Home ಕರಾವಳಿ Archive by category ಮಂಗಳೂರು (Page 2)

ಅ.24 : ವಿಶೇಷ ಕಾರ್ಯಪಡೆ ಸಿಬ್ಬಂದಿಗಳಿಗಾಗಿ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಗಾರ ಉದ್ಘಾಟನೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ವಿಶೇಷ ಪೊಲೀಸ್ ಕಾರ್ಯಪಡೆಯ(ಎಸ್ .ಎ. ಎಫ್ ) ಸಿಬ್ಬಂದಿಗಳಿಗಾಗಿ 20 ದಿನಗಳ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಗಾರವನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಹೊಸದಾಗಿ ರಚಿಸಲ್ಪಟ್ಟ ವಿಶೇಷ ಕಾರ್ಯಪಡೆಯ ಸಿಬ್ಬಂದಿಗಳಿಗೆ ಸ್ಥಳೀಯ ಸಂಸ್ಕೃತಿ ಪರಿಚಯ ಮಾಡುವ ಹಾಗೂ ಭಾಷೆಯನ್ನು ಕಲಿಸುವ

ದೀಪಾವಳಿ ತುಳುವ ನೆಲದ ಸಂಸ್ಕೃತಿಯ ಪ್ರತಿಬಿಂಬ : ಕಿಶೋರ್ ಕುಮಾರ್ ಶೇಣಿ

ಮಂಗಳೂರು : ತುಳುನಾಡಿನಲ್ಲಿ ನಡೆಯುವ ದೀಪಾವಳಿಯು ಕೃಷಿ ಬದುಕಿಗೆ ಹೊಂದಿಕೊಂಡ ತುಳುವ ನೆಲದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಕಿಶೋರ್ ಕುಮಾರ್ ರೈ ಶೇಣಿ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಮಂಗಳೂರು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ‘ದೀಪಾವಳಿ ಪರ್ಬದ ಐಸಿರ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು . ದೀಪಾವಳಿ ಹಬ್ಬದ

ಬೀದಿನಾಯಿಗಳ ದಾಳಿ: ಅಂಗಡಿಗೆ ಹೋಗಿದ್ದ ಬಾಲಕಿಗೆ ಗಂಭೀರ ಗಾಯ

ಮಂಗಳೂರು: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ. ಮೈಂದಗುರಿ ನಿವಾಸಿ ಹೈದರ್ ಅಲಿ ಅವರ‌ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡ ಬಾಲಕಿ.ರಿದಾ ಫಾತಿಮ ಸಂಜೆಯ ವೇಳೆ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು ಅಲ್ಲಿಗೆ ಬಂದಿವೆ. ನಾಯಿಗಳ ಜಗಳ‌‌ ಕಂಡು ಬೆಚ್ಚಿಬಿದ್ದ

ರಸರಾಗ ಚಕ್ರವರ್ತಿ ಬಿರುದಾಂಕಿತ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯರು ವಿಧಿವಶ

ಮಂಗಳೂರು: ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತ, ’ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದ, ದಿನೇಶ್ ಅಮ್ಮಣ್ಣಾಯರು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರ ಅಗಲಿಕೆಯಿಂದ ಯಕ್ಷಗಾನ ಲೋಕಕ್ಕೆ ಭಾರಿ ನಷ್ಟವಾಗಿದೆ. ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ: ಆರೋಪಿಯ ಬಂಧನ

ಮಂಗಳೂರು:ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಸ್ಎಫ್ ಜವಾನರು ವಶಕ್ಕೆ ಪಡೆದು‌ ಬಜ್ಪೆ‌ ಪೊಲೀಸರಿಗೆ ಒಪ್ಪಿಸಿದ್ದಾರೆ‌.‌ ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಸೋಮವಾರ ಸಂಜೆ 6:30ಕ್ಕೆ ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ‌ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಬಂದ ಹಿನ್ನೆಲೆ ವಿಮಾನ‌ ನಿಲ್ದಾಣ ಸಿಬ್ಬಂದಿ ಆಧರಿಸಿ ವಿಮಾನ‌ ನಿಲ್ದಾಣದ

