Home ಕರಾವಳಿ Archive by category ಮೂಡಬಿದರೆ (Page 16)

ಮೂಡುಬಿದಿರೆ: ಓಮ್ನಿ ಕಾರಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು

ಮೂಡುಬಿದಿರೆಯ ಹಂಡೇಲು ಬಳಿಯಲ್ಲಿ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹೊರಗೋಡಿ ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳದ ಸಿಬಂದಿಗಳು ತಕ್ಷಣ ಧಾವಿಸಿ ಬಂದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಗ್ಯಾಸ್ ಸ್ಪೋಟಗೊಂಡು ಬೆಂಕಿ ಹಿಡಿದಿರಬೇಕೆಂದು ಶಂಕಿಸಲಾಗಿದೆ.

ಟಯರ್ಸ್ ಉದ್ಯಮಿ ಪೂವಪ್ಪ ಕುಂದರ್ ನಿಧನ

ಮೂಡುಬಿದಿರೆ : ಕಳೆದ ಹಲವು ವರ್ಷಗಳಿಂದ ಟಯರ್ ಉದ್ಯಮವನ್ನು ನಡೆಸುತ್ತಾ ಬಂದಿರುವ ಹನುಮಾನ್ ಟಯರ‍್ಸ್ ನ ಮಾಲಕ, ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಸಾಮಾಜಿಕ ಕಾರ್ಯಕರ್ತ ಪೂವಪ್ಪ ಕುಂದರ್ ಅವರು ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತ: ಪರಂಗಿಪೇಟೆಯ ನಿವಾಸಿಯಾಗಿದ್ದ ಪೂವಪ್ಪ ಕುಂದರ್ ಮೂಡುಬಿದಿರೆಗೆ ಉದ್ಯೋಗವನ್ನು ಅರಸಿಕೊಂಡು ಬಂದು ಮೂಡುಬಿದಿರೆಯಲ್ಲಿ ಮಂಜುನಾಥ ಟೈರ್ ರಿಸೋಲಿಂಗ್ ಘಟಕದ ಮೂಲಕ ಅನುಭವ ಗಳಿಸಿ ಬಳಿಕ ಸ್ವರಾಜ್ಯ ಹನುಮಾನ್

ಮೆಕ್ಕಾ- ಮದೀನಕ್ಕೆ ತೆರಳಿದ್ದ ವ್ಯಕ್ತಿಗೆ ಹೃದಯಾಘಾತ

ಮೂಡುಬಿದಿರೆ: ಮೆಕ್ಕಾ ಮದೀನಕ್ಕೆ ಯಾತ್ರೆಗೆ ತೆರಳಿದ್ದ ಇಲ್ಲಿನ ಕೊಡಂಗಲ್ಲು ನಿವಾಸಿ ಶನಿವಾರ ಹ್ರದಯಾಘಾತಕ್ಕೊಳಗಾಗಿ ಸಾವನಪ್ಪಿದ ಘಟನೆ ನಡೆದಿದೆ.ಮೃತ ವ್ಯಕ್ತಿ ಕೊಡಂಗಲ್ಲು ನಿವಾಸಿ ಹಾಮ್ಮದ್(73)ಎಂದು ತಿಳಿದು ಬಂದಿದೆ. ಇವರು ಎರಡು ವಾರಗಳ ಹಿಂದೆ ತನ್ನ ಕುಟುಂಬಿಕರ ಜತೆ ಮೆಕ್ಕಾ ಮತ್ತು ಮದೀನ ಕ್ಷೇತ್ರಕ್ಕೆ ಯಾತ್ರೆ ಹೊರಟಿದ್ದರು. ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಶನಿವಾರ ಮಧ್ಯಾಹ್ನ ವಿಮಾನ ಮೂಲಕ ಮದೀನ ಸಮೀಪದ ಜಿದ್ದಾ ಏರ್ ಪೋರ್ಟ್ ಗೆ ಹೊರಡಲು

ಮೂಡುಬಿದಿರೆ : ಕನ್ನಡ ಭಾಷಾ ಬೋಧಕರಿಗೆ ಕಾರ್ಯಾಗಾರ

ಶಿಕ್ಷಕರಿಗೆ ಕನ್ನಡ ಸಾಹಿತ್ಯ ಚರಿತ್ರೆ, ಭಾರತದ ಎಲ್ಲ ಮತಧರ್ಮಗಳು, ಸಾಹಿತ್ಯ, ಸಂಗೀತಾದಿ ಸಾಂಸ್ಕೃತಿಕ ಪರಿಚಯ ಒಂದಿಷ್ಟು ಇರಬೇಕಾಗಿದೆ; ಶರೀರ ಭಾಷೆಯನ್ನೂ ಬೋಧನೆಯ ಮಾಧ್ಯಮವಾಗಿ ಬಳಸುವ, ನೋಟ್ಸ್ ಕೊಡದೆ ಸ್ವಂತಿಕೆ ಬೆಳೆಸುವ, ಪಾಠ ಬಿಟ್ಟು ಅನ್ಯ ಲೇಖನಗಳ ಕಾಪಿ ಬರೆಸುವ, ಉಚ್ಚಾರ ಹೇಳಿಕೊಡುವ, ಪಾಠವನ್ನು ವಿಷಯದ ದೃಷ್ಟಿಗಿಂತಲೂ ಭಾಷೆಯ ದೃಷ್ಟಿಯಿಂದ ನೋಡುವ , ಕಲಿಸುವ ಸಾಮರ್ಥ್ಯವನ್ನು ಹೊಂದಿರಬೇಕಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ

ಕಲ್ಲಬೆಟ್ಟುವಿನಲ್ಲಿ ಶಾಲಾ ಔಷಧಿ ವನದ ಉದ್ಘಾಟನೆ

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರ ಸಹಯೋಗದಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ‘ಶಾಲಾ ಔಷಧಿ ವನ’ವನ್ನು ಸಸ್ಯಗಳ ನಾಟಿ ಮೂಲಕ ಉದ್ಘಾಟಿಸಲಾಯಿತು. ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಹಾಗೂ ಸುರೇಶ್ ಕೋಟ್ಯಾನ್ ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ದ್ರವ್ಯಗುಣ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಸುಬ್ರಹ್ಮಣ್ಯ

ದಕ್ಷಿಣ ಕೊರಿಯಾ ಜಾಂಬೂರಿಯಲ್ಲಿ ಮೇಳೈಸಿದ ಯಕ್ಷಗಾನ, ಹುಲಿವೇಷ

ಅಂತರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ವತಿಯಿಂದ ದಕ್ಷಿಣ ಕೊರಿಯಾದ ಸಿಮನ್ ಗಾಮ್ ದ್ವೀಪದಲ್ಲಿ ನಡೆಯುತ್ತಿರುವ ವಿಶ್ವ ಜಾಂಬೂರಿಯಲ್ಲಿ ಮಂಗಳವಾರ ದ.ಕ ಜಿಲ್ಲೆಯ 25 ವಿದ್ಯಾರ್ಥಿಗಳ ತಂಡ ಕರಾವಳಿಯ ಯಕ್ಷಗಾನ ಹಾಗೂ ಹುಲಿವೇಷ ಪ್ರದರ್ಶನವನ್ನು ನೀಡುವ ಮೂಲಕ ಜನಮನ ಗೆದ್ದಿದೆ ಅಲ್ಲದೆ ಭರತನಾಟ್ಯ, ಕೇರಳದ ಮೋಹಿನಿಯಾಟ್ಯಂ, ಒರಿಸ್ಸಾದ ಒಡಿಸ್ಸಿ, ಗುಜರಾತ್‍ನ ಬಾಂಗ್ಡಾ, ರಾಜಸ್ಥಾನದ ಗಾರ್ಭಾ ನೃತ್ಯ, ಮಣಿಪುರದ ಸ್ಟಿಕ್ ಡ್ಯಾನ್ಸ್ ಸೊಬಗನ್ನು ಕಂಡು ವಿದೇಶೀಯರು

