Home ಕರಾವಳಿ Archive by category ಮಂಗಳೂರು (Page 68)

ಧಾರ್ಮಿಕ ಕ್ಷೇತ್ರದಿಂದ ಧರ್ಮದ ಜಾಗೃತಿ ನಡೆಯಲಿ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಧಾರ್ಮಿಕ ಕ್ಷೇತ್ರಗಳ ಮೂಲಕ ಧರ್ಮದ ಜಾಗೃತಿ ನಡೆಯಬೇಕು, ಭಕ್ತಿಯ ಆಲಯಗಳಲ್ಲಿ ಭಕ್ತರ ನಿಸ್ವಾರ್ಥ ಸೇವಾ ಸಂಪನ್ನತೆ ಹೆಚ್ಚಾದಾಗ ಕ್ಷೇತ್ರ ಬೆಳಗುತ್ತದೆ. ನಮ್ಮ ಹಿಂದೂ ಸಂಸ್ಕೃತಿ ಪ್ರತೀ ಮನೆಯಿಂದ ಬೆಳಗಿದಲ್ಲಿ ಅದು ಜಗತ್ತಿಗೆ ಬೆಳಕಾಗುತ್ತದೆ ಎಂದು ಉಡುಪಿ ಅಧೋಕ್ಷಜ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ. ತೋಕೂರು ಶ್ರೀ ಸುಬ್ರಹ್ಮಣ್ಯ

ನೂತನ ಸರ್ಕಾರದಲ್ಲಿ ಬಿಲ್ಲವ ಮುಖಂಡರಿಗೆ ಸಚಿವ ಸ್ಥಾನ ನೀಡಿ : ಸತ್ಯಜಿತ್ ಸುರತ್ಕಲ್

ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದಲ್ಲಿ ಬಿಲ್ಲವ ಸಮುದಾಯದ ಕನಿಷ್ಠ ಎರಡು ಮಂದಿಗೆ ಸಚಿವ ಸ್ಥಾನ ನೀಡಬೇಕೆಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಬ್ಬರು ವಿಧಾನಪರಿಷತ್ ಸದಸ್ಯರನ್ನು ಒಳಗೊಂಡು ಐದು ಜನ ಶಾಸಕರನ್ನು ಹೊಂದಿರುವ ನಮ್ಮ ಸಮಾಜಕ್ಕೆ ಎರಡು ಮಂತ್ರಿಸ್ಥಾನವನ್ನು ನೀಡಬೇಕು. ಅದೇ ರೀತಿ ನೂತನ

ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ನೇಮಕ

ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ಆಯ್ಕೆಯಾಗಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರ ಸೇವೆಯನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ರಾಜೇಶ್ ಪುದುಶೇರಿ ಅವರು ಬೆಂಗಳೂರು ರೈಲ್ವೆಯ ಕಚೇರಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.

ಜೂಜಾಟಗಾರರ ಜತೆ ಶಾಮೀಲು ಆರೋಪ – ಉಳ್ಳಾಲ ಠಾಣೆ ಎಸ್.ಬಿ ಅಮಾನತು

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ

ಗ್ಯಾರಂಟಿ ಕಾರ್ಡ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ : ಐವನ್ ಡಿಸೋಜಾ ಕಿಡಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಬಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, ಫಲಾನುಭವಿಗಳಿಗೆ ಯೋಜನೆಗಳು ಸಿಗಲಿದೆ ಎಂದರು. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಜನರು ಯಾವುದೇ ಗೊಂದಲ ಪಡುವ

ಕುಲಶೇಖರ ಬ್ರಹ್ಮಕಲಶೋತ್ಸ ವ ವೈಭವ : ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆ

ಕುಲಾಲರ ಕುಲದೇವರು ಕುಲಶೇಖರ ಕ್ಷೇತ್ರದ ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆಯು ಇಂದು ಬೆಳಿಗ್ಗೆ ೯.೧೦ರ ಮಿಥುನಲಗ್ನ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ವೇ|ಮೂ| ಬ್ರಹ್ಮಶ್ರೀ ಅನಂತ ಉಪಾಧ್ಯಾಯರ ವೈದಿಕ ನೇತೃತ್ವದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಭಕ್ತಾಧಿಗಳ ಉಪಸ್ಥಿತಿಯಲ್ಲಿ ನೆರವೇರಿತು. ವಿಷ್ಣುಸ್ವರೂಪಿ ಶ್ರೀ ವೀರನಾರಾಯಣ ದೇವರ ಸಾನಿಧ್ಯವು ದಕ್ಷಿಣ

ದೇಶವನ್ನೇ ತಲ್ಲಣಗೊಳಿಸಿದ ಮಂಗಳೂರು ವಿಮಾನ ದುರಂತಕ್ಕೆ ಹದಿಮೂರು ವರ್ಷ

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾಯಿಂದ ಬಂದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ಲ್ಯಾಂಡ್ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳ ಜಾರಿತ್ತು. ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಮೃತಪಟ್ಟಿದ್ದರು. 8 ಮಂದಿಯಷ್ಟೇ ಬದುಕುಳಿದಿದ್ದರು. ಊರಿಗೆ ಮರಳುವ ಖುಷಿಯಲ್ಲಿ ವಿಮಾನದಲ್ಲಿ ಬಂದು ಇನ್ನೇನು ಇಳಿಯಲು ಸಿದ್ಧತೆ ನಡೆಸುತ್ತಿದ್ದರು. ನಸು ನಿದ್ದೆಯಲ್ಲಿದ್ದವರು ಭೀಕರ

ಮಂಗಳೂರು : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಕಾರ್ಯಕ್ರಮ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಕಾರ್ಯಕ್ರಮ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಲ್ಲಿ ನಡೆಯಿತು. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ  ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಸಂಯೋಜಕರು ತೇಜಸ್ ರಾಜ್, ಜಿಲ್ಲಾ ಕಾಂಗ್ರೆಸ್ ಆಸಾಂಘಟಿತ ಸಮಿತಿ ಅಧ್ಯಕ್ಷರಾದ ಬಿ ಎಂ ಅಬ್ಬಾಸ್ ಅಲಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ

 ಸಂಪೂರ್ಣವಾಗಿ ಜೀರ್ಣೋದ್ಧಾರಗೊಂಡಿರುವ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಬ್ರಹ್ಮಕುಂಭಾಭಿಷೇಕ ಜರುಗಿತು. ದೇವಳದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ೫-೪೫ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕುಂಭಾಭಿಷೇಕ ನಡೆಯಲಿದೆ. ಕಲಾಶಾಭಿಷೇಕ, ಪ್ರಸನ್ನಪೂಜೆ, ನ್ಯಾಸಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಹಗಲು ರಥೋತ್ಸವ, ಪಲ್ಲಪೂಜೆ, ಪ್ರಸನ್ನಪೂಜೆ, ಮಹಾಅನ್ನಂತರ್ಪಣೆ, ಉತ್ಸವಬಲಿ, ಶ್ರೀ ಭೂತಬಲಿ,

ಮಂಗಳೂರು : ಮೇ 22ರಿಂದ 24ರ ವರೆಗೆ ಮಂಗಳೂರಿನಲ್ಲಿ ಚಿಣ್ಣರ ಕಲರವ

ಚಿಣ್ಣರ ಚಾವಡಿ ಮಂಗಳೂರು ಆಶ್ರಯದಲ್ಲಿ ಮೇ 22ರಿಂದ 24ರವರೆಗೆ ನಗರದ ಸಂತ ಅಲೋಶಿಯಸ್ ಹೈಸ್ಕೂಲ್ ನ ಸಭಾಂಗಣದಲ್ಲಿ ಚಿಣ್ಣರ ಕಲರವ – 2023 ಮಕ್ಕಳ ಸಂತಸ ಕಲಿಕಾ ಕಾರ್ಯಗಾರವು ಜರುಗಲಿದೆ. ಮೇ 22ರಂದು ಸೋಮವಾರ ಬೆಳಿಗ್ಗೆ 9.30ಕ್ಕೆ ಪ್ರಾರಂಭಗೊಳ್ಳಲಿರುವ ಕಾರ್ಯಗಾರದ ಉದ್ಘಾಟನೆಯನ್ನು ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ರೆ. ಫಾ. ಮೆಲ್ವಿನ್ ಪಿಂಟೋ SJ ಯವರು ನಡೆಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಮರಸ್ಯ ಮಂಗಳೂರು ಅಧ್ಯಕ್ಷರಾದ ಮಂಜುಳಾ ನಾಯಕ್,ಜಿಲ್ಲಾ