ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಾಸ್ಥಾನ ವೇದಿಕೆ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 03-03-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ
ಪಡುಬಿದ್ರಿ:ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮ ಪೂಜ್ಯರು ನೀಡಿರುವ 25.ಲಕ್ಷ ಡಿ ಡಿ ಯನ್ನು ಇಂದು ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಹಾಗೂ ಕ್ಷೇತ್ರ ದಿಂದ ಆಗಮಿಸಿರುವ ಭರತ್ ರಾಜ್ ರವರು ಆಗಮಿಸಿ ಸಮಿತಿ ಯವರಿಗೆ ಹಸ್ತಾಂತರ ಮಾಡಿದರು. ದೇಗುಲದ ಅನುವಂಶಿಕ ಮೊಕ್ತೇಸರ ಪಡುಬಿದ್ರಿ ಬೀಡು ರತ್ನಾಕರರಾಜ್ ಅರಸ್ ಕಿನ್ಯಕ್ಕ ಬಲ್ಲಾಳ್,ಅನುವಂಶಿಕ ಮೊಕ್ತೇಸರ
ಮಂಗಳೂರಿನ ಆರ್ಎಸ್ಎಸ್ ಮುಖಂಡರಾಗಿದ್ದ ಸತೀಶ್ ಪ್ರಭು ಅವರು ಇಂದು ನಿಧನರಾಗಿದ್ದಾರೆ. ಬ್ರೈನ್ ಹ್ಯಾಮರೇಜ್ಗೆ ಒಳಗಾಗಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನದ ವೇಳೆ ನಿಧನ ಹೊಂದಿದ್ದಾರೆ. ಸತೀಶ್ ಪ್ರಭು ಅವರು ಪ್ರಸ್ತುತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಕ್ತರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಂಗಳೂರಿನ ಕಾರ್ಸ್ಟರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದರು.
ಕಾಸರಗೋಡು: ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ಅಧಿಕಾರ ಸ್ವೀಕರಿಸಿದರು. ಮಂಗಳವಾರ ಬೆಳಿಗ್ಗೆ ನಿರ್ಗಮನ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಇಡುಕ್ಕಿ ಜಿಲ್ಲಾಧಿಕಾರಿಯಾಗಿದ್ದ ಪಾಂಡ್ಯನ್ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.
ಕೊಡಿಯಲ್ ತೇರಿನ ಚಿತ್ರಕ್ಕೆ ಸತತ ಮೂರು ವರ್ಷ ಕೊಂಚಾಡಿ ಸಾಗರ್ ದೇವಾಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘6TH COLOURS OF LIFE’ INTERNATIONAL SALON 2026, Madhyamgram, Kolkata ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ SALON GOLD MEDAL ಪದಕವನ್ನು ಪಡೆದುಕೊಂಡಿದ್ದಾರೆ. ಕೊಂಚಾಡಿ ಸಾಗರ್ ದೇವಾಡಿಗ ಅವರಿಗೆ ಜಿಲ್ಲೆ, ರಾಜ್ಯ, ರಾಷ್ಟç, ಅಂತಾರಾಷ್ಟ್ರೀಯ ಪ್ರಶಸ್ತಿ, ಹಲವು ಚಿನ್ನದ ಪದಕ ಹಾಗೂ
ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್ಶಾಖೆಯಲ್ಲಿ ಸಂಭ್ರಮದಿAದ ಆಚರಿಸಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಪರಪ್ಪಾಡಿಯ ಅವರ್ ಲೇಡಿ ಆಫ್ ಪರ್ಪೆಚುಯಲ್ ಸುಕುರ್ ಚರ್ಚ್ನ
ಉಡುಪಿ:ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಉಡುಪಿ, ರಾಮ ಕ್ಷತ್ರಿಯ ಸಂಘ ಉಡುಪಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮತ್ತು ದಂತ ವೈದ್ಯರ ಸಂಘ ಉಡುಪಿ ಸಹಯೋಗದೊಂದಿಗೆ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಅಧ್ಯಕ್ಷೆ ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್ರವರು ನಾವು ಈ ರೀತಿಯ ಸಮಾಜಮುಖೀ ಕಾರ್ಯಕ್ರಮಗಳನ್ನು
ಪಡುಬಿದ್ರಿ,ಪುಣೆಯ ಶ್ರೀ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ಸೇವಾ ಸಮಿತಿಯ ವತಿಯಿಂದ ಶ್ರೀ ದೇವಸ್ಥಾನದ ಸಮಗ್ರ ಜೀರ್ಣೕೊದ್ಧಾರ, ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ದೇವರ ನವೀಕೃತ ಗರ್ಭಗುಡಿಯ ಸುಂದರ ರಚನೆಗಾಗಿ ಮಾ. 1ಭಾನುವಾರದಂದು ಸುಮಾರು 1.5 ಕೋಟಿ ರೂ. ಗಳನ್ನುಬಾಲಾಲಯದಲ್ಲಿ ನಡೆದ ಪ್ರಾರ್ಥನೆಯ ಬಳಿಕ ಈ ಮೊತ್ತವನ್ನು ಪುಣೆ ಉದ್ಯಮಿ ಸಂತೋಷ್ ಶೆಟ್ಟಿ ಕರ್ಕಿಲ್ ಬೆಟ್ಟಿ, ಸದಾನಂದ ಶೆಟ್ಟಿ ಮತ್ತಿತರರು ಶ್ರೀ ದೇಗುಲದ
ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಶನ್ ವಸ್ತ್ರ ಮಳಿಗೆಯಲ್ಲಿ ಶೇಕಡಾ 25ರಷ್ಟು ವಿಶೇಷ ರಿಯಾಯಿತಿಯನ್ನು ನೀಡುತ್ತಿದ್ದಾರೆ. ಮಾರ್ಚ್ 1ರಿಂದಲೇ ಈ ಆಫರ್ ಲಭ್ಯವಿದೆ. ಪುತ್ತೂರು ನಗರದ ಪ್ರಸಿದ್ಧ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಷನ್.. ಗ್ರಾಹಕರ ನೆಚ್ಚಿನ ವಸ್ತ್ರ ಮಳಿಗೆಯಾಗಿದ್ದು, ಬ್ರಾಂಡೆಡ್ ವಸ್ತ್ರಗಳಿಗೆ ಹೆಸರುವಾಸಿಯಾಗಿದೆ. ಮಕ್ಕಳು, ಮಹಿಳೆಯರು, ಪುರುಷರು, ಮದುವೆ ಸಮಾರಂಭಗಳಿಗೆ ಬೇಕಾದ ಎಲ್ಲಾ ಶೈಲಿಯ ವಸ್ತ್ರಗಳು
ಮೂಡುಬಿದಿರೆ: ಶನಿವಾರ ನಿಡ್ಡೋಡಿ ಗ್ರಾಮದ ಕಾನ ಪ್ರದೇಶದಲ್ಲಿ ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮವಾಗಿ ನವ ವಿವಾಹಿತ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುಘ೯ಟನೆ ನಡೆದಿದೆ.ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಸಂತೆಕಟ್ಟೆ ನಿವಾಸಿ ರಕ್ಷಿತ್ ಕುಮಾರ್ (30) ಮೃತಪಟ್ಟವರು. ಇವರು ಮೂಲ್ಕಿಯಲ್ಲಿರುವ ಪತ್ನಿಯ ಮನೆಗೆ ಬಂದಿದ್ದು, ಶನಿವಾರ ಬೆಳಿಗ್ಗೆ ಕಾರ್ಯನಿಮಿತ್ತ ಗಂಜಿಮಠದ ಕಂಪೆನಿಯೊಂದಕ್ಕೆ ತೆರಳುತ್ತಿದ್ದರು.ಕಾನ ಬಳಿ ದನ ಅಡ್ಡ ಬಂದ ಹಿನ್ನೆಲೆಯಲ್ಲಿ ಡಿಕ್ಕಿ




























