Home ಕರಾವಳಿ Archive by category ಮಂಗಳೂರು (Page 149)

ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುವವರನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ : ಮಾಜಿ ಸಚಿವ ರಮಾನಾಥ ರೈ ಆಕ್ರೋಶ

ಮ.ನ.ಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ , ಆ ಹೊತ್ತಿನಲ್ಲಿ ಹೋಗಿ ಕಿರುಕುಳ ನೀಡುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದು , ಇದು ಹೋರಾಟಗಾರರ ಧ್ವನಿ ಅಡಗಿಸುವ ಕೆಲಸ ಮಾಡಲಾಗುತ್ತಿದೆ . ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳುವ

ನಗರದ ಲಾಲ್‍ ಭಾಗ್ ಸಿಗ್ನಲ್ ಬಳಿ ಬಸ್ ಚಕ್ರ ಹರಿದು ಬಾಲಕನ ಸಾವು

ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ. ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್ ಇವತ್ತು ಮನೆಯಲ್ಲಿ ಪೂಜೆ ಇದೆಯೆಂದು ಶಾಲೆಗೆ ರಜೆ ಹಾಕಿದ್ದ. ಬೆಳಗ್ಗೆ ಚಿಕ್ಕಪ್ಪ ಪಡು ಬೊಂಡಂತಿಲ

ಸಾಹಿತ್ಯ ಪ್ರಶಸ್ತಿಗೆ ಲೇಖಕಿಯರಿಂದ ಕೃತಿಗಳ ಆಹ್ವಾನ

ಸಾಹಿತ್ಯ ಪ್ರಶಸ್ತಿಗೆ ಲೇಖಕಿಯರಿಂದ ಕೃತಿಗಳ ಆಹ್ವಾನ ಮಂಗಳೂರು; ಅವಿಭಜಿತ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಕರಾವಳಿ ಲೇಖಕಿಯರ ವಾಚಕಿಯರ ಸಂಘವು 2022-23ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗಾಗಿ ಲೇಖಕಿಯರ ಕೃತಿಗಳನ್ನು ಆಹ್ವಾನಿಸಿದೆ. ನವೆಂಬರ್ 10ರೊಳಗೆ ಕೃತಿಗಳನ್ನು ಕಳುಹಿಸಿಕೊಡುವಂತೆ ಪ್ರಕಟಣೆ ತಿಳಿಸಿದೆ. 1) ರಾಜ್ಯ ಮಟ್ಟದ `ಸಾರಾ’ ದತ್ತಿ ಪ್ರಶಸ್ತಿಗಾಗಿ ಉದಯೋನ್ಮುಖ ಬರಹಗಾರ್ತಿಯರ 2020ರ ನಂತರ ಪ್ರಕಟವಾÀದ ಮೊದಲ ಪ್ರಕಟಿತ ಕವನ ಸಂಕಲನ 2)

ಕರ್ಣಾಟಕ ಬ್ಯಾಂಕ್‍ನ ಡಿಜಿಟಲ್ ಬ್ಯಾಂಕ್ ಘಟಕ ಉದ್ಘಾಟನೆ

ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗವಾಗಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಯೂನಿಟ್ ಉದ್ಘಾಟನೆಯ ಅಂಗವಾಗಿ ನಗರದ ಯೆಯ್ಯಾಡಿ ಕೊಂಚಾಡಿಯಲ್ಲಿಂದು ಕರ್ಣಾಟಕ ಬ್ಯಾಂಕ್‍ನ ಡಿಜಿಟಲ್ ಬ್ಯಾಂಕ್ ಘಟಕ ಉದ್ಘಾಟನೆಗೊಂಡಿತು. ನೂತನ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಹೊಸದಿಲ್ಲಿಯ ಹಣಕಾಸು ಸಚಿವಾಲಯದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಜೊತೆ

ವಿಶ್ವ ತುಳು ಲಿಪಿ ದಿನದ ಅಂಗವಾಗಿ ತುಳು ದಿಬ್ಬಣ ಕಾರ್ಯಕ್ರಮ

ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ ‘ತುಳು ದಿಬ್ಬಣ’ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಮಾತನಾಡಿ, ಇಂದು ನಾವು ಮಲಯಾಳಂಗೆ ತುಳುಲಿಪಿಯನ್ನು ಮಾರುವ ಕಾಲ ಬಂದಿದೆ. ಆದರೆ, ಮಲಯಾಳಂಗೆ ಲಿಪಿಯನ್ನು ನೀಡಿರುವ ಭಾಷೆ ತುಳು ಎಂದು ಹೇಳಲು ನಮಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.

