Home ಕರಾವಳಿ Archive by category ಮಂಗಳೂರು (Page 300)

ಕೋಳಿ ಮೊಟ್ಟೆಗೆ ಹೆಚ್ಚಿದ ಬೇಡಿಕೆ: ಮೊಟ್ಟೆ ದರದಲ್ಲೂ ಏರಿಕೆ

ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಿದ್ದು, ಸರಬರಾಜಿನಲ್ಲಿ ಕೂಡ ಏರಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ತಾಜಾ ಮೀನಿನ ಅಭಾವ ಹಾಗೂ ಬೆಲೆಯೂ ಗಗನಕ್ಕೆ ಏರಿರುವುದರಿಂದ ಮೊಟ್ಟೆಗೆ ಡಿಮ್ಯಾಂಡ್ ಸಿಕ್ಕಾಪಟ್ಟೆ ಇದೆ. ಏಪ್ರಿಲ್ ಅಂತ್ಯದಿಂದ ಮೊಟ್ಟೆ ದರದಲ್ಲಿ ಏರಿಕೆ ಕಾಣುತ್ತಿದ್ದು, ಇದೀಗ ಚಿಲ್ಲರೆ ಅಂಗಡಿಯಲ್ಲಿ 5ರೂ. ಇದ್ದ ದರ 6.50 ರಿಂದ 7 ರೂ. ತಲುಪಿದೆ ಎಂದು ವ್ಯಾಪಾರಿಗಳು

ಮಂಗಳೂರು : ಗುಂಡು ಹಾರಿಸಿ ನಾಯಿ ಹತ್ಯೆ

ಮಂಗಳೂರು ನಗರದ ಶಿವಭಾಗ್‍ನ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಭಾಗ್ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದ ಬೀದಿ ನಾಯಿಗೆ ವ್ಯಕ್ತಿಯೊಬ್ಬ ಗುಂಡುಹಾರಿಸಿ ಹತ್ಯೆ ಮಾಡಿದ ಈ ಪ್ರಕರಣ ಸ್ಥಳೀಯರಲ್ಲಿ ಆತಂಕವನ್ನು ಉಂಟು ಮಾಡಿದೆ. ಈ ಘಟನೆ ಪ್ರಾಣಿ

ಕೊಟ್ಟಾರ ಕರ್ಲುಟ್ಟಿ ಸಾನಿಧ್ಯಕ್ಕೆ ಬೆಳ್ಳಿಯ ದರ್ಶನದ ಬೆತ್ತ ಸೇವೆ

ಕೊಟ್ಟಾರ ಶ್ರೀಯಾನ್ ಮಹಾಲಿನಲ್ಲಿರುವ ವಿದ್ಯಾ ಸರಸ್ವತಿ ಕ್ಷೇತ್ರದ ಪರಿವಾರ ದೇವರಾದ ಕರ್ಲುಟ್ಟಿ ಸಾನಿಧ್ಯಕ್ಕೆ ಬೆಳ್ಳಿಯ ಕವಚ ಇರುವ ೫ ದರ್ಶನದ ಬೆತ್ತ ಮತ್ತು ಕರ್ಲುಟ್ಟಿ ಅಲ್ಲ ಆರಾಧನೆಕ್ಕೆ ಬೇಕಾಗಿರುವ ಪೂಜಾ ಸಾಮಗ್ರಿಗಳನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದ ಸಹಾಯಕ ಪ್ರಬಂಧಕರಾದ ಪ್ರವೀಣ್ ಕುಮಾರ್ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ನವೀನ್ ಚಂದ್ರ ಶ್ರೀಯಾನ್ ರವರಿಗೆ ಹಸ್ತಾಂತರಿಸಿದರು. ನವಗ್ರಹ ಶಾಂತಿ ಹೋಮ ಮಾಡಿ ನವ ಕಲಶವನ್ನು ಬೆಳ್ಳಿಯ ಬೆತ್ತಕ್ಕೆ ಅಭಿಷೇಕ

ಬೆಲೆ ಏರಿಕೆಯ ಬಗ್ಗೆ ನೈಜ ಕಾರಣ ಜನತೆಗೆ ತಿಳಿಸಲಿ: ಮಾಜಿ ಸಚಿವ ಯು.ಟಿ. ಖಾದರ್ 

ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆಯ ಬಗ್ಗೆ ನೈಜ ಕಾರಣವನ್ನು ಜನತೆಗೆ ತಿಳಿಸಲು ಬಿಜೆಪಿ ನೇತ್ರತ್ವದ ಕೇಂದ್ರ ಸರಕಾರ ಶ್ವೇತ ಪತ್ರ ಹೊರಡಿಸಲಿ.ಬೆಲೆ ನಿಯಂತ್ರಣಕ್ಕೆ ತಕ್ಷಣ ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಲಿ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ಅವರು ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಇಂಧನದ ಬೆಲೆ ಏರಿಕೆಯ ಹಿಂದಿನ ಯುಪಿಎ ಸರಕಾರ ಪೆಟ್ರೋಲ್ ಕಂಪೆನಿಗಳಿಗೆ

