Home ಕರಾವಳಿ Archive by category ಸುಳ್ಯ (Page 9)

ಕುಕ್ಕೆ: ಇಸ್ರೋದ ಚಂದ್ರಯಾನ 3 ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ

ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ

ಸುಳ್ಯ: ತಾಲೂಕು ಮಟ್ಟದ ಚೆನ್ನೆಮಣೆ ಆಟದ ಸ್ಪರ್ಧೆ

ತುಳುನಾಡಿನ ಜಾನಪದ ಕ್ರೀಡೆಗಳಲ್ಲೊಂದಾದ ಚೆನ್ನೆಮಣೆ ಆಟ ಇಂದು ನಶಿಸಿ ಹೋಗುವ ಹಂತದಲ್ಲಿದೆ. ಚೆನ್ನೆಮಣೆ ಆಟದ ಬಗ್ಗೆ ಹಿರಿಯರು, ಪೋಷಕರು ಇಂದಿನ ಮಕ್ಕಳಿಗೆ ತಿಳಿಸುವ ಜೊತೆಗೆ ಆಟವನ್ನು ಕಲಿಸುವ ಮೂಲಕ ಚೆನ್ನೆಮಣೆ ಆಟದ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಹೇಳಿದರು. ಅವರು ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸುಳ್ಯ ತಾಲೂಕು ಶಾಲಾ ಶಿಕ್ಷಣ ಇಲಾಖೆ, ಸಿ.ಸಿ.ಆರ್.ಟಿ. ಗ್ರೂಪ್ ಸುಳ್ಯ

ಸುಳ್ಯದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ಘಟಕ, ಸುಳ್ಯ ತಾಲೂಕು ಸಮಿತಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ ಸಂಸ್ಕೃತಿಕ ಕಾರ್ಯಕ್ರಮ ಕೆವಿಜಿ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ನಂತರ ವಿವಿಧ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು.

ಕಡಬ : ತಹಸೀಲ್ದಾರ್ ರಮೇಶ್ ಬಾಬು ಅವರಿಗೆ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರು ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ ಹಸನ್ಮುಖಿ ಸೇವೆ ನೀಡಿದಾಗ ಮಾತ್ರ ನಾವು ಮಾಡುವ ಸೇವೆ ಸಾರ್ಥಕವಾಗುತ್ತದೆ ಎಂದು ಕಡಬದಿಂದ ಗುಂಡ್ಲುಪೇಟೆಗೆ ವರ್ಗಾವಣೆಗೊಂಡ ತಹಸೀಲ್ದಾರ್ ಟಿ.ರಮೇಶ್ ಬಾಬು ಹೇಳಿದರು. ಅವರು ಶನಿವಾರ ಕಡಬ ತಾಲೂಕು ಆಡಳಿತ ಸೌಧದಲ್ಲಿ ಇಲ್ಲಿ ಸಿಬ್ಬಂದಿಗಳು ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಂದಾಯ ಇಲಾಖೆಗೆ ಸಾರ್ವಜನಿಕರು ತಮ್ಮ

ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ವರ್ಗಾವಣೆ

ಸುಳ್ಯ: ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಉಡುಪಿ ಸಿ.ಇ.ಎನ್. ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ ಮೂರೂವರೆ ವರ್ಷಗಳಿಂದ‌ ನವೀನ್ ಚಂದ್ರ ಅವರು ಸುಳ್ಯ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರ ರಾಜ್ಯದಲ್ಲಿ 211 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಆ.1ರಂದು ಆದೇಶ ಮಾಡಿದೆ ಎಂದು ತಿಳಿದು ಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಒಂದು ವರ್ಷದ ಹಿನ್ನಲೆ ಸ್ಮೃತಿ ದಿನ ಹಾಗೂ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಸ್ಮೃತಿ ದಿನ ಹಾಗೂ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಶಿಬಿರವನ್ನು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರಾಧಾಕೃಷ್ಣ ರೈ, ಬೂಡಿಯಾರು, ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಗುರುದತ್ ನಾಯಕ್, ಕೃಷ್ಣ, ರಾಕೇಶ್ ರೈ ಕೆಡೆಂಜಿ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಸಂತಾಪ ವ್ಯಕ್ತಪಡಿಸಿಹೂವಪ್ಪರು ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರೆಂದು

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಕ ಅಧಿಕಾರಿ ಭವಾನಿಶಂಕರ್ ವರ್ಗಾವಣೆ

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ಎನ್.ಭವಾನಿಶಂಕರ್ ಅವರಿಗೆ ವರ್ಗಾವಣೆಗೊಂಡಿದ್ದಾರೆ. ಎಂಟು ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿಶಂಕರ್ ಅವರು 4 ವರ್ಷಗಳ ಕಾಲ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಮತ್ತು 4 ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಳ್ಯಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ

ದ.ಕ. ಜಿಲ್ಲೆಯಲ್ಲಿ ಮಳೆಯ ಅವಾಂತರ : ಹರಿಹರ, ಪಲ್ಲತಡ್ಕ, ಗುಂಡಡ್ಕ ಸೇತುವೆ ಮುಳುಗಡೆ

ಕಡಬ: ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕದ ಬಳಿಯ ಗುಂಡಡ್ಕ ಸೇತುವೆ ಮುಳುಗಡೆ ಹಾಗೂ ರಸ್ತೆಗೆ ಬಂಡೆ ಬಿದ್ದು, ಬರೆ ಜರಿದು ರಸ್ತೆ ಸಂಚಾರವು ಸ್ಥಗಿತಗೊಂಡಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದೇವರ ಗದ್ದೆ ಎಂಬಲ್ಲಿ ರಸ್ತೆಗೆ ಮಣ್ಣು ಕುಸಿದಿದೆ, ದೇವರಗದ್ದೆ ಎಂಬಲ್ಲಿ ಬಂಡೆ ಬಿದ್ದಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದ ಘಟನೆ ನಡೆದಿದೆ. ಕಳೆದೆರಡು

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮದ ಉದ್ಘಾಟನೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆಯ ಸಂಭ್ರಮಕ್ಕೆ ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ಅದ್ದೂರಿಯಾಗಿ ಚಾಲನೆ ಸಿಕ್ಕಿತ್ತು. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿ ಅವರು, ಸುಳ್ಯದ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳು ಮೂಡಿ ಬರಲಿ ಎಂದರು. ಆನಂತರ ಜಿಲ್ಲಾ