ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವ ಮಂಗಳೂರು ಪೊಲೀಸರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಮನ್ ಪ್ರಜೆ ಹಾಗೂ ಹಿಮಾಚಲ ಪ್ರದೇಶದ ಯುವಕನೊಬ್ಬನನ್ನು ಡ್ರಗ್ಸ್ನೊಂದಿಗೆ ಬಂಧಿಸಿದ್ದಾರೆ. ಬಂಧಿತ ಒಮನ್ ಪ್ರಜೆ ಅಹ್ಮದ್ ಮುಸಬಾ ಅಲ್ ಮಹಾಮಾನಿ (34) ಹಾಗೂ ಹಿಮಾಚಲ ಪ್ರದೇಶದ ರಾಮ್ (22) ಎಂದು ಗುರುತಿಸಲಾಗಿದೆ. ಈ ಮಧ್ಯೆ ನಗರದ ಹೊಟೇಲೊಂದರಲ್ಲಿ
ಮಳೆಯ ನಡುವೆಯೂ ತೈಲ ಬೆಲೆ ಏರಿಕೆಯನ್ನ ವಿರೋಧಿಸಿ, ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಹಾಗೂ ಕಾಂಗ್ರೆಸ್ ಮುಖಂಡ ವಿವೇಕ್ ರಾಜ್ ನೇತೃತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಕಾಂಗ್ರೆಸ್ ಕಚೇರಿಯಿಂದ ಮಲ್ಲಿಕಟ್ಟೆಯ ಪ್ರೆಟೋಲ್ ಬಂಕ್ನಲ್ಲಿ ಲಾರಿಗೆ ಡಿಸೇಲ್
ಮಳೆಗಾಲ ಆರಂಭವಾಯಿತೆಂದರೆ ಜೆಪ್ಪು ಗುಜ್ಜರಕೆರೆ ಸಮೀಪದ ಅರೆಕೆರೆಬೈಲು ನಿವಾಸಿಗಳ ಸಂಕಷ್ಟ ಹೇಳ ತೀರದು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಒಂದೆಡೆಯಾದರೆ.. ಅವ್ಯವಸ್ಥಿತ ಚರಂಡಿ ವ್ಯವಸ್ಥೆಯಿಂದ ರಸ್ತೆ ಮೇಲೆ ಡ್ರೈನೇಜ್ ನೀರು ಉಕ್ಕಿ ಹರಿಯುತ್ತಿದೆ. ಮಾತ್ರವಲ್ಲದೆ ಮನೆಗಳಿಗೆ ಕೊಳಚೆ ನೀರು ನುಗ್ಗುವ ಪರಿಸ್ಥಿತಿಯಲ್ಲಿದೆ. ಈ ಬಗ್ಗೆ ಒಂದು ವರದಿ. ಹಲವು ದಶಕಗಳಿಂದ ಈ ಸಮಸ್ಯೆ ವಿಪರೀತವಾಗಿ ಬೆಳೆಯುತ್ತಿದ್ದು, ಇಲ್ಲಿಯವರೆಗೆ ಇದಕ್ಕೆ ಪರಿಹಾರ
ಮಂಗಳೂರಿನ ಕೂಳೂರು ಹಳೆ ಸೇತುವೆಯಲ್ಲಿ ಭಾರೀ ಗಾತ್ರದ ಹೊಂಡಗಳಲ್ಲಿ ಮಳೆ ನೀರು ನಿಂತು ವಾಹನ ಚಾಲಕರು ಪರದಾಡುವ ಜತೆಗೆ ಟ್ರಾಫಿಕ್ ಜಾಮ್ ಪರಿಸ್ಥಿತಿ ಉಂಟಾಗಿದೆ. ಮೈಕ್ರೋ ಟೆಕ್ನಾಲಜಿ ಮೂಲಕ ದುರಸ್ತಿ ಮಾಡಲಾದ ಕೂಳೂರು ಹಳೇ ಸೇತುವೆಯ ಇಕ್ಕೆಲಗಳಲ್ಲಿ ಇದೀಗ ಹೊಂಡ ಬೀಳಲಾರಂಭಿಸಿದೆ. ಡಾಮರು ತೇಪೆ ಹಾಕಿ ಒಂದೆರಡು ತಿಂಗಳು ಕಳೆಯುವುದರೊಳಗೆ ಒಂದೇ ಮಳೆಗೆ ಅಲ್ಲಲ್ಲಿ ಹೊಂಡ ಬಿದ್ದಿದ್ದು, ಸೋಮವಾರ ಮಳೆಯ ನಡುವೆ ಹೆದ್ದಾರಿ ಇಲಾಖೆ ತೇಪೆ ಹಾಕಲು ಮುಂದಾಗಿದ್ದು ಲಾಕ್ ಡೌನ್
ಮಂಗಳೂರು : ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನರವರು ಸಂತ ಆಂತೋನಿಯವರ ವಾರ್ಷಿಕ ಹಬ್ಬದ ಸಂದರ್ಭದಲ್ಲಿ ಜೆಪ್ಪು ಸಂತ ಆಂತೋನಿ ಆಶ್ರಮದಲ್ಲಿ ಸಂಭ್ರಮದ ಬಲಿಪೂಜೆ ಅರ್ಪಿಸಿದರು. ಬಿಶಪರು ತಮ್ಮ ಪ್ರವಚನದಲ್ಲಿ, ಸಂತ ಆಂತೋನಿಯವರು ಮೂವತ್ತಾರು ವರ್ಷದ ತಮ್ಮ ಅಲ್ಪ ಅವಧಿಯ ಜೀವನದಲ್ಲಿ ದೇವರ ರಾಜ್ಯಕ್ಕಾಗಿ ನಿರಂತರ ದುಡಿದರು. ಹಸಿವು, ಬಾಯಾರಿಕೆ ಮತ್ತು ದಣಿವೆನ್ನದೆ ಮೈಲುಗಟ್ಟಲೆ ಕಾಲ್ದಾರಿಯಲ್ಲಿ ನಡೆದು