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿ. ಮಿಲ್ಕಾ ಸಿಂಗ್‌ರ ಸ್ಮರಣೆ

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರನ್ನು ಸ್ಮರಣೆ ಮಾಡುವ ಕಾರ್ಯಕ್ರಮವು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.   ದಿವಂಗತ ಮಿಲ್ಕಾ ಸಿಂಗ್ ಅವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ ಸಂತಾಪ ಸೂಚಿಸಿದರು. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಮಾತನಾಡಿ, ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರು ಸ್ವಯಂ ಪ್ರಯತ್ನದ ಮೂಲಕ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಧೀಮಂತ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ: ಶಾಸಕ ವೇದವ್ಯಾಸ್ ಕಾಮತ್ ಸ್ಥಳ ವೀಕ್ಷಣೆ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ವೀಕ್ಷಣೆ ನಡೆಸಿದರು.ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ ಟಾಕೀಸ್ ಬಳಿಯಿಂದ ಬಂಟ್ಸ್ ಹಾಸ್ಟೆಲ್ ಹೋಗುವ ದಾರಿಯಲ್ಲಿ ಬಸ್ ಬೇ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು

ಮಂಗಳೂರು: ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ: ಕಾಸರಗೋಡಿನ ವ್ಯಕ್ತಿ ವಶಕ್ಕೆ

ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಮೂಲದ ಪ್ರಯಾಣಿಕನಿಂದ ಈ ಚಿನ್ನವನ್ನು ಪತ್ತೆ ಹಚ್ಚಲಾಗಿದೆ. ತಪಾಸಣೆ ವೇಳೆ ಆರೋಪಿಯು 430ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ ಗಮ್‌ನೊಂದಿಗೆ ಮಿಕ್ಸ್ ಮಾಡಿ

ದ.ಕ. ಜಿಲ್ಲೆಯಲ್ಲಿ ಜುಲೈ 2ರಿಂದ ಮತ್ತಷ್ಟು ಅನ್‍ಲಾಕ್: ಸಂಜೆ 5ರ ವರೆಗೆ ಖರೀದಿ, ಸಂಚಾರಕ್ಕೆ ಅವಕಾಶ: ಜಿಲ್ಲಾಧಿಕಾರಿ

ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಸಡಿಲಿಕೆಯನ್ನು ಜು.2ರಿಂದ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮತ್ತು ಸಂಚಾರಕ್ಕೆ ಅನುಮತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ. ಸರಕಾರದ ಆದೇಶವನ್ನು ಯಥಾವತ್ತಾಗಿ ಪಾಲಿಸುವುದಾಗಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 2ರಿಂದ ಮತ್ತಷ್ಟು ಅನ್‍ಲಾಕ್ ಜಾರಿಯಾಗಲಿದ್ದು, ಬೆಳಗ್ಗೆ 5ರಿಂದ

ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ: ಜುಲೈ2ರಿಂದ ಸಂಜೆ 7 ರ ತನಕ ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ರ ವರಗೆ ಅವಕಾಶಗಳನ್ನು ನೀಡಲಾಗಿದೆ ಎಂದು ವಿ4 ನ್ಯೂಸ್‌ಗೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಬಸ್, ಮಾರ್ಕೆಟ್, ಸೂಚಿತ ಮಳಿಗೆಗಳಿಗೆ ಅವಕಾಶವನ್ನು ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದೆ. ಜುಲೈ 5ರ ವರೆಗೆ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ

ಜನದಟ್ಟಣೆ ನಿಯಂತ್ರಿಸಲು ಗಿಲ್ಬರ್ಟ್ ಡಿಸೋಜಾರವರ ಸರಳ ಸೂತ್ರ….!

ಜನದಟ್ಟಣೆ ನಿಯಂತ್ರಣ ಹಾಗೂ ಕೊರೋನಾ ಹರಡುವಿಕೆಯನ್ನು ತಡೆಯುವಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದ್ದು, ಅದನ್ನು ಸರಳ ಸೂತ್ರ ಅನುಸರಿಸುವ ಮೂಲಕ ಪಾಲಿಸಬಹುದು ಎಂಬ ಸರಳ ಸೂತ್ರವೊಂದನ್ನು ಸಾಮಾಜಿಕ ಕಾರ್ಯಕರ್ತ ಗಿಲ್ಬರ್ಟ್ ಡಿಸೋಜಾ ನೇತೃತ್ವದ ತಂಡ ಪ್ರಸ್ತಾಪಿಸಿದೆ. ಕಳೆದ ವರ್ಷ ಹಂಪನಕಟ್ಟೆ, ಕಂಕನಾಡಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮುಚ್ಚುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದ