Home ಕರಾವಳಿ Archive by category ಮಂಗಳೂರು (Page 48)

ರಾಜ್ಯದಲ್ಲಿ ಮುಂದುವರೆದ ಮಳೆ – ಮುನ್ನೆಚ್ಚರಿಕೆಯಿಂದ ಇರುವಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್

ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ

ಗೃಹಲಕ್ಷ್ಮೀ ಗೆ ಅಡ್ಡಿಯಾಗುತ್ತಿದ್ದಾನೆ ಸರ್ವರ್ ಡೌನ್ ಎಂಬ ಭೂತ..!

ಸರ್ಕಾರದ ಯೋಜನೆಗಳು ಉತ್ತಮವಾಗಿದ್ದರೂ ಅದು ಕಾರ್ಯಗತವಾಗಲು ನೂರೆಂಟು ಅಡ್ಡಿ ಆತಂಕಗಳು.ಗೃಹಜ್ಯೋತಿ ಬಹಳಷ್ಟು ಕುಟುಂಬಗಳ ಮನೆಮನ ಬೆಳಗಿದೆ, ಕಾರಣ ಅದರ ಅನುಷ್ಠಾನಕ್ಕೆ ಯಾವುದೇ ಸರ್ವರ್ ಡೌನ್ ಎಂಬ ಸೈಬರ್ ಗಳ ಸ್ಲೋ ಗನ್ ಅಡ್ಡಿ ಮಾಡಿಲ್ಲ. ಇದೀಗ ಒಂದೊಂದು ಸೈಬರ್ ಶಾಪ್ ಗಳಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಅನುಷ್ಠಾನಗೊಳಿಸಲು ಹತ್ತಾರು ಮಹಿಳೆಯರ ಗುಂಪು ಕಾಯುತ್ತಿರುವುದು ಕಾಣ ಬಹುದು, ಕಾರಣ ಸರ್ವರ್ ಡೌನ್….ಈ ಸರ್ವರ್ ಡೌನ್ ಎಂಬುದು ಯಾರ ಸೃಷ್ಠಿ..? ಗೃಹಜ್ಯೋತಿ

ಉರ್ವಾ ಜಿಲ್ಲಾ ಡಾ. ಅಂಬೇಡ್ಕರ್ ಭವನದಲ್ಲಿ ಬ್ಯಾಂಕ್ ಆಫ್ ಬರೋಡಾದ 116ನೇ ಸಂಸ್ಥಾಪನಾ ದಿನಾಚರಣೆ

ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾದ 116ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವು ಮಂಗಳೂರಿನ ಉರ್ವಾ ಜಿಲ್ಲಾ ಡಾ. ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕಾರಿ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ಅವರು ಮಾತನಾಡಿ, ಬ್ಯಾಂಕ್ ಸ್ವ ಸಹಾಯ ಸಂಘಗಳ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿದೆ. ಉತ್ತಮ ಮನೆ, ಉತ್ತಮ ಆಸ್ಪತ್ರೆಗಳ ಸೇವೆ ಈ ಎಲ್ಲಾ

ಜುಲೈ 26ರಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ ಕಾರ್ಗಿಲ್ ವಿಜಯೋತ್ಸವ

ಸುರತ್ಕಲ್: “ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ 10ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಹಾಗೂ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ಕಾರ್ಯಕ್ರಮ, ಇಡ್ಯಾ ದೇವಸ್ಥಾನದಿಂದ ಹಣತೆಯ ಮೆರವಣಿಗೆ, ಸೈನಿಕರ ಗೌರವ ಇತ್ಯಾದಿ ಕಾರ್ಯಕ್ರಮ ಜುಲೈ 26ರ ಸಂಜೆ ನಡೆಯಲಿದೆ” ಎಂದು ಸಂಘಟನೆಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾಹಿತಿ ನೀಡಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಸೇವಾ ವೃಂದ ವೇದಿಕೆ, ಸುರತ್ಕಲ್