ಯೇಸುಸ್ವಾಮಿಯ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ನಗರದ ಬಲ್ಮಠದ ಪೆಟ್ರೋಲ್ ಪಂಪ್ ಬಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೊ ಅವರು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್ಗೆ 1೦೦ ರೂ ಏರಿಕೆ ಕಂಡಿದೆ. ಇದು ಬಿಜೆಪಿ ಸರ್ಕಾರದ ಸಾಧನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆನಂತರ ಮಂಗಳೂರು ಪಾಲಿಕೆಯ ವಿಪಕ್ಷ ಸದಸ್ಯ
ಬೆಂಗಳೂರಿನಿಂದ ನಿಷೇಧಿತ ಮಾದಕ ‘ಎಂಡಿಎಂಎ’ ವಸ್ತುವನ್ನು ಖರೀದಿಸಿ ಕೇರಳದ ಕಾಸರಗೋಡಿಗೆ ಸಾಗಾಟ ಮಾಡುತ್ತಿದ್ದ ಜಾಲವನ್ನು ಕೊಣಾಜೆ ಪೊಲೀಸರು ಮಂಜನಾಡಿ ಗ್ರಾಮದ ನಾಟೆಕಲ್ ಸಮೀಪದಲ್ಲಿ ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಮ್ಮನಹಳ್ಳಿ ಎಂಬಲ್ಲಿಂದ 65 ಗ್ರಾಂ ತೂಕದ 3.90 ಲಕ್ಷ ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ‘ಎಂಡಿಎಂಎ’ನ್ನು ಖರೀದಿಸಿ ಸ್ವಿಫ್ಟ್
ಪೆಟ್ರೋಲ್ ದರವನ್ನು ಲೀಟರ್ ಗೆ ರೂ,1೦೦ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಡೀಸೆಲ್ ಹಾಗೂ ಇತರೆ ಉತ್ಪನ್ನಗಳ ದರ ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ವಿರೋಧ ವ್ಯಕ್ತಿ ಪಡಿಸಿದೆ. ಇದರಿಂದ ಅವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು ಜನರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರದ ನಿಜ ಬಣ್ಣ ಒಂದೊಂದಾಗಿ
ಮಂಗಳೂರಿನ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಡಿ ಹೊಸದಾಗಿ ನಿರ್ಮಿಸಲು ಶುಕ್ರವಾರ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿಗೆ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ. ಸುಮಾರು 20 ವರ್ಷಗಳ ಹಿಂದಿನ ಬಾವಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದ್ದು ಸಾರ್ವಜನಿಕರಿಗೆ ಆಶ್ಚರ್ಯ
ದೇಶದಲ್ಲಿ ವ್ಯಾಪಕವಾಗಿ 100ರ ಗಡಿ ಸೇರಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳದ ವಿರುದ್ಧ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ ಸಾಲ್ಯಾನ್ ರವರ ನೇತೃತ್ವದಲ್ಲಿ ಶನಿವಾರ ಮಂಗಳೂರಿನ ಲೇಡಿಹಿಲ್ ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತಾಡಿದ ಮಾಜಿ ಶಾಸಕ ಜೆ.ಆರ್.ಲೋಬೋರವರು ಇತಿಹಾಸದಲ್ಲೇ ಪ್ರಥಮ ಬಾರಿಗೆ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಆಗಿದೆ.ದೇಶದ ಜನರ ಈ ಸಂಕಷ್ಟಕ್ಕೆ ದೇಶದ


















