Home ಕರಾವಳಿ Archive by category ಮಂಗಳೂರು (Page 48)

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ

ಮಂಗಳೂರು: ಸಾಮಾಜಿಕ ಮುಂದಾಳು ಮುಮ್ತಾಜ್ ಆಲಿ ಮೃತದೇಹ ಪತ್ತೆ

ಮರ್ಮ ರೀತಿಯಲ್ಲಿ ನಾಪತ್ತೆಯಾಗಿದ್ದ ಮಂಗಳೂರು ಬಡಗಣ ಕ್ಷೇತ್ರದ ಮಾಜೀ ಶಾಸಕ ಮೊಯ್ದಿನ್ ಬಾವಾ ಅವರ ಸಹೋದರ ಮಮ್ತಾಜ್ ಆಲಿ ಖಾನ್ ಅವರ ಮೃತ ದೇಹವು ಫಲ್ಗುಣಿ ನದಿಯಲ್ಲಿ ಕೂಳೂರು ಸೇತುವೆ ಪಕ್ಕದಲ್ಲೇ ಪತ್ತೆಯಾಗಿದೆ. ಅವರ ಕಾರು ಅಪಘಾತ ಆದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಾರಿನ ಕೀ ಮತ್ತು ಮೊಬಾಯಿಲ್ ಕೂಡ ಸಿಕ್ಕಿತ್ತು. ಮಮ್ತಾಜ್ ಆಲಿ ಖಾನ್ ತಾಕೊಲೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿತ್ತು. ರಕ್ಷಣಾ ತಂಡಗಳು ಕೂಡಲೆ ಹುಡುಕಾಟದಲ್ಲಿ ತೊಡಗಿದರೂ ಒಂದು ದಿನದಷ್ಟು ಕಾಲ

ಮಂಗಳೂರು: ಕಪಿತಾನಿಯೋ ಕ್ರೀಡಾಂಗಣದಲ್ಲಿ ದ.ಕ. ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಕಪಿತಾನಿಯೋ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟವು ಕಪಿತಾನಿಯೋ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟವನ್ನು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವದ ಉಪನಿರ್ದೇಶಕರಾದ ಜಯಣ್ಣ ಸಿ.ಡಿ. ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಪಿತಾನಿಯೋ ವಿದ್ಯಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಭಗಿನಿ ಪ್ರೆಸಿಲ್ಲ ಮಿನೇಜಸ್ ವಹಿಸಿದ್ದರು.

ಮಂಗಳೂರು: ಅ.8 ರಂದು ದಸರಾ ಬಹುಭಾಷಾ ಕವಿಗೋಷ್ಠಿ

ಮಂಗಳೂರು : ದಸರಾ ಬಹುಭಾಷಾ ಕವಿಗೋಷ್ಠಿಯು ಅ.8ರ ಮಂಗಳವಾರ ಅಪರಾಹ್ನ 3.00 ಗಂಟೆಗೆ ಮಂಗಳೂರಿನ ಉರ್ವಾ ಸ್ಟೋರ್ ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ನಡೆಯಲಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್, ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ಮೂರನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಆಯೋಜಿಸಿದೆ.ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯ 12 ಭಾಷೆಗಳ ಕವಿಗಳು ಕವಿತೆ

ಮಂಗಳೂರು: ಶ್ರೀ ರಾಮಕೃಷ್ಣ ಶಾಲೆಯಲ್ಲಿ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮಂಗಳೂರಿನ ಶ್ರೀ ರಾಮಕೃಷ್ಣ ಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಶಾಲೆಯ ಅಡಿಟೋರಿಯಂನಲ್ಲಿ ಸಂಭ್ರಮದಿಂದ ಆಚರಿಸಿದರು. ಶಾಲೆಯ ಪ್ರಾಂಶುಪಾಲರಾದ ಡಾ. ಪ್ರೆಸಿಲ್ಲಾ ಮತ್ತು ಉಪಪ್ರಾಂಶುಪಾಲರಾದ ರೂಪಾ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಇಬ್ಬರು ಮಹಾತ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು. ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಶಾಲೆಯ

ಮಂಗಳೂರು: ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಮಹೇಶ್ ಎಂಬ ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಈಜು ತಜ್ಞರಾದ ಈಶ್ವರ್ ಮಲ್ಪೆ, ಅಗ್ನಿಶಾಮಕ ದಳದವರು ಹುಡುಕಾಟ ಆರಂಭಿಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಸ್ಥಳದಲ್ಲಿದ್ದು,

ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ “ವಿಕೆ ಉತ್ಸವ 2024”

ಮಂಗಳೂರಿನ ಯೆಯ್ಯಾಡಿಯಲ್ಲಿರುವ ವಿ ಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಸಂಸ್ಥೆಯ  ಶೋರೂಮ್‌ನಲ್ಲಿ “ವಿ ಕೆ ಉತ್ಸವ 2024” ಅನ್ನು ಉದ್ಘಾಟನಾ ಕಾರ್ಯಕ್ರಮ ನಡೆಯಿತು.  ಮುಂದಿನ ಮೂರು ತಿಂಗಳುಗಳ ಕಾಲ ನಡೆಯಲಿರುವ ಈ ಉತ್ಸವವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಿಟ್ಟಲ್ ಕುಲಾಲ್ ಮತ್ತು ಅವರ ಪತ್ನಿ ವಿನುತಾ ಕುಲಾಲ್, ಸಿಬ್ಬಂದಿ ಮನೀಶ್, ಸಂತೋಷ್, ಸಂದೀಪ್, ಗಿರೀಶ್, ರೂಬನ್ ಅವರ ಸಮ್ಮುಖದಲ್ಲಿ ಉದ್ಘಾಟಿಸಿದರು. ದಸರಾ ಮತ್ತು