ದೀಪಾವಳಿಗೆ ಪರಿಸರ ಸ್ನೇಹಿ ಪಟಾಕಿ ಮಾರುಕಟ್ಟೆಗೆ ಲಗ್ಗೆ

ಮಂಗಳೂರು: ದೀಪಾವಳಿ ಎಂದರೆ ಬೆಳಕಿನ ಹಬ್ಬ. ಆದರೆ ದೀಪಾವಳಿ ಸಂದರ್ಭದಲ್ಲಿ ಅಬ್ಬರದ ಪಟಾಕಿಗಳದ್ದೇ ಕಾರುಬಾರು. ಆದರೆ ಈ ಬಾರಿಯ ದೀಪಾವಳಿಗೆ ಸದ್ದೇ ಮಾಡದ, ಪರಿಸರಕ್ಕೆ ಹಾನಿಯಾಗದ ಪಟಾಕಿಗಳು ಮಾರುಕಟ್ಟೆಗೆ ಬಂದಿದೆ. ಈ ಪರಿಸರಸ್ನೇಹಿ ಪಟಾಕಿ ಹೇಗಿರುತ್ತೆ ಗೊತ್ತಾ ಈ ಸ್ಟೋರಿ ನೋಡಿ ಇದು ಈ ಬಾರಿಯ ದೀಪಾವಳಿಗೆ ಮಾರುಕಟ್ಟೆಗೆ ಬಂದಿರುವ ಪರಿಸರ ಸ್ನೇಹೀ ಪಟಾಕಿಗಳು. ಇಲ್ಲಿ ಬೀಡಿ ಪಟಾಕಿ, ಲಕ್ಷ್ಮಿ ಬಾಂಬ್, ಸುಕ್ಲಿ ಬಾಂಬ್, ರಾಕೆಟ್, ದುರ್ಸು, ನೆಲಚಕ್ರ ಎಲ್ಲಾ ಪಟಾಕಿಗಳೂ

ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮ

ಪಚ್ಚನಾಡಿ, ಕಾವೂರು, ಕದ್ರಿಪದವು, ದೇರೆಬೈಲು, ತಿರುವೈಲ್, ಕುಡುಪು ಸೇರಿಸಿ 6 ವಾರ್ಡ್ ಗಳ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. 1200 ರಷ್ಟು ನಾಗರಿಕರು ಭಾಗವಹಿಸಿದ, 30 ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಾಹನ, ಸರಕಾರದ ಹಲವು ಯೋಜನೆಗಳ ಸಹಾಯಧನದ ಚೆಕ್

ಪೊಲೀಸ್ ಬಲಪ್ರಯೋಗದಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಸುನೀಲ್ ಕುಮಾರ್ ಬಜಾಲ್

ಮಂಗಳೂರು, ಅ. 17: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಗೊಳಿಸಿ ಬೆದರಿಸುವ ತಂತ್ರಗಳಿಗೆ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ ಎಂದು ಸಿಪಿಐಎಂ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ ಇಂದು 17-10-2022 ನಗರದ ಮಿನಿವಿಧಾನ ಸೌಧದ ಮುಂಭಾಗ ಸಮಾನ ಮನಸ್ಕ ಸಂಘಟನೆಗಳಿಂದ ಪೊಲೀಸರ ಕ್ರಮವನ್ನು ಖಂಡಿಸಿ , ನ್ಯಾಯಯುತ ಹೋರಾಟವನ್ನು

ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ : ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಕುಡ್ಲ ರನ್ ಮ್ಯಾರಥಾನ್

 ಮಂಗಳೂರು: ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಕುಡ್ಲ ರನ್ ಮ್ಯಾರಥಾನ್ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯಿತು.  ಕುಡ್ಲ ರನ್‌ಗೆ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಕಾರ್ಡಿಯೋಲಜಿಸ್ಟ್ ಡಾ. ಪುರುಷೋತ್ತಮ್, ಕಾರ್ಡಿಯೋಲಜಿಸ್ಟ್ ಡಾ. ಮಂಜುನಾಥ್ ಬಿ ವಿ, ಕಾರ್ಡಿಯೋ ತೆರಪಿ ಸರ್ಜರಿ ಡಾ. ಜಯಶಂಕರ್ ಮಾರ್ಲ ಸೇರಿ ಚಾಲನೆ ನೀಡಿದರು.

ಸುರತ್ಕಲ್ ಟೋಲ್‌ಗೇಟ್ ಹೋರಾಟಗಾರರ ಮನೆಗಳಿಗೆ ತಡರಾತ್ರಿ ಪೊಲೀಸರು ಭೇಟಿ: ಹಲವು ಮುಖಂಡರಿಗೆ ನೋಟಿಸ್

ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್‌ನಲ್ಲಿ ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ಹಾಗಾಗಿ ನೋಟಿಸ್ ತಲುಪಿದ