ಪ್ರತೀ ವರ್ಷದಂತೆ ಈ ವರ್ಷವೂ ಓಣಂ ಸಂದರ್ಭ ಅಯ್ಯಪ್ಪ ಸ್ವಾಮಿ ಮಾಲೆಧರಿಸಿ ಯಾತ್ರೆಗೆ ಹೊರಟ ಸ್ಬಾಮಿಗಳ ಮೂಲಕ ಅಯ್ಯಪ್ಪನಿಗೆ ಬಹಳ ಪ್ರಿಯವಾದ ಪಡಿಪೂಜೆಯು ಮುಲ್ಕಿ ಅಯ್ಯಪ್ಪ ಮಂದಿರದಲ್ಲಿ ನಡೆಯಿತು. ಪೂಜೆಯ ಬಳಿಕ ಮಾತನಾಡಿದ ಗುರುಸ್ವಾಮಿ ಗಿರೀಶ್ ಪಲಿಮಾರು, ಜ್ಯೋತಿ ಸ್ವರೂಪನಾದ ಅಯ್ಯಪ್ಪನನ್ನು ಸಾಕ್ಷಾತ್ಕಾರಗೊಳಿಸುವ ನಿಟ್ಟಿನಲ್ಲಿ ಈ ದೀಪಾರಾಧನೆ ಅಂದರೆ ಪಡಿಪೂಜೆ
ಮಂಗಳೂರಿನ ಪರಪಾದೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಗೋಡೆ ಬರಹವನ್ನು ಮಂಗಳೂರು ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅನಾವರಣಗೊಳಿಸಿದರು. ಕಾರ್ಯಕ್ರಮವು ಮುತ್ತೂಟ್ ಸಾಮಾಜಿಕ ಜವಾಬ್ದಾರಿ ವಿಭಾಗ ಮತ್ತು ಪ್ರಥ್ವಿ ಚಾರಿಟೇಬಲ್ ಟ್ರಸ್ಟ್ ಮೂಲಕ ನೆರವೇರಿತು. ಇದೇ ವೇಳೆ ಮಂಗಳೂರು ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅವರು ಮಾತನಾಡಿ, ಮುತ್ತೂಟ್ನ ಸಿಎಸ್ಆರ್ ಕಾರ್ಯಕ್ರಮವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ
ಮಂಗಳೂರಿನ ಜ್ಯೋತಿ ಸರ್ಕಲ್ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ವಿಜೃಂಭಣೆಯಿಂದ ನಡೆಯಿತು. ವರಮಹಾಲಕ್ಷ್ಮೀ ಪೂಜೆಯ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ಗಳನ್ನು ನೀಡಲಾಗುತ್ತಿದೆ.ಕಾರ್ಯಕ್ರಮವನ್ನು ಗ್ರಾಹಕರಾದ ಭರತ್ ಉಳ್ಳಾಲ್ ದಂಪತಿಗಳು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಟಾಟಾ ಎಂದರೆ ಜಗತ್ತಿನಲ್ಲಿಯೇ ಒಂದು ನಂಬಿಕೆಯ ಹೆಸರಾಗಿದ್ದು,
ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ ದೋಚಿದ್ದ ಪ್ರಕರಣದ ಆರೋಪಿ ಬಜಾಲ್ ನಂತೂರಿನ ನೌಫಾಲ್ ಯಾನೆ ಟೊಪ್ಪಿ ನೌಫಾಲ್ (31) ಎಂಬಾತನನ್ನು ಪಾಂಡೇಶ್ವರ ಪೆÇಲೀಸರು ಬಂಧಿಸಿದ್ದಾರೆ.ಪ್ರಕರಣದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಜೀದ್ ಸೈಯದ್ ಎಂಬವರನ್ನು ನೌಫಾಲ್ ಮತ್ತು ಪುಚ್ಚ ಎಂಬವರು ಕಿಡ್ನಾಪ್ ಮಾಡಿ 5 ಲಕ್ಷ ರೂ. ಹಾಗೂ ಕಾರು ನೀಡುವಂತೆ ಬೇಡಿಕೆ ಇಟ್ಟಿದ್ದರು. ಅವರು ಕೊಡಲು ನಿರಾಕರಿಸಿದಾಗ ಅವರ
ಕೋಸ್ಟಲ್ವುಡ್ನ ಬಹುನಿರೀಕ್ಷಿತ ಸಿನಿಮಾ ರಾಪಟ. ಇನ್ನೇನು ಕೆಲವೇ ದಿನಗಳಲ್ಲಿ ಕರಾಳಿಯಾದ್ಯಂತ ರಾಪಟ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ದ ಟಿಕೆಟ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ
ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೂಡಬಿದ್ರೆ ಗಂಟಲ್ಕಟ್ಟೆ ರಾಜೇಶ್ ಯಾನೆ ಜಗದೀಶ್ ಪೂಜಾರಿ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಆರೋಪಿಯನ್ನು ಮೈಸೂರು ನಂಜನಗೂಡು ಎಂಬಲ್ಲಿಂದ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ
ಭಾರತ್ ಮಿಷನ್ ಬಿಷಾಕ್ ಬಿಎಮ್ಬಿ ಮಂಗಳೂರು ಘಟಕದ ವೈದ್ಯರುಗಳಾದ ಡಾ. ಹರಿಕೃಷ್ಣ ಭಟ್, ಡಾ. ಸೌಮ್ಯಶ್ರೀ ಕೆ ಎಂ ಮತ್ತು ಡಾ. ಜ್ಯೋತಿ ಭಾರಧ್ವಾಜ್ ರವರು ಆಯೋಜಿಸಿದ ಎಸ್ಬಿಇಬಿಎ “ಕೌಮಾರಂ” – ಬಾಲ ರೋಗ ಚಿಕಿತ್ಸೆಯ ಬಗ್ಗೆ ರಾಷ್ಟ್ರೀಯ ಮಟ್ಟದ 50ನೇ ವಿಚಾರ ಸಂಕಿರಣವು ಮಂಗಳೂರು ನಗರದ ಜಿ. ಎಚ್. ಎಸ್ ರೋಡ್ನ ಹೋಟೆಲ್ ವರ್ದ ಸಾಫ್ರೋನ್ನಲ್ಲಿ ಸಂಪನ್ನಗೊಂಡಿತು. ಭಾರತದ ವಿವಿಧ 14 ರಾಜ್ಯಗಳಿಂದ ಬಂದ ಆಯುರ್ವೇದ
ಮಂಗಳೂರಿನ ಅದ್ಯಪಾಡಿ ಶ್ರೀ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ಗೋಪಾಲ ಕೃಷ್ಣ ಭಟ್ ಹಾಗೂ ಪ್ರಸಾದ್ ಭಟ್ ಅವರು, ಪೂಜ ವಿಧಿ ವಿಧಾನ ನೆರವೇರಿಸಿದರು. ಊರ ಪರ ವೂರ ಹಾಗೂ ಬೈಲು ಮಾಗಣೆಯ ಸಮಸ್ತ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಕ್ಷೇತ್ರದ ಆಡಳಿತ ಮಂಡಳಿಯವರು ಹಾಗೂ ಮೊಕ್ತೇಸರರದ ಮೋನಪ್ಪ ಮೇಸ್ತ್ರಿ ಉಪಸ್ಥಿತರಿದ್ದರು.
ಮೂಡುಬಿದಿರೆ: ಮೂಡುಬಿದಿರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಹೊಸಂಗಡಿ ಸಮೀಪದ ಪಡಂದಡ್ಕದಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಬಸ್ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಉಳಿದಂತೆ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವೇಣೂರು ಪೆÇಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ರಾಜ್ ಬಿ. ಶೆಟ್ಟಿ, ಚೈತ್ರಾ ಆಚಾರ್ ನಟನೆಯ ಟೋಬಿ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಗೊಂಡಿದೆ. ರಾಜ್ಯದೆಲ್ಲೆಡೆ ಟೋಬಿ ಸಿನಿಮಾ ನೋಡಿ ಪ್ರೇಕ್ಷಕರು ಭೇಷ್ ಎನ್ನುತ್ತಿದ್ದಾರೆ. ತಮ್ಮ ಸಹಜ ಅಭಿನಯದ ಮೂಲಕ ಎಲ್ಲರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ `ಟೋಬಿ' ಚಿತ್ರದ ಫಸ್ಟ್ ಲುಕ್ ನಲ್ಲಿ ಡಿಫರೆಂಟಾಗಿ ಕಾಣಿಸಿಕೊಂಡಿದ್ದರು. ಅದಾಗಲೇ ಸಿನಿಮಾದ ಬಗ್ಗೆ ಪ್ರೇಕ್ಷಕರು ತುಂಬಾ ನಿರೀಕ್ಷೆಯನ್ನಿರಿಸಿದ್ದರು. ಇಂದು ರಾಜ್ಯದ್ಯಾಂತ 175