MDMA ಹಾಗೂ ಪಿಸ್ತೂಲ್ ಹೊಂದಿದ ಕುಖ್ಯಾತ ಡ್ರಗ್ ಪೆಡ್ಲರ್‍ಗಳ ಸೆರೆ

ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿದೆ. ಸುಮಾರು 9ಲಕ್ಷದ ಮೌಲ್ಯದ ಎಂಡಿಎಂಎ ಡ್ರಗ್ಸ್ ಹಾಗೂ ಪಿಸ್ತೂಲ್ , ಡ್ರಾಗನ್ ಚೂರಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದ್ದಾರೆ. ಅವರು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಉಳ್ಳಾಲ ತಾಲೂಕು ತಲಪಾಡಿ

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‍ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಕ್ರಮ ವಹಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಆರೋಪಿಗಳು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು

ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳ ಮಾರಾಟ

ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್ಸ್ ಲೇಪಿತ ಚಾಕೊಲೇಟ್‌ಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳನ್ನು ‘ಬ್ಯಾಂಗ್’ ಚಾಕೊಲೇಟ್‌ಗಳ

CITU ಸದಸ್ಯರಾದ ಉಮೇಶ್ ಪೂಜಾರಿ ನಿಧನ

ನಿಟ್ಟೆ ಲೆಮಿನಾ ಫೌಂಡ್ರಿ ಸಂಸ್ಥೆಯ ಕಾರ್ಮಿಕರೂ,CITU ಸದಸ್ಯರಾದ ಉಮೇಶ್ ಪೂಜಾರಿಯವರು ತಾ.17-07-2023ರಂದು ರಾತ್ರಿ ಪಾಳಯದಲ್ಲಿ ಕಂಪೆನಿಯಲ್ಲಿ ದುಡಿಯುತ್ತಿದ್ದಾಗ,ಅವಘಡ ಸಂಭವಿಸಿದ್ದು,ಕೂಡಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಮನೆಗೆ ತೆರಳಿದ ಉಮೇಶ್ ರವರು ಮಂಗಳವಾರ ದಿನವಿಡೀ ಮನೆಯಲ್ಲಿ ವಿಶ್ರಾಂತಿ ಪಡೆದು ಬುಧವಾರ ಮತ್ತೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗುತ್ತಾರೆ.ಕಾಲಿಗೆ ಸಂಪೂರ್ಣವಾಗಿ ಬ್ಯಾಂಡೇಜ್ ಹಾಕಿದ್ದರಿಂದ

ಬಿಜೆಪಿ ಯುವ ಮೋರ್ಚ ವತಿಯಿಂದ ಸ್ಪೀಕರ್ ವಿರುದ್ಧ ಪ್ರತಿಭಟನೆ

ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯ ನೀಡಬೇಕಾಗಿದ್ದ ಸ್ಪೀಕರ್ ವಿರುದ್ಧ ಬಿಜೆಪಿ ಯುವ ಮೋರ್ಚ ಸುರತ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಂಗಳೂರು ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ರಾಜ್ಯ ಯುವ ಮೋರ್ಚಾ

ಬಿಗ್ ಸಿನೆಮಾಸ್ ನಲ್ಲಿ “ನಿಮ್ಮೆಲ್ಲರ ಆಶೀರ್ವಾದ” ಪ್ರೀಮಿಯರ್ ಶೋ

ಮಂಗಳೂರು: ವಿಭಿನ್ನ ಕಥೆ, ಹೊಸ ಕಲಾವಿದರನ್ನೊಳಗೊಂಡ “ನಿಮ್ಮೆಲ್ಲರ ಆಶೀರ್ವಾದ” ಕನ್ನಡ ಚಿತ್ರದ ಪ್ರೀಮಿಯರ್ ಶೋ ಗುರುವಾರ ಸಂಜೆ ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಅವರು, “ನಿಮ್ಮೆಲ್ಲರ ಆಶೀರ್ವಾದ ಸಿನಿಮಾ ರೊಮ್ಯಾಂಟಿಕ್ ಕಾಮಿಡಿ ಆಗಿದ್ದು ನಾಯಕ ನಟ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ.