Home ಕರಾವಳಿ Archive by category ಮಂಗಳೂರು (Page 187)

ಕಾಪು ಪುರಸಭೆ ಚುನಾವಣೆ: ಬಿಜೆಪಿಗೆ ಬಂಡಾಯ ಬಿಸಿ

ಕಾಪು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಬಂಡಾಯದ ಬಿಸಿ ಬಿಜೆಪಿಯನ್ನು ಸುಡಲಿದೆಯೇ ಎಂಬ ಆತಂಕ ಬಿಜೆಪಿ ಪಾಳಾಯದಲ್ಲಿ ಮೂಡಿದೆ.ನಾಮಪತ್ರ ಸಲ್ಲಿಕೆಗೆ ಡಿ.15 ಅಂತಿಮ ದಿನವಾಗಿದ್ದು, ಇದೀಗ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಳಿಸುತ್ತಿರುವಂತೆ, ಟಿಕೇಟ್ ವಂಚಿತರು ಕೆಂಡಾಮಂಡಲವಾಗಿದ್ದಾರೆ.

ಬೈಕಂಪಾಡಿಯಲ್ಲಿರುವ ಓಶಿಮಾ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್ : ಕಂಪನಿಯ ರಾಯಭಾರಿಯ ಪರಿಚಯ, ಪ್ರಚಾರ ಅಭಿಯಾನದ ಉದ್ಘಾಟನೆ

ಮಂಗಳೂರಿನ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪ್ರತಿಷ್ಠಿತ ಕಂಪನಿಯಾದ ಓಶಿಮಾ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್‍ನ ವೆಲ್ಡಿಂಗ್ ಎಲೆಕ್ಟ್ರೋಡ್ ಮತ್ತು ಇನ್ವರ್ಟರ್ ಬ್ಯಾಟರಿ ತಯಾರಕರು ಬೈಕಂಪಾಡಿಯ ಕೆನರಾಇಂಡಸ್ಟ್ರೀಸ್ ಅಸೋಸಿಯೇಶನ್‍ನಲ್ಲಿ, ತನ್ನ ಕಂಪನಿಯ ರಾಯಭಾರಿಯನ್ನು ಪರಿಚಯಿಸುವ ಹಾಗೂ ಪ್ರಚಾರ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಂಪೆನಿಯ ಬ್ರಾಂಡ್ ಅಂಬಾಸಿಡರ್ ಖ್ಯಾತ ಚಲನಚಿತ್ರ ನಟ ಪೃಥ್ವಿ ಅಂಬರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು

ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭ

ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆ

State award for Mangalore University youth Red Cross

It is a great pleasure to us to inform you that, Mangalore University, Youth Red Cross Wing has been adjudged as the Best Performing University in recognition of Youth Development Activities and support in strengthening Youth Red Cross activities at Mangalore University, Mangalagangotri at all levels for the year 2019-20. The award was distributed by […]

ಸರ್ವಧರ್ಮದ ಸತ್ವ ನಾರಾಯಣಗುರುಗಳ ತತ್ವ- ಡಾ. ಗಣನಾಥ ಎಕ್ಕಾರು

ಮಲ್ಪೆ : 19ನೇ ಯ ಶತಮಾನದ ದಾರ್ಶನಿಕ, ಮಾನವತಾವಾದಿ, ಬ್ರಹ್ಮಶ್ರೀ ನಾರಾಯಣಗುರುಗಳು ನೀಡಿದ ಸಂದೇಶ ಒಂದು ಕಾಲ, ಜಾತಿ, ಮತ, ಧರ್ಮಕ್ಕೆ ಸೀಮಿತವಾಗದೆ, ಸಾರ್ವಕಾಲಿಕ ಸತ್ಯದೊಂದಿಗೆ ಸರ್ವಧರ್ಮಗಳ ತತ್ವವನ್ನು ಜಗತ್ತಿಗೆ ಸಾರಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರಾದ ಡಾ| ಗಣನಾಥ ಶೆಟ್ಟಿ ಎಕ್ಕಾರು ಇವರು ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ

ಡಿ.6ರಂದು ಡಾ.ಕದ್ರಿ ಗೋಪಾಲನಾಥ್‍ರವರ ಜನ್ಮದಿನ ಆಚರಣೆ

ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪುರಸ್ಕøತ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನದ ಅಂಗವಾಗಿ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಡಾ.ಕದ್ರಿ ಗೋಪಾಲನಾಥ್‍ರವರ ಸಮಾಧಿಯ ಜಾಗದಲ್ಲಿ ‘ಕದ್ರಿ ಸಂಗೀತ ಸೌರಭ-2021’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಣಿಕಾಂತ್ ಕದ್ರಿ ಹೇಳಿದರು. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ನನ್ನ ತಂದೆಯವರಾದ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನವಾದ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ

ಪಡುಬಿದ್ರಿ ಮಹಾಲಿಂಗೇಶ್ವರನಿಗೆ ದೀಪೋತ್ಸವ ಸಂಭ್ರಮ

ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಾರ್ಷಿಕ ದೀಪೋತ್ಸವ ಸಹಸ್ರಾರು ಭಕ್ತಾದಿಗಳ ಕೂಡುವಿಕೆಯಿಂದ ಬಹಳ ಅದ್ಧೂರಿಯಾಗಿ ನಡೆದು ಸಮಾಪನ ಗೊಂಡಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆದ ಈ ದೀಪೋತ್ಸವದಲ್ಲಿ ಗ್ರಾಮ ಹಾಗೂ ಸ್ಥಳೀಯ ಗ್ರಾಮಗಳಿಂದ ಸಾವಿರಾರು ಭಕ್ತಾಧಿಗಳು ಆಗಮಿಸಿ ಸ್ವಯಂ ಪ್ರೇರಿತರಾಗಿ ಎಣ್ಣೆದೀಪ ಉರಿಸುವ ಮೂಲಕ ದೀಪೋತ್ಸವದಲ್ಲಿ ತಮ್ಮ ಅಳಿಲ ಸೇವೆ ಪೂರೈಸಿದ್ದಾರೆ. ಈ ಸಂದರ್ಭ

ಸಂಪೂರ್ಣ ಹದಗೆಟ್ಟಿರುವ ಕಾನ-ಕುಳಾಯಿ ರೈಲ್ವೇ ಮೇಲ್ಸೇತುವೆ : ಡಿವೈಎಫ್‍ಐನಿಂದ ಪ್ರತಿಭಟನೆ

ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್‍ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‍ಐ ಮುಖಂಡ ಮುನೀರ್ ಕಾಟಿಪಳ್ಳ ಅವರು, ರಸ್ತೆ ಕಾಮಗಾರಿಯಾದ ಪ್ರತೀ ವರ್ಷಕೂಡ ಮೊದಲ ಮಳೆಗೆ ರಸ್ತೆ ಗುಂಡಿ ಬಿದ್ದು, ಸಂಚರಿಸಲು ಆಗದ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ

ಬಾಲ ಮಂದಿರದಿಂದ ಬಾಲಕರು ನಾಪತ್ತೆ

ನಗರದ ಬೋಂದೆಲ್‌ನಲ್ಲಿರುವ ಬಾಲಕರ ಬಾಲ ಮಂದಿರದಿಂದ ನ.26 ರ ರವಿವಾರ ಮುಂಜಾನೆ ಶ್ಯಾಮವೆಲ್ ಟೊಪ್ಪು (16) ಮತ್ತು ವಡಲಮನಿ ಚಿರಂಜೀವ (16) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಯಾಮುವೆಲ್ 150 ಸೆಂ.ಮೀ ಎತ್ತರವಿದ್ದು, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಎದುರಿನಲ್ಲಿ ಹಳದಿ ಬಣ್ಣದ ಪಟ್ಟಿ ಇರುವ ತಿಳಿನೀಲಿ ಬಣ್ಣದ ಟೀಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ವಡಲಮನಿ ಚಿರಂಜೀವಿ 150 ಸೆಂ.ಮೀ

ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಚಿನ್ನದ ಸರ ಸುಲಿಗೆ

ನಗರದ ನಂತೂರು ಪದವು ಬಳಿ ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರವನ್ನು ಸುಲಿಗೆಗೈದ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ನ 29 ರ ಸೋಮವಾರ ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಅಗ್ರಹಾರದ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ ಯಾನೆ ಅನಾಮಿಕ (27) ಬಂಧಿತ ಆರೋಪಿಯಾಗಿದ್ದಾನೆ. ಗಣೇಶ್ ಶೆಟ್ಟಿ ಎಂಬವರು ಎರಡು ತಿಂಗಳ ಹಿಂದೆ ತನ್ನ ಬೈಕ್‌ನಲ್ಲಿ ನಂತೂರು ಪದವಿನಿಂದ ಬಿಎಸ್‌ಎನ್‌ಎಲ್ ಎಕ್ಸೇಂಜ್ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದಾಗ ಹಠಾತ್