Home ಕರಾವಳಿ Archive by category ಮಂಗಳೂರು (Page 317)

ಮೂಡುಬಿದರೆಯಲ್ಲಿ ಎರಡು ತಿಂಗಳ ಬಳಿಕ ಬಸ್ ಸಂಚಾರ

ಎರಡು ತಿಂಗಳ ಲಾಕ್ ಡೌನ್ ಮುಗಿದು ಮೂಡುಬಿದಿರೆಯಲ್ಲಿ ಸೋಮವಾರದಂದು ಶೇ ೫೦ರಷ್ಟು ಖಾಸಗಿ ಬಸ್ಸುಗಳು ರಸ್ತೆಗಿಳಿದು ಓಡಾಟ ಆರಂಭಿಸಿದವು.ಖಾಸಗಿ ಬಸ್ಸುಗಳು ರಸ್ತೆಗಿಳಿದುದರಿಂದ ಜನರು ತಾವು ಹೋಗಬೇಕಾದ ಸ್ಥಳಗಳಿಗೆ ಬೆಳಗಿನಿಂದಲೇ ಬಸ್ಸುಗಳನ್ನು ಆಶ್ರಯಿಸಿದರು. ಲಾಕ್ ಡೌನ್ ಸಂದರ್ಭದಲ್ಲಿ ಖಾಸಗಿ ಬಸ್ಸು ತಂಗುದಾಣದ ಆವರಣದಲ್ಲಿ ಇತರ ವಾಹನಗಳು ಬಂದು ನಿಲ್ಲುತ್ತಿದ್ದವು.

Free Covid vaccination camp held at Srinivas University, Pandeshwara Campus

Mangaluru:  A free covid vaccination camp was held on July 5 at Srinivas University, City Campus, Pandeshwara Pandeshwara here, under the aegis of National Service Project, in association with the district health and family welfare department and Jeppu Primary Health Centre. Srinivas University Vice Chancellor Dr. P. S. Aithal setting in motion the camp called […]

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಕೋವಿಡ್ ಲಸಿಕೆ ಶಿಬಿರ

ಮಂಗಳೂರು: ನಗರದ ಶ್ರೀನಿವಾಸ್ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಶಿಬಿರ ಜರಗಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಐತಾಳ್ ಕೋವಿಡ್ ವಾರಿಯರ್ಸ್‌ಗಳನ್ನು ಈ ಸಂದರ್ಭ ಅಭಿನಂದಿಸಿದರು. ಈ ಸಂದರ್ಭ ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ

ಕೆಎಟಿ ತೀರ್ಪು ಹಿನ್ನೆಲೆ: ಮುಂಬಡ್ತಿ ಶಿಕ್ಷಕರ ಹಿತ ಕಾಪಾಡಲು ಆಗ್ರಹ: ಸಚಿವರು, ಶಾಸಕರಿಗೆ ಶಿಕ್ಷಕರ ಸಂಘದಿಂದ ಮನವಿ

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡುವಿನ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್ 2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬಡ್ತಿ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ಅಭಿಯಾನ ಆರಂಭಿಸಿದೆ. ಶಿಕ್ಷಕರ ಹಿಂಭಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರ ಮತ್ತು ಇಲಾಖೆಯ ಮೇಲೆ ಒತ್ತಡ ಹೇರುವಂತೆ ಸಂಘ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉಸ್ತುವಾರಿ

ವಾಮಂಜೂರು ಟೈಗರ್ಸ್ ವತಿಯಿಂದ ರಕ್ತದಾನ ಶಿಬಿರ, ವೃಕ್ಷಾರೋಹಣ

ಮಂಗಳೂರು: ವಾಮಾಂಜೂರು ಟೈಗರ್ಸ್ ಇದರ ವತಿಯಿಂದ ಕೆ.ಎಂ‌.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ದಿ.ನವೀನ್ ಮಿಜಾರ್ ಇವರ ಎರಡನೇ ವರ್ಷದ ಪುಣ್ಯಸ್ಮರಣೆಯ ಸಲುವಾಗಿ ವಾಮಂಜೂರಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಆದಿತ್ಯವಾರ ನಡೆದ ರಕ್ತದಾನ ಶಿಬಿರವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ವಾಮಂಜೂರು ಟೈಗರ್ಸ್ ಸಂಘಟನೆಯ ಪ್ರಮುಖರು ಶಾಸಕರ ಉಪಸ್ಥಿತಿಯಲ್ಲಿ ಸಸಿ ನೆಡುವ ಮೂಲಕ

ವಂ.ಡಾ. ಜಾನ್ ಫೆರ್ನಾಂಡಿಸ್ ನಿಧನ

ಮಂಗಳೂರು: ಧರ್ಮ ಸಮನ್ವಯ ಹಾಗೂ ಅಂತರ್ಧರ್ಮೀಯ ಸಂವಾದದ ಹರಿಕಾರ ವಂ. ಡಾ.ಜಾನ್ ಫೆರ್ನಾಂಡಿಸ್ (85) ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. 1936ರಲ್ಲಿ ಉದ್ಯಾವರದಲ್ಲಿ ಜನಿಸಿದ ಇವರು, 1963ರಲ್ಲಿ ಧರ್ಮಗುರುಗಳಾಗಿ ದೀಕ್ಷೆ ಪಡೆದರು. ಬಿಜೈ ಮತ್ತು ರೊಸಾರಿಯೊ ಧರ್ಮಕೇಂದ್ರಗಳಲ್ಲಿ ಸಹಾಯಕ ಗುರುಗಳಾಗಿ ಹಾಗೂ ಹೊಸಬೆಟ್ಟು (ಮೂಡುಬಿದಿರೆ), ಕಟಪಾಡಿ ಹಾಗೂ ಬೆಳ್ಮಣ್ ಚರ್ಚ್‌ಗಳಲ್ಲಿ ಪ್ರಧಾನ ಗುರುಗಳಾಗಿ ಸೇವೆ ಸಲ್ಲಿಸಿದ್ದರು.

ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಟರ್ಪಾಲ್‍ಗಳ ವಿತರಣೆ

ನಗರದ ಹೊಯಿಗೆ ಬಜಾರ್, ಜಪ್ಪಿನಮೊಗರು, ಕೂಳೂರು, ಮುಳಿಹಿತ್ಲು, ತೋಕೂರು ಪರಿಸರದಲ್ಲಿ ಗುಡಿಸಲು ನಿರ್ಮಿಸಿ ವಾಸವಾಗಿದ್ದ ಅಲೆಮಾರಿ ಸಮುದಾಯದ ಶಿಳ್ಳೆಕ್ಯಾತ ಕುಟುಂಬಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಟರ್ಪಾಲ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ

ನಮಗೆ ಸರ್ಕಾರದ ಹಣ ಬೇಡ, ನಾವು ದುಡಿಯುವ ಜಾಗ ನಮಗೆ ಕೊಡಿ ಸಾಕು..!

ಮಂಗಳೂರಿನ ಮೂಲ ನದಿ ಮೀನುಗಾರರು ಗುರುಪುರ ಹೊಳೆಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲೂ ಸಾಂಪ್ರಾದಾಯಿಕ ಮೀನುಗಾರಿಕೆಯನ್ನು ನಡೆಸಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ನದಿ ಮೀನುಗಾರಿಕೆಯೇ ಅವರ ಜೀವನಾದಾರ ಸಾಂಪ್ರಾದಾಯಿಕವಾದ ವಿವಿಧ ರೀತಿಯ ನದಿ ಮೀನುಗಾರಿಕೆಯನ್ನು ನಡೆಸುತ್ತಾ ಜೀವನ ಸಾಗಿಸುತ್ತಿರುವ ಮೀನುಗಾರರ ಜೀವನ ಈ ಕಷ್ಟವಾಗಿದೆ. ಹೌದು ಸಾಂಪ್ರದಾಯಿಕವಾದ ನದಿ ಮೀನುಗಾರಿಕೆಯನ್ನು ನೀರಿಗೆ ಇಳಿದು ಮೀನುಗಾರಿಕೆ ಮಾಡುವ ಪದ್ದತಿಯಲ್ಲಿ ಬೊಲ್ಪುಬಲೆ ಮತ್ತು

ಮಂಗಳೂರಿನಲ್ಲಿ ಅನ್‌ಲಾಕ್ ಬಳಿಕ ಟ್ರಾಫಿಕ್ ಜಾಮ್

ಮಂಗಳೂರು ನಗರದಲ್ಲಿ ಲಾಕ್‌ಡೌನ್ ಸಂದರ್ಭ ರಸ್ತೆಯ ದುರಸ್ತಿ ಕಾರ್ಯ ಮಾಡಲು ಸಾಕಷ್ಟು ಸಮಯಾವಕಾಶ ಇದ್ದರೂ, ಇದೀಗ ಅನ್‌ಲಾಕ್ ಆದ ಬಳಿಕ ಹೆದ್ದಾರಿ ಇಲಾಖೆ  ಕೂಳೂರು ಬಳಿ ಇಂಟರ್ ಲಾಕ್ ಕಾಮಗಾರಿಯನ್ನು ನಡೆಸುತ್ತಿದ್ದು, ಟ್ರಾಫಿಕ್ ಜಾಮ್‌ಗೆ ಪ್ರತ್ಯಕ್ಷ ಕಾರಣವಾಯಿತು. ಮಳೆ ನೀರು ನಿಂತು ಸೇತುವೆ ದಕ್ಷಿಣ ಭಾಗದಲ್ಲಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಂದಯ ಇಂಟರ್‌ಲಾಕ್ ಕಾಮಗಾರಿ ನಡೆಸುವ ಉದ್ದೇಶದಿಂದ ಸೇತುವೆ ಬಂದ್ ಮಾಡಲಾಯಿತು. ಇದರಿಂದ ಹೊಸ ಸೇತುವೆಯಲ್ಲಿಯೇ

ಅಕ್ರಮ ಗಾಂಜಾ ಸಾಗಾಟ ಪ್ರಕರಣ: ಇಬ್ಬರ ಬಂಧನ

ಮಂಗಳೂರು: ಆಂಧ್ರಪ್ರದೇಶದಿಂದ ಕಾಸರಗೋಡಿಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್  ಡಿಸಿಪಿ ಹರಿರಾಂ ಶಂಕರ್ ಹೇಳಿದರು. ಅವರು ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾಧ್ಯಮಗೊಷ್ಟಿ ನಡೆಸಿ ಮಾತನಾಡಿ, ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