮ ನಾಡಿಗಾಗಿ ದುಡಿದ ಹತ್ತು ಹಲವು ಚೇತನಗಳ ಆದರ್ಶ ನಮಗೆ ದಾರಿದೀಪವಾಗಲಿ. ಮಾತೃಭಾಷೆ ಪ್ರೇಮ ಎಂದರೆ ಅನ್ಯ ಭಾಷೆಗಳನ್ನು ದ್ವೇಷಿಸುವುದು ಎಂದು ಅರ್ಥವಲ್ಲ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಿಂದ ಕನ್ನಡ ಉಳಿಸಿ
ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಲಾಗಿತ್ತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಕನ್ನಡ ರಾಜ್ಯೋತ್ಸವ ದಿನದಂದು, ಗಂಧದ ಗುಡಿ ಫಿಲ್ಮ್ ಅನ್ನು ಸಿನಿ ಪ್ರೇಕ್ಷಕರಿಗೆ ವೀಕ್ಷಣೆಗೆ ಅವಕಾಶ ಮಾಡುವ ಮೂಲಕ ಅಪ್ಪು ಅಭಿಮಾನವನ್ನು ಈ ಮೂಲಕ ತೋರ್ಪಡಿಸಿದ್ದಾರೆ. ಅಪ್ಪು ಅಭಿ, ವೀರಕನ್ನಡಿಗನಾಗಿ ಅಭಿಮಾನಿಗಳ ಹೃಯದಲ್ಲಿ ಅಜರಾಮರಾಗಿರುವ
ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟಿçÃಯ ತನಿಖಾ ಸಂಸ್ಥೆ ಘೋಷಿಸಿದೆ.ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಅವರ ಪತ್ತೆಗಾಗಿ ಈಗ ಎನ್ಐಎ ಬಹುಮಾನವಾಗಿ ನಗದು ಘೋಷಿಸಿದೆ.ಪ್ರಮುಖ ಆರೋಪಿಗಳಾದ ಬೆಳ್ಳಾರೆಯ
ಸುರತ್ಕಲ್ ಅಕ್ರಮ ಟೋಲ್ಗೇಟ್ ವಿರುದ್ಧ ಅನಿರ್ಧಿಷ್ಟಾವಧಿ ಧರಣಿಯ 5ನೇ ದಿನಕ್ಕೆ ಕಾಲಿಟ್ಟಿದ್ದು, ಟೋಲ್ ತೆರವು ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಎರಡು ಜಿಲ್ಲೆಯ ಹಲವು ತಾಲೂಕುಗಳ ವಿವಿಧ ಸಂಘಟನೆಗಳ ಪ್ರಮುಖರು ಇಂದಿನ ಧರಣಿಯಲ್ಲಿ ಬೆಳಗ್ಗಿನಿಂದ ಪಾಲ್ಗೊಂಡಿದ್ದಾರೆ. ಹೋರಾಟ ಸಮಿತಿಗೆ ಇದರಿಂದ ಮತ್ತಷ್ಟು ಹುಮ್ಮಸು ದೊರಕಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಹೇಳಿದರು. ಮತ್ತೊಂದೆಡೆ ಒಂದು ವಾರದಿಂದ
ನವ ಮಂಗಳೂರು ಬಂದರು ಪ್ರಾಧಿಕಾರವು, ನಮಬ ಕನ್ನಡ ಸಂಘದ ಜೊತೆಗೂಡಿ 66 ನೇ ಕರ್ನಾಟಕ ಸಂಸ್ಥಾಪನಾ ದಿನ ಹಾಗು ಕರ್ನಾಟಕ ರಾಜ್ಯೋತ್ಸವವನ್ನು ಇಂದು ಆಚರಿಸಲಾಯಿತು ಬಂದರು ಪ್ರಾಧಿಕಾರದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಹಾಗು ಕೆನರಾ ಪಿಯು ಕಾಲೇಜಿನ ಪ್ರಾಧ್ಯಾಪಕರಾದ ಶ್ರೀ ರಘು ಇಡ್ಕಿಧು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು.ಉಪಾಧ್ಯಕ್ಷರು, ಮುಖ್ಯ ವಿಜಿಲೆನ್ಸ್ ಅಧಿಕಾರಿ ಮತ್ತು ಅಧ್ಯಕ್ಷರು, ಕಾರ್ಯದರ್ಶಿ ಕನ್ನಡ ಸಂಘದ ಗೌರವ
ಮಂಗಳೂರು: ಅ 30: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಮ್ರದ್ದ , ಸದ್ರಡ,ಸ್ವಾಭಿಮಾನ ಕರ್ನಾಟಕ ಎಸ್ಡಿಪಿಐ ಸಂಕಲ್ಪ ಎಂಬ ಘೋಷಣೆ ಯೊಂದಿಗೆ ಒಲವಿನ ಕರ್ನಾಟಕ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನವೆಂಬರ್ ಒಂದರಂದು ಬೆಳಿಗ್ಗೆ ಪಕ್ಷದ ಗ್ರಾಮ
ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ
ಪ್ರಸ್ತುತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಯರಾಂ ಬನನ್ ಅವರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಭಾಜರಾಗಿದ್ದಾರೆ. ದೆಹಲಿ ಸೇರಿದಂತೆ ದೇಶದ ಉದ್ದಕ್ಕೂ ಹೋಟೆಲ್ ಉದ್ಯಮ ನಡೆಸುತ್ತಿರುವ ಕಾರ್ಕಳದ ಮಠದಬೆಟ್ಟುವಿನ ಹೊಟೇಲ್ ಉದ್ಯಮಿ ಸಮಾಜ ಸೇವಕ ಜಯರಾಂ ಬನನ್ ಅವರಿಗೆ ವಾಣಿಜ್ಯ ಕ್ಷೇತ್ರದ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ. 13ನೇ ವಯಸ್ಸಿನಲ್ಲಿ
ಕಾವೂರಿನಲ್ಲಿ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. ಇದೇ ವೇಳೆ ಹಕ್ಕು ಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮದಲ್ಲಿ , ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ ,ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ
ಮೂಡುಬಿದಿರೆ: ತಾನು ನೀಡಿದ ಅಭಿವೃದ್ಧಿ ಕಾಮಗಾರಿಯ ಅರ್ಜಿ ಅಜೆಂಡಾದಲ್ಲಿ ಬಂದಿಲ್ಲವೆಂದು ಆರೋಪಿಸಿ ಸದಸ್ಯ ಕೊರಗಪ್ಪ ಅವರು ಬಟ್ಟೆ ತೆಗೆದು ಅರೆನಗ್ನ ರೀತಿಯಲ್ಲಿ ಪ್ರತಿಭಟಿಸಿದ ಘಟನೆ ಸೋಮವಾರ ಪುರಸಭೆಯಲ್ಲಿ ನಡೆಯಿತು. ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊರಗಪ್ಪ ಅವರು ತಾನು ಅರ್ಜಿ ಕೊಟ್ಟಿರುವುದು ಅಜೆಂಡಾದಲ್ಲಿ ಬಂದಿಲ್ಲವೆಂದು ಆರೋಪಿಸಿದರು. ಅರೆನಗ್ನ ಸ್ಥಿತಿಯಲ್ಲಿ ಪ್ರತಿಭಟಿಸಿರುವುದನ್ನು ಆಡಳಿತ ಪಕ್ಷದ ಸದಸ್ಯರು ತೀವೃವಾಗಿ