ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಸಿಂಹಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ, ಕಾರ್ಯದರ್ಶಿ ಜಲಜಾಕ್ಷಿ ಬಾಲಕೃಷ್ಣ, ಕೋಶಾಧಿಕಾರಿ ರವಿಶಂಕರ್ ಅವರಿಗೆ ಲಯನ್ಸ್ ಕ್ಲಬ್ ಪ್ರಥಮ ಉಪರಾಜ್ಯಪಾಲ ಮೆಲ್ವಿನ್ ಡಿ ಸೋಜ ಪದಗ್ರಹಣಆ ನಡೆಸಿಕೊಟ್ಟರು. ಬಳಿಕ ಮಾತನಾಡಿದ ಅವರು ವಿಟ್ಲ
“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, , “2500 ಕೋಟಿ ರೂ. ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ಬಂದಿದೆ. ಆದರೆ ಆ ಹಣ ಎಲ್ಲಿ ಹೋಯಿತು
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮವು ಮಂಗಳೂರು ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು. ಕನ್ನಡದ ಪ್ರಥಮ ಪತ್ರಿಕೆ ಮಂಗಳೂರ ಸಮಾಚಾರ ಪತ್ರಿಕೆಯ ಸಂಸ್ಥಾಪಕ ಸಂಪಾದಕ ರೆ.ಹೆರ್ಮನ್ ಮೋಗ್ಲಿಂಗ್ ಅವರ ಪ್ರತಿಮೆಗೆ ಮಾಜಿ ಶಾಸಕ ಜೆ.ಆರ್.ಲೊಬೋ ಅವರು ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜೆ.ಆರ್.ಲೋಬೋ ಅವರು,
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ. ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗಿದೆ. ಕೊಟ್ಟಾರದಲ್ಲಿ ರಾಷ್ಟ್ರೀಯ ಹೆದ್ದಾರಿಗೂ ನೀರು ಬಂದಿದೆ. ಕೊಟ್ಟಾರ ಪ್ರದೇಶದ ಮಾಲೆಮಾರ್, ಕೋಡಿಕಲ್ ಏರಿಯಾದಲ್ಲಿ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ಹರಿದಿದ್ದು ಹಲವಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ನೀರುಮಾರ್ಗದ ಬಳಿಯ ಬದಿನಡಿ ಎಂಬಲ್ಲಿ ದೇವಸ್ಥಾನದ ಅಂಗಣ ಪೂರ್ತಿ ನೀರಿನಲ್ಲಿ ಮುಳುಗಿದೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ
ಕೊಲೆಗೆ ಸ್ಕೆಚ್ ಹಾಕಿದ್ದಾರೆಂದು ಸುದ್ದಿಯಾಗಿದ್ದ ಬೆಂಗಳೂರಿನ ಉದ್ಯಮಿ, ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಕೊಲೆಗೆ ಸ್ಕೆಚ್ ವಿಚಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಗೃಹ ಇಲಾಖೆಯಿಂದ ಹೊಣೆ ನೀಡಲಾಗಿದೆ. ಹೀಗಾಗಿ ಮಂಗಳೂರು ಕಮಿಷನರ್ ಕಚೇರಿಗೆ ಗುಣರಂಜನ್ ಶೆಟ್ಟಿ ಅವರನ್ನು ಕರೆಸಿ ಸಿಸಿಬಿ ಇನ್ಸ್ ಪೆಕ್ಟರ್
ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕನ ಶಿರಚ್ಛೇದ ಘಟನೆ ಮಾನವೀಯತೆಗೆ ಸವಾಲಾದ ಪ್ರಕರಣ. ಕೃತ್ಯದ ಹಿಂದೆ ವ್ಯವಸ್ಥಿತ ಸಂಚಿದೆ, ಭಯೋತ್ಪಾದಕ ಕೃತ್ಯ. ದೇಶದಲ್ಲಿ ಐಸಿಸ್, ತಾಲಿಬಾನ್ ಮಾನಸಿಕತೆ ತಲೆ ಎತ್ತುತ್ತಿರುವುದಕ್ಕೆ ಇದು ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ. ಇದೇ ಮಾದರಿಯ ಹತ್ಯೆ ಶಿವಮೊಗ್ಗದಲ್ಲೂ ನಡೆದಿತ್ತು. ಹಿಂದು ಕಾರ್ಯಕರ್ತ ಹರ್ಷನ ಕತ್ತು ಕೊಯ್ದು ಅದರ ವಿಡಿಯೋವನ್ನು ಆತನ ಸೋದರಿಗೆ ಕಳಿಸಲಾಗಿತ್ತು.
ನಗರದ ಪಂಪ್ವೆಲ್ ಬಸ್ಸು ನಿಲುಗಡೆಯಾಗುವ ಸಮೀಪದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಒಳಗಡೆಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಚಿಮ್ಮುತ್ತಿದೆ.ಬಿರುಕು ಬಿಟ್ಟಿರುವ ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲೆಲ್ಲಾ ಹರಿದಾಡುತ್ತಿದೆ. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ರಸ್ತೆಯ ಕೆಳಭಾಗದಲ್ಲಿರುವ ನೀರು ಸರಬರಾಜಿನ ಪೈಪ್ ಒಡೆದಿದ್ದರಿಂದ ರಸ್ತೆ ಮಧ್ಯೆ ಬಿರುಕು ಮೂಡಿದೆ ಎನ್ನಲಾಗುತ್ತಿದೆ.ಪಂಪ್ವೆಲ್ ಮೇಲ್ಸೇತುವೆಯ
ಕೊಚ್ಚಿನ್: ಐಪಿಎಲ್ ಮಾದರಿಯಂತೆ ವಾಲಿಬಾಲ್ನಲ್ಲೂ ಹೊಸ ಲೀಗ್ ಆರಂಭವಾಗಿದ್ದು, ಮೊದಲ ಸೀಸನ್ ನ ಹರಾಜು ಪ್ರಕ್ರಿಯೆ ಇಂದು ಕೊಚ್ಚಿನ್ ನಲ್ಲಿ ನಡೆದಿದೆ. ಮಂಗಳೂರಿನ ಆಟಗಾರ ಅಶ್ವಲ್ ರೈ ಅವರು ದಾಖಲೆಯ ಮೊತ್ತಕ್ಕೆ ಕೋಲ್ಕತ್ತಾ ಥಂಡಲ್ ಬೋಲ್ಟ್ಸ್ ತಂಡದ ಪಾಲಾಗಿದ್ದಾರೆ. ಅಶ್ವಲ್ ರೈ ಅವರನ್ನು 15 ಲಕ್ಷ ರೂ. ಬೆಲೆಗೆ ಕೋಲ್ಕತ್ತಾ ತಂಡ ಖರೀದಿಸಿತು. ಇವರಂತೆ ಕಾರ್ತಿಕ್ ಎ ಮತ್ತು ಜೆರೋಮ್ ವಿನಿತ್ ಅವರನ್ನು ಪ್ರೈಮ್ ವಾಲಿಬಾಲ್ ಹರಾಜಿನಲ್ಲಿ ಕ್ರಮವಾಗಿ ಕೊಚ್ಚಿ ಬ್ಲೂ
ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ದಕ್ಷಿಣಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ಮಂಗಳವಾರ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು
ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಪ್ರಮಾಣ ಪತ್ರ ವಿತರಿಸಿದರು