ಲೀಲಾವತಿ ಬೈಪಾಡಿತ್ತಾಯ ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ- ಡಾ.ಪ್ರಭಾಕರ ಜೋಶಿ

ಮಂಗಳೂರು,ಅ.12; ಭಾಗವತರಾದ ಲೀಲಾವತಿ ಬೈಪಾಡಿತ್ತಾಯ ಅವರು ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ ವನ್ನು ಹೊಂದಿದ್ದರು ಎಂದು ಯಕ್ಷಗಾನ ವಿದ್ವಾಂಸ ಡಾ.ಪ್ರಭಾಕರ ಜೋಶಿ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘದ ಸಹಯೋಗದೊಂದಿಗೆ ಮಂಗಳೂರಿನ ತುಳು ಭವನದಲ್ಲಿ ರವಿವಾರ ಹಮ್ಮಿಕೊಂಡ ಮಹಿಳಾ ಭಾಗವತೆ ದಿ.ಲೀಲಾವತಿ ಬೈಪಾಡಿತ್ತಾಯ ಸಂಸ್ಮರಣಾ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಮಧೂರು ಯಕ್ಷಗಾನ

ಕಿರಿಮಂಜೇಶ್ವರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರ ಶಾಂತೇರಿ ಕಾಮಾಕ್ಷಿ ಕಲ್ಯಾಣ ಮಂಟಪ ನಾಗೂರಿನಲ್ಲಿಸಂಭ್ರಮದಿಂದ ನಡೆಯಿತು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಖಾರ್ವಿ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ

ಮಂಗಳೂರು: ಇ-ಸಿಗರೇಟ್ ಅಕ್ರಮ ಮಾರಾಟ: ಸೊತ್ತು ಸಹಿತ ಮೂವರ ಬಂಧನ

ನಗರದ ಲಾಲ್‌ಬಾಗ್‌ನಲ್ಲಿರುವ ಕಾಂಪ್ಲೆಕ್ಸ್‌ವೊಂದರ ಅಂಗಡಿಯಲ್ಲಿ ಇ-ಸಿಗರೇಟನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,72,745 ರೂ.ಮೌಲ್ಯದ ಇ-ಸಿಗರೇಟ್ ಮತ್ತಿತರ ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಂಗಡಿಯ ಮಾಲಕ ಶಿವು ದೇಶಕೋಡಿ, ಬಂಟ್ವಾಳ ತಾಲೂಕಿನ ಸಂತೋಷ್, ಕುದ್ರೋಳಿಯ ಇಬ್ರಾಹಿಂ ಯಾನೆ ಇರ್ಷಾದ್ ಬಂಧಿತ ಆರೋಪಿಗಳಾಗಿದ್ದಾರೆ. ಆಮಂತ್ರಣ ಎಂಬ ಹೆಸರಿನ ಅಂಗಡಿಯಲ್ಲಿ ನಿಷೇಧಿತ

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ : ಶಾಸಕ ಕಾಮತ್

ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ

ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಇಮ್ರಾನ್ ಮಂಜಿಲ್‌ ಬಂಧನ

ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಕ್ರ 412/2004 U/s 143,147,148,323,427,506,149 ಐಪಿಸಿ ಪ್ರಕರಣದ ಹಾಗೂ ಮಾನ್ಯ 2 ನೇ ಸಿ.ಜೆ.ಎಂ ನ್ಯಾಯಾಲಯ ಮಂಗಳೂರು ಸಿ. ಸಿ ನಂಬ್ರ 12-2007 ರಲ್ಲಿ ಆರೋಪಿ ಅಲ್ತಾಪ್ ಪ್ರಾಯ 47 ವರ್ಷ ತಂದೆ : ಇಸ್ಮಾಯಿಲ್ @ ಮೊಹಮ್ಮದ್ ವಾಸ: 25-82, ಇಮ್ರಾನ್ ಮಂಜಿಲ್, ಎಮ್ ಜಿ ಎಮ್ -967, ಕಸಬ ಬೆಂಗ್ರೆ ಮಂಗಳೂರು ತಾಲೂಕು ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ […]