Home ಕರಾವಳಿ Archive by category ಸುರತ್ಕಲ್ (Page 2)

ಸುರತ್ಕಲ್: ಫೆ.18 ರಂದು ಸುರತ್ಕಲ್ ನಲ್ಲಿ ಆಯುಷ್ಮಾನ್ ಮತ್ತು ಇ ಶ್ರಮ ಕಾಡ್೯ ವಿತರಣೆ

ಸುರತ್ಕಲ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಭಾರತ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಬಂಟರ ಸಂಘ (ರಿ) ಸುರತ್ಕಲ್ ಇದರ ಸಹಯೋಗದಲ್ಲಿ ಸಾರ್ವಜನಿಕರಿಗೆ ಅಯುಷ್ಮಾನ್ ಭಾರತ ಕಾರ್ಡ್ ಮತ್ತು ಇ ಶ್ರಮ ಕಾರ್ಡ್ ವಿತರಣಾ ಕಾರ್ಯ ಕ್ರಮ ಸಮಾರಂಭ ಫೆಬ್ರವರಿ 18 ರಂದು ಆದಿತ್ಯವಾರ ಬೆಳಿಗ್ಗೆ 9-30 ಕ್ಕೆ ಬಂಟರ ಭವನ ಸುರತ್ಕಲ್ ಇಲ್ಲಿ

ಸುರತ್ಕಲ್: ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ಇದೆ: ಅಬ್ದುಲ್ ಬಶೀರ್

ಸುರತ್ಕಲ್: ಭಾರತವು ಕೃಷಿ ಪ್ರಧಾನವಾದ ದೇಶವಾಗಿದ್ದು ಇಂದಿನ ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ವಿದೆ ಎಂದು ನಿವೃತ್ತ ಸುರತ್ಕಲ್ ಕೃಷಿ ಅಧಿಕಾರಿ ಅಬ್ದುಲ್ ಬಸೀರ್ ನುಡಿದರು ಅವರು ಬಂಟರ ಸಂಘ ಸುರತ್ಕಲ್, ಲಯನ್ಸ್ ಕ್ಲಬ್ ಸುರತ್ಕಲ್ ಮತ್ತು ಜೆಸಿಐ ಸುರತ್ಕಲ್ ಸಹಯೋಗ ದಲ್ಲಿ ಬಂಟರ ಭವನ ಸುರತ್ಕಲ್ ನಲ್ಲಿ ನಡೆದ ಸಾವಯವ ಕೃಷಿಕರ ಮತ್ತು ಗ್ರಾಹಕರ ಮುಖಾಮುಖಿ ಕಾರ್ಯ ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು ಇಂದಿನ ಕಾಲಘಟ್ಟದಲ್ಲಿ ನಮ್ಮ ಆರೋಗ್ಯ ದ

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್‌ನಲ್ಲಿ 17.68 ಕೋಟಿ ರೂ. ನಗದು ಜಮಾ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ

ಮಂಗಳೂರು: ಕುಳಾಯಿ ಕಿರುಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಭೇಟಿ, ಪರಿಶೀಲನೆ

ಕುಳಾಯಿಯಲ್ಲಿ ನಿರ್ಮಾಣವಾಗುತ್ತಿರುವ ಕಿರು ಜೆಟ್ಟಿಯು ನಾಡದೋಣಿ ಮೀನುಗಾರರಿಗೆ ಅನುಕೂಲವಾಗುತ್ತಿಲ್ಲ. ಈಗಿನ ಬ್ರೇಕ್ ವಾಟರ್ ನಿರ್ಮಾಣ ಅವೈಜ್ನಾನಿಕವಾಗಿದ್ದು, ನಾಡದೋಣಿಕೆ ಪೂರಕವಾಗಿ ನಿರ್ಮಿಸಲಾಗುತ್ತಿಲ್ಲ. ಮೀನುಗಾರರು ಪ್ರಾಣ ಭೀತಿಯಲ್ಲಿದ್ದಾರೆ ಎಂದು ನಾಡದೋಣಿ ಮೀನುಗಾರರು ಹಾಗೂ ಸಾಂಪ್ರದಾಯಿಕ ಮೂಲ ಮೀನುಗಾರರ ಸಂಘಟನೆಗಳು ಸಂಸದ ನಳಿನ್ ಕುಮಾರ್ ಕಟೀಲ್ ಮುಂದೆ ಅಸಮಾಧಾನ ತೋಡಿಕೊಂಡರು. ಕುಳಾಯಿಯ ಕಿರು ಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್

ಸುರತ್ಕಲ್ ಠಾಣೆಗೆ ಹಾಜರಾಗಿ ಆಯಿಷಾ ಅಲ್ಲ ಅಕ್ಷತಾ ಎಂದು ಹೇಳಿಕೆ

ವಾರದ ಹಿಂದೆ ಓಡಿ ಹೋಗಿದ್ದ, ಆಮೇಲೆ ಮದುವೆಯ ಸುದ್ದಿಯನ್ನು ಹಂಚಿಕೊಂಡ ಆಯಿಷಾ ಮತ್ತು ಅಕ್ಷತಾ ದಂಪತಿ ಇಂದು ಸುರತ್ಕಲ್ ಪೋಲೀಸು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದರು. ಆಯಿಷಾಳ ಹೆತ್ತವರು ಆಕೆ ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದುದರ ಬಗೆಗೆ ಸುರತ್ಕಲ್ ಪೋಲೀಸು ಠಾಣೆಯಲ್ಲಿ ದೂರು ನೀಡಿದ್ದರು. ಆದ್ದರಿಂದ ಅವರು ಸದರಿ ಠಾಣೆಗೆ ಭೇಟಿ ನೀಡುವುದು ಅನಿವಾರ್ಯವಾಗಿತ್ತು. ಮೂರು ವರುಷದಿಂದ ಪ್ರೀತಿಸುತ್ತಿದ್ದೆವು. ಅನ್ಯ ಧರ್ಮೀಯರಾದ್ದರಿಂದ ಮದುವೆಗೆ ಒಪ್ಪಿಗೆ ಸಿಗುವ ಸಂಭವ

ಮುಸ್ಲಿಂ ಯುವತಿ ವರಿಸಿದ ಬಜರಂಗದಳ ದ ಯುವಕ

ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದ ಸುರತ್ಕಲ್‍ನ 19ರ ಆಯಿಶಾ ಮತ್ತು 31ರ ಬಜರಂಗ ದಳದ ಪ್ರಶಾಂತ್ ಭಂಡಾರಿ ಮದುವೆ ಆಗಿರುವುದು ಶರಣ್ ಪಂಪ್‍ವೆಲ್ ಅವರ ಶುಭಾಶಯಪೋಸ್ಟ್ ನಿಂದ ಸ್ಪಷ್ಟಗೊಂಡಿದೆ. ಆಯಿಷಾಳು ಅಕ್ಷತಾ ಆಗಿ ನಮ್ಮ ಪ್ರಶಾಂತರನ್ನು ಹಿಂದೂ ರೀತ್ಯಾ ಮದುವೆ ಆಗಿದ್ದಾರೆ. ಶುಭಾಶಯ ಹೇಳಿ ಈ ಮತಾಂತರ ಸಮರ್ಥಿಸಿದ್ದಾರೆ. ಆಯಿಷಾ ಅಲಿಯಾಸ್ ಅಕ್ಷತಾಳ ಹೆತ್ತವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದವರು. ಆಯಿಷಾ ತಂದೆ ಸುರತ್ಕಲ್‍ನಲ್ಲಿ

ಮಂಗಳೂರು: ‘ಸುರತ್ಕಲ್ ವೃತ್ತ, ಗಣೇಶಪುರ ರಸ್ತೆಗೆ ಕ್ಯಾ | ಪ್ರಾಂಜಲ್ ನಾಮಕರಣಕ್ಕೆ ಸತ್ಯಜಿತ್ ಸುರತ್ಕಲ್ ಆಗ್ರಹ

ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಹುತಾತ್ಮರಾದ ಕ್ಯಾ | ಪ್ರಾಂಜಲ್ ಹೆಸರು ಚಿರಸ್ಥಾಯಿಯಾಗಲು ಸುರತ್ಕಲ್ ವೃತ್ತ ಹಾಗೂ ಗಣೇಶಪುರ – ಸುರತ್ಕಲ್ ರಸ್ತೆಗೆ ಅವರ ಹೆಸರಿಡಬೇಕು ಮತ್ತು ಅವರ ಪುತ್ತಳಿ ಸ್ಥಾಪಿಸಬೇಕು ಎಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಸತ್ಯಜಿತ್ ಸುರತ್ಕಲ್ ಸರಕಾರವನ್ನು ಆಗ್ರಹಿಸಿದರು. ಕಾಶ್ಮೀರದ ರಜರಿಯಲ್ಲಿ ಸೇನಾಪಡೆಗಳು ಉಗ್ರರ ವಿರುದ್ಧ ಕಾರ್ಯ ಚರಣೆಯಲ್ಲಿ ಹುತಾತ್ಮರಾದ ಐವರು ಯೋಧರಿಗೆ ಸುರತ್ಕಲ್ ಜಂಕ್ಷನ್‍ನಲ್ಲಿ ಆಯೋಜಿಸಲಾದ

ಸುರತ್ಕಲ್: ವಿಜಯಕುಮಾರ್ ಕೊಡಿಯಾಲ್ ಬೈಲ್‌ರಿಗೆ ರಂಗಚಾವಡಿ ಪ್ರಶಸ್ತಿ

ಸುರತ್ಕಲ್: ರಂಗಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇವರ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ, ರಂಗಚಾವಡಿ ಪ್ರಶಸ್ತಿ ೨೦೨೩ ಪ್ರದಾನ ಸಮಾರಂಭ ಡಿಸೆಂಬರ್ ೩ ರಂದು ಭಾನುವಾರ ಸಂಜೆ ೪.೩೦ ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. 2023 ರ ಸಾಲಿನ ರಂಗಚಾವಡಿ ಪ್ರಶಸ್ತಿಯನ್ನು ಖ್ಯಾತ ನಾಟಕ ರಚನೆಕಾರ- ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್

ಸುರತ್ಕಲ್: ಕಳೆದು ಹೋಗಿದ್ದ ಮೊಬೈಲ್ ವಾರಸುದಾರರಿಗೆ ಹಸ್ತಾಂತರ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಹಿಂದೆ ಮೊಬೈಲ್ ಫೋನೊಂದು ಕಳೆದು ಹೋಗಿದ್ದು, ವಾರಸುದಾರರಿಗೆ ಮರಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುರತ್ಕಲ್‍ನ ಕುಳಾಯಿ ನಿವಾಸಿ ವಿ4 ನ್ಯೂಸ್‍ನ ಕ್ಯಾಮರಾಮೆನ್ ಶರತ್ ಸಾಲ್ಯಾನ್ ಅವರ ಪುತ್ರಿ ಶಿವಾನಿಯವರ ಮೊಬೈಲ್ ಪೋನ್ ಖಾಸಗಿ ಬಸ್‍ನಲ್ಲಿ ಕಳೆದು ಹೋಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಕಾರ್ಯಪ್ರವೃತ್ತರಾದ ಪೊಲೀಸರು ಸಿಇಐಆರ್ ಪೋರ್ಟಲ್ ಆ್ಯಪ್