ಮಂಗಳೂರು: ವಿಸ್ಡಮ್ ಎಡ್‌ ನ ನೂತನ ಕಚೇರಿಯ ಉದ್ಘಾಟನೆ

ನವರಾತ್ರಿಯ ಶುಭ ಸಂದರ್ಭದಲ್ಲಿ ವಿಸ್ಡಮ್ ಎಡ್‌ನ ನೂತನ ಕಚೇರಿಯು ಬಳ್ಳಾಲ್ ಬಾಗ್‌ನ ತಕ್ಷಶಿಲಾ ಬಿಲ್ಡಿಂಗ್‌ನಲ್ಲಿ ಶುಭಾರಂಭಗೊಂಡಿತು. ವಿಸ್ಡಮ್ ಎಡ್ ಸಂಸ್ಥೆಯು ಉನ್ನತ ಶಿಕ್ಷಣ, ವಿದ್ಯಾರ್ಥಿವೇತ, ಜಾಗತಿಕ ವಿಶ್ವವಿದ್ಯಾಲಯದ ಪ್ರವೇಶಗಳು, ಶಿಕ್ಷಣ ಸಾಲ ಮಾರ್ಗದರ್ಶಿ, ಪರೀಕ್ಷಾ ತಯಾರಿ ತರಬೇತಿ ಸೇರಿದಂತೆ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಮಾರ್ಗದರ್ಶನವನ್ನು ನೀಡುವ ಸಂಸ್ಥೆಯಾಗಿದ್ದು, ಈಗಾಗಲೇ ದೇಶ ವಿದೇಶಗಳಿಗೆ ತೆರಳಿ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಇದೀಗ

ಕನಸಿನ ಟ್ರಾವೆಲಿಂಗ್ ಆರಂಭಿಸಿದ ಶಟರ್‌ಬಾಕ್ಸ್ ಫಿಲಮ್ಸ್ ತಂಡ: 60 ದಿನಗಳ ಡಿಸ್ಕವರಿ ನೋರ್ತ್ ಈಸ್ಟ್ ಟ್ರಾವೆಲಿಂಗ್

ಶಟರ್‌ಬಾಕ್ಸ್ ಫಿಲಮ್ಸ್‌ನ ಸಚಿನ್ ಶೆಟ್ಟಿ ಮತ್ತು ಅಭಿ ಶೆಟ್ಟಿ ಅವರು ತಮ್ಮ ಕನಸಿನ ಟ್ರಿಪ್ ಮೂಲಕ ದೇಶ ವಿದೇಶದ ಕಲೆ, ಕರಾವಳಿಯ ಸಂಸ್ಕೃತಿಯನ್ನು ಪಸರಿಸಲು ಮುಂದಾಗಿದ್ದು, ಈ ಬಾರಿ, ನೋರ್ತ್ ಈಸ್ಟ್ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ಬಾರಿ ಚೈನಾ, ಮಯನ್ಮಾರ್ ಮತ್ತು ಬಾಂಗ್ಲಾದೇಶದ ಗಡಿಪ್ರದೇಶಕ್ಕೆ ಜಿಮ್ಮಿ ವಾಹನದ ಮೂಲಕ ತೆರಳಲಿದ್ದು, ಅಲ್ಲಿನ ಕಲೆ, ಸಂಸ್ಕೃತಿ, ಆಹಾರ, ಇತ್ಯಾದಿ ವಿಚಾರಗಳನ್ನು ತಿಳಿಸುವ ಉದ್ದೇಶದಿಂದ ಹಾಗೂ ಕರಾವಳಿಯ ಸಂಸ್ಕೃತಿಯನ್ನು ಆ ದೇಶದ

ಮಂಗಳೂರು: ತರಂಗಿಣಿ ಖ್ಯಾತಿಯ ಕೆ.ಎಂ ಸಚ್ಚೀಂದ್ರನಾಥ್ ನಿಧನ

ಕೇರಳ ಸಮಾಜಂನ ಮಾಜಿ ಅಧ್ಯಕ್ಷ, ಹಿರಿಯ ಸಂಘಟಕ, ತರಂಗಿಣಿ ಖ್ಯಾತಿಯ ಕೆ.ಎಂ ಸಚ್ಚೀಂದ್ರನಾಥ್(89) ಅವರು ನಿಧನ ಹೊಂದಿದ್ದಾರೆ.ಮೂಲತಃ ಕೇರಳದವರಾಗಿರುವ ಅವರು ಕುದ್ರೋಳಿಯಲ್ಲಿ ವಾಸವಾಗಿದ್ದರು. ಭಾರತ್ ಫ್ಲೈವುಡ್‌ನಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ಅವರು ನಂತರ ಕುದ್ರೋಳಿಯಲ್ಲಿ ಮಂಗಳೂರು ಫ್ಲೈವುಡ್ ಉದ್ಯಮ ನಡೆಸುತ್ತಿದ್ದರು.ತರಂಗಿಣಿ ಎಂಬ ಸಂಸ್ಥೆಯ ಮೂಲಕ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳನ್ನು ಮಂಗಳೂರಿನಲ್ಲಿ ನಿರಂತರವಾಗಿ ಆಯೋಜಿಸುತ್ತಿದ್ದರು.