ಮೂಡುಬಿದಿರೆಯ ಅಮರಶ್ರೀ ಟಾಕೀಸಿಗೆ ಬೀಗಮುದ್ರೆ

ಮೂಡುಬಿದಿರೆ: ಕಳೆದ 40 ವರ್ಷಗಳಿಂದ ಕಾರ್ಯಚರಿಸುತ್ತಾ ಜನರಿಗೆ ಸದಭಿರುಚಿಯ ಸಿನೆಮಾಗಳನ್ನು ನೀಡಿ ರಂಜಿಸುತ್ತಿದ್ದ ಮೂಡುಬಿದಿರೆಯ ಅಮರಶ್ರೀ ಚಿತ್ರಮಂದಿರಕ್ಕೆ ಬೀಗಮುದ್ರೆ ಬಿದ್ದಿದೆ. ಮಾಜಿ ಸಚಿವ ದಿ.ಕೆ.ಅಮರನಾಥ ಶೆಟ್ಟಿ ಅವರ ಮಗಳು ಅಮರಶ್ರೀ ಅವರ ಹೆಸರಿನಲ್ಲಿರುವ ಈ ಸಿನೆಮಾ ಮಂದಿರವನ್ನು ಕಳೆದ 10 ವರ್ಷಗಳಿಂದ ಕಾರ್ಕಳದ ಜೆರಾಲ್ಡ್ ಕುಟಿನ್ಹಾ ಅವರು ನಡೆಸುತ್ತಿದ್ದರು. ಕಳೆದ 2021ಕ್ಕೆ ಪರವಾನಿಗೆಯ ಅವಧಿಯು ಮುಕ್ತಾಯಗೊಂಡಿರುತ್ತದೆ. ನಂತರ ನವೀಕರಣಗೊಳಿಸದೆ

ಜಾಗತಿಕ ವಿವಿಗಳ ಕ್ರೀಡಾಕೂಟ – ಆಳ್ವಾಸ್‍ನ ಭವಾನಿ ಯಾದವ್‍ಗೆ ಕಂಚು

ಮೂಡುಬಿದಿರೆ: ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಗ್‍ಜಂಪ್‍ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆ ಕ್ರೀಡಾಪಟು ಭವಾನಿ ಯಾದವ್ ಭಗವತಿ ಮೈಲುಗಲ್ಲು ಸಾಧಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ‘ಭವಾನಿ ಯಾದವ್ ಆಳ್ವಾಸ್

ಮೂಡುಮಾರ್ನಾಡು ಸರಕಾರಿ ಶಾಲೆಯಲ್ಲಿ ಕಂಗೊಳಿಸುತ್ತಿರುವ ಅಡಿಕೆ ತೋಟ

ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಕೇವಲ ಭಾಷಣದಲ್ಲಿ ಬೀಗಿದರೆ ಸಾಲದು ಬದಲಾಗಿ ಸರಕಾರಿ ಶಾಲೆಗಳನ್ನು ಹೇಗೆ ಉಳಿಸಿ ಬೆಳೆಸಬಹುದು ಎಂಬ ಚಿಂತನೆಯೂ ಬೇಕು. ಅಂತಹ ಚಿಂತನೆಯೊಂದನ್ನು ಮಾಡಿ ಶಾಲೆಗಳಾಗಿ ಶಾಶ್ವತ ಯೋಜನೆಯನ್ನು ರೂಪಿಸಿ ಮಕ್ಕಳ ಮತ್ತು ಶಾಲಾಭಿಮಾನಿಗಳ ಮನಗೆದ್ದ ಜನಪ್ರತಿನಿಧಿ ಪಡುಮಾರ್ನಾಡು ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀನಾಥ್ ಸುವರ್ಣ ಅವರು. ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಮೂಡುಬಿದಿರೆ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವ

ಮೂಡುಬಿದಿರೆ: ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಸಮಾಜ ಮಂದಿರದಲ್ಲಿ ಪೂಜಿಸಲ್ಪಡುವ ಮೂಡುಬಿದಿರೆ ಗಣೇಶೋತ್ಸವವು ಈ ವರ್ಷ ವಜ್ರಮಹೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನಲೆಯಲ್ಲಿ ಗಣೇಶೋತ್ಸವ ಸಮಿತಿ, ಪವರ್ ಫ್ರೆಂಡ್ಸ್ ಬೆದ್ರ ಮತ್ತು ಸಮಾಜಮಂದಿರ ಸಭಾ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಮರುಜೋಡಣೆಯ ತಪಾಸಣಾ ಉಚಿತ ಶಿಬಿರ ಹಾಗೂ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